Author: Mallika

  • KRIDL : ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಬೆಂಗಳೂರಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣದ ಸಲುವಾಗಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಹಿರಿಯ ಅಭಿಯಂತರರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

    ಹುದ್ದೆ : ಸೀನಿಯರ್ ಎಂಜಿನಿಯರ್ ( ಸಿವಿಲ್) – 1 ಹುದ್ದೆ

    ವಿದ್ಯಾರ್ಹತೆ : ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಗ್ರಾಜ್ಯುಯೇಶನ್ ಮಾಡಿರಬೇಕು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000/- ಮಾಸಿಕ ವೇತನವಿರುತ್ತದೆ.

    ವಯೋಮಾನ : ಪ್ರಕಟಣೆ ಹೊರಡಿಸಿದ ‌ದಿನಾಂಕಕ್ಕೆ 65 ವರ್ಷಗಳು ಮೀರಿರಬಾರದು.

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮಾರ್ಥ್ಯಗಳು ಮತ್ತು ರೆಸ್ಯೂಮ್ ಅನ್ನು ಮುಖ್ಯ ಅಭಿಯಂತರರು ( ಬಿಬಿಎಂಪಿ), ಕೆಆರ್ ಐಡಿಎಲ್, 4&5 ನೇ ಮಹಡಿ, ಗ್ರಾಮೀಣಾಭಿವೃದ್ಧಿ ಭವನ, ಆನಂದರಾವ್ ವೃತ್ತ, ಬೆಂಗಳೂರು – 560009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ: 05-07-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

    ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆನರಾ ಬ್ಯಾಂಕ್ : ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

    ಕೆನರಾ ಬ್ಯಾಂಕ್, ಪ್ರವರ್ತಿಸಿರುವ ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕಿನ ಆರ್ಥಿಕ ಸಾಕ್ಷರತ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇರೆಗೆ ” ಆರ್ಥಿಕ ಸಲಹೆಗಾರ” ಹುದ್ದೆಗೆ ಬ್ಯಾಂಕಿನ ನಿವೃತ್ತ/ ಸ್ವ ಇಚ್ಛೆಯಿಂದ ನಿವೃತ್ತಿ ಹೊಂದಿದ 62 ವರ್ಷದ ಒಳಗಿನ ಪ್ರಬಂಧಕರು/ ಹಿರಿಯ ಪ್ರಬಂಧಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹೆಚ್ಚಿನ ಮಾಹಿತಿ ಮತ್ತು ನಿಬಂಧನೆಗಳಿಗೆ ‌ಹಾಗೂ‌ ಅರ್ಜಿ ನಮೂನೆಗಳಿಗಾಗಿ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ : ಕೃಷಿ ಸಾಲ ವಿಭಾಗ,‌ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿ- ಪೂರ್ವ, ಸ್ಪೆನ್ಸರ್ ಟವರ್, ಎಂ.ಜಿ.ರಸ್ತೆ, ಬೆಂಗಳೂರು – 560001

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021
    ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9845461668

  • ಜ್ಯೂನಿಯರ್ ಅಸಿಸ್ಟೆಂಟ್ ಕಂ ಮಾರಾಟ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

    ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ., ಸರ್ಜಾಪುರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : 5 ( ಐದು) ಕಿರಿಯ ಸಹಾಯಕ ‌ಕಂ ಮಾರಾಟ ಗುಮಾಸ್ತ ( junior assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
    ಕನ್ನಡ ಭಾಷೆಯನ್ನು ಕಲಿತಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ / ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
    ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು : ಇತ್ತೀಚಿನ ಎರಡು ಭಾವಚಿತ್ರ, ಪಾಸ್ ಪೋರ್ಟ್/ ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ವೋಟರ್ ಐಡಿ ಯಾವುದಾದರೂ ಒಂದು. ವಯಸ್ಸು ದೃಢೀಕರಣ ಪತ್ರ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಅಂಕಪಟಯ, ಕಂಪ್ಯೂಟರ್ ಪದವಿ ಹೊಂದಿರುವ ಬಗ್ಗೆ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

    ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ರೂ. 1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರಿಗಿಸಲಾಗುವುದಿಲ್ಲ. ಸಂಘದಿಂದ ಪೂರೈಸಿದ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ – 562125 ಆನೇಕಲ್ ತಾಲ್ಲೂಕು, ಬೆಂಗಳೂರು ‌ನಗರ ಜಿಲ್ಲೆ ಇಲ್ಲಿ ಸಲ್ಲಿಸತಕ್ಕದ್ದು

    ಅರ್ಜಿ ಸಲ್ಲಿಸಲು ದಿನಾಂಕ 24-05-2021 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಕೋವಿಡ್ 19 ರಿಂದಾಗಿ ಸರಕಾರವು ಲಾಕ್ ಡೌನ್ ಆದೇಶಿಸಿದ್ದ ಕಾರಣ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿರುತ್ತದೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021 ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.

  • HSL : ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

    ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ( ಹೆಚ್ ಎಸ್ ಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ‌ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ

    ಹುದ್ದೆಗಳ ವಿವರ : ಜನರಲ್ ಮ್ಯಾನೇಜರ್ , ಅಡಿಶನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಚೀಫ್ ಪ್ರಾಜೆಕ್ಟ್ ಆಫೀಸರ್, ಪ್ರಾಜೆಕ್ಟ್ ಮ್ಯಾನೇಜರ್, ಡೆಪ್ಯುಟಿ ಪ್ರಾಜೆಕ್ಟ್ ಆಫೀಸರ್, ಸೀನಿಯರ್ ಕನ್ಸಲ್ಟೆಂಟ್, ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-06-2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-07-2021 ರಿಂದ 30-08-2021 ರವರೆಗೆ ( ವಿವಿಧ ಹುದ್ದೆಗಳ ಮೇಲೆ ಅವಲಂಬಿಸಿದೆ)

  • BECIL : 103 ಹುದ್ದೆಗಳಿಗೆ ಅರ್ಜಿ ಆಹ್ವಾನ, 8 ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ

    ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : 103 ಹ್ಯಾಂಡಿಮನ್ ಮತ್ತು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021
    ವಿದ್ಯಾರ್ಹತೆ : 8 ನೇ ತರಗತಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    ವಯೋಮಿತಿ : ಸುಮಾರು 30 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,014 /- ರಿಂದ ರೂ.20,384 /- ವೇತನ ನೀಡಲಾಗುತ್ತದೆ.

    ಅರ್ಜಿ ಶುಲ್ಕ : ಅರ್ಜಿದಾರರು ರೂ. 750/- ನ್ನು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಆರ್ಥಿಕವಾಗಿ ಹಿಂದುಳಿದ / ಅಂಗವಿಕಲ ಅಭ್ಯರ್ಥಿಗಳಿಗೆ ರೂ. 450/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ.

  • KIOCL ಲಿಮಿಟೆಡ್ : ವಿವಿಧ ಹುದ್ದೆ

    ಕೆಐಒಸಿಎಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆ: ಜೆಜಿಎಂ ( ಕಮರ್ಷಿಯಲ್‌) – 1 ಹುದ್ದೆ
    ಜೆಜಿಎಂ ( ಮೆಟಿರಿಯಲ್) – 1 ಹುದ್ದೆ
    ಡಿಜಿಎಂ ( ಎಲೆಕ್ಟ್ರಿಕಲ್ ) – 1 ಹುದ್ದೆ
    ಮ್ಯಾನೇಜರ್ ( ಕಾರ್ಪೋರೇಟ್ ಕಮಿಷನ್) /E3 – 1 ಹುದ್ದೆ

    ಎಕ್ಸಿಕ್ಯೂಟಿವ್ ಟ್ರೈನಿಸ್
    1.ಎಕ್ಸಿಕ್ಯೂಟಿವ್ ಟ್ರೈನಿ ( ಹೆಚ್ ಆರ್)/ ಇಒ- 3 ಹುದ್ದೆಗಳು

    1. ಎಕ್ಸಿಕ್ಯೂಟಿವ್ ಟ್ರೈನಿ ( ಫೈನಾನ್ಸ್)/ ಇಒ- 4 ಹುದ್ದೆಗಳು
    2. ಎಕ್ಸಿಕ್ಯೂಟಿವ್ ಟ್ರೈನಿ ( ಕಂಪನಿ ಸೆಕ್ರೆಟರಿ) /ಇಒ- 1 ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ