Author: Mallika

  • KSMCL ನಲ್ಲಿ 16 ವಿವಿಧ ಹುದ್ದೆಗಳು: ನೇರ ಸಂದರ್ಶನಕ್ಕೆ ಆಹ್ವಾನ

    ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ( ಕೆ‌.ಎಸ್.ಎಂ.ಸಿ.ಎಲ್) ಕರ್ನಾಟಕ ರಾಜ್ಯಾದ್ಯಂತ ತನ್ನ ಗಣಿ/ಕ್ವಾರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ‌ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಹುದ್ದೆಯ ಹೆಸರು : ಗಣಿ ಮುಂದಾಳು – 08 ಹುದ್ದೆಗಳು
    ಗಣಿ ಸಂಗಾತಿ – 04 ಹುದ್ದೆಗಳು
    ಬ್ಲಾಸ್ಟರ್ – 04 ಹುದ್ದೆಗಳು

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 23 ವರ್ಷ, ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಸಂಚಿತ ಸಂಭಾವನೆ ಪ್ರತಿ ಮಾಹೆ ( ರೂ.ಗಳಲ್ಲಿ)- ಗಣಿ ಮುಂದಾಳು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ರೂ.32,000/-, ಗಣಿ ಸಂಗಾತಿ ಹುದ್ದೆಗೆ ರೂ.25,000/-,ಬ್ಲಾಸ್ಟರ್ ಹುದ್ದೆಗೆ ರೂ.20,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಸಂದರ್ಶನದ ದಿನಾಂಕ ಹಾಗೂ ಸ್ಥಳ : ಗಣಿ ಮುಂದಾಳು -( mine foreman) 02-07-2021 ಸಮಯ 11.30 ಬೆಳಿಗ್ಗೆ.

    ಗಣಿ ಸಂಗಾತಿ (mine mate) : ಸಂದರ್ಶನದ ದಿನಾಂಕ ಹಾಗೂ ಸ್ಥಳ : 03-07-2021 ಸಮಯ 11.30 ಬೆಳಿಗ್ಗೆ .

    ಬ್ಲಾಸ್ಟರ್ : ಸಂದರ್ಶನದ ದಿನಾಂಕ ಹಾಗೂ ಸ್ಥಳ : 03-07-2021 ಸಮಯ 3.00 ಮಧ್ಯಾಹ್ನ .

    ವಿಳಾಸ : Deputy General Manager, Iron Ore Division, Vaishnavi Farms, Daulathpur Road, Sandur-583119, Ballari District.

    ಅಂಚೆ ಮೂಲಕ ಅಥವಾ ಮುದ್ದಾಂ ಆಗಿ ಕಳಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಅರ್ಜಿ ನಮೂನೆ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಜಾಲತಾಣ www.ksmc.karnataka.gov.in ನ್ನು ಸಂಪರ್ಕಿಸಬಹುದಾಗಿದೆ.

  • ಶಿವಮೊಗ್ಗ ಸ್ಮಾರ್ಟ್ ಸಿಟಿ : ನೇಮಕಾತಿ ಅಧಿಸೂಚನೆ

    ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
    ಹುದ್ದೆ : ಗುತ್ತಿಗೆ ಆಧಾರದ ಮೇರೆಗೆ ಒಂದು ಕಾರ್ಯಪಾಲಕ ಇಂಜಿನಿಯರ್ (ವಿದ್ಯುತ್) ಮತ್ತು ಒಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಚ್ಛಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-07-2021

    ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ವೆಬ್‌ಸೈಟ್‌ shivamoggasmartcity.co.in ಅಥವಾ shimogacity.mrc.gov.in ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯ ಸೂಚನಾ ಫಲಕವನ್ನು ನೋಡುವುದು.

  • ಎನ್ ಸಿಸಿ ವಿಶೇಷ ಯೋಜನೆಯಡಿ ಭಾರತೀಯ ಸೇನೆಗೆ ಸೇರಲು ಅರ್ಜಿ ಆಹ್ವಾನ, ಪರೀಕ್ಷೆ ಇಲ್ಲದೆ ನೇರ ಸಂದರ್ಶನ

    ಎನ್ ಸಿಸಿಯಲ್ಲಿ ತೊಡಗಿಸಿಕೊಂಡವರಿಗೆ ಭಾರತೀಯ ಸೇನೆಯಲ್ಲಿ ಕೆಲಸಕ್ಕೆ ಸೇರುವ ಅವಕಾಶ ಒದಗಿದೆ.

    ಭಾರತೀಯ ಸೇನೆಯು ಎನ್ ಸಿಸಿ ಸ್ಪೆಷಲ್ ಎಂಟ್ರಿ ಸ್ಕೀಮ್ ಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

    ಈ ನೇಮಕಾತಿ ಪ್ರಕ್ರಿಯೆಯಲ್ಲಿ 55 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇದರಲ್ಲಿ 50 ಹುದ್ದೆಗಳನ್ನು ಅವಿವಾಹಿತ ಪುರುಷ ಅಭ್ಯರ್ಥಿಗಳಿಗೆ ಹಾಗೂ 5 ಹುದ್ದೆಗಳಿಗೆ ಎನ್ ಸಿಸಿ ಮಹಿಳಾ ಅಭ್ಯರ್ಥಿಗಳಿಗೆ ಭರ್ತಿ ಮಾಡಿಕೊಳ್ಳಲಾಗುವುದು.

    ಪುರುಷ ಉದ್ಯೋಗಿಗಳ ಪೈಕಿ ಸಾಮಾನ್ಯ ವರ್ಗಕ್ಕೆ 45, ಅಪಘಾತಕ್ಕೀಡಾಗಿರುವ ಸೇನಾ ಸಿಬ್ಬಂದಿ ಅಭ್ಯರ್ಥಿಗಳಿಗೆ 5 ಹುದ್ದೆಗಳು ಮೀಸಲಿವೆ. ಮಹಿಳಾ ಉದ್ಯೋಗಿಗಳ ಪೈಕಿ 4 ಸಾಮಾನ್ಯ ವರ್ಗಕ್ಕೆ ಹಾಗೂ 1 ಸೇನಾ ಸಿಬ್ಬಂದಿಗಳಿಗೆ ಮೀಸಲಾಗಿಡಲಾಗಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ.50 ಅಂಕದೊಂದಿಗೆ ಪದವಿ ಹೊಂದಿರಬೇಕು. ಇನ್ನು ಅಂತಿಮ ವರ್ಷ ಅಧ್ಯಯನ ಮಾಡುವವರು ಕೂಡಾ ಅರ್ಜಿ ಸಲ್ಲಿಸಬಹುದು. ಕ್ರಮವಾಗಿ ಮೂರು/ನಾಲ್ಕು ವರ್ಷಗಳಲ್ಲಿನ ಕೋರ್ಸ್ ಗಳಲ್ಲಿನ ಮೊದಲ ಎರಡು/ ಮೂರು ವರ್ಷಗಳಲ್ಲಿ ಕನಿಷ್ಠ 50 ರಷ್ಟು ಅಂಕಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ಎನ್ ಸಿಸಿ ಅಭ್ಯರ್ಥಿಗಳಿಗಾಗಿಯೇ ಇರುವ ಹುದ್ದೆ ಇದಾಗಿರುವುದರಿಂದ ಅಭ್ಯರ್ಥಿಗಳು ಎನ್ ಸಿಸಿಯಲ್ಲಿ ಸೀನಿಯರ್ ಡಿವಿಷನ್ ವಿಭಾಗದಲ್ಲಿ ಕನಿಷ್ಠ ಎರಡರಿಂದ ಮೂರು ವರ್ಷ ಕಾರ್ಯನಿರ್ವಹಿಸಬೇಕು.

    ಅಭ್ಯರ್ಥಿಯ ವಯೋಮಿತಿ 19 ರಿಂದ 25 ವರ್ಷದೊಳಗಿರಬೇಕು. ಜುಲೈ 1,2021 ರೊಳಗೆ ಗರಿಷ್ಠ ‌25 ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ ಹೇಗೆ? ಎರಡು ಹಂತದ ಆಯ್ಕೆ ವಿಧಾನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿಕೊಳ್ಳಲಾಗುತ್ತದೆ. ಆನಂತರ ಸರ್ವಿಸ್ ಸೆಲೆಕ್ಷನ್ ಬೋರ್ಡ್ (ಎಸ್ ಎಸ್ ಬಿ) ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲಿದೆ.

    5 ದಿನಗಳ ಕಾಲ ಎಸ್ ಎಸ್ ಬಿ ಸಂದರ್ಶನ ನಡೆಯಲಿದೆ. ಅಲಹಾಬಾದ್, ಭೋಪಾಲ್, ಬೆಂಗಳೂರು ಹಾಗೂ ಕಪುರ್ತಲದಲ್ಲಿ ಎಸ್ ಎಸ್ ಬಿ ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಚೆನ್ನೈನ ಒಟಿಒದಲ್ಲಿ ಪೂರ್ವ ಆಯೋಗದ ತರಬೇತಿ ನೀಡಲಾಗುತ್ತದೆ.

    ಪರೀಕ್ಷೆ ಬರೆಯೋ ಟೆನ್ಶನ್ ಇಲ್ಲದೆ ನೇರವಾಗಿ ಸಂದರ್ಶನಗಳನ್ನು ಎದುರಿಸಿ ಸೇನೆಗೆ ಸೇರಬಹುದು. ಈ‌ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ

    ಅರ್ಜಿ ಸಲ್ಲಿಸೋ ಪ್ರಕ್ರಿಯೆಯು ಜೂನ್ 16 ರಿಂದ ಪ್ರಾರಂಭವಾಗಿ ಜುಲೈ 15 ಕ್ಕೆ ಮುಕ್ತಾಯಗೊಳ್ಳಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • RDPR : ವಿವಿಧ ಹುದ್ದೆ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು, ಕಾರ್ಯಾನುಭವ, ವಿದ್ಯಾರ್ಹತೆಗಳನ್ನು ಈ ಕೆಳಗೆ ನೀಡಲಾಗಿದೆ.

    ಜಿಲ್ಲಾ ಪಂಚಾಯತಿ ಕಚೇರಿ – ಜಲ ಜೀವನ ಮಿಷನ್
    ಹುದ್ದೆ : ಜಿಲ್ಲಾ MIS ಸಮಾಲೋಚಕರು – 05 ಹುದ್ದೆಗಳು

    ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್
    ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
    ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷ ಮೀರಿರಬಾರದು.

    ಹುದ್ದೆ ಸ್ಥಳ : ಬೆಂಗಳೂರು-ಚಿಕ್ಕಬಳ್ಳಾಪುರ-ಹರಪನಹಳ್ಳಿ- ಕೊಡಗು

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಪ್ರಮುಖ ಸಾಮರ್ಥ್ಯ ಗಳು, ಅನುಭವ ಮತ್ತು resume ನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು- 5600- 009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ 05-07-2021 ರ ಸಂಜೆ 5:30 ರೊಳಗೆ ಸಲ್ಲಿಸಬೇಕು. ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ https://rdpr.karnataka.gov.in ಮತ್ತು https://swachhamevajayate.org ಗೆ ಭೇಟಿ ನೀಡಬಹುದು.

  • ಆಯುಷ್ ಇಲಾಖೆಯಲ್ಲಿನ ಆಯುಷ್ ಕ್ಷೇಮ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಆಯುಷ್ ನಿರ್ದೇಶನಾಲಯದ ಜಿಲ್ಲಾ ಆಯುಷ್ ಅಧಿಕಾರಿಗಳ‌ ಕಾರ್ಯಾಲಯ ಧಾರವಾಡ ಇಲ್ಲಿ ಅಗತ್ಯವಿರುವ ಸಂಪೂರ್ಣ ತಾತ್ಕಾಲಿಕ ಗ ಹುದ್ದೆಯಾಗಿರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ( DPM) -01 ಹುದ್ದೆಯನ್ನು ನೇಮಕ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳು, ಧಾರವಾಡರವರ ಅನುಮೋದನೆ ಅನ್ವಯ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ( DPM )

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಆಯುಷ್ ಸೇರಿದಂತೆ & ಪಿ.ಜಿ.-ಎಂ.ಬಿ.ಎ/ ಪೋಸ್ಟ್ ಗ್ರಾಜ್ಯುಯೇಶನ್ ಡಿಪ್ಲೋಮಾ ಎ.ಆಯ್.ಸಿ.ಟಿ.ಇ ಅಂಗೀಕೃತ ‌ಸಂಸ್ಥೆಯಿಂದ

    ಮಾಸಿಕ ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.30,000/- ವೇತನ ನಿಗದಿಪಡಿಸಲಾಗಿದೆ.

    ವಯೋಮಿತಿ : ದಿನಾಂಕ 01-04-2021 ಕ್ಕೆ ಎಲ್ಲಾ ವರ್ಗದವರಿಗೆ ಕನಿಷ್ಠ 18 ಹಾಗೂ ‌ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

    ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಪಡೆದು ಅವಶ್ಯವಿರುವ ಎಲ್ಲಾ ವಿದ್ಯಾರ್ಹತೆ ಹಾಗೂ ಅನುಭವಗಳ ಬಗ್ಗೆ ದಾಖಲಾತಿಗಳೊಂದಿಗೆ ದಿನಾಂಕ 05-07-2021 ಸಂಜೆ 5.30 ರೊಳಗಾಗಿ ಜಿಲ್ಲಾ ಆಯುಷ್ ಅಧಿಕಾರಿಗಳು, ಸಿವಿಲ್ ಆಸ್ಪತ್ರೆ ಹತ್ತಿರ, ಕಿಲ್ಲಾ ರಸ್ತೆ, ಧಾರವಾಡ- 580008 ರವರಿಗರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವುದು.

  • ಬೆಂಗಳೂರಿನಲ್ಲಿ ಆಶಾ ಮೇಲ್ವಿಚಾರಕರ ಹುದ್ದೆಗೆ ನೇರ ಸಂದರ್ಶನ

    ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ( ರಿ) ದ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ಆಶಾ ಮೇಲ್ವಿಚಾರಕ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವೇತನ : ಮಾಸಿಕ ರೂ.15,600/- ವೇತನ ನಿಗದಿಪಡಿಸಲಾಗಿದೆ.

    ಹುದ್ದೆ ಸಂಖ್ಯೆ : 04

    ಸಂದರ್ಶನ ದಿನಾಂಕ ಹಾಗೂ ಸಮಯ: 25-06-2021 ರಂದು Naukara Bhavana, BBMP Head Office, N.R. Square, Bengaluru. ಸಮಯ 11-00 ಗಂಟೆ ಬೆಳಿಗ್ಗೆ ಯಿಂದ 04-00 ಗಂಟೆ ಸಾಯಂಕಾಲ ರವರೆಗೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷಗಳು ಆಗಿರಬೇಕು. ಸಾಮಾನ್ಯ ವರ್ಗ – 35 ವರ್ಷ( ಬಿ), 2ಎ, 2ಬಿ, 3 ಎ, 3ಬಿ – 38 ವರ್ಷ, ಪ.ಜಾತಿ/ ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 08022110445 ಗೆ ಸಂಪರ್ಕಿಸಬಹುದು.