ನೂತನವಾಗಿ ಆರಂಭವಾದ “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್”.ಬೆಂಗಳೂರು ಈ ಸಂಸ್ಥೆಗೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ: ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುಭವ: 10 ವರ್ಷ ಕೋ-ಆಪರೇಟಿವ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವವುಳ್ಳ ಅಭ್ಯರ್ಥಿ ಅಥವಾ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇವರ ಅಗತ್ಯವಿದ್ದು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಿ: 7259150715
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 25 “ಗ್ರಾಮ ಕಾಯಕ ಮಿತ್ರ ಹುದ್ದೆ” ಗಳಿಗೆ ಹೊರಗುತ್ತಿಗೆ ಆಧಾರಾದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-03-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2021 ಸಂಜೆ 5 ಗಂಟೆಯವರೆಗೆ
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿಸಲ್ಲಿಸತಕ್ಕದ್ದು.
ವಿದ್ಯಾರ್ಹತೆ : ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
ದಿನಾಂಕ 01.01.2021 ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ಕಾರ್ಡ್ ಹೊಂದಿರಬೇಕು.
ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
ವಯೋಮಿತಿ : ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.
ಓದು ಬರಹ ಚೆನ್ನಾಗಿ ತಿಳಿದಿರಬೇಕು.
ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದವರೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.
ಗ್ರಾಮ ರೋಜ್ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮರೋಜ್ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.
ಪ್ರೊಫೆಷನಲ್ ಸೆಕ್ಯುರಿಟಿ ಸರ್ವಿಸಸ್ನಿಂದ ಎಂಪ್ರಿ ಸಂಸ್ಥೆ, ಬೆಂಗಳೂರು ( ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ) ಸಂಶೋಧಣಾ ಅಧ್ಯಯನಗಳಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-03-2021
ಹುದ್ದೆಗಳ ವಿವರ: ರಿಸರ್ಚ್ ಅಸಿಸ್ಟೆಂಟ್, ಲ್ಯಾಬ್ ಅಟೆಂಡರ್, ರಿಸರ್ಚ್ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಎಕ್ಸ್ಪರ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ/ಹೊಸಕೋಟೆ/ದೊಡ್ಡಬಳ್ಳಾಫುರ/ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳ ಕೋವಿಡ್ -19 ಐಸೋಲೇಶನ್ ವಾರ್ಡ್ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಸೆಪ್ಪೆಂಬರ್ 2021 ರವರೆಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ದಿನಾಂಕ 22/03/2021 ರಿಂದ (3 ದಿನಗಳು ಮಾತ್ರ) ಹಮ್ಮಿಕೊಳ್ಳಲಾಗಿದ್ದು ಆಸಕ್ತಿವುಳ್ಳ ಅಭ್ಯರ್ಥಿಗಳು ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಬೆಳಗ್ಗೆ 11.೦೦ ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಡಳಿತ ಭವನದ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ -207, 2ನೇ ಮಹಡಿ, ಬೀರಸಂದ್ರ ಗ್ರಾಮ, ವಿಶ್ವನಾಥಪುರ ಅಂಚೆ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಂಪರ್ಕಿಸುವುದು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್ಸಿಎಲ್) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಕೆಳಗಿನಂತಿದೆ.
ಹುದ್ದೆ : ನಮ್ಮ ಮೆಟ್ರೋನಲ್ಲಿ ಪ್ರಧಾನ ವ್ಯವಸ್ಥಾಪಕರು (ಎಫ್&ಎ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನುನ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021ಸಂಜೆ 4.00 ಗಂಟೆಯವರೆಗೆ
ಹುದ್ದೆ ಸಂಖ್ಯೆ : 01
ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವಯಸ್ಸು ಮೀರಿರಬಾರದು.
ವಿದ್ಯಾಭ್ಯಾಸ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಗ್ರಾಜ್ಯುಯೇಟ್ ಇನ್ ಕಾಮರ್ಸ್ ನ್ನು ಪಡೆದಿರಬೇಕು. ಪ್ರೊಫೆಷನಲ್ ಕ್ವಾಲಿಫಿಕೇಶನ್ ಗಳಾದ ಚಾರ್ಟೆಡ್ ಅಕೌಂಟೆಂಟ್(ಸಿಎ)/ ಕಾಸ್ಟ್ ಅಕೌಂಟೆಂಟ್(ಐಸಿಡ್ಬ್ಯುಎ)/ಎಂಬಿಎ(ಪೂರ್ಣ ಅವಧಿ) ಯಲ್ಲಿ ಫೈನಾನ್ಸ್ ಹೊಂದಿರಬೇಕು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,40,000/- ಮಾಸಿಕ ವೇತನ ನಿಗದಿಯಾಗಿರುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್ಲೋಡ್ ಮಾಡಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20-04-2021 ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.
ವಿಳಾಸ ಈ ಕೆಳಗಿನಂತಿದೆ: General Manager (HR&T),Bangalore Metro Rail Corportion Limited,3rd Floor, BMTC Complex,K.H. Road, Shanthinagar, Bangalore-560027