Category: bangalore

  • Bengaluru Govt Jobs 2024: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ ನಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    Bengaluru Govt Jobs 2024: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ ನಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    Bengaluru Govt Jobs: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್‌ ಬೆಂಗಳೂರು ಗ್ರಾಮಾಂತರ, ಸಂಜೀವಿನಿ ಕರ್ನಾಟಕ ರಾಜ್ಯದ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ(KSRLPS) ಇಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊರಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024

    ಹುದ್ದೆಗಳ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
    ಹುದ್ದೆ
    ; ಬ್ಲಾಕ್‌ ಮ್ಯಾನೇಜರ್-‌ ನಾನ್‌ ಫಾರ್ಮ್‌ ಲೈವ್ಲಿ ಹುಡ್‌
    ಕ್ಲಸ್ಟರ್‌ ಸೂಪರ್‌ವೈಸರ್‌- ಸ್ಕಿಲ್ಸ್‌

    ಹುದ್ದೆಗಳ ಸಂಖ್ಯೆ:
    ಬ್ಲಾಕ್‌ ಮ್ಯಾನೇಜರ್-‌ ನಾನ್‌ ಫಾರ್ಮ್‌ ಲೈವ್ಲಿ ಹುಡ್‌ -4 ಹುದ್ದೆಗಳು
    ಕ್ಲಸ್ಟರ್‌ ಸೂಪರ್‌ವೈಸರ್‌- ಸ್ಕಿಲ್ಸ್‌-4 ಹುದ್ದೆಗಳು
    ಒಟ್ಟು ಹುದ್ದೆಗಳ ಸಂಖ್ಯೆ- 08

    ಮಹತ್ವದ ಮಾಹಿತಿ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅಂಚೆ ಅಥವಾ ಕೊರಿಯರ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಅಂಚೆ, ಕೊರಿಯರ್‌ ಮೂಲಕ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್‌ಲಿಸ್ಟ್‌ ಮಾಡಿ ನೇಮಕ ಮಾಡಲಾಗುವುದು.

    ಸಂಬಳ: ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಮ್ಮ ಹುದ್ದೆಯ ಅವಧಿ ಮುಗಿಯುವರೆಗೆ ಆಕರ್ಷಕ ಸಂಬಳದ ಜೊತೆಗೆ ವಿಶೇಷ ಭತ್ಯೆಗಳನ್ನು ನೀಡಲಾಗುವುದು.

    ವಿದ್ಯಾರ್ಹತೆ: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ಪದವಿ ಶಿಕ್ಷಣವನ್ನು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪಡೆದು ತೇರ್ಗಡೆ ಹೊಂದಿರಬೇಕು. ಹಾಗೆನೇ ಸಂಬಂಧಿಸಿದ ಹುದ್ದೆಯ ಕಾರ್ಯಕ್ಷೇತ್ರದಲ್ಲಿ ಅಭ್ಯರ್ಥಿಗಳು ಕಾರ್ಯಾನುಭವ ಹೊಂದಿರಬೇಕು.

    ಅರ್ಜಿ ಸಲ್ಲಿಸುವಿಕೆಯ ವಿಧಾನ:
    ಅಭ್ಯರ್ಥಿಗಳು ಇಲ್ಲಿ ನೀಡಲಾದ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು. ಲಿಂಕ್‌ನಲ್ಲಿ ಕೇಳಲಾದ ಮಾಹಿತಿಯನ್ನು, ದಾಖಲೆಯನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲ್ಲಿ ಹೇಳಲಾದ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕು. ವೈಯಕ್ತಿಕ ಮಾಹಿತಿಗಳು, ಕಾರ್ಯಾನುಭವ ಮಾಹಿತಿಗಳು ಹಾಗೂ ದಾಖಲೆಗಳು, ಇ-ಮೇಲ್‌, ಮೊಬೈಲ್‌ ನಂಬರ್‌ ಹಾಗೂ ವಿದ್ಯಾಭ್ಯಾಸದ ದಾಖಲೆಗಳು ಬೇಕು.

    ಹುದ್ದೆಯ ಆಕ್ಷಾಂಕ್ಷಿಗಳು ಇಲ್ಲಿ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿದರೆ, ಪೇಜ್‌ ಓಪನ್‌ ಆಗುತ್ತದೆ. ಹುದ್ದೆಯ ಮುಂದೆ ʼView/Apply’ ಎಂದಿರುವಲ್ಲಿ ಕ್ಲಿಕ್‌ ಮಾಡಿದಾಗ, ನಿಮಗೆ ನಿಮ್ಮ ಹುದ್ದೆಯ ಕುರಿತು ಎಲ್ಲಾ ವಿವರಗಳು ದೊರಕುತ್ತದೆ. ಇವುಗಳನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದು.

  • Sri Sudha Co-operative Bank Recruitment 2024: ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನೇಮಕಾತಿ; ಮಾಸಿಕ ರೂ.88,300 ವೇತನ, ಫೆ.23, 2024 ಅರ್ಜಿ ಸಲ್ಲಿಸಲು ಕೊನೆಯ ದಿನ

    Sri Sudha Co-operative Bank Recruitment 2024: ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನೇಮಕಾತಿ; ಮಾಸಿಕ ರೂ.88,300 ವೇತನ, ಫೆ.23, 2024 ಅರ್ಜಿ ಸಲ್ಲಿಸಲು ಕೊನೆಯ ದಿನ

    Shri Sudha Co-Operative Bank Ltd: ಶ್ರೀ ಸುಧಾ ಕೋ ಆಪರೇಟಿವ್‌ ಬ್ಯಾಂಕ್‌ ಲಿ.ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ-ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಕಿರಿಯ ಸಹಾಯಕರು, ಸಿಸ್ಟಂ ಅಡ್ಮಿನಿಸ್ಟ್ರೆಟರ್‌, ಕಚೇರಿ ಸಹಾಯಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ, ಹೆಚ್ಚಿನ ವಿವರಗಳನ್ನು ಪಡೆದು ಅರ್ಜಿ ಸಲ್ಲಿಸಿ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ; 02-02-2024
    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ; 23-02-2024

    ಹುದ್ದೆಗಳ ವಿವರ;
    ಶ್ರೀ ಸುಧಾ ಕೋ-ಅಪರೇಟಿವ್‌ ಬ್ಯಾಂಕ್‌ ಲಿ. ನಲ್ಲಿ ಕಿರಿಯ ಸಹಾಯಕರು ಗ್ರೇಡ್‌-II, ಸಿಸ್ಟಂ ಅಡ್ಮಿನಿಸ್ಟ್ರೇಟರ್‌, ಕಚೇರಿ ಸಹಾಯಕರು(ಅಟೆಂಡರ್‌) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಕಿರಿಯ ಸಹಾಯಕರು ಗ್ರೇಡ್‌-II: 10 ಹುದ್ದೆಗಳು
    ಸಿಸ್ಟಂ ಅಡ್ಮಿನಿಸ್ಟ್ರೇಟರ್‌: 01 ಹುದ್ದೆ
    ಕಚೇರಿ ಸಹಾಯಕರು(ಅಟೆಂಡರ್‌): 07 ಹುದ್ದೆಗಳು

    ವಿದ್ಯಾರ್ಹತೆ:
    ಕಿರಿಯ ಸಹಾಯಕರು ಗ್ರೇಡ್‌ -II: ಅಂಗೀಕೃತ ವಿಶ್ವವಿದ್ಯಾಲಯದ ಬ್ಯಾಚುಲರ್‌ ಪದವಿ, ಕಂಪ್ಯೂಟರ್‌ ಅಪರೇಷನ್ಸ್‌ ಮತ್ತು ಅಪ್ಲಿಕೇಷನ್ಸ್‌ ತಿಳಿದಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ

    ಸಿಸ್ಟಂ ಅಡ್ಮಿನಿಸ್ಟ್ರೇಟರ್‌: ಅಂಗೀಕೃತ ವಿಶ್ವವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌/ಎಲೆಕ್ಟ್ರಾನಿಕ್‌ ಮತ್ತು ಕಮ್ಯೂನಿಕೇಷನ್ಸ್‌/ಇನ್ಫಾರ್ಮೇಷನ್‌ ಸೈನ್ಸ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ತಾಂತ್ರಿಕ ಪದವಿಯನ್ನು ತೇರ್ಗಡೆ ಮಾಡಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಜೊತೆಗೆ ಕೋರ್‌ ಬ್ಯಾಂಕಿಂಗ್‌, ನೆಟ್‌ವರ್ಕಿಂಗ್‌, ಸೈಬರ್‌ ಸೆಕ್ಯೂರಿಟಿಯಲ್ಲಿ ಪಾಂಡಿತ್ಯ ಹೊಂದಿರಬೇಕು.

    ಕಚೇರಿ ಸಹಾಯಕರು (ಅಟೆಂಡರ್‌): ಕನ್ನಡ ಪ್ರಥಮ ಭಾಷೆಯೊಂದಿಗೆ ಎಸ್‌ಎಸ್‌ಎಲ್‌ಸಿ, ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಸಾಮಾನ್ಯ ವರ್ಗಕ್ಕೆ 35 ವರ್ಷ, ಹಿಂದುಳಿದ ವರ್ಗ/ಜಾರಿಗೆ 38 ವರ್ಷ, ಪರಿಶಿಷ್ಟ ಜಾತಿ/ವರ್ಗಕ್ಕೆ 40 ವರ್ಷ ನಿಗದಿಪಡಿಸಲಾಗಿದೆ.

    ವೇತನ ಶ್ರೇಣಿ: ಕಿರಿಯ ಸಹಾಯಕರು -II; 27650-650-29600-750-32600-850-36000-950-39800- 1100-46400-1250-52650.
    ಸಿಸ್ಟಂ ಅಡ್ಮಿನಿಸ್ಟ್ರೇಟರ್:‌ 45300-1100-46400-1250-53900-1450-62600-1650-72500-1900-83900- 2200-88300
    ಕಚೇರಿ ಸಹಾಯಕರು (ಅಟೆಂಡರ್‌) : 23500-550-24600-600-27000-650-29600-750-32600-850-36000-950-39800-1100-46400-1250-47650

    ಅರ್ಜಿ ಶುಲ್ಕ:ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ರೂ.1180 ಡಿಡಿ ಪೇ/ಆರ್ಡರ್‌ನ್ನು “ಪ್ರಧಾನ ವ್ಯವಸ್ಥಾಪಕರು, ಶ್ರೀ ಸುಧಾ ಕೋ ಅಪರೇಟಿವ್‌ ಬ್ಯಾಂಕ್‌ ಲಿ., ಬೆಂಗಳೂರು” ಇಲ್ಲಿಗೆ ಪಾವತಿ ಮಾಡಬೇಕು.

    ಅರ್ಜಿ ಸಲ್ಲಿಸುವ ರೀತಿ;
    ಅರ್ಜಿಯನ್ನು ಪ್ರಧಾನ ವ್ಯವಸ್ಥಾಪಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ, “ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ಶ್ರೀ ಸುಧಾ ಕೋ-ಆಪರೇಟಿವ್‌ ಬ್ಯಾಂಕ್‌ ಲಿ., ನಂ.195/33 ” ಶ್ರೀ ಸುಧಾ ರಜತ ಭವನ”, ಆರ್.ವಿ.ರಸ್ತೆ, ಜಯನಗರ, ಬೆಂಗಳೂರು-560004 ಕ್ಕೆ ದಿನಾಂಕ ಫೆ.23, 2024 ಸಮಯ 5.00 ಗಂಟೆಯೊಳಗೆ ತಲುಪಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಅರ್ಜಿ ನಮೂನೆಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ, ಅಧಿಕೃತ ವೆಬ್‌ಸೈಟ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗ; ಹುದ್ದೆ ಕುರಿತ ಮಾಹಿತಿ ಇಲ್ಲಿದೆ

    DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗ; ಹುದ್ದೆ ಕುರಿತ ಮಾಹಿತಿ ಇಲ್ಲಿದೆ

    DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರದ ಅಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನಗರ ಸಾರಿಗೆ ವಿಶೇಷಜ್ಞರು, ಅಭಿಯಂತರರು ಸಿವಿಲ್‌ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 20-02-2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಯ ಒಪ್ಪಂದದ ಮೇರೆ ನೇಮಕ ಮಾಡಲಾಗುವುದು. ಅಭ್ಯರ್ಥಿಯ ಕಾರ್ಯನಿರ್ವಹಣೆಯು ಮೊದಲ ವರ್ಷದ ಕೊನೆಗೆ ನಡೆಸುವ ಮೌಲ್ಯಾಂಕ ತೃಪ್ತಿಯಾಗಿದ್ದಲ್ಲಿ ಪುನಃ ಒಂದು ವರ್ಷದ ಅವಧಿಗೆ ಏರಿಸಲಾಗುವುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2024

    ಹುದ್ದೆಗಳ ವಿವರ
    ಹುದ್ದೆಗಳು: ನಗರ ಸಾರಿಗೆ ವಿಶೇಷಜ್ಞರು -ಒಟ್ಟು 01 ಹುದ್ದೆ ಖಾಲಿ ಇದ್ದು, ಅಭ್ಯರ್ಥಿಗಳಿಗೆ 10 ವರ್ಷಗಳ ಅನುಭವ ಇರಬೇಕು.
    ಅಭಿಯಂತರರು-ಸಿವಿಲ್‌ (ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆಯ ದರ್ಜೆಗೆ ಸಮಾನದ)- 01 ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಅಭ್ಯರ್ಥಿಗೆ 15ವರ್ಷದ ಅನುಭವ ಇರಬೇಕು ಎಂದು ನೋಟಿಫಿಕೇಶನ್‌ನಲ್ಲಿ ಹೇಳಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.

    ಶೈಕ್ಷಣಿಕ ಅರ್ಹತೆ: ನಗರ ಸಾರಿಗೆ ವಿಶೇಷಜ್ಞರು ಈ ಹುದ್ದೆಗೆ ಅಭ್ಯರ್ಥಿಗಳು ಸಾರಿಗೆ ಇಂಜಿನಿಯರಿಂಗ್‌ ವಿಷಯಗಳಲ್ಲಿ ಮಾಸ್ಟರ್ಸ್‌ ಪದವಿ ಅಥವಾ ತತ್ಸಮಾನ ಅಥವಾ ಹೆಚ್ಚಿನ ಪದವಿ ಹೊಂದಿರತಕ್ಕದ್ದು.
    ಅಭಿಯಂತರರು – ಸಿವಿಲ್‌ ಈ ಹುದ್ದೆಗೆ ಅಭ್ಯರ್ಥಿಗಳು ಸಿವಿಲ್‌ ಇಂಜಿನಿಯರಿಂಗ್‌ ಪದವಿಯೊಂದಿಗೆ ನಗರ ರಸ್ತೆಗಳು ಮತ್ತು ಸಿವಿಲ್‌ ಇಂಜಿನಿಯರ್‌ ಯೋಜನೆಗಳ ವಿಷಯದಲ್ಲಿ ಕಾರ್ಯಪಾಲಕ ಅಭಿಯಂತರರ ದರ್ಜೆಗೆ ಸಮಾನದ ಸೇವೆಯಲ್ಲಿ ಕನಿಷ್ಠ 15 ವರ್ಷಗಳ ಅನುಭ ಹೊಂದಿರಬೇಕು.

    ಅರ್ಹತೆ: ತಂಡ ನಿರ್ವಹಿಸುವ ಕೌಶಲ್ಯದೊಂದಿಗೆ ನಾಯಕತ್ವ ಗುಣ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವುದು ಅತ್ಯಗತ್ಯ.

    ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

    ತಮ್ಮ ಜಿ-ಮೇಲ್‌ ಐಡಿ ಬಳಸಿ ಇಲ್ಲಿ ನೀಡಲಾಗಿರುವ ಲಿಂಕ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧದಿಂದ ಕಳುಹಿಸಲಾದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
    ನಗರ ಸಾರಿಗೆ ವಿಶೇಷಜ್ಞರ ಹುದ್ದೆಗೆ ಲಿಂಕ್
    ಅಭಿಯಂತರರು-ಸಿವಿಲ್‌ ಹುದ್ದೆಗೆ ಲಿಂಕ್‌

    ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

  • ಬೆಂಗಳೂರು ನಗರ ಜಿಲ್ಲೆಯಲ್ಲಿ 357 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ 511 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೇ ದಿನಾಂಕ

    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಒಂದು ನವರತ್ನ ಕಂಪನಿ‌ ಮತ್ತು ರಕ್ಷಣಾ ಮಂತ್ರಾಲಯದ ಅಧೀನ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಗೆ ಬೆಂಗಳೂರು ಸಂಕೀರ್ಣದಲ್ಲಿ ಗುತ್ತಿಗೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಶಿಕ್ಷಣಾರ್ಥಿ ಇಂಜಿನಿಯರ್- 1 –
    ಯೋಜನೆ ಇಂಜಿನಿಯರ್ – 1

    ವಿದ್ಯಾರ್ಹತೆ : ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ / ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಶನ್ / ಟೆಲಿಕಮ್ಯುನಿಕೇಶನ್/ ಕಮ್ಯೂನಿಕೇಶನ್/ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನ ಇಂಜಿನಿಯರಿಂಗ್ ವಿಷಯದಲ್ಲಿ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣಕಾಲಿಕ ಬಿ.ಇ/ಬಿ.ಟೆಕ್ ಇಂಜಿನಿಯರಿಂಗ್ ಪಡೆದಿರಬೇಕು.

    ಹುದ್ದೆಗಳ ಸಂಖ್ಯೆ : ಶಿಕ್ಷಣಾರ್ಥಿ ಇಂಜಿನಿಯರ್ -1 – 308 ಹುದ್ದೆಗಳು. ವೇತನ : 1 ನೇ ವರ್ಷ – ರೂ.25,000/-
    2 ನೇ ವರ್ಷ – ರೂ.28,000/-
    3 ನೇ ವರ್ಷ – ರೂ. 31,000/-
    ಯೋಜನೆ ಇಂಜಿನಿಯರ್ -1 – 203 ಹುದ್ದೆಗಳು. 1 ನೇ ವರ್ಷ ರೂ.35,000/-, 2 ನೇ ವರ್ಷ : ರೂ.40,000/-, 3 ನೇ ವರ್ಷ : ರೂ.45,000/-, 4 ನೇ ವರ್ಷ : ರೂ.50,000/-

    ಹುದ್ದೆ ಸ್ಥಳ : ಬೆಂಗಳೂರು

    ವಯೋಮಿತಿ : ಶಿಕ್ಷಣಾರ್ಥಿ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 25 ವರ್ಷ, ಹಾಗೂ ಯೋಜನೆ ಇಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ ಮೀರಿರಬಾರದು.

    ಅರ್ಜಿ ಶುಲ್ಕ :ಶಿಕ್ಷಣಾರ್ಥಿ ಇಂಜಿನಿಯರ್ ಹುದ್ದೆಗೆ ಜನರಲ್,ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಯೋಜನೆ ಇಂಜಿನಿಯರ್ ಹುದ್ದೆಗೆ ಜನರಲ್, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-08-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.bel-india.in ಗೆ ಭೇಟಿ ನೀಡಬಹುದು.

  • ವಿಶೇಷ ಭೂಸ್ವಾಧಿನಾಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರಗಳ ಕಚೇರಿಯಲ್ಲಿ 45 ವಿವಿಧ ಹುದ್ದೆ, ನೇರ ಸಂದರ್ಶನಕ್ಕೆ ಆಹ್ವಾನ

    ವಿಶೇಷ ಭೂಸ್ವಾಧಿನಾಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಚೇರಿ, ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ, ಹೆಬ್ಬಾಳ, ಬೆಂಗಳೂರು ಕಚೇರಿಯ ವ್ಯಾಪ್ತಿಗೆ ಒಳಪಡುವ ಹೊಸಕೋಟೆ, ಮಾಲೂರು, ಕೋಲಾರ, ಬಂಗಾರಪೇಟೆ, ಕೆ.ಜಿ.ಎಫ್ ತಾಲ್ಲೂಕುಗಳಲ್ಲಿ ವಿವಿಧ ಯೋಜನೆಗಳಿಗೆ ಕಂದಾಯ ಇಲಾಖೆ/ ಸರ್ವೇ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿರಸ್ತೇದಾರರು, ಪ್ರಥಮ ದರ್ಜೆ ಸಹಾಯಕರು/ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು ಮತ್ತು ಭೂಮಾಪಕರುಗಳ ಅವಶ್ಯಕತೆಯಿರುತ್ತದೆ. ಗುತ್ತಿಗೆ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಈ ಕೆಳಕಂಡ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಲಾಗುವುದು.

    ಶಿರಸ್ತೇದಾರರು – 5 ಹುದ್ದೆ
    ರಾಜಸ್ವ ನಿರೀಕ್ಷಕರು – 10 ಹುದ್ದೆ
    ಭೂಮಾಪಕರು – 10 ಹುದ್ದೆ
    ಪ್ರಥಮ ದರ್ಯ ಸಹಾಯಕರು – 10 ಹುದ್ದೆ
    ಗ್ರಾಮಲೆಕ್ಕಿಗರು – 10 ಹುದ್ದೆ

    ಪ್ರಾಧಿಕಾರದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೇಲ್ಕಂಡ ತಾಲ್ಲೂಕುಗಳಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ನೌಕರರು ಎಲ್ಲಾ ಸೇವಾ ದಾಖಲೆಗಳೊಂದಿಗೆ ದಿನಾಂಕ 02-08-2021 ಮತ್ತು 07-08-2021 ರವರೆಗೆ ನಡೆಯುವ walk in interview ಗೆ ಕಚೇರಿ ವೇಳೆಯಲ್ಲಿ ಈ ಕೆಳಕಂಡ ವಿಳಾಸದಲ್ಲಿ ಖುದ್ದು ಹಾಜರಾಗತಕ್ಕದ್ದು.

    ಕಚೇರಿ ವಿಳಾಸ : ವಿಶೇಷ ಭೂಸ್ವಾಧಿನಾಧಿಕಾರಿಗಳು ಹಾಗೈ ಸಕ್ಷಮ ಪ್ರಾಧಿಕಾರಿಗಳು, ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ, ನಂ.678/3, ನೀರುಬಾವಿ ಕೆಂಪಣ್ಣ ಲೇಔಟ್ ಹೆಬ್ಬಾಳ, ಬೆಂಗಳೂರು – 560024, ದೂರವಾಣಿ ಸಂಖ್ಯೆ -: 9880414634