Author: Mallika

  • ಅಂಗನವಾಡಿ ಖಾಲಿ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಜುಲೈ 1 ರಿಂದ ಆರಂಭ

    ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ‌ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಜುಲೈ 1 ರಿಂದ ಆರಂಭಿಸಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ರಾಜ್ಯ‌ ಕಾನೂನು ಸೇವಾ ಪ್ರಾಧಿಕಾರ‌ ಶಿಫಾರಸು ಮಾಡಿದೆ.

    2011 ರಲ್ಲಿ ಸಲ್ಲಿಕೆಯಾಗಿರುವ ಅಪೌಷ್ಟಿಕತೆ ನಿವಾರಣೆಗೆ‌ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಶಿಫಾರಸು ಮಾಡಲಾಗಿದೆ. ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದ ಸರಕಾರದ ಕಾರ್ತಕ್ರಮಗಳ ಮೇಲ್ವಿಚಾರಣೆ ನಡೆಸಿ ಅಗತ್ಯ ಶಿಫಾರಸುಗಳನ್ನು ನೀಡಲು ಹೈಕೋರ್ಟ್ ನೇಮಕ ಮಾಡಿರುವ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡರ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ‌ಸಹಾಯಕಿಯರ ಹುದ್ದೆಗಳ ಭರ್ತಿಗೆ ಮಧ್ಯಂತರ ಶಿಫಾರಸು ‌ನೀಡಲಾಗಿದೆ.

    ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಶಶಿಧರ ಶೆಟ್ಟಿ ಸಮಿತಿಯ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದಲ್ಲಿ 1,418 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 2,411 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದಾವೆ. ಇಷ್ಟೊಂದು ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಇರುವುದು ಅಪೌಷ್ಟಿಕತೆ ನಿವಾರಣೆ, ನಿರ್ವಹಣೆ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಖಾಲಿ ಇರುವ ಹುದ್ದೆಗೆ ವೇಳಾಪಟ್ಟಿ ಮಾಡಬೇಕು. ಜುಲೈ 1 ರಿಂದ ಅರ್ಜಿ ಆಹ್ವಾನಿಸಬೇಕು. ಅರ್ಜಿ ಆಹ್ಬಾನಕ್ಕೆ ಜು.31 ಕೊನೆ ದಿನಾಂಕವಾಗಿರಬೇಕು. ಆ.15 ಕ್ಕೆ ಅರ್ಜಿಗಳ ಪರಿಶೀಲನೆ ನಡೆಯಬೇಕು. ಡಿಸಿ ನೇತೃತ್ವದ ಆಯ್ಕೆ ಸಮಿತಿ ಆ.31 ಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಸೆ. 15 ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿ‌ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಅ.10ಕ್ಕೆ ಅಂತಿಮ ಪಟ್ಟಿ ಪ್ರಕಟಿಸಬೇಕು. ಅ.30 ಕ್ಕೆ ನೇಮಕಾತಿ ಆದೇಶ ‌ನೀಡಬೇಕೆಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

  • ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಬೆಂಗಳೂರು : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ ಹೆಚ್ ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗನ್ನು ಗುತ್ತಿಗೆ ಆಧಾರದ ಮೇಲೆ ಎನ್ ಹೆಚ್ ಎಂ ಮಾರ್ಗಸೂಚಿಯಂತೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಿದೆ

    ಹುದ್ದೆಗಳ ವಿವರ : ಎಸ್.ಎನ್.ಸಿ ಯು ವೈದ್ಯಾಧಿಕಾರಿಗಳು : 10 ಹುದ್ದೆ ಗಳು : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಟೆಲಿಮಡಿಸಿನ್ ವೈದ್ಯಾಧಿಕಾರಿಗಳು : 8 ಹುದ್ದೆಗಳು: ಮಾಸಿಕ ವೇತನ ರೂ.45,000/- ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಎನ್.ಪಿ.ಸಿ.ಡಿ.ಸಿ.ಎಸ್. ವೈದ್ಯಾಧಿಕಾರಿಗಳು : 2 ಹುದ್ದೆಗಳು : ಅಭ್ಯರ್ಥಿಗಳಿಗೆ ಮಾಸಿಕ ರೂ.46,200/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಶ್ರುಶ್ರೂಷಕಿಯರು‌: 126 ಹುದ್ದೆಗಳು : ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ ಸಿ/ ಜಿಎನ್ ಎಂ ತರಬೇತಿ ಹಾಗೂ ಕೆಎನ್ ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,500/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಫಾರ್ಮಸಿಸ್ಟ್ : 4 ಹುದ್ದೆಗಳು : ಡಿ.ಫಾರ್ಮ/ಬಿ.ಫಾರ್ಮ ಪದವಿಯೊಂದಿಗೆ ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,025/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಪ್ರಯೋಗಶಾಲಾ ತಂತ್ರಜ್ಞರು : 1 ಹುದ್ದೆ : DMLT ಪದವಿಯೊಂದಿಗೆ ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯನ್ನು ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ಮಾಸಿಕ ವೇತನ ರೂ.14,000/- + 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಈ ಮೇಲ್ಕಂಡ ಹುದ್ದೆಗಳಿಗೆ ಪ್ರತಿ ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುತ್ತದೆ.

    ಈ ಪ್ರಕಟಣೆಯು Rolling Advertisement ಆಗಿರುವುದರಿಂದ ಅವಧಿಯು 31-03-2022 ರವರೆಗೆ ಇರುತ್ತದೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್ ಸಿಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ,ಹಳೇ ಟಿ.ಬಿ.ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆಂಗಳೂರು-38 ಇಲ್ಲಿ ಹಾಜರಾಗುವುದು.

  • ನೈರುತ್ಯ ರೈಲ್ವೆ ಮೈಸೂರು : ಲ್ಯಾಬ್ ಸೂಪರಿಂಟೆಂಡೆಂಟ್ ಹುದ್ದೆಗೆ ನೇರ ಸಂದರ್ಶನ

    ನೈರುತ್ಯ ರೈಲ್ವೆ ಮೈಸೂರು ವಿಭಾಗವು ಈ ಕೆಳಗಿನ ಷರತ್ತು ಮತ್ತು ನಿಯಮಗಳನ್ವಯ ಮೈಸೂರು ವಿಭಾಗದಲ್ಲಿ ಕೋವಿಡ್ -19 ಸಲುವಾಗಿ ಒಪ್ಪಂದದ ಆಧಾರದ ಮೇಲೆ 3 ತಿಂಗಳ ಅವಧಿಗಾಗಿ ಈ ಕೆಳಗಿನ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ವಿವರಗಳು ಈ ಕೆಳಗೆ ನೀಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಯ ಹೆಸರು : ಲ್ಯಾಬ್ ಸೂಪರಿಂಟೆಂಡೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ವಯಸ್ಸು : 07-06-2021 ರಂತೆ 18 ರಿಂದ 33 ವರ್ಷಗಳು.

    ಹುದ್ದೆ ಸಂಖ್ಯೆ : 02 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಸೇವೆ ಬೇಕಾಗಿರುವ ಸ್ಥಳ : ರೈಲ್ವೆ ಆಸ್ಪತ್ರೆ, ಮೈಸೂರು.

    ವಾಕ್ ಇನ್ ಇಂಟರ್ ವ್ಯೂಹ್ ಸ್ಥಳ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ, ಐರ್ವಿನ್ ರಸ್ತೆ, ಮೈಸೂರು.

    ವಾಕ್ ಇನ್ ಇಂಟರ್ವ್ಯೂ ದಿನಾಂಕ ‌ಹಾಗೂ ಸಮಯ : 17-06-2021 11 ಗಂಟೆಯ ನಂತರ 17.00 ಗಂಟೆಯವರೆಗೆ

    ಗೌರವಧನ : ರೂ.35,400/- ಪ್ಲಸ್ ಡಿಎ ಮತ್ತು ಇತರೆ ಭತ್ಯೆಗಳು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • 33 ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

    ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕರ ಹುದ್ದೆ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 33

    ಸಂಸ್ಥೆಯ ಅಂತರ್ಜಾಲದಲ್ಲು ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ‌ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡತಕ್ಕದ್ದು. ಹಾಗೂ ಸ್ವೀಕೃತಿ ಪ್ರತಿ ಸಂಬಂಧಪಟ್ಟ ದಾಖಲಾತಿಗಳ ಸ್ವದೃಢೀಕೃತ ಎರಡು ಪ್ರತಿಗಳನ್ನು ದಿನಾಂಕ ; 30-06-2021 ರ ಸಂಜೆ 5 ಗಂಟೆಯೊಳಗೆ ಈ ಕಚೇರಿಗೆ ಸಲ್ಲಿಸತಕ್ಕದ್ದು ಹಾಗೂ ಅರ್ಜಿ ಶುಲ್ಕ ರೂ. 2000/- ಗಳನ್ನು ಆನ್ಲೈನ್ ಮೂಲಕ ಪಾವತಿಸತಕ್ಕದ್ದು.

    ಅಭ್ಯರ್ಥಿಗಳಿಗೆ ವಿಭಾಗವಾರು ಸಂದರ್ಶನದ ದಿನಾಂಕವನ್ನು ಪ್ರತ್ಯೇಕವಾಗಿ ಸಂಸ್ಥೆಯ ವೆಬ್‌ಸೈಟ್‌ ನಲ್ಲಿ ತಿಳಿಸಲಾಗುವುದು. ಅವಧಿ ಮುಗಿದ ನಂತರ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವ ದಾಖಲಾತಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಮೈಸೂರು ಜಿಲ್ಲಾ ಪಂಚಾಯತ್ : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

    ಕೋವಿಡ್ -19 ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿ ಬರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು ಜಿಲ್ಲೆ ಮೈಸೂರು ಇವರ ಅಧೀನ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಶುಶ್ರೂಷಕರು ಹುದ್ದೆಗಳಿಗೆ ತಾತ್ಕಾಲಿಕವಾಗಿ ದಿನಾಂಕ 30-09-2021 ರವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೊಸ್ಟರ್ ಆಧಾರದಲ್ಲಿ ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ದಿನಾಂಕ 17-06-2021 ರಂದು ಬೆಳಿಗ್ಗೆ 10.00 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಪಿ.ಸಿ. ಆಸ್ಪತ್ರೆ ‌ಆವರಣ, ಮೈಸೂರು ‌ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹಿಂದೆ ಈ ಉದ್ದೇಶಕ್ಕಾಗಿ ದಿನಾಂಕ ‌04-06-2021 ರಂದು ‌ಸಂದರ್ಶನಕ್ಕೆ ಹಾಜರಾಗಿದ್ದ‌ ಅಭ್ಯರ್ಥಿಗಳನ್ನು ಈ ಹುದ್ದೆಗೆ ಪರಿಗಣಿಸಲಾಗುವುದರಿಂದ ಈ ಸಂದರ್ಶನಕ್ಕೆ ‌ಹಾಜರಾಗುವಂತಿಲ್ಲ.

    ಹುದ್ದೆ : ನರ್ಸಿಂಗ್ ‌ಆಫೀಸರ್
    ವಿದ್ಯಾರ್ಹತೆ : ಬಿ.ಎಸ್ಸಿ/ಜಿಎನ್ ಎಂ/ ಡಿಪ್ಲೋಮಾ ನರ್ಸಿಂಗ್
    ಹುದ್ದೆ ಸಂಖ್ಯೆ : 13
    ವೇತನ : ಅಭ್ಯರ್ಥಿಗಳಿಗೆ ಮಾಸಿಕ‌ ರೂ.25,000/- ವೇತನವಿರುತ್ತದೆ.
    ವಯೋಮಿತಿ : ಜನರಲ್ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

    ಈ ಮೇಲ್ಕಂಡ ಹುದ್ದೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ಅಂಕಪಟ್ಟಿಗಳು/ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ನೊಂದಿಗೆ ಹಾಗೂ ಇವುಗಳ ಒಂದು ಜೆರಾಕ್ಸ್ ಪ್ರತಿಯೊಂದಿಗೆ ತಿಳಿಸಿರುವ ದಿನಾಂಕದಂದು ಹಾಗೂ ಸಮಯದೊಳಗೆ ಹಾಜರಿರತಕ್ಕದ್ದು.

  • IBPS RRB Recruitment 2021: ಕರ್ನಾಟಕದ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ 478 ಹುದ್ದೆಗಳಿಗೆ ಅರ್ಜಿ ಆಹ್ವಾನ

    ,

    ಗ್ರಾಮೀಣ ಬ್ಯಾಂಕ್ ಗಳಲ್ಲಿನ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ನಡಸಲಾಗುತ್ತಿದ್ದರೂ, ರಾಜ್ಯದಲ್ಲಿ ಒಂದೇ ಒಂದು ಹುದ್ದೆ ಇಲ್ಲ ಎಂಬ ವಿಷಯಕ್ಕೆ ಈಗ ರಾಜ್ಯದಲ್ಲಿ 478 ಹುದ್ದೆಗಳಿಗೆ ನೇಮಕ ಮಾಡುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಸುದ್ದಿ ರಾಜ್ಯದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.

    ರಾಜ್ಯದ ಎರಡು ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟಾರೆ 478 ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯಬಹುದು. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಮುಖ್ಯ ಪರೀಕ್ಷೆ ಆನ್ಲೈನ್ ಮೂಲಕ ನಡೆಯಲಿದೆ.

    ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ‌ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೇಮಕ ಪ್ರಕ್ರಿಯೆಯಲ್ಲಿದೆ. ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ( ಸ್ಕೇಲ್ 1) ಹುದ್ದೆಗಳಿಗೆ‌ ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಇದನ್ನೂ ಓದಿ: IBPS RRB ಅಧಿಸೂಚನೆ ಪ್ರಕಟ: ಗ್ರಾಮೀಣ ಬ್ಯಾಂಕ್‌ಗಳಲ್ಲಿನ 10,447 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    ರಾಜ್ಯದಲ್ಲಿ 261 ಆಫೀಸ್ ಅಸಿಸ್ಟೆಂಟ್ ( ಮಲ್ಟಿ ಪರ್ಪಸ್) ಹುದ್ದೆಗಳಿಗೆ ನೇಮಕ ಮಾಡಲಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿನ160 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 101 ಹುದ್ದೆಗಳಿವೆ. 201 ಆಫೀಸರ್ (ಸ್ಕೇಲ್ -1) ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಇದರಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 87 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 130 ಹುದ್ದೆಗಳಿವೆ.

    ಅರ್ಹತೆ : ಯಾವುದೇ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸ್ಥಳೀಯ ಭಾಷೆ ಓದಲು ಬರೆಯಲು ತಿಳಿದಿರಬೇಕು.

    ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 18 ರಿಂದ 28 ಮತ್ತು ಆಫೀಸರ್ ಹುದ್ದೆಗೆ 18 ರಿಂದ 30 ವರ್ಷ ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

    ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಮಾತ್ರ ಅವಕಾಶವಿದೆ.

    ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳೂ ಒಟ್ಟು 478 ಹುದ್ದೆಗಳಿಗೆ ನೇಮಕ ನಡೆಸುವಂತೆ ಈ ಹಿಂದೆಯೇ ಐಬಿಪಿಎಸ್ ಬೇಡಿಕೆ ಸಲ್ಲಿಸಿದ್ದವು. ಆದರೆ ಐಬಿಪಿಎಸ್ ನಿರ್ಲಕ್ಷ್ಯ ತೋರಿದ್ದರಿಂದ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಹುದ್ದೆಗಳೇ ಇಲ್ಲ ಎಂದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿರಲಿಲ್ಲ.