Author: Mallika

  • ಕೆ ಎ ಎಸ್ (KAS) ಮುಖ್ಯ ಪರೀಕ್ಷೆಯ ಅಭ್ಯರ್ಥಿಗಳ ಪ್ರವೇಶ ಪತ್ರ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ 2017-18 ರ ಸಾಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಗಳ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
    ಅಭ್ಯರ್ಥಿಗಳು ತಮ್ಮ username password ಬಳಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ರಾಷ್ಟ್ರೀಯ ನಿಧಿಯಡಿ ಆರ್ಥಿಕ ನೆರವು: ಕೂಡಲೇ ಅರ್ಜಿ ಸಲ್ಲಿಸಿ

    ರಾಷ್ಟ್ರೀಯ ನಿಧಿಯಡಿ ಆರ್ಥಿಕ ನೆರವು: ಕೂಡಲೇ ಅರ್ಜಿ ಸಲ್ಲಿಸಿ

    ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವಿಕಲಚೇತನರ ಸಬಲೀಕರಣ ಇಲಾಖೆ (ದಿವ್ಯಾಂಗಜನ)

    ವಿಕಲಚೇತನರಿಗಾಗಿ ರಾಷ್ಟ್ರೀಯ ನಿಧಿಯಡಿ ಆರ್ಥಿಕ ನೆರವಿಗಾಗಿ ಅರ್ಜಿಗಳ ಆಹ್ವಾನ

    ವಿಕಲಚೇತನ ಸಬಲೀಕರಣ ಇಲಾಖೆ (ದಿವ್ಯಾಂಗಜನ) ಭಾರತ ಸರಕಾರ 28 ನೇ ಆಗಸ್ಟ್, 2018 ಜಾರಿಯಲ್ಲಿರುವಂತೆ ದಿವ್ಯಾಂಗಜನರ ಸಬಲೀಕರಣಕ್ಕಾಗಿ ವಿಕಲಚೇತನರಿಗೆ ರಾಷ್ಟ್ರೀಯ ನಿಧಿಯಡಿ ಯೋಜನೆ ಅನುಷ್ಠಾನಗೊಳಿಸುತ್ತದೆ. ಇಲಾಖೆಯು ಕೆಳಕಂಡ ಕ್ಷೇತ್ರಗಳಲ್ಲಿ ದಿವ್ಯಾಂಗಜನತೆಗೆ ಆರ್ಥಿಕ ನೆರವು ಒದಗಿಸಲು ಅರ್ಜಿಗಳನ್ನು ಕರೆದಿದೆ.

    1. ವಿಕಲಚೇತನರು ತಯಾರಿಸಿದ ಪೇಂಟಿಂಗ್, ಕರಕುಶಲ ವಸ್ತುಗಳು ಇತ್ಯಾದಿ ಸೇರಿ ಉತ್ಪನ್ನಗಳನ್ನು ಪ್ರದರ್ಶಿಸಲು ಪ್ರದರ್ಶನ/ಕಾರ್ಯಾಗಾರಗಳ ಆಯೋಜನೆಗೆ ನೆರವು ನೀಡುವುದು.
    2. ರಾಷ್ಟ್ರೀಯ/ಅಂತರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯ ಮಟ್ಟದಲ್ಲಿ ಕ್ರೀಡೆ ಅಥವಾ ಲಲಿತಕಲೆ/ಸಂಗೀತ/ನೃತ್ಯದಲ್ಲಿ ನಿಪುಣರಾದ ಮಾನದಂಡ ವಿಕಲಚೇತ‌ತಲನರಿಗೆ ನೆರವು ನೀಡುವುದು ಮತ್ತು
    3. ಕೇಸಿನಿಂದ ಕೇಸು ಆಧಾರದಲ್ಲಿ ರಾಜ್ಯ ಮೌಲ್ಯಮಾಪನಾ ಮಂಡಳಿಯಿಂದ ಶಿಫಾರಸು ಮಾಡಿದ ವ್ಯಕ್ತಿಗಳಿಗೆ ಹೆಚ್ಚಿನ ಬೆಂಬಲದೊಂದಿಗೆ ನೆರವು ನೀಡುವುದು.

    ಯೋಜ‌ನೆಯ ಹೆಚ್ಚಿನ ವಿವರಗಳು, ಅರ್ಜಿ ಸಲ್ಲಿಕೆ ಬಗೆ ಕುರಿತು ಇಲಾಖೆಯ ವೆಬ್‌ಸೈಟ್‌ http://disabilityaffairs.gov.in ಗೆ ಭೇಟಿ ನೀಡಿ. ಯೋಜನೆಯಲ್ಲಿ ಹಾಗೂ ಇಮೇಲ್ : [email protected] ರಲ್ಲಿ ನಮೂದಿಸಿದ ಅಧಿಕಾರಿಯ ಹೆಸರು ಮತ್ತು ವಿಳಾಸಕ್ಕೆ ನಿಗದಿತ ನಮೂನೆಯಲ್ಲಿ ನಿಮ್ಮ ಅರ್ಜಿಯ ಹಾರ್ಡ್ ಕಾಪಿಯನ್ನು ಕಳುಹಿಸಿ. ಇಡೀ ವರ್ಷ ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 011-24369054

  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) 545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ಸ್ (ಸಿವಿಲ್)

    ಹುದ್ದೆಯ ಸಂಖ್ಯೆ : 545

    ವಿದ್ಯಾಭ್ಯಾಸ : ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
    ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದೆ.

    ಪುರುಷರು 168 ಸೆಂ.ಮೀ. ಎತ್ತರ ಹಾಗೂ ಎದೆಯ ಸುತ್ತಳತೆ 81-86 ಸೆಂ.ಮೀ. ಇರಬೇಕು.

    ಮಹಿಳೆಯರ ಎತ್ತರ 157 ಸೆಂ.ಮೀ ಇರಬೇಕು. ಹಾಗೂ 45 ಕೆ.ಜಿ.ತೂಕ ಇರಬೇಕು.

    ಅರ್ಜಿ ಶುಲ್ಕ : ರೂ. 500 ಪರೀಕ್ಷಾ ಶುಲ್ಕ ಪಾವತಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 22, 2021.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • BECIL : 120 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆಗಳ ಸಂಖ್ಯೆ: 120

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22, ಫೆಬ್ರವರಿ2021

    ವಿದ್ಯಾರ್ಹತೆ:
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ, ಪಿಯುಸಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಪದವಿ, ಬಿಎಸ್ಸಿ ಮತ್ತು ಐಟಿಐ ವಿದ್ಯಾರ್ಹತೆ ಯುಳ್ಳವರು ಅರ್ಜಿ ಸಲ್ಲಿಸಬಹುದು.
    ನೇರ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವಯೋಮಿತಿ
    ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ,2ಎ, 2ಬಿ, ಮತ್ತು 3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

    ಅರ್ಜಿ ಶುಲ್ಕ
    ಪ.ಜಾತಿ/ಪ.ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.600 ಹಾಗೂ ಉಳಿದವರು 830/-ಅರ್ಜಿ ಶುಲ್ಕ ಪಾವತಿಸಬೇಕು.

    ಹೆಚ್ಚಿನ ಮಾಹಿತಿಗಾಗಿ www.//becil.com/ ಗೆ ಭೇಟಿ ನೀಡಿ.

  • ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ‌ ಒಕ್ಕೂಟ ನಿಗಮ( KOF) ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ‌ ಒಕ್ಕೂಟ ನಿಗಮ ಚಿತ್ರದುರ್ಗ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಸಂಪೂರ್ಣ ವಿವರ ಈ ಕೆಳಗಿನಂತಿವೆ.

    ಹುದ್ದೆ : ಅಸಿಸ್ಟೆಂಟ್ ಎಕ್ಸಿಕ್ಯುಟಿವ್
    ಸೀಡ್ಸ್ ಆಫೀಸರ್
    ಕೆಮಿಸ್ಟ್

    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 08,2021

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಬಿಕಾಂ/ಬಿಬಿಎ/ಬಿಬಿಎಂ/ಕೆಮಿಸ್ಟ್ರಿ ಯಲ್ಲಿ ಬಿಎಸ್ಸಿ ಪದವಿ/ಕೃಷಿ ಪದವಿ ಹೊಂದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,400/- ರಿಂದ 62,600/-ವೇತನ ನಿಗದಿಯಾಗಿದೆ.

    ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500/- ಶುಲ್ಕ ಪಾವತಿಸಬೇಕಾಗುತ್ತದೆ. ಉಳಿದವರು ರೂ.1000/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

    ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

    ಪ.ಜಾತಿ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

    ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://kofchitradurga.com/ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 08, 2021ರ ಒಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು. (ಸಂಜೆ 5.30 ರ ಒಳಗೆ)

    ಅರ್ಜಿ ಸಲ್ಲಿಸಬೇಕಾದ ವಿಳಾಸ
    ವ್ಯವಸ್ಥಾಪಕ ನಿರ್ದೇಶಕರು,
    ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ, ಸಂಘಗಳ ಒಕ್ಕೂಟ ನಿಯಮಿತ ಫ್ಲಾಟ್ ಸಂಖ್ಯೆ:74/ಎ,
    ಕೆಳಗಿಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ- 577501

  • 13,206 ರಾಷ್ಟ್ರೀಯ ಸ್ವಯಂಸೇವಕ ಹುದ್ದೆಗೆ ಅರ್ಜಿ ಆಹ್ವಾನ

    ನೆಹರು ಯುವ ಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ರಾಷ್ಟ್ರೀಯ ಸ್ವಯಂಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ:

    ಹುದ್ದೆ
    ರಾಷ್ಟ್ರೀಯ ಸ್ವಯಂಸೇವಕ

    ಹುದ್ದೆಯ ಸಂಖ್ಯೆ
    13,206

    ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20,ಫೆಬ್ರವರಿ 2021.

    ಸಂದರ್ಶನದ ದಿನಾಂಕ : 25, ಫೆಬ್ರವರಿ 2021 ರಿಂದ 08,ಮಾರ್ಚ್ 2021ರ ವರೆಗೆ ನಡೆಯಲಿದೆ.

    ಫಲಿತಾಂಶ ಪ್ರಕಟವಾಗುವ ದಿನಾಂಕ : 15-03-2021

    ವಯೋಮಿತಿ
    ರಾಷ್ಟ್ರೀಯ ಸ್ವಯಂಸೇವಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 29 ವರ್ಷ ಆಗಿರಬೇಕು.

    ವಿದ್ಯಾರ್ಹತೆ
    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು.

    ರಾಷ್ಟ್ರೀಯ ಸ್ವಯಂಸೇವಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಆಯ್ಕೆಯು ಸಂದರ್ಶನದ ಮೂಲಕ ಹಾಗೂ ಆಯ್ಕೆ ಪಟ್ಟಿಯ ಮೂಲಕ ಮಾಡಲಾಗುವುದು.

    ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ nyks.nic.in ನಲ್ಲಿ ಪಡೆಯಬಹುದು.