Category: bangalore

  • ITI Ltd : ವಿವಿಧ ಹುದ್ದೆಗಳಿಗೆ ನೇಮಕಾತಿ

    ITI Ltd : ವಿವಿಧ ಹುದ್ದೆಗಳಿಗೆ ನೇಮಕಾತಿ

    ಐಟಿಐ ಲಿಮಿಟೆಡ್‌ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಚೀಫ್ ಮ್ಯಾನೇಜರ್/ಮ್ಯಾನೇಜರ್/ಡೆಪ್ಯುಟಿ ಮ್ಯಾನೇಜರ್/ಪಬ್ಲಿಕ್ ರಿಲೇಷನ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2021

    ಅರ್ಜಿ ಶುಲ್ಕ : ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಮ್ಯಾನೇಜರ್ ಹುದ್ದೆಗೆ 42 ವರ್ಷ ಮೀರಿರಬಾರದು. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 40 ವರ್ಷ ಮೀರಿರಬಾರದು. ಪಬ್ಲಿಕ್ ರಿಲೇಸನ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ ಆಗಿರಬೇಕು.
    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ ಎಕ್ಸ್‌ ಡಿಫೆನ್ಸ್ ಸರ್ವಿಸ್ ಪರ್ಸನಲ್ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿದು, ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಗರ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನಿಂದ 2024-25 ನೇ ಸಾಲಿನವರೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ. 2021-21 ನೇ ಸಾಲಿನಲ್ಲಿ ಸದರಿ ಯೋಜೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋ ಫ್ಲಾಕ್ ಕೊಳ ನಿರ್ಮಾಣ ಮೀನು ಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ/ ಶೈತ್ಯಾಗಾರ/ ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ಇತರೆ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 60 ರಷ್ಟು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರವರುಗಳನ್ನು ಸಂಪರ್ಕಿಸಲು ಕೋರಿದೆ.

    2021-22ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ವಿವಿಧ ಯೋಜನೆಗಳ ಪ್ರಯೋಜನೆ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-05-2021 ಮುಂದುವರೆದು 2021-22ನೇ ಸಾಲಿನಲ್ಲಿ ಮೀನುಗಾರಿಕೆ ಇಲಖೆಯ ಕೇಂದ್ರ ವಲಯ/ ರಾಜ್ಯ ವಲಯ / ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ, ಮೀನುಮರಿ ಖರೀದಿಗೆ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರವರ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಲು ಈ ಮೂಲಕ ತಿಳಿಯಪಡಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಕಚೇರಿಯನ್ನು ಸಂಪರ್ಕಿಸಬಹುದು.

    ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಬೆಂಗಳೂರು ನಗರಜಿಲ್ಲೆ – 9972189781
    ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಂಗಳೂರು ದಕ್ಷಿಣ/ಪೂರ್ವ – 9448500385
    ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಂಗಳೂರು ಉತ್ತರ – 9590135993
    ಮೀನುಗಾರಿಕೆ ಸಹಾಯಕ ನಿರ್ದೇಶಕರು ಆನೇಕಲ್ ತಾಲ್ಲೂಕು – 9448500385

  • BBMP : ಉದ್ಯೋಗವಕಾಶ

    BBMP : ಉದ್ಯೋಗವಕಾಶ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಎಂಬಿಬಿಎಸ್ ಡಾಕ್ಟರ್ಸ್ , ಬಿಡಿಎಸ್ ಡಾಕ್ಟರ್ಸ್, ಆಯುಷ್ ಡಾಕ್ಟರ್ಸ್, ಸ್ಟಾಫ್ ನರ್ಸ್ ಫಾರ್ ವ್ಯಾಕ್ಸಿನೇಶನ್, ಸ್ವಾಬ್ ಕಲೆಕ್ಟರ್ಸ್

    ಎಂಬಿಬಿಎಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ದಿಂದ ಎಂಬಿಬಿಎಸ್ ನ್ನು ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.80,000/- ವೇತನವಿರುತ್ತದೆ.

    ಬಿಡಿಎಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಂಗೀಕೃತ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ದಿಂದ ಬಿಡಿಎಸ್ ಮಾಡಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000/- ವೇತನ ನಿಗದಿಯಾಗಿದೆ.

    ಆಯುಷ್ ಡಾಕ್ಟರ್ಸ್ ಹುದ್ದೆಗೆ ಬಿಎಎಂಎಸ್/ಬಿಯುಎಂಎಸ್/ಬಿಎಸ್‌ಎಂಎಸ್/ಬಿಎಚ್‌ಎಂಎಸ್ ಆಯುರ್ವೇದ ಡಿಗ್ರಿಯನ್ನು ಪಡೆದಿರಬೇಕು. ಈ ಹುದ್ದೆ ಮಾಸಿಕ ರೂ. 60,000/- ವೇತನವಿರುತ್ತದೆ.

    ಸ್ಟಾಫ್ ನರ್ಸ್ ಫಾರ್ ವ್ಯಾಕ್ಸಿನೇಶನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಎಸ್ಸಿ/ಜಿಎನ್‌ಎಂ/ಡಿಪ್ಲೋಮಾ ನರ್ಸಿಂಗ್ ನ್ನು ರಿಜಿಸ್ಟರ್ಸ್ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ ನಿಂದ ಪಡೆದಿರಬೇಕು. ಈ ಹುದ್ದೆಗೆ ತಿಂಗಳ ರೂ.20,000/- ವೇತನವಿರುತ್ತದೆ.

    ಸ್ವಾಬ್ ಕಲೆಕ್ಟರ್ಸ್ ಈ ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ ಹತ್ತನೇ ತರಗತಿ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,000/- ವೇತನವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು 50 ವರ್ಷ ಮೀರಿರಬಾರದು.

    ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು, ಬರೆಯಲು ಓದಲು ತಿಳಿದಿರಬೇಕು.

    ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಈ ಹುದ್ದೆಯು 3 ತಿಂಗಳ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ.

    ವಿಳಾಸ : 3rd Floor South BBMP Zonal Office,Jayangara 2nd Block.
    ದಿನಾಂಕ 19-04-2021 ರಿಂದ 21-04-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನಂಬರನ್ನು ಸಂಪರ್ಕಿಸಿ : 8431816718

  • ರೈಲು ಗಾಲಿ ಕಾರ್ಖಾನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಗಾಲಿ ಕಾರ್ಖಾನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – ಈ ಕೆಳಗಿನ ಪ್ರಾರಾಮೆಡಿಕಲ್ ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಸ್ಟಾಫ್ ನರ್ಸ್ – 13
    ರೇಡಿಯೋಗ್ರಾಫರ್ / ಎಕ್ಸ್‌ – ರೇ ತಂತ್ರಜ್ಞ
    ಲ್ಯಾಬ್ ತಂತ್ರಜ್ಞ – 01
    ಆಸ್ಪತ್ರೆ ಪರಿಚಾರಕರು – 10

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆರ್‌ಡಬ್ಲ್ಯುಎಫ್ ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದು.

    ಸಂದರ್ಶನ ದಿನಾಂಕ : 20-04-2021 ರಂದು 11.00 ಗಂಟೆಗೆ ತಾಂತ್ರಿಕ ತರಬೇತಿ ಕೇಂದ್ರ, ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – 560064 ರಲ್ಲಿ ವಾಕ್‌- ಇನ್ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

  • ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

    ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

    ಬೆಂಗಳೂರು ವಿಶ್ವವಿದ್ಯಾನಿಲಯವು ಎಪ್ರಿಲ್ 19 ರಂದು ನಡೆಸಬೇಕಾಗಿದ್ದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

    ಎಪ್ರಿಲ್ 19 , 20 ಮತ್ತು 21 ರಂದು ನಡೆಯಬೇಕಾಗಿದ್ದ ವಿವಿಧ ಪರೀಕ್ಷೆಗಳನ್ನು ಸೋಂಕು ಹೆಚ್ಚಳ ಕಾರಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ.

    ಏ.19 ರಂದು ಪ್ರಾರಂಭವಾಗಬೇಕಾಗಿದ್ದ ಎಲ್ಲಾ ಎಲ್ಲಾ ಯುಜಿ ಕೋರ್ಸ್‌ಗಳ 1 ಮತ್ತು 3ನೇ ಸೆಮಿಸ್ಟರ್ , ಯುವಿಸಿಇನ ಬಿ.ಆರ್ಕ್‌/ಬಿ.ಟೆಕ್ (ಸಿಬಿಸಿಎಸ್‌) 1,2,3 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    20 ರಿಂದ ಪ್ರಾರಂಭವಾಗಬೇಕಾಗಿದ್ದ ಎಂಬಿಎ/ಎಂಸಿಎ/ಎಂ.ಇಡಿ/ಎಂ.ಎಸ್ಸಿ ಆರಂಭವಾಗಬೇಕಾಗಿದ್ದ ಎಂಎ/ಎಂಎಸ್ಸಿ/ಎಂಎಎಸ್‌ಎಲ್‌ಪಿ ನ 3 ನೇ ಸೆಮಿಸ್ಟರ್ ಹಾಗಝೂ ಎಂಸಿಎ 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಬೆಂಗಳೂರು ವಿವಿ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಾಗಲಕೋಟೆ ಸೆಂಟ್ರಲ್ ಲೈಬ್ರರಿಯಲ್ಲಿ ಉದ್ಯೋಗ

    ಬಾಗಲಕೋಟೆ ಸೆಂಟ್ರಲ್ ಲೈಬ್ರರಿಯಲ್ಲಿ ಉದ್ಯೋಗ

    ಬಾಗಲಕೋಟೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಯ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಮಹಿಳಾ ಆಯಾ ಕೆಲಸಗಾರರನ್ನು ಗೌರವ ಸಂಭಾವನೆ ಮೇರೆಗೆ ಭರ್ತಿ ಮಾಡಲು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿ ತೇರ್ಗಡೆ ಹೊಂದಿರಬೇಕು. ಹುದ್ದೆಗೆ ಸ್ಥಳೀಯರಿಗೆ ಮೊದಲನೆ ಆದ್ಯತೆ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ : ವಿದ್ಯಾರ್ಹತೆ ಹಾಗೂ ಮೌಖಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

    ಈ ಹುದ್ದೆಯು ತಾತ್ಕಾಲಿಕವಾಗಿದ್ದು, ಮಾಸಿಕ ಮೂರು ಸಾವಿರ ಗೌರವ ಸಂಭಾವನೆ ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 30, 2021 ರೊಳಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಗ್ರಂಥಾಲಯ, ನವನಗರ, ಬಾಗಲಕೋಟೆ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.