Author: Mallika

  • ನರೇಗಾ ಯೋಜನೆಯಡಿ ಉದ್ಯೋಗವಕಾಶ

    ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಛೇರಿಯಲ್ಲಿ, ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಹಾಗೂ ಅಣ್ಣಿಗೇರಿ ತಾಲ್ಲೂಕು ಪಂಚಾಯತಿಗಳಿಗೆ ಹಾಗೂ ಅನುಷ್ಠಾನ ಇಲಾಖೆಗಳಿಗೆ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಸರಕಾರದ ನಡುವಳಿಯನುಸಾರ ಆಯ್ಕೆ ಮಾಡಬೇಕಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ವಿವರ : ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ( ADPC ) , ಜಿಲ್ಲಾ ಐ.ಇ.ಸಿ.ಸಂಯೋಜಕರು, ತಾಲೂಕು ಎಂ.ಐ.ಎಸ್ ಸಂಯೋಜಕರು, ತಾಲೂಕು ಐಇಎಸ್ ಸಂಯೋಜಕರು, ತಾಲೂಕು ಸಂಯೋಜಕರು, ಡಾಟಾ ಎಂಟ್ರಿ ಅಪರೇಟರ್, ತಾಂತ್ರಿಕ ಸಹಾಯಕರು ( ಕೃಷಿ), ತಾಂತ್ರಿ ಸಹಾಯಕರು ( ಅರಣ್ಯ), ತಾಲೂಕು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 14

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 03-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-06-2021

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಪಿಯು/ಪದವಿ/ಇಂಜಿನಿಯರಿಂಗ್ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.

    ಸರಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಬೆಳಿಗ್ಗೆ 10.30 ರಿಂದ ಸಂಜೆ 4:30 ರವರೆಗೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • JSSAHER ಮೈಸೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    JSSAHER ಮೈಸೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಜೆಎಸ್ ಎಸ್ ಮೆಡಿಕಲ್ ಕಾಲೇಜು, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆಗಳ ವಿವರ : ಫಾರ್ಮಸಿಸ್ಟ್ : 01 ಹುದ್ದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫಾರ್ಮ್ ಡಿ/ ಫಾರ್ಮಸಿ‌ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,000/- ಮಾಸಿಕ ವೇತನವಿರುತ್ತದೆ.

    ಡಾಟಾ ಎಂಟ್ರಿ ಅಪರೇಟರ್ : 04 ಹುದ್ದೆಗಳು. ಈ ಹುದ್ದೆಗಳಿಗೆ ಡಿಗ್ರಿ ಇನ್ ಎನಿ ಡಿಸಿಪ್ಲಿನ್ ಜೊತೆಗೆ ಕಂಪ್ಯೂಟರ್ ಮತ್ತು ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.12,000/- ವೇತನವಿರುತ್ತದೆ.

    ಡಾಟಾ ಮ್ಯಾನೇಜರ್ : 01 ಹುದ್ದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಸ್ಟರ್ಸ್ ಡಿಗ್ರಿ/ಬ್ಯಾಚುಲರ್ ಡಿಗ್ರಿ ಇನ್ ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಇಂಜಿನಿಯರಿಂಗ್ ಪಡೆದಿರಬೇಕು. ರೂ.20,000/- ವೇತನವಿರುತ್ತದೆ.

    ಐಟಿ ಮ್ಯಾನ್ ಪವರ್ : 01 ಹುದ್ದೆ. ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿಯನ್ನು ಐಟಿ ಸಬ್ಜೆಕ್ಟ್ ನಲ್ಲಿ ಅಥವಾ ಡಿಗ್ರಿಯನ್ನು ಮ್ಯಾತ್ಸ್ ಅಥವಾ ಇಂಜಿನಿಯರಿಂಗ್ ನಲ್ಲಿ ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.18,000/- ಮಾಸಿಕ ವೇತನವಿರುತ್ತದೆ.

    ಫೀಲ್ಡ್ ವರ್ಕರ್ಸ್ : 06 ಹುದ್ದೆಗಳು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ/ ಎಸ್ ಎಸ್ ಎಲ್ ಸಿ, ಪಿಯುಸಿ ಯನ್ನು ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.12,000/- ವೇತನವಿರುತ್ತದೆ.

    ಲ್ಯಾಬ್ ಟೆಕ್ನಿಶಿಯನ್ : 04 ಹುದ್ದೆಗಳು. ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿಯನ್ನು ಸೈನ್ಸ್ , ಲ್ಯಾಬ್ ಟೆಕ್ ಡಿಗ್ರಿಯನ್ನು ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ವೇತನವಿರುತ್ತದೆ.

    ಜ್ಯೂನಿಯರ್ ಕೋರ್ಡಿನೇಟರ್ : 02 ಹುದ್ದೆ. ಈ ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ‌ಯನ್ನು ಲೈಫ್ ಸೈನ್ಸ್ , ಫಾರ್ಮ್ ಡಿ/ ಫಾರ್ಮಸಿ ಕ್ಯಾಂಡಿಡೇಟ್ಸ್ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.16,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಸ್ಟಡಿ ಕೋರ್ಡಿನೇಟರ್: 02 ಹುದ್ದೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್ ಡಿ/ ಎಂ.ಎಎಸ್ಸಿ ಇನ್ ಲೈಫ್ ಸೈನ್ಸ್, ಫಾರ್ಮ್ ಡಿ/ ಫಾರ್ಮಸಿ ಕ್ಯಾಂಡಿಡೇಟ್ಸ್ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನವಿರುತ್ತದೆ.

    ಪ್ಲೆಬೋಟೊಮಿಸ್ಟ್ : 04 ಹುದ್ದೆ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಇನ್ ಸೈನ್ಸ್ ಪಡೆದಿರಬೇಕು. ರೂ.15,000/- ಮಾಸಿಕ ವೇತನವಿರುತ್ತದೆ.

    ಅಡ್ಮಿನಿಸ್ಟ್ರೇಟಿವ್ ಸ್ಟಾಫ್ : 02 ಹುದ್ದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸ್ಟರ್ಸ್ ಡಿಗ್ರಿ/ ಬ್ಯಾಚುಲರ್ ಡಿಗ್ರಿ ಇನ್ ಕಮರ್ಷಿಯಲ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್ ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ಮಾಸಿಕ ವೇತನವಿರುತ್ತದೆ.

    ಸ್ಟಾಫ್ ನರ್ಸ್ : 02 ಹುದ್ದೆ : ಈ ಹುದ್ದೆಗೆ ಅಭ್ಯರ್ಥಿಗಳು ಡಿಪ್ಲೋಮಾ/ ಬಿಎಸ್ಸಿ ನರ್ಸಿಂಗ್ ಜೊತೆಗೆ ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು. ಈ ಹುದ್ದೆಗೆ ರೂ.15,000/- ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-06-2021

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ : Principal, JSS Medical College, Srishivarathreeshwara Nagar, Mysore -570015 ಗೆ ಸಲ್ಲಿಸಬೇಕು.

  • ತುಮಕೂರು ಯುನಿವರ್ಸಿಟಿ: ಹುದ್ದೆಗಳಿಗೆ ಅರ್ಜಿ‌ ಆಹ್ವಾನ

    ತುಮಕೂರು ಯುನಿವರ್ಸಿಟಿ: ಹುದ್ದೆಗಳಿಗೆ ಅರ್ಜಿ‌ ಆಹ್ವಾನ

    ತುಮಕೂರು ವಿಶ್ವವಿದ್ಯಾಲಯ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಕೆಯು ದಿನಾಂಕ ಜೂನ್, 10 ರಂದು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಪೋಸ್ಟ್ ಗ್ರಾಜ್ಯುಯೇಟ್ ಮತ್ತು ಎಂಎ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವೇತನ : ಸಂಶೋಧನಾ ಸಹಾಯಕ ಹುದ್ದೆಗೆ ಮಾಸಿಕ ರೂ.17,000/-, ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಮಾಸಿಕ ರೂ.15,000/- ವೇತನ‌ ನಿಗದಿ ಪಡಿಸಲಾಗಿದೆ.

    ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 10, ಜೂನ್, 2021 ರೊಳಗೆ ಸಲ್ಲಿಸಬೇಕು.

    ವಿಳಾಸ : Dr. Ramesh Salian, Principal Investigator, ICSSR Research Project, University College Arts, Tumkur University, Tumkur- 572103

  • BEL ನಲ್ಲಿ ಅಪ್ರೆಂಟಿಸ್ ಶಿಪ್ :  ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    BEL ನಲ್ಲಿ ಅಪ್ರೆಂಟಿಸ್ ಶಿಪ್ : ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಭಾರತೀಯ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಮತ್ತು ಭಾರತದ ಪ್ರಥಮ ವೃತ್ತಿಪರ ಎಲೆಕ್ಟ್ರಾನಿಕ್ಸ್ ಸಾರ್ವಜನಿಕ ವಲಯದ ನವರತ್ನ ಕಂಪನಿ ಆಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಬೆಂಗಳೂರು, ಕಾರ್ಖಾನೆಯಲ್ಲಿ ಶಿಶಿಕ್ಷು ಕಾಯಿದೆ 1961 ರ ಅಡಿಯಲ್ಲಿ 2021-22 ನೇ ಸಾಲಿನ ಅವಧಿಗೆ ಅಪ್ರೆಂಟಿಶಿಪ್ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021

    ಹುದ್ದೆಗಳ ವಿವರ : ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಇಲೆಕ್ಟ್ರೀಷಿಯನ್, ಮೆಶಿನಿಸ್ಟ್, ಟರ್ನರ್, ಡ್ರಾಫ್ಟ್ ಮೆನ್ ಮೆಕ್ಯಾನಿಕ್, ಎಲೆಕ್ಟ್ರೋ ಪ್ಲಾಟರ್, ಮೆಕ್ಯಾನಿಕ್ ಶೈತ್ಯೀಕರಣ ಮತ್ತು ಹವಾನಿಯಂತ್ರಣ ( ಎಮ್ ಆರ್ & ಎಸಿ), ಕಂಪ್ಯೂಟರ್ ಅಪರೇಟರ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್ ( ಕೋಪಾ), ವೆಲ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ 01-01-2018 ರಂದು ಅಥವಾ ನಂತರ ಐಟಿಐ ಪಾಸಾಗಿರಬೇಕು.

    ಅಭ್ಯರ್ಥಿಗಳು ಎನ್ ಸಿವಿಟಿ / ಎಸ್ ಸಿವಿಟಿ ಮಂಡಳಿಗಳು ನೀಡಿದ ಐಟಿಐ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

    ವಯಸ್ಸಿನ ಮಿತಿ : 21 ವರ್ಷಗಳು. ಎಸ್ ಸಿ/ ಎಸ್ ಟಿ ವರ್ಗಕ್ಕೆ 5 ವರ್ಷ, ಒಬಿಸಿ ವರ್ಗಕ್ಕೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗುವುದು. ಮತ್ತು ಕನಿಷ್ಠ 40% ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ನೀಡಲಾಗುವುದು.

    ಬೇರೆ ಯಾವುದೇ ಸಂಸ್ಥೆಯಲ್ಲಿ ಈಗಾಗಲೇ ಅಪ್ರೆಂಟಿಸ್ ಶಿಪ್ ತರಬೇತಿ ಪಡೆಯುತ್ತಿರುವವರು ತರಬೇತಿಗಾಗಿ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಅರ್ಹರಲ್ಲ.

    ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರು.

    ಆಯ್ಕೆ ಪ್ರಕ್ರಿಯೆ : ಎಸ್ ಎಸ್ ಎಲ್ ಸಿ/ 10 ನೇ ತರಗತಿ ಮತ್ತು ಐಟಿಐ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

    ಅಂತಿಮ ಆಯ್ಕೆಯ ಫಲಿತಾಂಶವನ್ನು ಬಿಇಎಲ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಅಥವಾ ಪ್ರಮಾಣ ಪತ್ರಗಳ‌ ಪರಿಶೀಲನೆಯ ದಿನಾಂಕದಂದು ತತಕ್ಷಣ ಆಯ್ಕೆಯ ಪತ್ರವನ್ನು ‌ನೀಡಲಾಗುವುದು. ಅಥವಾ ಎಸ್ ಎಂಎಸ್ / ಇ- ಮೇಲ್ ಮೂಲಕ ತಿಳಿಸಲಾಗುವುದು.

    ಆಸಕ್ತ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಜೊತೆಗೆ 10/ನೇ / ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್, ಐಟಿಐ ಮಾರ್ಕ್ಸ್ ಕಾರ್ಡ್, ಜಾತಿ‌ಪ್ರಮಾಣ ಪತ್ರ( ಅನ್ವಯಿಸಿದ್ದರೆ ) ಮತ್ತು ಆಧಾರ್ ಕಾರ್ಡ್ ಗಳನ್ನು ಲಗತ್ತಿಸಬೇಕು.

    ವಿಳಾಸ : Deputy Manager ( HR/CLD), centre for learning and development, Bharat Electronics Limited, Jalahalli post, Bengaluru-560013

    ಹೆಚ್ಚಿನ ವಿವರಗಳು ಹಾಗೂ ಸ್ಪಷ್ಟೀಕರಣಗಳಿಗಾಗಿ ದಯವಿಟ್ಟು ಸಂಪರ್ಕಿಸಿ , ಇ – ಮೇಲ್: [email protected] ಅಥವಾ 080-22195323

    ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    5 ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಮಾನದಂಡಗಳಿಗೆ ಸಮನಾಗಿ ಎಸ್ ಸಿಗಳಲ್ಲಿ ಒಟ್ಟು ದಾಖಲಾತಿ ಅನುಪಾತವನ್ನು (ಉನ್ನತ ಶಿಕ್ಷಣ) ತರಲು ಭಾರತ ಸರಕಾರವು ರಾಜ್ಯ ಸರಕಾರದೊಂದಿಗೆ ಕೂಡಿ 2021-22 ರ ಅವಧಿಯಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ‌ನೀಡಲಿದೆ.

    ಅರ್ಹತೆ : ಎಸ್ ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ 11ನೇ ತರಗತಿ ಮತ್ತು ಅದಕ್ಕಿಂತ ಮೇಲಿನ ತರಗತಿಯಲ್ಲಿ ಅಧ್ಯಯನ ಮಾಡಲು ಅವರ ಪೋಷಕರ ವಾರ್ಷಿಕ ಆದಾಯ ರೂ.< 25 ಲಕ್ಷ ಇರಬೇಕು.

    ಉಪಯೋಗಗಳು : ಕೋರ್ಸ್ ನ ಸಂಪೂರ್ಣ ಅವಧಿಗೆ ವಿದ್ಯಾರ್ಥಿವೇತನವು ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.
    ಬೋಧನಾ ಶುಲ್ಕ ಸೇರಿದಂತೆ ಕಡ್ಡಾಯ ಮರುಪಾವತಿಸಬೇಕಾದ ಶುಲ್ಕಗಳು.
    ಶಿಕ್ಷಣದ ಮಟ್ಟವನ್ನು ಆಧರಿಸಿ ವಾರ್ಷಿಕ ‌2500 ರಿಂದ 13500 ರವರೆಗೆ ಶೈಕ್ಷಣಿಕ ಭತ್ಯೆ.
    ದಿವ್ಯಾಂಗ ವಿದ್ಯಾರ್ಥಿಗಳಿಗೆ ಹತ್ತು ಪರ್ಸೆಂಟ್ ಹೆಚ್ಚುವರಿ ಭತ್ಯೆ ನೀಡಲಾಗುವುದು.
    ಎಲ್ಲಾ ಅರ್ಹ ವಿದ್ಯಾರ್ಥಿಗಳು ಬೋಧನಾ ‌ಶುಲ್ಕ‌ಮತ್ತು ಹಾಸ್ಟೆಲ್ ಶುಲ್ಕವನ್ನು ‌ಮೊದಲೇ ಪಾವತಿಸದೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
    ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರಗಳು ಫ್ರೀ ಶಿಪ್ ಕಾರ್ಡ್ ನೀಡುವ ಮೂಲಕ ಶುಲ್ಕವನ್ನು ಮೊದಲೇ ಪಾವತಿಸದೆ ಸಂಸ್ಥೆಯಲ್ಲಿ ಅಧ್ಯಯನ ಮಾಡಲು ಅನುವು ಮಾಡಿಕೊಡುತ್ತವೆ‌

    ಅರ್ಜಿಗಳು : ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ಸರಕಾರದ ಆನ್ಲೈನ್ ‌ವಿದ್ಯಾರ್ಥಿವೇತನ ವೇದಿಕೆಯಲ್ಲಿ 2021 ರ ಎಪ್ರಿಲ್ 16 ಜೂನ್ 30 ರವರೆಗೆ ಪ್ರಾರಂಭವಾಗುವ ಮೊದಲ ಕರೆಯಲ್ಲಿ ಅರ್ಜಿ ಸಲ್ಲಿಸಬಹುದು.
    ಯಾವುದೇ ತೊಂದರೆಗಳಿದ್ದಲ್ಲಿ ರಾಜ್ಯ ಸರಕಾರದ ಕುಂದುಕೊರತೆ ಪರಿಹಾರ ಸಂಖ್ಯೆಗೆ ಕರೆ ಮಾಡಿ ಅಥವಾ ರಾಜ್ಯ ಸರಕಾರದ ‌ಸಮಾಜ ಕಲ್ಯಾಣ ಆಯುಕ್ತರನ್ನು ಸಂಪರ್ಕಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.socialjustice.nic.in ನಲ್ಲಿ ನೋಡಬಹುದು.

  • ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾ ಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿ ಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

    ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ( ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನ್ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈಗಾಗಲೇ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಅರ್ಜಿಯನ್ನು ಪೂರ್ಣಗೊಳಿಸದೇ ಇರುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

    ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005/8050770004

    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ