Category: bangalore

  • ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆಯ ನೇಮಕಾತಿ

    ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯ ಹುದ್ದೆಗೆ ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳ ಅಧಿನಿಯಮ -2000 ಪ್ರಕರಣ 14(2) ರ ಉಪಬಂಧಗಳನುಸಾರ ನೇಮಕಾತಿ ಮಾಡಲು ಈ ಕೆಳಕಂಡ ಅರ್ಹತೆಯುಳ್ಳ ಪ್ರಾಧ್ಯಾಪಕರ/ ಶಿಕ್ಷಣ ತಜ್ಞರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಉನ್ನತ ಮಟ್ಟದ ಆಡಳಿತ, ಶೈಕ್ಷಣಿಕ ಹಾಗೂ ಸಂಶೋಧನಾ ಸಾಮರ್ಥ್ಯ, ಪ್ರಾಮಾಣಿಕತೆ, ಸಮಗ್ರತೆ/ ಋಜತ್ವ ನೈತಿಕ ಮೌಲ್ಯಗಳನ್ನು ಹಾಗೂ ಸಾಂಸ್ಥಿಕ ಬದ್ಧತೆಯನ್ನು ಹೊಂದಿರತಕ್ಕದ್ದು.

    ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ ಅಥವಾ ವಿಖ್ಯಾತ ಸಂಶೋಧನಾ/ ಅಥವಾ ಶೈಕ್ಷಣಿಕ ಆಡಳಿತ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳು ಕಾರ್ಯನಿರ್ವಹಿಸಿದ ಅನುಭವವನ್ನು ಹಾಗೂ ರುಜುವಾತದ ಶೈಕ್ಷಣಿಕ ಅಗ್ರಗಾಮಿತ್ವವನ್ನು ಹೊಂದಿರತಕ್ಕದ್ದು.

    ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯ ನೇಮಕಾತಿಗೆ ಉಮೇದುವಾರಿಕೆ ಸಲ್ಲಿಸಬಯಸುವ ಆಸಕ್ತರು ತಮ್ಮ ವಿದ್ಯಾರ್ಹತೆ, ಸಂಶೋಧನೆ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವಗಳು, ಸಾಧನೆಗಳು ಹಾಗೈ ಇತರೆ ವಿವರಗಳನ್ನು ಯುಜಿಸಿಯಿಂದ‌ ನಿಗದಿಪಡಿಸಲಾಗಿರುವ ನಮೂನೆಯಲ್ಲಿ ಭರ್ತಿ ಮಾಡಿ ಮುದ್ರಿತ ಅರ್ಜಿಗಳನ್ನು ತ್ರಿಪ್ರತಿಗಳಲ್ಲಿ ಈ ನೇಮಕಾತಿ ಜಾಹೀರಾತು ಪ್ರಕಟಣೆಯಾದ 15 ದಿನದೊಳಗೆ ಸ್ವೀಕೃತವಾಗುವಂತೆ ” ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 6 ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು – 560001 ” ಇವರಿಗೆ ಸಲ್ಲಿಸತಕ್ಕದ್ದು.

    ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.

  • ಬೆಂಗಳೂರಿನ ಜಿಪಿಒ ಅಂಚೆ ವಿಭಾಗದಲ್ಲಿ ಕೆಲಸ, ನೇರ ಸಂದರ್ಶನ, ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

    ಭಾರತೀಯ ಅಂಚೆ ಇಲಾಖೆ ವತಿಯಿಂದ ಬೆಂಗಳೂರಿನ ಜಿಪಿಒ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಅಂಚೆ ಜೀವ ವಿಮೆ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : 18 ರಿಂದ 60 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಮೂಲ ಪ್ರತಿ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಬೆಂಗಳೂರು ಜಿಪಿಓ ಅಂಚೆ ಕಚೇರಿಯಲ್ಲಿ ಆಗಸ್ಟ್ 5 ರಿಂದ 7 ರವರೆಗೆ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.

    ಹೆಚ್ಚಿನ ಮಾಹಿತಿಗಾಗಿ ದೂ.ಸಂ.080 22850002, 9901354022 ಗೆ ಸಂಪರ್ಕಿಸಬಹುದಾಗಿದೆ.

  • ಬೆಂಗಳೂರು ಯುನಿವರ್ಸಿಟಿ : ಬ್ಯಾಕ್ ಲಾಗ್ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ಮತ್ತು ಯು.ವಿ.ಸಿ.ಇ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವರಗಳು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳ ( ಬ್ಯಾಕ್ ಲಾಗ್) ಭರ್ತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ ( ಎಂಟು ಪ್ರತಿ) ಆಹ್ವಾನಿಸಲಾಗಿದೆ.

    ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಈ ತಿಂಗಳ 30 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

    ಹುದ್ದೆ: ಪ್ರೊಫೆಸರ್ , ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್

    ಅರ್ಜಿ ಶುಲ್ಕ : ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ರೂ. 250/-, ಅಸೋಸಿಯೇಟ್ ಪ್ರೊಫೆಸರ್ ಹಾಗೂ ಪ್ರೊಫೆಸರ್ ಹುದ್ದೆಗೆ ರೂ.500/-,ಜೊತೆಗೆ ಅಪ್ಲಿಕೇಶನ್ ಫೀಸ್ ರೂ.100/- ನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-07-2021( 30th July 2021) 5.00 ಗಂಟೆಯೊಳಗೆ.

  • ಬೆಂಗಳೂರಿನಲ್ಲಿ ಆಶಾ ಮೇಲ್ವಿಚಾರಕರ ಹುದ್ದೆಗೆ ನೇರ ಸಂದರ್ಶನ

    ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ( ರಿ) ದ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ಆಶಾ ಮೇಲ್ವಿಚಾರಕ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವೇತನ : ಮಾಸಿಕ ರೂ.15,600/- ವೇತನ ನಿಗದಿಪಡಿಸಲಾಗಿದೆ.

    ಹುದ್ದೆ ಸಂಖ್ಯೆ : 04

    ಸಂದರ್ಶನ ದಿನಾಂಕ ಹಾಗೂ ಸಮಯ: 25-06-2021 ರಂದು Naukara Bhavana, BBMP Head Office, N.R. Square, Bengaluru. ಸಮಯ 11-00 ಗಂಟೆ ಬೆಳಿಗ್ಗೆ ಯಿಂದ 04-00 ಗಂಟೆ ಸಾಯಂಕಾಲ ರವರೆಗೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷಗಳು ಆಗಿರಬೇಕು. ಸಾಮಾನ್ಯ ವರ್ಗ – 35 ವರ್ಷ( ಬಿ), 2ಎ, 2ಬಿ, 3 ಎ, 3ಬಿ – 38 ವರ್ಷ, ಪ.ಜಾತಿ/ ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 08022110445 ಗೆ ಸಂಪರ್ಕಿಸಬಹುದು.

  • ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 04 ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 04 ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿ ಹಾಗೂ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿ, ಯಂಟಗಾನಹಳ್ಳಿ ಮತ್ತು ನರಸೀಪುರ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17-06-2021 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2021 ರ ಸಂಜೆ 05.00 ಗಂಟೆಯವರೆಗೆ. ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯತಿ/ ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ.

    ಅರ್ಹತೆಗಳು : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
    ದಿನಾಂಕ 01-01-2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ‌ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
    ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ ಎರಡು ವರ್ಚಯ ಯೋಜನೆಯಡಿ ಅಕುಶಲ ಕೂಲಿಕಾರ್ಮಿಕರಾಗಿ ಕೆಲಸ ನಿರ್ವಹಿಸಬೇಕು.
    ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.
    ಓದು ಬರಹ ಚೆನ್ನಾಗಿ ತಿಳಿದಿರಬೇಕು.
    ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ರೋಜ್ ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್ ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

  • KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

    KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 18

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.