Author: Mallika

  • ನಮ್ಮ ಮೆಟ್ರೋ ವಿವಿಧ ಹುದ್ದೆ : ಕೂಡಲೇ ಅರ್ಜಿ ಸಲ್ಲಿಸಿ

    ನಮ್ಮ ಮೆಟ್ರೋ ವಿವಿಧ ಹುದ್ದೆ : ಕೂಡಲೇ ಅರ್ಜಿ ಸಲ್ಲಿಸಿ

    ಬಿಎಂಆರ್ ಸಿಎಲ್, ಯೋಜನಾ ಘಟಕದಲ್ಲಿನ ಈ ಕೆಳಕಂಡ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ

    ಹುದ್ದೆ :ಮುಖ್ಯ ಪ್ರಧಾನ ವ್ಯವಸ್ಥಾಪಕರು: ( ಯೋಜನೆ ಮತ್ತು ವಿನ್ಯಾಸ)-1

    ಮುಖ್ಯ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ತಜ್ಞ( ಉಪ ಮುಖ್ಯ ಅಭಿಯಂತರರ ದರ್ಜೆ)-1

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021 ( 5pm)

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ : www.bmrc.co.in/career Section

  • ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಎಸ್ಎಸ್ ಪಿ ಅಡಿಯಲ್ಲಿ ಅರ್ಜಿ ಸಲ್ಲಿಸುವಾಗ ಎನ್ ಎಸ್ ಪಿ ID ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿರುತ್ತದೆ‌. ನಿಯಮ ನಿಬಂಧನೆಗಳ ಕುರಿತಾದ ಹೆಚ್ಚಿನ ವಿವರ ಮತ್ತು ಪ್ರಕ್ರಿಯೆಯ ಕುರಿತಾಗಿ ತಿಳಿಯಲು ಅಲ್ಪಸಂಖ್ಯಾತರ ನಿರ್ದೇಶನಾಲಯದ ಕಚೇರಿ ಜಾಲತಾಣ https://dom.Karnataka.gov.in ಅಥವಾ ಎಸ್ ಎಸ್ ಪಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ https:/ssp.Karnataka.gov.in/ ಗೆ ಭೇಟಿ ನೀಡಬಹುದು.

    ತಾಂತ್ರಿಕ ಸಮಸ್ಯೆ ಗಳೇನಾದರೂ ಇದ್ದಲ್ಲಿ [email protected] ಇ ಮೇಲ್ ಮಾಡಿ‌ ಅಥವಾ ದೂರವಾಣಿ ಸಂಖ್ಯೆ 080-35254757 10.00am -5.30pm ವರೆಗೆ ಕಚೇರಿಯ ಕಾಲಾವಧಿ ಸಮಯದಲ್ಲಿ ಸಂಪರ್ಕಿಸಬಹುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಚೇರಿಯನ್ನು ಸಂಪರ್ಕಿಸಿ.

  • ಜೆಸ್ಕಾಂ ಅಪ್ರೆಂಟಿಸ್ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

    ಜೆಸ್ಕಾಂ ಅಪ್ರೆಂಟಿಸ್ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

    ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -18-03-2021

    ಎನ್ ಸಿವಿಟಿ ಪ್ರಮಾಣ ಪತ್ರ ಪಡೆದವರಿಗೆ ಒಂದು ವರ್ಷದ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತರಬೇತಿ ನೀಡಲಾಗುತ್ತದೆ.

    ಎಸ್ ಎಸ್ ಎಲ್ ಸಿ ನಂತರ ಐಟಿಐ ತರಬೇತಿ ಹೊಂದಿ, ಕುಶಲಕರ್ಮಿ ಯೋಜನೆಯಡಿ ನಡೆಯುವ ವೃತ್ತಿ ಪರೀಕ್ಷೆಯ ಎಲೆಕ್ಟ್ರೀಶಿಯನ್ ವೃತ್ತಿಯಲ್ಲಿ ತೇರ್ಗಡೆಯಾಗಿ ರಾಜ್ಯ ವೃತ್ತಿ ಪ್ರಮಾಣ ಪತ್ರ, ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರು.

    ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿಗೆ ಅವಧಿಯಲ್ಲಿ ರೂ.7000/- ತಿಂಗಳ ವೇತನ ನೀಡಲಾಗುತ್ತದೆ.

    ಕರ್ನಾಟಕದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ. ಅಂಗವಿಕಲ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಗೆ ಕನ್ನಡ ಓದಲು ಬರೆಯಲು ಬರಬೇಕು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ( 26-02-2021ಕ್ಕೆ) ಗರಿಷ್ಠ 25 ( 18-03-2021ಕ್ಕೆ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ (18-03-2021ಕ್ಕೆ) ಆಗಿರಬೇಕು. ಹಿಂದುಳಿದ ಹಾಗೂ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ಮೀರಿರಬಾರದು. ಅಭ್ಯರ್ಥಿಗಳು ಪೂರ್ವ ವಿವರವಿರುವ ಸ್ವಯಂ ಲಿಖಿತ ಅಥವಾ ಬೆರಳಚ್ಚು ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಕಳುಹಿಸುವಾಗ ಲಕೋಟೆ ಮೇಲೆ 2021-22 ನೇ ಸಾಲಿನ‌ ಶಿಶಿಕ್ಷು ಆಯ್ಕೆಗೆ ಅರ್ಜಿ ಎಂದು ಸ್ಪಷ್ಟವಾಗಿ ಬರೆಯಬೇಕು.

    ಅರ್ಜಿಗಳನ್ನು ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ.ಸಂ.ಅ) ನಿಗಮ ಕಚೇರಿ,ಗು.ವಿ.ಸ.ಕಂ.ನಿ, ಸ್ಟೇಷನ್ ರೋಡ್, ಕಲಬುರಗಿ 585102

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

    https://gescom.Karnataka.gov.in/

  • 134 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    134 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03-04-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಒನ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2021(5.30pm)

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. CG ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆ ವಿವರ : 20 ಅಂಗನವಾಡಿ‌ ಕಾರ್ಯಕರ್ತೆ ಹಾಗೂ 114 ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ 4th ಅಥವಾ ಗರಿಷ್ಠ 9th ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ ‌: ಹುದ್ದೆಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://anganwadirecruit.kar.nic.in/ ಗೆ ಭೇಟಿ ನೀಡಬಹುದು.

  • 159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    ಮಂಡ್ಯ ಜಿಲ್ಲೆಯ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30-3-2031 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2031 ( 10ಗಂಟೆಯಿಂದ)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆ ಸಂಖ್ಯೆ : 159 ಹುದ್ದೆಗಳು

    ವಯೋಮಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಅಂಗನವಾಡಿ ಮಿನಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ‌ ಹಾಗೂ ಸಹಾಯಕಿ ಹುದ್ದೆಗೆ 4thಅಥವಾ 9th ಪಾಸಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಪ್ಲೈ ಓನ್ಲೈನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಶಿಕ್ಷಕರ ನೇಮಕಾತಿ : ನೇರ ಸಂದರ್ಶನಕ್ಕೆ ಆಹ್ವಾನ

    ಶಿಕ್ಷಕರ ನೇಮಕಾತಿ : ನೇರ ಸಂದರ್ಶನಕ್ಕೆ ಆಹ್ವಾನ

    ಕೇಂದ್ರೀಯ ವಿದ್ಯಾಲಯ ಎಂಇಜಿ ಮತ್ತು ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ಈ ಹುದ್ದೆಗಳನ್ನು 2021-22 ಶೈಕ್ಷಣಿಕ ಸಾಲಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಲ್ಲದೇ ಈ ಹುದ್ದೆಗಳು ಸಂಪೂರ್ಣ ಗುತ್ತಿಗೆ ಆಧಾರದ ತಾತ್ಕಾಲಿಕ ಹುದ್ದೆ ಯಾಗಿರುತ್ತದೆ.

    ಹುದ್ದೆಯ ಹೆಸರು: ಪಿಜಿಟಿ ಸಿಎಸ್ /ಇತರೆ ವಿಷಯ–ಪಿಆರ್ ಟಿ/ಜರ್ಮನ್ ಟೀಚರ್, ನರ್ಸ್, ಕಂಪ್ಯೂಟರ್ ಇನ್ಸ್ಟ್ರಕ್ಟರ್/ಪ್ರಾದೇಶಿಕ ಭಾಷೆ (ಕನ್ನಡ) , ಡಾಟಾ ಎಂಟ್ರಿ ಅಪರೇಟರ್ ದಿನಾಂಕ 04-03-2021 ರಂದು ಸಂದರ್ಶನ

    ಕೋಚ್ ಗಳು : ವಾಲಿಬಾಲ್, ಕಬಡ್ಡಿ, ಖೋ ಖೋ, ಹ್ಯಾಂಡ್ ಬಾಲ್, ಕಬಡ್ಡಿ, ಫೂಟ್ಬಾಲ್, ಯೋಗ – ದಿನಾಂಕ 04-03-2021

    ಪೋಸ್ಟ್ ಗ್ರಾಜ್ಯುಯೇಟ್ ಟೀಚರ್ಸ್: ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ,ಜೀವಶಾಸ್ತ್ರ, ಇತಿಹಾಸ, ಭೂಗೋಳ ಶಾಸ್ತ್ರ, ಅರ್ಥಶಾಸ್ತ್ರ, ಪೊಲಿಟಿಕಲ್ ಸೈನ್ಸ್, ಅಕೌಂಟೆನ್ಸಿ, ವಾಣಿಜ್ಯ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ – ದಿನಾಂಕ 06-03-2021

    ಟಿಜಿಟಿ ಮತ್ತು ಪ್ರೈಮರಿ ಟೀಚರ್ – ಇಂಗ್ಲೀಷ್, ಹಿಂದಿ, ಸಂಸ್ಕೃತ, ಸೈನ್ಸ್, ವಿಜ್ಞಾನ, ಗಣಿತ, ಸಮಾಜಶಾಸ್ತ್ರ ದಿನಾಂಕ 06-03-2021

    ಮಾರ್ಚ್ 4ರಿಂದ6 ರವರೆಗೆ ನೇರ ಸಂದರ್ಶನವಿರುತ್ತದೆ. ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಯಾಗಿದೆ.

    ಪ್ರತೀ ಹುದ್ದೆಗೆ ವಿದ್ಯಾರ್ಹತೆ ಜೊತೆಗೆ ಕಾರ್ಯಾನುಭವ ಹೊಂದಿರಬೇಕು.

    ನೇರ ಸಂದರ್ಶನಕ್ಕೆ ಶೈಕ್ಷಣಿಕ ದಾಖಲೆಗಳ ಒಂದು ಸೆಟ್ ಜೆರಾಕ್ಸ್ ಕಾಪಿಗಳೊಂದಿಗೆ, ಒರಿಜಿನಲ್ ದಾಖಲೆ, ಫೊಟೋಗಳೊಂದಿಗೆ ಹಾಜರಾಗಬಹುದು. ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಟಿ.ಎ/ಡಿ.ಎ ನೀಡಲಾಗುತ್ತದೆ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ವಿದ್ಯಾಲಯ ದ ಅಫೀಶಿಯಲ್ ವೆಬ್‌ಸೈಟ್‌ megcentre.kvs.ac.in ಗೆ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ 080-25365053 ಗೆ ಕರೆ ಮಾಡಬಹುದು