Author: Mallika

  • ದ.ಕ, ಮಂಗಳೂರು ನ್ಯಾಯಾಲಯ : ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ

    ದ.ಕ, ಮಂಗಳೂರು ನ್ಯಾಯಾಲಯ : ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ

    ಮಂಗಳೂರು ಮತ್ತು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.

    ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳನ್ನು ಮುಗಿಸಿ ಪ್ರಸ್ತುತ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಸೆಲೆಕ್ಷನ್ ಲಿಸ್ಟ್ ಅನ್ನು ಚೆಕ್ ಮಾಡಬಹುದು.

    ಅಭ್ಯರ್ಥಿಗಳು ಆಯ್ಕೆ ಪಟ್ಟಿಯಲ್ಲಿ ತಮ್ಮ ಅಪ್ಲಿಕೇಶನ್ ನಂಬರ್, ಹೆಸರು, ಲಿಖಿತ ಪರೀಕ್ಷೆಗಳ ಗಳಿಸಿದ ಅಂಕ ಮತ್ತು ಇತರೆ ಮಾಹಿತಿಗಳನ್ನು ನೀಡಲಾಗಿದೆ.

    ಅಫೀಶಿಯಲ್ ವೆಬ್‌ಸೈಟ್‌ https://districts.ecourts.gov.in/dakshinakannada

  • AI Airport : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    AI Airport : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    ಎಐ ಏರ್ ಪೋರ್ಟ್ ಸರ್ವೀಸಸ್‌ ಲಿಮಿಟೆಡ್‌ ( ಹಿಂದೆ ಏರ್ ಇಂಡಿಯಾ ಟ್ರಾನ್ಸ್ ಪೋರ್ಟ್ ಸರ್ವೀಸಸ್‌ ಲಿಮಿಟೆಡ್‌) ಎಂಬುದಾಗಿತ್ತು. ಕೆಳಕಂಡ ಹುದ್ದೆಗಳಿಗಾಗಿ ನಿಗದಿತ ಅರ್ಹತಾ ಅಗತ್ಯತೆಗಳನ್ನು ಹೊಂದಿರುವ ಭಾರತೀಯ ರಾಷ್ಟ್ರೀಯರಿಂದ (ಪುರುಷ ಮತ್ತು ಮಹಿಳೆ) ಅರ್ಜಿ ಗಳನ್ನು ಆಹ್ವಾನಿಸಿದೆ. ಹುದ್ದೆಗಳು ನಿಶ್ಚಿತ ಗುತ್ತಿಗೆ ಅವಧಿಯದ್ದಾಗಿದ್ದು, ಉದ್ಯೊಗಿಯ ಉತ್ತಮ ಸಾಮರ್ಥ್ಯ ಮತ್ತು ಸೇವೆಗಳನ್ನು ಮತ್ತು ಎಐ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ ( ಹಿಂದೆ ಏರ್ ಇಂಡಿಯಾ ಟ್ರಾನ್ಸ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ ) ನ ಅವಶ್ಯಕತೆಯನ್ನು ಅನುಸರಿಸಿ ಅವಧಿಯ ಮುಂದುವರಿಕೆ ಬದ್ಧವಾಗಿರುತ್ತದೆ ಮತ್ತು ಖಾಲಿಯಿರುವ ಕೆಳಕಂಡಂತೆ ತಿಳಿಸಿದ ಹುದ್ದೆಗಳು ಭರ್ತಿ ಮಾಡುವುದಕ್ಕೆ ಮತ್ತು ಮುಂದೆ ಭರ್ತಿ ಮಾಡಬಹುದಾದ ಹುದ್ದೆಗಳಿಗೆ ಕಾಯುವ ಪಟ್ಟಿ ಸಿದ್ಧಪಡಿಸುವುದಕ್ಕಾಗಿ ಇರುತ್ತವೆ.

    ಹುದ್ದೆ : ವ್ಯವಸ್ಥಾಪಕ – ಹಣಕಾಸು – 04
    ಲೆಕ್ಕಪತ್ರ – ಅಧಿಕಾರಿ – 07
    ಸಹಾಯಕ – ಲೆಕ್ಕಪತ್ರ – 04

    ಅರ್ಜಿ ನಮೂನೆ ಮತ್ತು ಇತರೆ ವಿವರಗಳಿಗಾಗಿ ವೆಬ್‌ಸೈಟ್‌ www.airindia.in(career) ನಲ್ಲಿ ಜಾಹೀರಾತುಗಳನ್ನು ನೋಡುವುದು.

  • ಸಹಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

    ಸಹಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

    ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ ( ರಿ) ಬಗಲೂರ ವಿಜಯಪುರ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಸಹಶಿಕ್ಷಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆಗಳ ಸಂಖ್ಯೆ – 01

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎ.ಬಿಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33,450/- ರಿಂದ ರೂ.62,600/- ಗಳವರೆಗೆ ವೇತನವಿರುತ್ತದೆ.

    ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಸ್ವಂತ ಕೈ ಬರಹದ ಅರ್ಜಿಯೊಂದಿಗೆ ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಜನ್ಮದಾಖಲೆ ಮತ್ತು ಇತರ ಸಂಬಂಧಿಸಿದ ಪ್ರಮಾಣ ಪತ್ರಗಳ ದೃಢೀಕರಿಸಿದ ನಕಲುಗಳೊಂದಿಗೆ ಅಭ್ಯರ್ಥಿಗಳು ರೂ.500/- ನ್ಯಾಷನಲ್ ಬ್ಯಾಂಕ್ ಡಿಡಿಯನ್ನು ಅಧ್ಯಕ್ಷರು ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ (ರಿ) ಬಗಲೂರ ಇವರ ಹೆಸರಿಗೆ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಿ ಈ ಪ್ರಕಟಣೆ ಪ್ರಕಟಗೊಂಡ 21 ದಿನದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳ ಸಹಿತವಾಗಿ ಮಾನ್ಯ ಉಪನಿರ್ದೇಶಕರು ಸಾ.ಶಿ. ಇಲಾಖೆ ವಿಜಯಪುರ ಇವರಿಗೆ ನಿಗದಿತ ಸಮಯದೊಳಗಾಗಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ (ರಿ) ಬಗಲೂರ ತಾ.ಸಿಂದಗಿ. ಜಿ: ವಿಜಯಪುರ.

  • ರೈಲು ಗಾಲಿ ಕಾರ್ಖಾನೆ ಬೆಂಗಳೂರು : ಉದ್ಯೋಗವಕಾಶ

    ರೈಲು ಗಾಲಿ ಕಾರ್ಖಾನೆ ಬೆಂಗಳೂರು : ಉದ್ಯೋಗವಕಾಶ

    ರೈಲು ಗಾಲಿ ಕಾರ್ಖಾನೆ, ಬೆಂಗಳೂರು ಇಲ್ಲಿನ ರೈಲ್ವೆ ಆಸ್ಪತ್ರೆಯಲ್ಲಿ ಸಾಂಕ್ರಾಮಿಕ ಕೋವಿಡ್ -19 ರೋಗವನ್ನು ತಡೆಗಟ್ಟಲು ಹಾಗೂ ಕೋವಿಡ್ ತುರ್ತು ತಪಾಸಣೆ ಕೇಂದ್ರಕ್ಕಾಗಿ (ಐಸಿಯು) ಗುತ್ತಿಗೆ ಆಧಾರದ ಮೇಲೆ ಕೆಳಗೆ ತಿಳಿಸಲಾದ ಆಲೋಪಥಿಕ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಇಚ್ಛಿಸಿದೆ.

    ಹುದ್ದೆ : ಐಸಿಯುಗಾಗಿ ವಿಶಿಷ್ಟ ತಜ್ಞರು / ಇಂಟೆನ್ಸಿವಿಸ್ಟ್ಸ್ – 04
    ಗುತ್ತಿಗೆ ಆಧಾರದ ವೈದ್ಯಕೀಯ ವೃತ್ತಿಪರರು -01

    ಸಂದರ್ಶನದ ಸ್ಥಳ ; ತಾಂತ್ರಿಕ ತರಬೇತಿ ಕೇಂದ್ರ, ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – 560064

    ಸಂದರ್ಶನದ ದಿನಾಂಕ ಹಾಗೂ ಸಮಯ : 28-05-2021 ರಂದು 10 ಗಂಟೆಗೆ

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.rwf.indianrailways.gov.in ಗೆ ಭೇಟಿ ನೀಡುವುದು.

  • DKMUL : 80 ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    DKMUL : 80 ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 80 ಹುದ್ದೆಗಳನ್ನು ನೇರನೇಮಕಾತಿ ಮಾಡುವ ಸಂಬಂಧ ದಿನಾಂಕ 26-04-2021 ರ ದಿನಪತ್ರಿಕೆಗಳಲ್ಲಿ ಸಂಕ್ಷಿಪ್ತ ನೇಮಕಾತಿ ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಿತ್ತು. ಕೋವಿಡ್-19, ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರವು ವಿಧಿಸಿರುವ ಕಠಿಣ ನಿರ್ಬಂಧಗಳು ಮತ್ತು ಲಾಕ್ ಡೌನ್ ಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅನಾನುಕೂಲವಾಗಿರುವುದರಿಂದ 80 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 29-06-2021 ರವರೆಗೆ ವಿಸ್ತರಿಸಲಾಗಿದೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021
    ಆನ್ಲೈನ್ ಅರ್ಜಿಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 30-06-2021 ಸಂಜೆ 5-30 ರವರೆಗೆ.

    ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಅರೆವೈದ್ಯಕೀಯ ಹುದ್ದೆಗಳ ನೇಮಕ

    ಅರೆವೈದ್ಯಕೀಯ ಹುದ್ದೆಗಳ ನೇಮಕ

    ಜಿಲ್ಲಾ ಕೌಶಲ್ಯಾಭಿವೃದ್ಧಿ ಮಿಷನ್ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಕೊರೊನಾ ನಿಯಂತ್ರಿಸಲು ಹೆಚ್ಚುವರಿ ಅರೆ ವೈದ್ಯಕೀಯ ಸಿಬ್ಬಂದಿ ಅಗತ್ಯವಿರುವ ಹಿನ್ನೆಲೆಯಲ್ಲಿ ಆಸಕ್ತರಿಗೆ ತರಬೇತಿಯನ್ನು ನೀಡಲಾಗುತ್ತದೆ. ಒಂದು ತಿಂಗಳ ತರಬೇತಿ ನೀಡಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಅನ್ ಜಾಬ್ ತಾತ್ಕಾಲಿಕ ಸೇವೆಗೆ ನೇಮಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ.

    ತುರ್ತು ವೈದ್ಯಕೀಯ ಸೇವೆಗಳ ಬೇಸಿಕ್, ಸಾಮಾನ್ಯ ಸೇವೆಗಳ ಸಹಾಯಕರು, ತುರ್ತು ವಿಭಾಗದಲ್ಲಿ ಕೇರ್, ವೈದ್ಯಕೀಯ ಉಪಕರಣಗಳ ತಾಂತ್ರಿಕ ಸಹಾಯಕರು, ಫ್ಲೆಬೋಟೋಮಿಸ್ಟ್, ವೈದ್ಯಕೀಯ ದಾಖಲೆಗಳ ನಿರ್ವಹಣೆ ಕುರಿತಂತೆ ತರಬೇತಿಯನ್ನು ನೀಡಲಾಗುತ್ತದೆ.
    ತರಬೇತಿ ಬಳಿಕ ಅಭ್ಯರ್ಥಿಗಳಿಗೆ ತಾತ್ಕಾಲಿಕ ಉದ್ಯೋಗ ನೀಡಲಾಗುವುದು.

    ಆಸಕ್ತರು ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಅಥವಾ [email protected] ವಿಳಾಸಕ್ಕೆ ವಿವರ ಕಳುಹಿಸಬಹುದು.
    ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಮೊಬೈಲ್ ಸಂಖ್ಯೆ 9845437056 ಗೆ ಸಂಪರ್ಕಿಸಬಹುದು.

    ಅಭ್ಯರ್ಥಿಗಳು ಈ ಲಿಂಕ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.