Author: Mallika

  • DHFWS ಚಾಮರಾಜನಗರ : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಕೋವಿಡ್ -19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಚಾಮರಾಜನಗರ ಈ ಕಚೇರಿಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶ್ರೂಷಕರು, ಕಿರಿಯ ವೈದ್ಯಕೀಯ ಪ್ರಯೋಗಶಾಲ ತಂತ್ರಜ್ಞರು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಮೆರಿಟ್ ಕಂ ರೋಸ್ಟರ್ ಮೂಲಕ ದಿನಾಂಕ 30-09-2021 ರ ವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿ ಮಾಡುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಮಾಡಲು ಹಾಗೂ ಕಚೇರಿಯ ಅಧೀನ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು 6 ಐಸಿಯು ಹಾಸಿಗೆಗಳನ್ನು ಕಾರ್ಯಗತಗೊಳಿಸುವ ಸಲುವಾಗಿ ವೈದ್ಯಾಧಿಕಾರಿ 8 ಹುದ್ದೆಗಳನ್ನು ತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ನೇಮಕಾತಿ ಮಾಡಲು ಹುದ್ದೆಗಳ ಮುಂದೆ ನಮೂದಿಸಿರುವ ದಿನಾಂಕದಂದು ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ 312, ಮೂರನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ಏರ್ಪಡಿಸಲಾಗಿದೆ. ಆಸಕ್ತರು ತಮ್ಮ ಮೂಲ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳು ( 1 ಜೊತೆ ಜೆರಾಕ್ಸ್ ಪ್ರತಿ) ಹಾಗೂ ಸ್ವ ವಿವರಗಳೊಂದಿಗೆ ನೇರಸಂದರ್ಶನಕ್ಕೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಕರ್ತವ್ಯದ ವೇಳೆಯಲ್ಲಿ ಸಂಪರ್ಕಿಸುವುದು.

    ಹುದ್ದೆಯ ಹೆಸರು : ವೈದ್ಯಾಧಿಕಾರಿ 8 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಂಬಿಬಿಎಸ್ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.60,000/- ವೇತನವಿರುತ್ತದೆ.

    ಶುಶ್ರೂಷಾಧಿಕಾರಿ: 04 ಹುದ್ದೆ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,000/- ಮಾಸಿಕ ವೇತನವಿರುತ್ತದೆ. ಅಭ್ಯರ್ಥಿಗಳು ಜಿಎನ್ ಎಂ ನ್ನು ಅಂಗೀಕೃತ ನರ್ಸಿಂಗ್ ಕೌನ್ಸಿಲ್ ನಿಂದ ಪಡೆದುಕೊಂಡಿರಬೇಕು.

    ಪ್ರಯೋಗ ಶಾಲಾ ತಂತ್ರಜ್ಞರು : 15 ಹುದ್ದೆಗಳು : ಈ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಜೊತೆಗೆ ಡಿಎಂಎಲ್ ಟಿ ಅಥವಾ ಪಿಯುಸಿ ಜೊತೆಗೆ ಪ್ಯಾರಾಮೆಡಿಕಲ್ ಬೋರ್ಡ್ ಲ್ಯಾಬ್ ಟೆಕ್ನಿಶಿಯನ್ ಹೊಂದಿರ ಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,000/- ವೇತನವಿರುತ್ತದೆ.

    ಫಾರ್ಮಸಿಸ್ಟ್ : 26 ಹುದ್ದೆಗಳು : ಈ ಹುದ್ದೆಗೆ 2 ವರ್ಷಗಳ ಡಿಪ್ಲೋಮಾ ಕೋರ್ಸ್ ಡಿಫಾರ್ಮಾ ದಲ್ಲಿ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,000/- ವೇತನವಿರುತ್ತದೆ.

    ವಯೋಮಿತಿ : ಜನರಲ್ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಸಿಎಟಿ1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

    ನೇರ ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: 11-06-2021 ಸಮಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ.

  • ಕೃಷಿ ವಿಶ್ವವಿದ್ಯಾಲಯ ಧಾರವಾಡ : ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ನೇರ ಸಂದರ್ಶನ

    ಕೃಷಿ ವಿಶ್ವವಿದ್ಯಾಲಯ ಧಾರವಾಡ, ಸ್ನಾತಕೋತ್ತರ ಶಿಕ್ಷಣ ನಿರ್ದೇಶನಾಲಯ, ಕೃಷಿ ನಗರ ಧಾರವಾಡ ಅಡಿಯಲ್ಲಿ ವಿವಿಧ ಡಿಪ್ಲೋಮಾ ಮಹಾ ವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ: ಟೆಕ್ನಿಕಲ್ ಅಸಿಸ್ಟೆಂಟ್ – 01

    ಹುದ್ದೆ ಅವಧಿ : 179 ದಿನಗಳವರೆಗೆ ತಾತ್ಕಾಲಿಕವಾಗಿ ತೊಡಗಿಸಿಕೊಳ್ಳಲಾಗುವುದು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,600/- ವೇತನ ನಿಗದಿಪಡಿಸಲಾಗಿದೆ.

    ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    ಸಂದರ್ಶನವು ದಿನಾಂಕ 21-06-2021 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಸ್ನಾತಕೋತ್ತರ ಕಚೇರಿ), ಕೃ.ವಿ.ವಿ ಧಾರವಾಡದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ.

    ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಬಯೋಡೇಟಾ, ಮೂಲ ಅಂಕಪಟ್ಟಿಗಳು ಮತ್ತು ಕೆಲಸದ ಅನುಭವದ ಪ್ರಮಾಣ ಪತ್ರಗಳನ್ನು ಈ ಇ- ಮೇಲ್ [email protected] ವಿಳಾಸಕ್ಕೆ ದಿನಾಂಕ 19-06-2021 ರ ಬೆಳಿಗ್ಗೆ 10.00 ಗಂಟೆಯೊಳಗಾಗಿ ಸ್ಕ್ಯಾನ್ ಪ್ರತಿ ಸಲ್ಲಿಸತಕ್ಕದ್ದು.

    ಸಂದರ್ಶನದ ಆನ್ಲೈನ್ ಜ಼ೂಮ್ ಮೀಟಿಂಗ್ ಐಡಿ ಮತ್ತು ಪಾಸ್ ವರ್ಡ್ ನ್ನು ದಿನಾಂಕ 19-06-2021ರ ಸಾಯಂಕಾಲ 5.00 ರ ಒಳಗಾಗಿ ತಿಳಿಸಲಾಗುವುದು.

    ನೋಟಿಫಿಕೇಶನ್

  • ಯುಪಿಎಸ್ಸಿ ಎನ್ ಡಿಎ ಪರೀಕ್ಷೆಗೆ ಅಧಿಸೂಚನೆ ಪ್ರಕಟ, ಜೂನ್ 29ರ ಮೊದಲು ಅರ್ಜಿ ಸಲ್ಲಿಸಿ

    ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 400 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ನೋಟಿಫಿಕೇಶನ್ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ – 370
    ನವಲ್ ಅಕಾಡೆಮಿ – 30 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021 ( 6pm)
    ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ: 28-06-2021
    ಪರೀಕ್ಷೆಯ ದಿನಾಂಕ : 05-09-2021

    ರಾಜ್ಯದಲ್ಲಿ ಪರೀಕ್ಷಾ ಕೇಂದ್ರ : ಬೆಂಗಳೂರು ಮತ್ತು ಧಾರವಾಡ

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ಒಟ್ಟು ಹುದ್ದೆ ಸಂಖ್ಯೆ : 400

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ 12th ತೇರ್ಗಡೆ ಹೊಂದಿರಬೇಕು.

    ನ್ಯಾಷನಲ್ ಡಿಫೆನ್ಸ್‌ ಅಕಾಡೆಮಿಗೆ 370 ( ಭೂ ಸೇನೆ 208, ನೌಕಾಪಡೆ 42, ವಾಯುಪಡೆ 120) ಮತ್ತು ನೇವಲ್ ಅಕಾಡೆಮಿ ಗೆ 30 ಸೇರಿ ಈ ಬಾರಿ ಒಟ್ಟು 400 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 02 ಜನವರಿ 2003 ಮತ್ತು 1 ಜನವರಿ 2006 ರ ನಡುವೆ ಜನಿಸಿರಬೇಕು( ಅವಿವಾಹಿತ ಪುರುಷ ಅಭ್ಯರ್ಥಿಗಳು)

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಸೇನೆಯ ಅಧಿಕಾರಿಗಳ ( ಜೆಸಿಎ/ಎನ್ ಸಿಎ/ಒಆರ್) ಪುತ್ರರಾಗಿದ್ದಲ್ಲಿ ಅಂಥ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ರೂ.100/- ಶುಲ್ಕ ನಿಗದಿಪಡಿಸಲಾಗಿದೆ. ಯಾವುದೇ ಎಸ್ ಬಿಐ ಶಾಖೆಯಲ್ಲಿ ಶುಲ್ಕ ಪಾವತಿಸಬಹುದಾಗಿದೆ. ಅಥವಾ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ರುಪೇ ಕಾರ್ಡ್/ ಡೆಬಿಟ್ ಕಾರ್ಡ್ ಗಳ ಮೂಲಕ ಆನ್ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ ಹೇಗೆ ?

    ನ್ಯಾಷನಲ್ ಡಿಫೆನ್ಸ್‌ ಅಕಾಡೆಮಿ ಅಥವಾ ನೇವಲ್ ಅಕಾಡೆಮಿಗೆ ಆಯ್ಕೆಯಾಗಲು ಅಭ್ಯರ್ಥಿಯು ಮೂರು ಹಂತಗಳನ್ನು ದಾಟಬೇಕು. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪ್ರವೇಶ ಪರೀಕ್ಷೆ ಮೊದಲನೇ ಹಂತವಾಗಿರುತ್ತದೆ. ಇದರ ನಂತರ ಎಸ್ ಎಸ್ ಬಿ ನಡೆಸುವ ಬೌದ್ಧಿಕ ಹಾಗೂ ವ್ಯಕ್ತಿತ್ವ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಎರಡು ಹಂತದ ನಂತರ ಎಸ್ಎಸ್ ಬಿ ನಡೆಸುವ ದೈಹಿಕ ಸಾಮರ್ಥ್ಯ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು. ಈ ಮೂರೂ ಹಂತ ದಾಟಿದ ನಂತರ ಯಶಸ್ವಿಯಾದ ಅಭ್ಯರ್ಥಿಗಳಿಗೆ ಅವರವರ ಆಯ್ಕೆಯ ಕೋರ್ಸ್ ಗಳಿಗೆ ಲಭ್ಯತೆಯ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

    ನೋಟಿಫಿಕೇಶನ್

  • 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್), (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತು‌.

    ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15-06-2021 ಸಂಜೆ 06:00 ಗಂಟೆಯವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ 17-06-2021 ಕ್ಕೆ ನಿಗದಿಪಡಿಸಲಾಗಿತ್ತು.

    ಪ್ರಸ್ತುತ ರಾಜ್ಯದಲ್ಲಿನ ಲಾಕ್ ಡೌನ್ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲು ತೀರ್ಮಾನಿಸಿ, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15-06-2021 ರಿಂದ 22-06-2021 ರವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು 17-06-2021 ರಿಂದ 24-06-2021 ರವರೆಗೆ ವಿಸ್ತರಿಸಲಾಗಿದೆ.

  • ಕೊಂಕಣ ರೈಲ್ವೆಯಲ್ಲಿ ಉದ್ಯೋಗಾವಕಾಶ, ಕಾರಾವರದಲ್ಲಿ ನೇಮಕ

    ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ (ಕೆಆರ್ ಸಿಎಲ್) ಕರಾರುದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-07-2021 (5:30 ಗಂಟೆಗಳವರೆಗೆ) ತೆರೆದಿರುತ್ತದೆ.

    ಹುದ್ದೆ : ಉಪಮಹಾ ವ್ಯವಸ್ಥಾಪಕ (ಫೈನಾನ್ಸ್) – 1 ಹುದ್ದೆ
    ವಿಭಾಗ ಅಧಿಕಾರಿ – 2 ಹುದ್ದೆಗಳು
    ಸಹಾಯಕ ಲೆಕ್ಕ ಅಧಿಕಾರಿ -2 ಹುದ್ದೆಗಳು
    ಲೆಕ್ಕ ಸಹಾಯಕ – 7 ಹುದ್ದೆಗಳು
    ವೈದ್ಯಕೀಯ ಅಧಿಕಾರಿ – 1 ಹುದ್ದೆ

    ಪೋಸ್ಟ್ ಮಾಡುವ ಸ್ಥಳ – ಕಾರವಾರ, ಕರ್ನಾಟಕ

    ಉಪಮಹಾ ವ್ಯವಸ್ಥಾಪಕ ( ಫೈನಾನ್ಸ್ ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎಂಎ/ಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿಯು ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.92,200/- ವೇತನವಿರುತ್ತದೆ.

    ವಿಭಾಗ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಬಿ.ಕಾಂ ವಿದ್ಯಾರ್ಹತೆಯನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು. ಅಭ್ಯರ್ಥಿಯ ವಯೋಮಿತಿಯು‌ ಗರಿಷ್ಠ 40 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.55,700/- ವೇತನ ನಿಗದಿಪಡಿಸಲಾಗಿದೆ.

    ಸಹಾಯಕ ಲೆಕ್ಕಾಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎಂಎ/ಸಿಎ ವಿದ್ಯಾರ್ಹತೆಯನ್ನು ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿಯು ಗರಿಷ್ಠ 35 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 65,650/- ವೇತನವಿರುತ್ತದೆ.

    ಲೆಕ್ಕ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಯುನಿವರ್ಸಿಟಿಯಿಂದ ಬಿ.ಕಾಂ. ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 35 ವರ್ಷ ಮೀರಿರಬಾರದು. ರೂ.34,200/- ವೇತನ ನಿಗದಿಪಡಿಸಲಾಗಿದೆ.

    ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.75,000/- ವೇತನವಿರುತ್ತದೆ. ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಂದ ಪ್ರಾಮಾಣಿಕೃತ ಎಂಬಿಬಿಎಸ್ ನ್ನು ಪಡೆದಿರಬೇಕು. ಅಭ್ಯರ್ಥಿಗಳು ಪ್ರಸ್ತುತ ಹುದ್ದೆಯಲ್ಲಿ ಒಂದು ವರ್ಷದ ಅನುಭವವನ್ನು ಹೊಂದಿರಬೇಕು. ಈ ಹುದ್ದೆಯು ತಾತ್ಕಾಲಿಕವಾಗಿದ್ದು ಒಂದು ವರ್ಷದ ಅವಧಿಯವರೆಗೆ ಇರುತ್ತದೆ.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ‌ಸಡಿಲಿಕೆಯನ್ನು ನೀಡಲಾಗಿದೆ.

    ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳನ್ನು ಇ-ಮೇಲ್ ಮೂಲಕ ಸಲ್ಲಿಸಬೇಕು. ಇ-ಮೇಲ್ ವಿಳಾಸ : [email protected] ಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಪವರ್ ಗ್ರಿಡ್ ನಲ್ಲಿ 35 ಡಿಪ್ಲೊಮಾ ಟ್ರೇನಿ ಹುದ್ದೆ, ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ

    ಕೇಂದ್ರ ಸಚಿವಾಲಯದ ಇಂಧನ ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ಯಮವಾದ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ ‌

    ಭಾರತ ಸರಕಾರದ ವಿದ್ಯುತ್ ಸಚಿವಾಲಯದ ಅಧೀನದಲ್ಲಿರುವ ಪವರ್ ಗ್ರಿಡ್, ಪಿಎಸ್ ಯು ಅಡಿ ದಕ್ಷಿಣ ಪ್ರದೇಶದ ಪ್ರಸರಣ ವ್ಯವಸ್ಥೆ -11 ಯಲ್ಲಿ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿಯ ಯುಟಿ ರಾಜ್ಯಗಳನ್ನು ಒಳಗೊಂಡಂತೆ ಕೆಳಗೆ ಸೂಚಿಸಿರುವ ವಿವರಗಳ ಪ್ರಕಾರ‌ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಷ್ಠಾವಂತ ಮತ್ತು ಪ್ರತಿಭಾವಂತ ಅಭ್ಯರ್ಥಿಗಳಿಂದ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಡಿಪ್ಲೋಮಾ ಟ್ರೈನಿ ( ಎಲೆಕ್ಟ್ರಿಕಲ್)

    ಒಟ್ಟು ಹುದ್ದೆಗಳ ಸಂಖ್ಯೆ : 35

    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09-06-2021(ಬುಧವಾರ)
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021 ( ಮಂಗಳವಾರ)

    ದಕ್ಷಿಣ ಪ್ರದೇಶದ ಪ್ರಸರಣ ಸಂಖ್ಯೆ 11 ಗಳ ಅಗತ್ಯಕ್ಕೆ ಅನುಗುಣವಾಗಿ ಡಿಪ್ಲೋಮಾ ಟ್ರೈನಿಗಳ ನೇಮಕಾತಿಯನ್ನು ಸ್ಥಳೀಯ ಆಧಾರದ ಮೇಲೆ ನಡೆಸಲಾಗುತ್ತದೆ. ಒಂದು ವೇಳೆ ಎಸ್ ಆರ್ ಟಿಎಸ್ -11 ಗೆ ಸೇರುವ ಅಭ್ಯರ್ಥಿಗಳಿಗೆ ಅಂತರ- ಪ್ರದೇಶ ವರ್ಗಾವಣೆ ವಿನಂತಿಗೆ ಅರ್ಹರಾಗಿರುವುದಿಲ್ಲ.

    ಆಸಕ್ತ ಅಭ್ಯರ್ಥಿಗಳು ನೋಂದಣಿ ಸಂಖ್ಯೆಯ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.powergrid.in/S RBI I recruitment ಭೇಟಿ ‌ನೀಡಿ ಅಥವಾ career section of POWERGRID website ( www.powergrid.in) ಗೆ ಭೇಟಿ ನೀಡಬಹುದು.