Author: Mallika

  • ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ  Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

    ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

    ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

    ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
    ದೂರವಾಣಿ ಸಂಖ್ಯೆ : 080-22342163

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎರಡು ಬಿಇ-ಸಿವಿಲ್ ಒಂದು ಬಿಎಸ್ಸಿ/ಎಂಎಸ್ಸಿ ತೋಟಗಾರಿಕೆ ಮತ್ತು ಒಂದು ಬಿಎಸ್ಸಿ/ ಎಂಎಸ್ಸಿ ಅರಣ್ಯ ತಾಂತ್ರಿಕ ಸಹಾಯಕರು ಅವಶ್ಯಕತೆ ಇದ್ದು, ಸದ್ರಿ ಹುದ್ದೆಗೆ ಆಸಕ್ತಿ ಇರುವ ಕೆಳಗಿನ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಅಪೂರ್ಣ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಅರ್ಹತೆ: ಬಿಇ-ಸಿವಿಲ್ ವಿದ್ಯಾರ್ಹತೆ, ಬಿಎಸ್ಸಿ/ಎಂ.ಎಸ್ಸಿ ತೋಟಗಾರಿಕೆ.

    ವಿದ್ಯಾರ್ಹತೆ : ಬಿ.ಎಸ್ಸಿ/ಎಂ.ಎಸ್ಸಿ ಅರಣ್ಯ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್‌ ಭಾಷೆ ತಿಳಿದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ಸಂಭಾವನೆ ರೂ.24,000/-+ ಪ್ರಯಾಣ ಭತ್ಯೆ ಪಾವತಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226862 ಸಂಪರ್ಕಿಸಬಹುದು. (ಕಚೇರಿ ಅವಧಿಯಲ್ಲಿ).

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 94 ಹುದ್ದೆ

    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 94 ಹುದ್ದೆ

    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 27 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ : 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತರು ಆನ್‌ಲೈನ್‌ ಮೂಲಕ ಎಪ್ರಿಲ್ 27, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

    ಅರ್ಜಿ ಶುಲ್ಕ : ಅರ್ಜಿದಾರರು ರೂ.500/- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಅಭ್ಯರ್ಥಿಗಳು ರೂ.250/- ಪಾವತಿಸಬೇಕಾಗುತ್ತದೆ.

    ವೇತನ : ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,700/- ರಿಂದ ರೂ. 44,770/- ರೂ.ಗಳ ವರೆಗೆ ವೇತನವಿರುತ್ತದೆ.

    ವಿದ್ಯಾರ್ಹತೆ : ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಛ ನ್ಯಾಯಾಯಲಯದ ಅಧಿಕೃತವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಎಪ್ರಿಲ್ 27,2021 ರಾತ್ರಿ 11.59 ರೊಳಗೆ ಅರ್ಜಿಯನ್ನು ಸಲ್ಲಿಸಬಹದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • UPSC NDA ಮತ್ತು NA(I) ಪ್ರವೇಶ ಪತ್ರ ಪ್ರಕಟ

    UPSC NDA ಮತ್ತು NA(I) ಪ್ರವೇಶ ಪತ್ರ ಪ್ರಕಟ

    ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ( ಎನ್‌ಡಿಎ ಮತ್ತು ಎನ್‌ಎ(I)) ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಿದೆ.
    ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 19, 2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ.

    ಯುಪಿಎಸ್ಸಿ ಎನ್‌ಡಿಎ(I) ಮತ್ತು ಎನ್‌ಎ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ :
    ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಹೋಂ ಪೇಜ್‌ ನಲ್ಲಿ ಪ್ರವೇಶ ಪತ್ರದ ಲಿಂಕ್ ಕ್ಲಿಕ್ ಮಾಡಿ, ನಂತರ ಇನ್ನೊಂದು ಪುಟ ಬರುತ್ತೆ ಅಲ್ಲಿ ಬರುವ ಲಿಂಕ್ ಕ್ಲಿಕ್ ಮಾಡಿ, ಆಮೇಲೆ ಅಭ್ಯರ್ಥಿಗಳು ರಿಜಿಸ್ಟ್ರೇಶನ್ ಐಡಿ ಮತ್ತು ರೋಲ್ ನಂಬರ್ ನಮೂದಿಸಿ, ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಕಾಣಿಸುತ್ತದೆ.

    ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿದೆ. https://www.upsc.gov.in/

  • ತುಮಕೂರಿನಲ್ಲಿ ಕ್ಯಾಂಪಸ್ ಸಂದರ್ಶನ

    ತುಮಕೂರಿನಲ್ಲಿ ಕ್ಯಾಂಪಸ್ ಸಂದರ್ಶನ

    ತುಮಕೂರಿನಲ್ಲಿರುವ ಶ್ರೀ ಸಿದ್ಧಗಂಗಾ ಐಟಿಐ ಕಾಲೇಜ್‌ನಲ್ಲಿ ಕ್ಯಾಂಪಸ್‌ ಸಂದರ್ಶನ ನಡೆಯಲಿದೆ. ಶ್ರೀ ಸಿದ್ಧಗಂಗಾ ಐ.ಟಿ.ಐ ಕಾಲೇಜಿನಲ್ಲಿ ಮಾರ್ಚ್ 30 ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
    ರಾಮನಗರದ ಬಿಡದಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿ ಕ್ಯಾಂಪಸ್ ಸಂದರ್ಶನವನ್ನು ಆಯೋಜನೆ ಮಾಡಿದೆ.

    2020 ರ ಐಟಿಐ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರಬಹುದು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತಯ ಐಟಿಐ ಅಂಕಪಟ್ಟಿಯನ್ನು ತಮ್ಮನ ಜೊತೆ ತರಬೇಕು.

    ಫಿಟ್ಟರ್,ಟರ್ನರ್, ಎಂಎಂಟಿಎಂ, ಎಂಎಂವಿ, ಮೆಕಾನಿಕ್ ಡೀಸೆಲ್, ಎಂಎಆರ್‌ಸಿ, ವೆಲ್ಡರ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಕ್ಯಾಂಪಸ್‌ ಸಂದರ್ಶನದಲ್ಲಿ ಭಾಗಿಯಾಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಎನ್‌.ಸುನಿಲ್‌ ಪ್ರಾಂಶುಪಾಲರು, ಶ್ರೀ ಸಿದ್ಧಗಂಗಾ ಕೈಗಾರಿಕಾ ತರಬೇತಿ ಸಂಸ್ಥೆ, ಬಟವಾಡಿ ಇವರನ್ನು ಸಂಪರ್ಕಿಸಬಹುದು.

  • NIMHANS ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    NIMHANS ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 03,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ: ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ (ಮನಃಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ) 1 ಹುದ್ದೆ
    ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ( ಮನಃಶಾಸ್ತ್ರ ನರ್ಸಿಂಗ್ ತರಬೇತಿದಾರರು) 03 ಹುದ್ದೆ
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್-02 ಹುದ್ದೆ
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್-01 ಹುದ್ದೆ

    ವಿದ್ಯಾರ್ಹತೆ: 1.ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
    ಎಂಡಿ ಸೈಕಿಯಾಟ್ರಿ/ಡಿಎನ್ ಬಿ ಸೈಕ್ರಿಯಾಟ್ರಿ ಮಾಡಿರಬೇಕು.
    2.ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಎಂಎಸ್ಸಿ ಸೈಕ್ರಿಯಾಟ್ರಿಕ್ ನರ್ಸಿಂಗ್ ನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದಿರಬೇಕು.
    3.ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಎಂಎಸ್ಸಿ ಸೈಕಾಲಜಿ/ ಮಾಸ್ಟರ್ಸ್ ಇನ್ ಸೋಶಿಯಲ್ ವರ್ಕ್ ವಿದ್ಯಾರ್ಹತೆಯನ್ನು ಪಡೆದಿರಬೇಕು. 4.ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ, ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರಿಗೆ 40 ವರ್ಷ,
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,40,000/-, ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳ ರೂ.40,000/-,
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಆಯ್ಕೆಯಾದವರಿಗೆ ರೂ. 40,000/-,
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.15,000/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಅರ್ಜಿ ಜೊತೆಗೆ ದಾಖಲೆಗಳನ್ನು ಪಿಡಿಎಫ್ ಫಾರ್ಮಾಟ್ ನಲ್ಲಿ ಇ- ಮೈಲ್ ಮೂಲಕ ಸಲ್ಲಿಸಬೇಕು. ‌

    ದಿನಾಂಕ 03-04-2021 ರ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಇ-ಮೈಲ್ ವಿಳಾಸ- [email protected]

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ