Author: Mallika

  • RDPR ಕೊಪ್ಪಳ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕೊಪ್ಪಳ ಜಿಲ್ಲೆಯ ಗ್ರಾ.ಕು.ನಿ&ನೈ ಇಲಾಖೆಯ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಹಿರಿಯ ವಿಶ್ಲೇಷಣಗಾರರು , ಕಿರಿಯ ವಿಶ್ಲೇಷಣಗಾರರು ಮತ್ತು ಸಂಗ್ರಹಣಾಕೋಶ ಉಸ್ತುವಾರಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹಿರಿಯ ವಿಶ್ಲೇಷಣಗಾರರು ( ಸೀನಿಯರ್ ಅನಾಲಿಸ್ಟ್ ) ( 1ಹುದ್ದೆ) ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ ಕೆಮಿಸ್ಟ್ರಿ ತೇರ್ಗಡೆ ಹೊಂದಿರಬೇಕು. ಕನಿಷ್ಠ ಮೂರು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನ ನಿಗದಿಪಡಿಸಲಾಗಿದೆ. ( ವಾರ್ಷಿಕ ರೂ.3,60,000/-)

    ಕಿರಿಯ ವಿಶ್ಲೇಷಕ ಹುದ್ದೆಗೆ (ಜ್ಯೂನಿಯರ್ ಅನಾಲಿಸ್ಟ್) (1 ಹುದ್ದೆ) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿಯನ್ನು ಕನಿಷ್ಠ 60% ( ಕೆಮಿಸ್ಟ್ರಿ) ಅಂಕಗಳೊಂದಿಗೆ ಪಾಸಾಗಿರಬೇಕು. ಕನಿಷ್ಠ 3 ವರ್ಷ ಪ್ರಯೋಗಾಲಯದಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ರಿಂದ ರೂ.22,000/- ವೇತನ ನಿಗದಿಪಡಿಸಲಾಗಿದೆ.

    ಸಂಗ್ರಹಣಾಕೋಶದ ಉಸ್ತುವಾರಿ ( sample cell In charge) ( 1) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ( ಕೆಮಿಸ್ಟ್ರಿ) ಪಾಸಾಗಿರಬೇಕು. ಪ್ರಯೋಗಾಲಯದಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000/-ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮತ್ತು ವಿಳಾಸ : 26-07-2021 ರವರೆಗೆ ಸಂಜೆ 5 ಗಂಟೆಗೆ

  • ಕಾರ್ಮಿಕ ಮಕ್ಕಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    ಕಾರ್ಖಾನೆ ಅಂಗಡಿ ಮತ್ತು ವಾಣಿಜ್ಯ ಸಂಘಟಿತ ವಾಣಿಜ್ಯ ಮಕ್ಕಳಿಗೆ 2021-22ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಕಲ್ಯಾಣ ಕಾರ್ಮಿಕ ಮಂಡಳಿ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ.

    ಪ್ರೌಢ, ಸ್ನಾತಕೋತ್ತರ, ವೈದ್ಯಕೀಯ ಮತ್ತು ಬಿಇ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅವಕಾಶವಿದೆ.

    ಮಾಸಿಕ ವೇತನ ರೂ.21,000/- ಮೀರದ ಕಾರ್ಮಿಕ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ಆಸಕ್ತರು www.klwbapps.karnataka.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ವಿಳಾಸ : 48, 1 ನೇ ಮತ್ತು 2 ನೇ ಮಹಡಿ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು-22

    ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08023475188, 8277291175, 8277120505

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗದಲ್ಲಿ 147 ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : 46 ಅಂಗನವಾಡಿ ಕಾರ್ಯಕರ್ತೆ ಮತ್ತು 101 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 13/07/2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/08/2021

    ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರಿಗೆ ಗೌರವ ಸೇವೆ ಸಲ್ಲಿಸಲು 18 ರಿಂದ 35 ವರ್ಷದೊಳಗಿನ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ( ಕಾರ್ಯಕರ್ತೆ ಹುದ್ದೆಗೆ ಮಾತ್ರ) 45 ವರ್ಷದೊಳಗಿನ ಸ್ಥಳೀಯ ( ಅದೇ ಗ್ರಾಮ/ವಾರ್ಡ್) ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.

    ಅರ್ಹ ಮಹಿಳಾ ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ 13/07/2021 ರಿಂದ ದಿನಾಂಕ 12/08/2021 ರ‌ ಸಂಜೆ‌ 5.30 ಗಂಟೆಯೊಳಗಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • KOF : ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜನರಲ್ ಮ್ಯಾನೇಜರ್ – 01 ಹುದ್ದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 32 ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

    ವೇತನ : ರೂ.1,04,600/- ರಿಂದ ರೂ.1,50,800/- ಅನ್ವಯಿಸುವ ಭತ್ಯೆಗಳು.

    ವಿದ್ಯಾರ್ಹತೆ ಮತ್ತು ಅನುಭವ : ಅಂಗೀಕೃತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಎಂ.ಎಸ್ಸಿ, ಕೃಷಿ ( ಕೃಷಿ ಮಾರಾಟ /ಬೀಜ ತಂತ್ರಜ್ಞಾನ / ಅಗ್ರೋನಮಿ/ ಅಗ್ರಿಕಲ್ಚರ್ ಎಕ್ಸ್ ಟೆನ್ಷನ್ವ/ ಅಗ್ರಿಕಲ್ಚರಲ್ ಎಕಾನಮಿಕ್ಸ್/ ಸಾಯಿಲದ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ
    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ / ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್, ಆನಂದ್, ಗುಜರಾತ್/ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಅಡ್ಮಿನಿಸ್ಟ್ರೇಶನ್ / ಫೈನಾನ್ಸ್ / ಮಾರ್ಕೆಟಿಂಗ್/ಬ್ಯುಸಿನೆಸ್ ಮ್ಯಾನೇಜ್ಮೆಂಟ್ / ಕೃಷಿ ವಿಷಯದಲ್ಲಿ ಎಂ.ಬಿ.ಎ ಸ್ನಾತಕೋತ್ತರ ಪದವಿ.

    ಕಂಪ್ಯೂಟರ್ ಪೂರ್ಣ ಪರಿಜ್ಞಾನ ಹೊಂದಿರತಕ್ಕದ್ದು.

    ಅನುಭವ : ಪ್ರತಿಷ್ಟಿತ ಸಂಸ್ಥೆಗಳಲ್ಲಿ ಹಿರಿಯ ಹುದ್ದೆಗಳಲ್ಲಿ ಅಂದರೆ – ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ / ಡೆಪ್ಯುಟಿ ಜನರಲ್ ಮ್ಯಾನೇಜರ್ / ಜನರಲ್ ಮ್ಯಾನೇಜರ್ ಅಥವಾ ಈ ಹುದ್ದೆಗಳ ಸಮಾನಂತರ ಹುದ್ದೆಗಳಲ್ಲಿ ಕನಿಷ್ಠ 5 ವರ್ಷಗಳ ಕೆಲಸಸ ಅನುಭವ ಹೊಂದಿರತಕ್ಕದ್ದು.

    ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಕೆಲಸದ ಅನುಭವ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಇವರಿಗೆ ರೂ.500/- ಮತ್ತು ಸಾಮಾನ್ಯ ವರ್ಗದವರಿಗೆ ರೂ.1000/- ಅರ್ಜಿ ಶುಲ್ಕವನ್ನು ಕೆ.ಸಿ.ಓ.ಜಿ.ಎಫ್.ಲಿ., ಬೆಂಗಳೂರು ಇವರ ಹೆಸರಿಗೆ ಬೆಂಗಳೂರಿನಲ್ಲಿ ಪಾವತಿಯಾಗುವಂತೆ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ.ಯ ಮೂಲಕ‌‌ ಸಲ್ಲಿಸುವುದು.

    ಸಾಮಾನ್ಯ ನಿಬಂಧನೆಗಳು : ಕನ್ನಡ ಭಾಷಾ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಹತೆ, ಅನುಭವ, ವಯಸ್ಸು, ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ‌ಪ್ರತಿಗಳನ್ನು ಲಗತ್ತಿಸತಕ್ಕದ್ದು. ಮುಕ್ತ ವಿಶ್ವವಿದ್ಯಾನಿಲಯದಿಂದ ( Distance education correspondence course) ಪಡೆದ ಪದವಿ, ಸ್ನಾತಕೋತ್ತರ ‌ಪದವಿಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಯನ್ನು ಕರ್ನಾಟಕ ರಾಜ್ಯ ಅಥವಾ ರಾಜ್ಯದ ಹೊರಗು ನೇಮಕಾತಿ ಮತ್ತು ವರ್ಗಾವಣೆ ಮಾಡಲು ಅವಕಾಶವಿರುತ್ತದೆ. ಸೇವೆಯಲ್ಲಿರತಕ್ಕ ಅಭ್ಯರ್ಥಿಗಳು, ಸಂಬಂಧಪಟ್ಟ ಇಲಾಖೆಯ ಮೂಲಕ ಅವಕಾಶವಿರುತ್ತದೆ. ಸೇವೆಯಲ್ಲಿರತಕ್ಕ ಅಭ್ಯರ್ಥಿಗಳು, ಸಂಬಂಧಪಟ್ಟ ಇಲಾಖೆಯ‌ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಸ್ವ ವಿವರ ಹಾಗೂ ಭಾವಚಿತ್ರದೊಂದಿಗೆ ಎಲ್ಲಾ ದಾಖಲಾತಿಗಳನ್ನು‌ ಒಳಗೊಂಡ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಕೆ.ಸಿ.ಓ.ಜಿ.ಎಫ್.ಲಿ. ನಂ.11, 4 ನೇ ಮಹಡಿ, ಬ್ಲ್ಯೂ ಕ್ರಾಸ್ ಛೇಂಬರ್ಸ್, ಇನ್ ಫೆಂಟ್ರಿ ಅಡ್ಡರಸ್ತೆ, ಬೆಂಗಳೂರು – 01 ಈ ವಿಳಾಸಕ್ಕೆ ನೇಮಕಾತಿ ಪ್ರಕಟಿತ ದಿನಾಂಕದಿಂದ 21 ದಿನದೊಳಗೆ ‌ತಲುಪುವಂತಿರಬೇಕು. ಅಪೂರ್ಣ / ಶುಲ್ಕವಿಲ್ಲದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

    ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ‌ ಸಲ್ಲಿಸಿದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ತದನಂತರ ದಾಖಲಾತಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

    ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 09-07-2021 ಬೆಳಿಗ್ಗೆ 10.00 ಗಂಟೆಯಿಂದ
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021 ಸಂಜೆ 5.30 ಗಂಟೆಯವರೆಗೆ

    ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 52 ಹುದ್ದೆಗಳು
    ಅಂಗನವಾಡಿ ಸಹಾಯಕಿ : 21 ಹುದ್ದೆಗಳು

    ವೇತನ : ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ರೂ.10,000/-ರಂತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ರೂ.5000/- ರಂತೆ ಗೌರವಧನ ನೆಲೆಯಲ್ಲಿ ಭರ್ತಿ ಮಾಡಲಾಗುತ್ತಿದೆ.

    ವಯೋಮಿತಿ : ಅಭ್ಯರ್ಥಿಯ ವಯಸ್ಸು 18-35 ವರ್ಷದೊಳಗಿನವರಾಗಿರಬೇಕು. ( ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ ಗರಿಷ್ಠ 45 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ)

    ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್‌ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಭೂಮಿಯ ಭೂಮಾಪನಾ, ಕಂದಾಯ, ಭೂದಾಖಲೆ ಹಾಗೂ ಭೂ ಸಂಬಂಧಿತ ನ್ಯಾಯಾಲಯದಲ್ಲಿರುವ ದಾವೆಗಳ ಬಗ್ಗೆ ಕರ್ತವ್ಯ ನಿರ್ವಹಿಸಲು ಪ್ರಥಮ ದರ್ಜೆ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ರಾಜ್ಯ ಸರಕಾರ, ಸ್ಥಳೀಯ ಪ್ರಾಧಿಕಾರದಿಂದ ನಿವೃತ್ತಿ ಹೊಂದಿರುವ ಅರ್ಹ, ನುರಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಸೇವಾನುಭವ ಇತ್ಯಾದಿ ಅಂಶಗಳಿರುವ ಅರ್ಜಿಯನ್ನು ಜು.15 ರೊಳಗೆ ಕುಲಸಚಿವರು, ಬೆಂಗಳೂರು ವಿವಿ, ಜ್ಞಾನಭಾರತಿ ಆವರಣ, ಬೆಂಗಳೂರು – 56 ಈ ವಿಳಾಸಕ್ಕೆ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ