Category: bangalore

  • KPTCL GPCL : ಎಸ್ಎಸ್ಎಲ್ ಸಿ , ಐಟಿಐ ಓದಿರುವವರಿಗೆ ಅವಕಾಶ

    KPTCL GPCL : ಎಸ್ಎಸ್ಎಲ್ ಸಿ , ಐಟಿಐ ಓದಿರುವವರಿಗೆ ಅವಕಾಶ

    ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ‌ನಲ್ಲಿ ವಿವಿಧ ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ: ಅಪ್ರೆಂಟಿಸ್ ಟ್ರೈನಿಂಗ್

    ಹುದ್ದೆ ಸಂಖ್ಯೆ : 12

    ಹುದ್ದೆ ಸ್ಥಳ : ಬೆಂಗಳೂರು

    ಹುದ್ದೆಗಳ ವಿವರ: ಐಟಿಐ (ಎಲೆಕ್ಟ್ರಿಶಿಯನ್)-3
    ಐಟಿಐ (ಫಿಟ್ಟರ್) – 3
    ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್- 6

    ವಿದ್ಯಾರ್ಹತೆ:ಐಟಿಐ (ಎಲೆಕ್ಟ್ರಿಶಿಯನ್) ಹಾಗೂ
    ಐಟಿಐ (ಫಿಟ್ಟರ್) ಹುದ್ದೆಗೆ ಅಭ್ಯರ್ಥಿಗಳು ಐಟಿಐ ಪಾಸಾಗಿರಬೇಕು. ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ ಹುದ್ದೆಗೆ ಎಸ್ ಎಸ್ ಎಲ್ ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಕೆಪಿಸಿಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವೇತನ: ಐಟಿಐ (ಎಲೆಕ್ಟ್ರಿಶಿಯನ್) ಹಾಗೂ
    ಐಟಿಐ (ಫಿಟ್ಟರ್) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/- ವೇತನವಿರುತ್ತದೆ.
    ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ರೂ.‌7000/- ವೇತನವಿರುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಆರೋಗ್ಯ  ಮತ್ತು ಕುಟುಂಬ  ಕಲ್ಯಾಣ ಇಲಾಖೆಯಲ್ಲಿ ಹುದ್ದೆ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹುದ್ದೆ

    ‘ಜೀವಸಾರ್ಥಕತೆ’ ಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು ಭಾಗ. ಇಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಿವರಗಳು ಈ ಕೆಳಗಿನಂತಿವೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-04-2021

    ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ದಿನಾಂಕ : 06-04-2021

    ಹುದ್ದೆ : ಅಂಗಾಂಗ ಕಸಿ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಈ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿದೆ.

    ರಾಜ್ಯದಲ್ಲಿ ಮೃತದಾನಿ ಅಂಗಾಂಗ ಕಸಿ ಕಾರ್ಯಕ್ರಮದ ಸಂಯೋಜನೆಯಲ್ಲಿ ನೆರವಾಗಬೇಕಾಗುತ್ತದೆ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್/ಬಿಡಿಎಸ್/ಎಂಎಸ್ಸಿ ( ನರ್ಸಿಂಗ್ ಮತ್ತು ಸಂಬಂಧಿತ ವೈದ್ಯಕೀಯ ವಿಷಯಗಳು)/ ಎಂಎಸ್ ಡಬ್ಲ್ಯೂ ಹೊಂದಿರಬೇಕು.

    ಮೇಲೆ ತಿಳಿಸಿದ ಹುದ್ದೆಯಲ್ಲಿ ಅಭ್ಯರ್ಥಿಯು ಕನಿಷ್ಠ ಒಂದು ವರ್ಷದ ಸೇವಾ ಅನುಭವ ಹೊಂದಿರಬೇಕು.

    ಅಂಗಾಂಗ ಕಸಿ ಕಾರ್ಯಕ್ರಮ ಏರ್ಪಡಿಸುವಲ್ಲಿ ಸಾಂಸ್ಥಿಕ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.

    ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ವೇತನ ರೂ.50,000/- ಗೌರವ ಧನ ನೀಡಲಾಗುತ್ತದೆ.

    ವಯೋಮಿತಿ : ಗರಿಷ್ಠ 60 ವರ್ಷದ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ಅಭ್ಯರ್ಥಿಗಳು ಅರ್ಜಿಯನ್ನು ಜಂಟಿ‌ ನಿರ್ದೇಶಕರು (ವೈದ್ಯಕೀಯ) ರವರ ಕಚೇರಿ, ಆರೋಗ್ಯ ಸೌಧ, 6 ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು- 560023

  • ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

    ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

    ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿ/ ನೌಕರರುಗಳು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದಾಖಲಿಸುವ ನ್ಯಾಯಾಲಯ ಪ್ರಕರಣಗಳ ನಿರ್ವಹಣೆಗಾಗಿ ಉಪಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ಕೆಳಕಂಡ ಷರತ್ತುಗಳನ್ವಯ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    1.ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರಬೇಕು.
    2.ಸರಕಾರಿ ಕಛೇರಿಗಳಲ್ಲಿ/ ಸಚಿವಾಲಯದಲ್ಲಿ ಕಾನೂನು ಸಲಹೆಗಾರರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಆದ್ಯತೆಯ ಮೇರೆ ಪರಿಗಣಿಸಲಾಗುವುದು.
    3.ಆಯ್ಕೆಯಾದ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ಸರಕಾರದ ಸುತ್ತೋಲೆಗಳನ್ವಯ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಸಂಭಾವನೆ ನಿಗದಿಪಡಿಸಲಾಗುವುದು.
    4.ಉಪಕಾನೂನು ಅಧಿಕಾರಿ ಹುದ್ದೆಯ ಆಯ್ಕೆಯಲ್ಲಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಯಲಯರವರ ನಿರ್ಧಾರವೇ ಅಂತಿಮ.

    ಸ್ವವಿವರಗಳೊಂದಿಗೆ ಅರ್ಜಿಗಳನ್ನು ಅಂಚೆ ಮೂಲಕವಾಗಲೀ ಅಥವಾ ಖುದ್ದಾಗಲೀ ನಿರ್ದೇಶಕರು, ಪೌರಾಡಳಿತ ನಿರ್ದೇಶಾನಲಯ, 9 ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ.ಬಿ.ಆರ್ . ಅಂಬೇಡ್ಕರ್ ವೀಧಿ, ಬೆಂಗಳೂರು-01 ಈ ವಿಳಾಸದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 29-03-2021 ರಂದು ಸಾಯಂಕಾಲ 5.30 ಗಂಟೆಗೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 080-22868386

  • ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-03-2021( 5pm)

    ಹುದ್ದೆ: ತಾಂತ್ರಿಕ ಸಂಯೋಜಕರು- 03
    ತಾಲೂಕು ಐಇಸಿ ಸಂಯೋಜಕರು-04
    ತಾಂತ್ರಿಕ ಸಹಾಯಕರು(ತೋಟಗಾರಿಕೆ) – 01
    ತಾಂತ್ರಿಕ ಸಹಾಯಕರು(ಕೃಷಿ)-1

    ವಿದ್ಯಾರ್ಹತೆ :ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿಇ/ಎಂಟೆಕ್,ಯುಜಿ/ಪಿಜಿ/ಸಮೂಹ ಸಂವಹನ, ಬಿ.ಎಸ್ಸಿ/ಎಂ.ಎಸ್ಸಿ ಇನ್ ಅಗ್ರಿಕಲ್ಚರ್,ಬಿ.ಎಸ್ಸಿ/ಎಂ.ಎಸ್ಸಿ ಇನ್ ಹಾರ್ಟಿಕಲ್ಚರ್ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ರಿಂದ ರೂ.29,000/- ರವರೆಗೆ ವೇತನ ವಿರುತ್ತದೆ.

    ಅಭ್ಯರ್ಥಿಗಳು ಅರ್ಜಿಯನ್ನು ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಬೇಕು:

    ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ(ಚಪ್ಪರದ ಕಲ್ಲು)ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://bangalorerural.nic.in/

  • ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನ ಕ್ಕೆ ದಿನಾಂಕ 17-03-2021( 11.30 am) ಗೆ ಹಾಜರಾಗಬಹುದು.

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 03

    ಹುದ್ದೆ ಸ್ಥಳ‌: ಬೆಂಗಳೂರು-ಕರ್ನಾಟಕ

    ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂಎ, ಪಿಎಚ್ಡಿ,ಪೋಸ್ಟ್ ಗ್ರಾಜ್ಯುಯೇಶನ್, ಎನ್ ಇಟಿ ಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅಭ್ಯರ್ಥಿಗಳು ತಮ್ಮ‌ ಅಗತ್ಯ ದಾಖಲೆಗಳೊಂದಿಗೆ ದಿನಾಂಕ‌17-03-2021 (11.00am ) ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

    Karnataka Samskrit University, Pampa Mahakavi Road, Chamarajpet, Bengaluru – 560018

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    http://ksu.ac.in/en/
    http://ksu.ac.in/en/
  • ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಖಾಲಿ ಇರುವ ಸರದಿ ಅರ್ಚಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಹ ಅಭ್ಯರ್ಥಿಗಳು ದಿನಾಂಕ 20-03-2021 ರ ಸಂಜೆ 5:00 ಗಂಟೆಯವರೆಗೆ ಲಿಖಿತ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
    ದೂರವಾಣಿ ಸಂಖ್ಯೆ: 080-26506666