BOB Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸಿಹಿ ಸುದ್ದಿ. ಬ್ಯಾಂಕ್ ಆಫ್ ಬರೋಡ ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹಲವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಫೈರ್ ಆಫೀಸರ್, ಮ್ಯಾನೇಜರ್ ಪೋಸ್ಟ್ಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರಕಾರದಲ್ಲಿ ಉದ್ಯೋಗ ಮಾಡಲು ಇಚ್ಛೆ ಪಡುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್,08,2024 ರಂದು ಅಥವಾ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು; ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-02-2024 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2024
ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ; ಹುದ್ದೆ ಹೆಸರು: ಬ್ಯಾಂಕ್ ಬರೋಡ ಅಧಿಸೂಚನೆಯ ಪ್ರಕಾರ, ಅಗ್ನಿಶಾಮಕ ಅಧಿಕಾರಿ, ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಖ್ಯೆ: ಒಟ್ಟು 22 ಹುದ್ದೆಗಳಿಗೆ ಬ್ಯಾಂಕ್ ಆಫ್ ಬರೋಡ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಖ್ಯೆ: ಅಗ್ನಿಶಾಮಕ ಅಧಿಕಾರಿ-2 ಹುದ್ದೆಗಳು, ಮ್ಯಾನೇಜರ್ – 10 ಹುದ್ದೆಗಳು, ಸೀನಿಯರ್ ಮ್ಯಾನೇಜರ್ – 9 ಹುದ್ದೆಗಳು, ಚೀಫ್ ಮ್ಯಾನೇಜರ್ – 1 ಹುದ್ದೆಗಳು ಖಾಲಿ ಇದೆ. ಒಟ್ಟು 22 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಗ್ನಿಶಾಮಕ ಅಧಿಕಾರಿ- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್,ಡಿಗ್ರಿಯನ್ನು ಪಡೆದಿರಬೇಕು ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಿಎ,ಸಿಎಂಎ, ಮಾಸ್ಟರ್ಸ್ ಡಿಗ್ರಿ ಮಾಡಿರಬೇಕು. ಚೀಫ್ ಮ್ಯಾನೇಜರ್ ಹುದ್ದೆಗೆ ಎಂಬಿಎ, ಪೋಸ್ಟ್ ಗ್ರಾಜ್ಯುಯೇಷನ್ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 22, ಗರಿಷ್ಠ 35 ಮೀರರಬಾರದು. ಮ್ಯಾನೇಜರ್ ಹುದ್ದೆಗೆ ಕನಿಷ್ಠ ವಯೋಮಿತಿ 24, ಗರಿಷ್ಠ ವಯೋಮಿತಿ 35, ಸೀನಿಯರ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 26 ವರ್ಷ, ಗರಿಷ್ಠ 40 ವರ್ಷ, ಚೀಫ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 28 ವರ್ಷ, ಗರಿಷ್ಠ 40 ವರ್ಷ ಮೀರದವರು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಅರ್ಜಿ ಶುಲ್ಕ: SC/ST/PWD/ ಮಹಿಳಾ ಅಭ್ಯರ್ಥಿಗಳಿಗೆ ರೂ.100, General/EWS/OBC ಅಭ್ಯರ್ಥಿಗಳು: Rs.600/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ವೇತನ: ಅಗ್ನಿಶಾಮಕ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.36,000-63,840ರೂ. ವೇತನ, ಮ್ಯಾನೇಜರ್ ಹುದ್ದೆಗೆ ರೂ.48 ,170-ರೂ.69,180 ವೇತನ, ಸೀನಿಯರ್ ಮ್ಯಾನೇಜರ್ ಹುದ್ದೆಗೆ ರೂ.63,840-78,230/- ರೂ ವೇತನ, ಚೀಫ್ ಮ್ಯಾನೇಜರ್ ಹುದ್ದೆಗೆ ರೂ.76,010-ರೂ.89,890 ವೇತನ ಸಿಗಲಿದೆ.
Shri Sudha Co-Operative Bank Ltd: ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿ.ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ-ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಕಿರಿಯ ಸಹಾಯಕರು, ಸಿಸ್ಟಂ ಅಡ್ಮಿನಿಸ್ಟ್ರೆಟರ್, ಕಚೇರಿ ಸಹಾಯಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ, ಹೆಚ್ಚಿನ ವಿವರಗಳನ್ನು ಪಡೆದು ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ; 02-02-2024 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ; 23-02-2024
ಹುದ್ದೆಗಳ ವಿವರ; ಶ್ರೀ ಸುಧಾ ಕೋ-ಅಪರೇಟಿವ್ ಬ್ಯಾಂಕ್ ಲಿ. ನಲ್ಲಿ ಕಿರಿಯ ಸಹಾಯಕರು ಗ್ರೇಡ್-II, ಸಿಸ್ಟಂ ಅಡ್ಮಿನಿಸ್ಟ್ರೇಟರ್, ಕಚೇರಿ ಸಹಾಯಕರು(ಅಟೆಂಡರ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: ಕಿರಿಯ ಸಹಾಯಕರು ಗ್ರೇಡ್-II: 10 ಹುದ್ದೆಗಳು ಸಿಸ್ಟಂ ಅಡ್ಮಿನಿಸ್ಟ್ರೇಟರ್: 01 ಹುದ್ದೆ ಕಚೇರಿ ಸಹಾಯಕರು(ಅಟೆಂಡರ್): 07 ಹುದ್ದೆಗಳು
ವಿದ್ಯಾರ್ಹತೆ: ಕಿರಿಯ ಸಹಾಯಕರು ಗ್ರೇಡ್ -II: ಅಂಗೀಕೃತ ವಿಶ್ವವಿದ್ಯಾಲಯದ ಬ್ಯಾಚುಲರ್ ಪದವಿ, ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ ತಿಳಿದಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ
ಸಿಸ್ಟಂ ಅಡ್ಮಿನಿಸ್ಟ್ರೇಟರ್: ಅಂಗೀಕೃತ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್ಸ್/ಇನ್ಫಾರ್ಮೇಷನ್ ಸೈನ್ಸ್ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ತಾಂತ್ರಿಕ ಪದವಿಯನ್ನು ತೇರ್ಗಡೆ ಮಾಡಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಜೊತೆಗೆ ಕೋರ್ ಬ್ಯಾಂಕಿಂಗ್, ನೆಟ್ವರ್ಕಿಂಗ್, ಸೈಬರ್ ಸೆಕ್ಯೂರಿಟಿಯಲ್ಲಿ ಪಾಂಡಿತ್ಯ ಹೊಂದಿರಬೇಕು.
ಕಚೇರಿ ಸಹಾಯಕರು (ಅಟೆಂಡರ್): ಕನ್ನಡ ಪ್ರಥಮ ಭಾಷೆಯೊಂದಿಗೆ ಎಸ್ಎಸ್ಎಲ್ಸಿ, ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಸಾಮಾನ್ಯ ವರ್ಗಕ್ಕೆ 35 ವರ್ಷ, ಹಿಂದುಳಿದ ವರ್ಗ/ಜಾರಿಗೆ 38 ವರ್ಷ, ಪರಿಶಿಷ್ಟ ಜಾತಿ/ವರ್ಗಕ್ಕೆ 40 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ: ಕಿರಿಯ ಸಹಾಯಕರು -II; 27650-650-29600-750-32600-850-36000-950-39800- 1100-46400-1250-52650. ಸಿಸ್ಟಂ ಅಡ್ಮಿನಿಸ್ಟ್ರೇಟರ್: 45300-1100-46400-1250-53900-1450-62600-1650-72500-1900-83900- 2200-88300 ಕಚೇರಿ ಸಹಾಯಕರು (ಅಟೆಂಡರ್) : 23500-550-24600-600-27000-650-29600-750-32600-850-36000-950-39800-1100-46400-1250-47650
ಅರ್ಜಿ ಶುಲ್ಕ:ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ವೆಬ್ಸೈಟ್ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ರೂ.1180 ಡಿಡಿ ಪೇ/ಆರ್ಡರ್ನ್ನು “ಪ್ರಧಾನ ವ್ಯವಸ್ಥಾಪಕರು, ಶ್ರೀ ಸುಧಾ ಕೋ ಅಪರೇಟಿವ್ ಬ್ಯಾಂಕ್ ಲಿ., ಬೆಂಗಳೂರು” ಇಲ್ಲಿಗೆ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸುವ ರೀತಿ; ಅರ್ಜಿಯನ್ನು ಪ್ರಧಾನ ವ್ಯವಸ್ಥಾಪಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ, “ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ., ನಂ.195/33 ” ಶ್ರೀ ಸುಧಾ ರಜತ ಭವನ”, ಆರ್.ವಿ.ರಸ್ತೆ, ಜಯನಗರ, ಬೆಂಗಳೂರು-560004 ಕ್ಕೆ ದಿನಾಂಕ ಫೆ.23, 2024 ಸಮಯ 5.00 ಗಂಟೆಯೊಳಗೆ ತಲುಪಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
PNB Job: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆ ಮಾಡಲು ಇಚ್ಛಿಸುವವರಿಗೆ ಸಿಹಿ ಸುದ್ದಿ. ಹೌದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ದೇಶದಾದ್ಯಂತ ತನ್ನ ವಿವಿಧ ಬ್ರ್ಯಾಂಚ್ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಕ್ರೆಡಿಟ್/ಮ್ಯಾನೆಜರ್ ಫಾರೆಕ್ಸ್, ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ ಮತ್ತು ಇತರ ವಿಭಾಗಗಳಲ್ಲಿ ಭರ್ತಿ ಮಾಡಲು ಬ್ಯಾಂಕ್ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಪಿಎನ್ಬಿ ಯಲ್ಲಿ ಒಟ್ಟು 1025 ಹುದ್ದೆಗಳಿದ್ದು, ಫೆ.25, 2024 ರ ಒಳಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-02-2024 ರಂದು ಪ್ರಾರಂಭವಾಗಲಿದ್ದು, ಆನ್ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಫೆಬ್ರವರಿ, 02, 2024 ಆಗಿರುತ್ತದೆ. ಹಾಗೆನೇ ಅಧಿಸೂಚನೆಯಲ್ಲಿ ನೀಡಿರುವ ಪ್ರಕಾರ ಆನ್ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನು ಮಾರ್ಚ್/ಎಪ್ರಿಲ್, 2024 ರಲ್ಲಿ ನಡೆಯುವುದಾಗಿ ಹೇಳಲಾಗಿದೆ.
ಹುದ್ದೆ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಸ್ಪೆಷಲಿಸ್ಟ್ ಆಫೀಸರ್ (ವಿವಿಧ ವಿಭಾಗ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1025 ಹುದ್ದೆಗಳಿದ್ದು, ಅಭ್ಯರ್ಥಿಗಳು ತಮ್ಮ ಸವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿ/ಸಿಎ/ಸಿಎಂಎ/ ಐಡಿಡಬ್ಲ್ಯೂಎ ಪಾಸ್ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ಹುದ್ದೆವಾರು ವೇತನ ಈ ರೀತಿ ಇದೆ; ಆಫೀಸರ್ ಕ್ರೆಡಿಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ ರೂ.36,000-ರೂ.63,840 ಇರಲಿದೆ. ಮ್ಯಾನೇಜರ್ ಫಾರೆಕ್ಸ್ ಹುದ್ದೆಗೆ ರೂ.48170-69810, ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ ಹುದ್ದೆಗೆ ರೂ.48,170-ರೂ.69,810 ಮಾಸಿಕ ವೇತನ ಇರಲಿದ್ದು, ಸೀನಿಯರ್ ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ ಹುದ್ದೆಗೆ ರೂ.63,840-ರೂ.78,230 ಇರಲಿದೆ.
ವಯೋಮಿತಿ: ಆಫೀಸರ್ ಕ್ರೆಡಿಟ್ ಹುದ್ದೆಗಳಿಗೆ 21-28 ವರ್ಷ, ಮ್ಯಾನೇಜರ್ ಫಾರೆಕ್ಸ್ ಮತ್ತು ಮ್ಯಾನೇಜರ್ ಸೈಬರ್ ಸೆಕ್ಯುರಿಟಿ ಹುದ್ದೆಗಳಿಗೆ 25-35 ವರ್ಷ, ಸೀನಿಯರ್ ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ ಹುದ್ದೆಗಳಿಗೆ 27-38 ವರ್ಷ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ತಿಳಿದುಕೊಳ್ಳಬಹುದು.
ಅರ್ಜಿ ಶುಲ್ಕ: ರೂ.1180 ರೂ ಅರ್ಜಿ ಶುಲ್ಕವನ್ನು ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪಾವತಿ ಮಾಡಬೇಕು. ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ.59 ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿ ಮಾಡಲು ಮಾತ್ರ ಅವಕಾಶವಿದೆ.
ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು. ಅನಂತರ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಪ್ರಕಟ ಮಾಡಲಾಗುವುದು.
Union Bank Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆ ಪಡೆಯಲು ಇಚ್ಛೆ ಪಡುವವರಿಗೆ ಸಿಹಿ ಸುದ್ದಿ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Recruitment 2024) ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 606 ಸ್ಪೆಷಲಿಸ್ಟ್ ಆಫಿಸರ್ಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ವೃತ್ತಿ ಜೀವನ ಪ್ರಾರಂಭ ಮಾಡಲು ಇಚ್ಛೆ ಪಡುವ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-02-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-02-2024
ಹುದ್ದೆ ಸಂಖ್ಯೆ: ಯೂನಿಯನ್ ಬ್ಯಾಂಕ್ನಲ್ಲಿ ಒಟ್ಟು 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಅಧಿಕಾರಿಗಳು (ಮ್ಯಾನೇಜರ್) ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವೇತನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000-89890/- ವೇತ ಸಿಗಲಿದೆ.
ವಯೋಮಿತಿ: ಯೂನಿಯನ್ ಬ್ಯಾಂಕ್ನ ವಿವಿಧ ಹುದ್ದೆಗೆ ವಿವಿಧ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಸಂಸ್ಥೆಯ ನೋಟಿಫಿಕೇಶನ್ ಚೆಕ್ ಮಾಡಬಹುದು. ಉಳಿದ ಹಾಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು, ಇದರಲ್ಲಿ OBC (NCL) ಅಭ್ಯರ್ಥಿಗಳಿಗೆ ಮೂರು ವರ್ಷ, SC/ST ಅಭ್ಯರ್ಥಿಗಳಿಗೆ ಐದು ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ರೂ.175/- ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ ರೂ.850/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ರೀತಿ ಇಲ್ಲಿದೆ; ಮೊದಲನೆಯದಾಗಿ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ನ ನೇಮಕಾತಿ ಅಧಿಸೂಚನೆಯನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಪರಿಶೀಲಿಸಬೇಕು. ನಂತರ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಇತ್ಯಾದಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲೇ ಅಭ್ಯರ್ಥಿಗಳು ಸಿದ್ಧಮಾಡಿಟ್ಟುಕೊಳ್ಳಬೇಕು. ನಂತರ ವೆಬ್ಸೈಟ್ನಲ್ಲಿ ಯೂನಿಯನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ಸ್ (ಮ್ಯಾನೇಜರ್) ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೀಡಿರುವ ಲಿಂಕನ್ನು ಅಭ್ಯರ್ಥಿಗಳು ಕ್ಲಿಕ್ ಮಾಡಬೇಕು ಎಲ್ಲಾ ಅಗತ್ಯ ವಿವರಗಳನ್ನು ನಮೂದಿಸಬೇಕು. ಇತ್ತೀಚಿನ ಭಾವಚಿತ್ರ ಜೊತೆ ಅಗತ್ಯ ಪ್ರಮಾಣ ಪತ್ರಗಳ ಸ್ಕ್ಯಾನ್ ಅಪಲೋಡ್ ಮಾಡಬೇಕು. ನಂತರ ಅರ್ಜಿ ಶುಲ್ಕ ಪಾವತಿಸಿ ನಂತರ ಕೊನೆಯದಾಗಿ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ನ ವೆಬ್ಸೈಟ್ www.unionbankofindia.co.in ಭೇಟಿ ನೀಡಿ ವಿವರಗಳನ್ನು ತಿಳಿದುಕೊಳ್ಳಬಹುದು.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗ, ಇದರಲ್ಲಿ ಖಾಲಿಯಿರುವ ಈ ಕೆಳಕಂಡ ವಿವಿಧ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿನ ನೌಕರರ ಸೇವಾ ನಿಯಮಾವಳಿ ಹಾಗೂ ಸರ್ಕಾರದ ಆದೇಶ ಸಂಖ್ಯೆ: ಸಿಒ 58 ಸಿಸಿಬಿ 2018, ಬೆಂಗಳೂರು, ದಿನಾಂಕ 05-02 -2019 ಹಾಗೂ ಸಹಕಾರ ಇಲಾಖೆಯ ಪತ್ರ ಸಂಖ್ಯೆ: ಆರ್ಸಿಎಸ್/ಸಿಆರ್ಡಿ/ಕೆಎಂಸಿ-4/ 205/201718 ದಿನಾಂಕ 31-05-2021 ರನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛೆಯುಳ್ಳ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಅರ್ಜಿ ನಮೂನೆಯಲ್ಲಿ ಸ್ವಹಸ್ತದ / ಗಣಕಯಂತ್ರದಿಂದ ಮಾಡಿದ ಅರ್ಜಿಯನ್ನು ಪೂರ್ಣ ವಿವರ, ಅಗತ್ಯ ದಾಖಲಾತಿಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಈ ಕೆಳಗೆ ಸಹಿ ಮಾಡಿದವರಿಗೆ ಸಲ್ಲಿಸಬೇಕು. ನೇಮಕಾತಿ ಮಾಡಲುದ್ದೇಶಿಸಿರುವ ಹುದ್ದೆಗಳ ಒಟ್ಟು ಸಂಖ್ಯೆ: 98. ಸದರಿ ಹುದ್ದೆಗಳನ್ನು ಸರ್ಕಾರಿ ಆದೇಶ ಪ್ರಕಾರ ಈ ಕೆಳಕಂಡಂತೆ ವರ್ಗೀಕರಿಸಿ ಮೀಸಲಿರಿಸಲಾಗಿದೆ.
ವಿಶೇಷ ಸೂಚನೆ:- ಈ ಕೆಳಕಂಡ ಹುದ್ದೆಗಳ ಭರ್ತಿಗಾಗಿ ಬ್ಯಾಂಕು ಈ ಹಿಂದೆ ನೀಡಿದ್ದ ಪತ್ರಿಕಾ ಪ್ರಕಟಣೆ ಸಂಖ್ಯೆ: ಆ ಮತ್ತು ಸಿ/ 3041/2018-19 ದಿನಾಂಕ 22-02-2019ರ ಅನ್ವಯ ಅರ್ಜಿ ಸಲ್ಲಿಸಿ ಬ್ಯಾಂಕಿನಿಂದ ಲಿಖಿತ ಪರೀಕ್ಷೆಗೆ `ಪ್ರವೇಶ ಪತ್ರ’ ಸ್ವೀಕರಿಸಿದ ಅಭ್ಯರ್ಥಿಗಳು ಈ ಪ್ರಕಟಣೆಯನ್ನನುಸರಿಸಿ ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹಿಂದಿನ ಅರ್ಜಿಯನ್ನೇ ಪರಿಗಣಿಸಲಾಗುವುದು.
ಡಿಸಿಸಿ ಬ್ಯಾಂಕ್ ಉದ್ಯೋಗ- ವೇತನ ಎಷ್ಟು?
ಆಪ್ತ ಸಹಾಯಕರು/ಶೀಘ್ರಲಿಪಿಗಾರರು : ರೂ.33450-850-36000-950-39800-1100-46400- 1250-53900-1450-62600 ಕಿರಿಯ ಸಹಾಯಕರು/ಕ್ಷೇತ್ರಾಧಿಕಾರಿಗಳು/ನಗದು ಗುಮಾಸ್ತರು : ರೂ.30350-750-32600-850-36000-950-39800- 1100-46400-1250-53900-1450-58250 ವಾಹನ ಚಾಲಕರು : ರೂ.27650-650-29600-750-32600-850-36000-950-39800-1100-46400-1250-52650 ಅಟೆಂಡರ್ಸ್ : ರೂ.23500-550-24600-600-27000-650-29600-750-32600-850-36000-950-39800-1100- 46400-1250-47650 ಜಲಗಾರರು: ರೂ.17000-400-18600-450-20400-500-22400-550- 24600-600-27000-650-28950 ಮತ್ತು ನಿಯಮಗಳ ಪ್ರಕಾರ ಅನ್ವಯಿಸುವ ಇತರೆ ಭತ್ಯೆಗಳು.
Shivamogga DCC Bank Recruitment 2022: ವಿದ್ಯಾರ್ಹತೆ ಏನು?
ಆಪ್ತ ಸಹಾಯಕರು/ಶೀಘ್ರಲಿಪಿಗಾರರು: ಅಂಗೀಕೃತ ವಿಶ್ವವಿದ್ಯಾನಿಲಯದ ಪದವಿ ಹೊಂದಿರತಕ್ಕದ್ದು ಹಾಗೂ ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿ ಏರ್ಪಡಿಸುವ ಇಂಗ್ಲೀಷ್/ಕನ್ನಡ ಬೆರಳಚ್ಚು ಪರೀಕ್ಷೆಯ ಮತ್ತು ಶೀಘ್ರಲಿಪಿ ಪರೀಕ್ಷೆಯ ಪ್ರೌಢÀ ದರ್ಜೆ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರತಕ್ಕದ್ದು. ಕಂಪ್ಯೂಟರ್ನಲ್ಲಿ ಹೆಚ್ಚಿನ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಕಿರಿಯ ಸಹಾಯಕರು/ಕ್ಷೇತ್ರಾಧಿಕಾರಿಗಳು/ನಗದು ಗುಮಾಸ್ತರು: (1) ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪಡೆದ ಪದವಿ (2) ಸಹಕಾರ ವಿಷಯಗಳಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ನಲ್ಲಿ ಹೆಚ್ಚಿನ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ವಾಹನ ಚಾಲಕರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಡ್ರೈವಿಂಗ್ ಲೈಸನ್ಸ್ ಹೊಂದಿರತಕ್ಕದ್ದು.
ಅಟೆಂಡರ್: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜಲಗಾರರು: ಕನ್ನಡ ಭಾಷೆಯಲ್ಲಿ 4ನೇ ತರಗತಿವರೆಗೆ ಓದಿರತಕ್ಕದ್ದು.
Shivamogga DCC Bank Recruitment 2022: ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಟ 18 ವರ್ಷಗಳು ಹಾಗೂ ಕೆಳಕಂಡಂತೆ ಗರಿಷ್ಟ ವಯೋಮಿತಿಗೊಳಪಟ್ಟಿರತಕ್ಕದ್ದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳು : 40 ವರ್ಷಗಳು
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳು : 38 ವರ್ಷಗಳು
ಸಾಮಾನ್ಯ ಗುಂಪಿನ ಅಭ್ಯರ್ಥಿಗಳು : 35 ವರ್ಷಗಳು ಸರ್ಕಾರಿ ಆದೇಶದ ಅನುಸಾರ ಮಾಜಿ ಸೈನಿಕರಿಗೆ ಸೈನ್ಯದಲ್ಲಿ ಸಲ್ಲಿಸಿದ ಸೇವೆಯನ್ನು ಕಳೆದು ಆಯಾ ವರ್ಗಕ್ಕೆ ನಿಗದಿಪಡಿಸಿದ ವಯೋಮಿತಿಯೊಳಗಿರಬೇಕು. ವಿಧವೆಯರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ.
Shivamogga DCC Bank Recruitment 2022: ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಸಾಮಾನ್ಯ ಮತ್ತು ಇತರೆ ಹಿಂದುಳಿದ ಜಾತಿ ಮತ್ತು ವರ್ಗಗಳು ಅಂದರೆ; ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಾಗಿದ್ದಲ್ಲಿ ಅರ್ಜಿ ಶುಲ್ಕವನ್ನಾಗಿ ರೂ.900/- (ರೂಪಾಯಿ ಒಂಬೈನೂರು ಮಾತ್ರ)ಗಳೊಂದಿಗೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಾಗಿದ್ದಲ್ಲಿ ರೂ.450/- (ರೂಪಾಯಿ ನಾಲ್ಕು ನೂರಾ ಐವತ್ತು ಮಾತ್ರ)ಗಳೊಂದಿಗೆ (ಅರ್ಜಿ ಶುಲ್ಕ ಹಿಂದಿರುಗಿಸುವುದಿಲ್ಲ) ಮುಖ್ಯ ಕಾರ್ಯನಿರ್ವಾಹಕರು, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ, ಇವರ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ / ಪೇ ಆರ್ಡರ್ ಪಡೆದು ಇತರೇ ದಾಖಲಾತಿಗಳೊಂದಿಗೆ ಅಭ್ಯರ್ಥಿಯ ಇತ್ತೀಚಿನ ನಾಲ್ಕು ಭಾವಚಿತ್ರಗಳ ಪಾಸ್ಪೋರ್ಟ್ ಸೈಜ್ ಪ್ರತಿಯನ್ನು ಲಗತ್ತಿಸಿ, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬಾಲರಾಜ್ ಅರಸ್ ರಸ್ತೆ, ಪಿ.ಬಿ. ನಂ.62, ಶಿವಮೊಗ್ಗ – 577 201, ಈ ವಿಳಾಸಕ್ಕೆ ದಿನಾಂಕ 16-05-2022 ರಂದು ಸಂಜೆ 5-30 ಘಂಟೆ ಒಳಗೆ ತಲುಪುವಂತೆ ಅಂಚೆ/ಕೋರಿಯರ್ ಮೂಲಕ ಅಥವಾ ಖುದ್ದಾಗಿ ಕಳುಹಿಸತಕ್ಕದ್ದು.
ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು. ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. (5) ಭರ್ತಿ ಮಾಡಬೇಕಾಗಿರುವ ಮೇಲಿನ ಹುದ್ದೆಗಳನ್ನು ಕರ್ನಾಟಕ ಸಹಕಾರ ಕಾಯ್ದೆ 1959 ಹಾಗೂ ನಿಯಮಗಳು 1960 ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಆದೇಶದ ರೀತ್ಯಾ ಮೀಸಲಾತಿ ನೀಡಿ ನೇಮಕಾತಿ ಮಾಡಲಾಗುವುದು. (6) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಹಾಗೂ ಇನ್ನಿತರೆ ಮೀಸಲಾತಿ ಸೌಲಭ್ಯ ಪಡೆಯಲು ಇಚ್ಛಿಸುವವರು ಸರ್ಕಾರ ನಿಗದಿಪಡಿಸಿರುವ ನಮೂನೆಯಲ್ಲಿ ಸಂಬಂಧಿಸಿದವರಿಂದ ದೃಢೀಕರಣ ಪಡೆದು ಅದರ ದೃಢೀಕೃತ ಪ್ರತಿಯನ್ನು ಅರ್ಜಿಯ ಜೊತೆ ಲಗತ್ತಿಸಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣ ಪತ್ರವನ್ನು ಪಡೆದು ಬ್ಯಾಂಕಿಗೆ ಸಲ್ಲಿಸಬೇಕಾಗಿರುತ್ತದೆ. (7) ಅಭ್ಯರ್ಥಿಗಳು ಅರ್ಜಿಯೊಂದಿಗೆ ಪದವಿ ವರ್ಷಗಳ ಎಲ್ಲಾ ಅಂಕಪಟ್ಟಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಲ್ಲಿಸತಕ್ಕದ್ದು.
ನಿಬಂಧನೆಗಳು:
ಅರ್ಜಿಯನ್ನು ಬ್ಯಾಂಕಿನ ವೆಬ್ಸೈಟ್ನಲ್ಲಿ ತಿಳಿಸಿರುವ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು.
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ಇಳಿಸಿ, ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1 : 5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು ಹಾಗೂ ವಾಹನ ಚಾಲಕರ ಹುದ್ದೆಗೆ ವಾಹನ ಚಾಲನಾ ಪರೀಕ್ಷೆ ನಡೆಸಲಾಗುವುದು.
ಹುದ್ದೆಗಳನ್ನು ಭರ್ತಿ ಮಾಡುವುದು ಬ್ಯಾಂಕಿನಲ್ಲಿ ಅಂತಿಮವಾಗಿ ಲಭ್ಯವಾಗಬಹುದಾದ ಖಾಲಿ ಹುದ್ದೆಗಳನ್ನು ಅವಲಂಬಿಸುತ್ತದೆ. ಆದುದರಿಂದ ಮೇಲ್ಕಂಡ ಹುದ್ದೆಗಳ ಸಂಖ್ಯೆ ಬದಲಾವಣೆಗೆ ಒಳಪಟ್ಟಿರುತ್ತದೆ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿಷಯಗಳಲ್ಲಿ ಬ್ಯಾಂಕು ತೆಗೆದುಕೊಳ್ಳುವ ತೀರ್ಮಾನಗಳೇ ಅಂತಿಮವಾಗಿರುತ್ತದೆ ಮತ್ತು ಅವುಗಳಿಗೆ ಎಲ್ಲಾ ಅಭ್ಯರ್ಥಿಗಳು ಬದ್ಧರಾಗಿರತಕ್ಕದ್ದು. ಪ್ರಕಟಣೆಯಲ್ಲಿ ಪ್ರಕಟಿಸಿದ ಹುದ್ದೆಗಳಿಗೆ ಸಂಬಂಧಿಸಿದಂತೆ, ಮೀಸಲಾತಿ ಕೋರಿ ಬಯಸುವ ಅಭ್ಯರ್ಥಿಗಳು ಸರ್ಕಾರದ ವಿವಿಧ ಇಲಾಖೆಗಳು ನೇಮಕಾತಿಗಾಗಿ ನಿಗದಿಪಡಿಸಿರುವ ನಮೂನೆಗಳಲ್ಲಿ ಹಾಗೂ ಚಾಲ್ತಿಯಲ್ಲಿರುವ ಅಗತ್ಯ ಪ್ರಮಾಣ ಪತ್ರಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಲಗತ್ತಿಸತಕ್ಕದ್ದು.
ಅಭ್ಯರ್ಥಿಗಳು ತಾವು ಕೋರಿಬಯಸುವ ಮೀಸಲಾತಿಯನ್ನು ಅರ್ಜಿ ಫಾರಂನ ಸಂಬಂಧಪಟ್ಟ ಕಾಲಂನಲ್ಲಿ ಕೋರಿರುವ ಮೀಸಲಾತಿ ಮತ್ತು ಒಳ ಮೀಸಲಾತಿ ವರ್ಗದಲ್ಲಿ ಅಭ್ಯರ್ಥಿಗಳು ಇಚ್ಛಿಸುವ ಆಯ್ಕೆಯನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು.
ಮೀಸಲಿರಿಸಿದ ವರ್ಗಗಳಲ್ಲಿ ಸಮತಳ ಮೀಸಲಾತಿಗಳ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ವರ್ಗಕ್ಕೆ ಸೇರಿದ ಇತರೆ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು.
ಎ) ಅಂಗವಿಕಲ ಅಭ್ಯರ್ಥಿ: ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ ಅಂಗವಿಕಲರಿಗೆ ಮೀಸಲಿರಿಸಿದ ಹುದ್ದೆಗಳನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರಗಳನ್ನು ಕರ್ನಾಟಕ ಸರ್ಕಾರವು ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರದ ದೃಢೀಕೃತ ಪ್ರತಿಯನ್ನು ಲಗತ್ತಿಸತಕ್ಕದ್ದು. ಇಲ್ಲವಾದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಬಿ) ಗ್ರಾಮೀಣ ಅಭ್ಯರ್ಥಿ: ಗ್ರಾಮೀಣ ಮೀಸಲಾತಿ ಕೋರುವ ಅಭ್ಯರ್ಥಿಗಳು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರವನ್ನು ಶಾಲಾ ಮುಖ್ಯೋಪಾಧ್ಯಾಯರ ಸಹಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೇಲು ರುಜು ಪಡೆದು ದೃಢೀಕರಿಸಿ ಲಗತ್ತಿಸತಕ್ಕದ್ದು ಹಾಗೂ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿ ಕೋರಲು ಇಚ್ಛಿಸಿದಲ್ಲಿ ಈ ಪ್ರಮಾಣ ಪತ್ರವಲ್ಲದೇ ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಪ್ರಮಾಣ ಪತ್ರವನ್ನು ಪಡೆದು ದೃಢೀಕರಿಸಿ ಕಡ್ಡಾಯವಾಗಿ ಲಗತ್ತಿಸತಕ್ಕದ್ದು. ಇಲ್ಲವಾದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಸಿ) ಕನ್ನಡ ಮಾಧ್ಯಮ ಅಭ್ಯರ್ಥಿ: ಕನ್ನಡ ಮಾಧ್ಯಮ ಮೀಸಲಾತಿ ಕೋರುವ ಅಭ್ಯರ್ಥಿಗಳು ಪ್ರಮಾಣ ಪತ್ರವನ್ನು ಶಾಲಾ ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ಪಡೆದ ಪ್ರಮಾಣ ಪತ್ರವನ್ನು ದೃಢೀಕರಿಸಿ ಲಗತ್ತಿಸತಕ್ಕದ್ದು.
ಡಿ) ಯೋಜನಾ ನಿರಾಶ್ರಿತರು: ಸರ್ಕಾರದ ಆದೇಶ ಅನುಸಾರ ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸರ್ಕಾರದ ಸಂಬಂಧಪಟ್ಟ ಅಧಿಸೂಚನೆ ಪ್ರಕಾರ ದೃಢೀಕೃತ ಪ್ರಮಾಣ ಪತ್ರ ಲಗತ್ತಿಸತಕ್ಕದ್ದು. ಇಲ್ಲವಾದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಇ) ಮಾಜಿ ಸೈನಿಕ ಅಭ್ಯರ್ಥಿ: ಮಾಜಿ ಸೈನಿಕ ಅಂದರೆ ಭೂದಳ, ನೌಕಾದಳ ಮತ್ತು ವಾಯುದಳದಲ್ಲಿ ಯಾವುದೇ ಶ್ರೇಣಿಯಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ. ಇವರು ಸರ್ಕಾರದ ಜಾರಿಯಲ್ಲಿರುವ ನಿಯಮಗಳನ್ವಯ ಮಾಜಿ ಸೈನಿಕ ಅಭ್ಯರ್ಥಿ ಪ್ರಮಾಣ ಪತ್ರವನ್ನು ಪಡೆದು ದೃಢೀಕರಿಸಿ ಲಗತ್ತಿಸತಕ್ಕದ್ದು. ಇಲ್ಲವಾದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಜನ್ಮ ದಿನಾಂಕದ ದೃಢೀಕರಣಕ್ಕಾಗಿ ದೃಢೀಕರಿಸಿದ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ ಅಥವಾ ಶಾಲಾ ವರ್ಗಾವಣೆ ಪತ್ರ ಅಥವಾ ಕ್ಯುಮ್ಯೂಲೇಟೀವ್ ರೆಕಾರ್ಡ್ ದೃಢೀಕರಣ ಪತ್ರ ಲಗತ್ತಿಸತಕ್ಕದ್ದು. ಇಲ್ಲವಾದಲ್ಲಿ ಅರ್ಜಿ ತಿರಸ್ಕರಿಸಲಾಗುವುದು. ವಿದ್ಯಾರ್ಹತೆಗೆ ಸಂಬಂಧಿಸಿದ ದೃಢೀಕರಿಸಿದ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಲಗತ್ತಿಸತಕ್ಕದ್ದು ಹಾಗೂ ಎಲ್ಲಾ ವರ್ಷಗಳ/ಸೆಮಿಸ್ಟರ್ಗಳ ಅಂಕಗಳನ್ನು ಒಟ್ಟು ಪಡೆದ ಅಂಕಗಳನ್ನು ಮತ್ತು ಶೇಕಡಾವಾರು ಅಂಕಗಳನ್ನು ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸತಕ್ಕದ್ದು.
ಲಿಖಿತ ಪರೀಕ್ಷೆ / ಸಂದರ್ಶನ / ಕೌಶಲ್ಯ ಪರೀಕ್ಷೆಗೆ ಕರೆಯಲ್ಪಟ್ಟ ಅಭ್ಯರ್ಥಿಗಳು ತಮ್ಮ ಸ್ವಂತ ವೆಚ್ಚದಲ್ಲಿ ಹಾಜರಾಗಬೇಕು.
ಯಾವುದೇ ಪ್ರಯಾಣ ಭತ್ಯೆ / ದಿನ ಭತ್ಯೆಗಳನ್ನು ನೀಡಲಾಗುವುದಿಲ್ಲ.
ಲಿಖಿತ ಪರೀಕ್ಷೆಯ ದಿನಾಂಕ, ವೇಳೆ, ಸ್ಥಳ ಇವುಗಳ ವಿವರವನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಕನ್ನಡ ಭಾಷೆ ಪರಿಜ್ಞಾನ ಅಂದರೆ ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
ಅರ್ಜಿ ಮೇಲ್ಭಾಗದಲ್ಲಿ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 1 ಭಾವಚಿತ್ರವನ್ನು ಅಂಟಿಸಿ ಅದರ ಮೇಲೆ ಅರ್ಜಿದಾರರು ಸಹಿ ಮಾಡತಕ್ಕದ್ದು. 3 ಭಾವಚಿತ್ರಗಳಿಗೆ ಹಿಂಭಾಗದಲ್ಲಿ ಸಹಿ ಮಾಡಿ ಅರ್ಜಿಯೊಂದಿಗೆ ಪ್ರತ್ಯೇಕ ಕವರ್ನಲ್ಲಿ ಹಾಕಿ ಲಗತ್ತಿಸತಕ್ಕದ್ದು.
ಅಭ್ಯರ್ಥಿಗಳು ಈಗಾಗಲೇ ಯಾವುದಾದರೂ ಸಂಸ್ಥೆಯಲ್ಲಿ ಅನುಮತಿಯೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಕಾರ್ಯ ನಿರ್ವಹಿಸುತ್ತಿದ್ದಲ್ಲಿ ಅಂತಹ ಸಂಸ್ಥೆಯ ಮುಖ್ಯಸ್ಥರ 12. ನೇಮಕಾತಿ ಪ್ರಕ್ರಿಯೆಯನ್ನು ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣವನ್ನು ನೀಡದೇ ರದ್ದುಗೊಳಿಸುವ ಅಥವಾ ಮುಂದೂಡುವ ಅಧಿಕಾರವನ್ನು ಬ್ಯಾಂಕು ಹೊಂದಿರುತ್ತದೆ.
ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಅವಧಿಯವರೆಗೆ ಕಡ್ಡಾಯ ಪರೀಕ್ಷಾರ್ಥ ಸೇವೆ ಸಲ್ಲಿಸಬೇಕು. 14. ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳು ಹಾಗೂ ಆದೇಶಕ್ಕೆ ಒಳಪಟ್ಟಿರುತ್ತದೆ.
ಪೂರ್ಣವಾಗಿ ಭರ್ತಿ ಮಾಡದೇ ಇರುವಂತಹ, ದೃಢೀಕೃತ ದಾಖಲಾತಿಗಳೆಲ್ಲವನ್ನೂ ಲಗತ್ತಿಸದೇ ಇರುವಂತಹ, ಅರ್ಜಿ ಶುಲ್ಕದ ಡಿ.ಡಿ. ಅಥವಾ ಪೇ ಆರ್ಡರ್ ಅನ್ನು ಲಗತ್ತಿಸದೇ ಇರುವಂತಹ, ಸಹಿ ಮಾಡದೇ ಇರುವಂತಹ ಹಾಗೂ ನಿಗದಿಪಡಿಸಿದ ದಿನಾಂಕದೊಳಗಾಗಿ ಬ್ಯಾಂಕಿಗೆ ತಲುಪದೆ ಇರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು
ಆಯ್ಕೆಯಾದ ಶೀಘ್ರಲಿಪಿಗಾರರು, ಕಿರಿಯ ಸಹಾಯಕರು/ಕ್ಷೇತ್ರಾಧಿಕಾರಿಗಳು/ನಗದು ಗುಮಾಸ್ತರು ಭದ್ರತಾ ಠೇವಣಿ ರೂ.30,000/- ಗಳನ್ನು ಹಾಗೂ ರೂ.1,00,000/-ಗಳ ಇಂಡೆಮ್ನಿಟಿ ಬಾಂಡನ್ನು ಸಲ್ಲಿಸಬೇಕು. ವಾಹನ ಚಾಲಕರು, ಅಟೆಂಡರ್ ಮತ್ತು ಜಲಗಾರರು ಭದ್ರತಾ ಠೇವಣಿ ರೂ.15,000/- ಗಳನ್ನು ಹಾಗೂ ರೂ.50,000/- ಗಳ ಇಂಡೆಮ್ನಿಟಿ ಬಾಂಡನ್ನು ಸಲ್ಲಿಸಬೇಕು.
ಕನಿಷ್ಟ 5 ವರ್ಷಗಳ ಅವಧಿಯವರೆಗೆ ಬ್ಯಾಂಕಿನಲ್ಲಿ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಪತ್ರವನ್ನು ಬ್ಯಾಂಕಿಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಭದ್ರತಾ ಠೇವಣಿಯನ್ನು ಬ್ಯಾಂಕಿಗೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. 17. ನೇಮಕಾತಿಯಿಂದ ಭರ್ತಿ ಮಾಡುವ ಹುದ್ದೆಗಳನ್ನು ಹೆಚ್ಚು ಅಥವಾ ಕಡಿಮೆ ಮಾಡುವ ಅಧಿಕಾರವು ಬ್ಯಾಂಕಿನ ಆಡಳಿತ ಮಂಡಳಿಗೆ ಇರುತ್ತದೆ. 18. ಅಭ್ಯರ್ಥಿಗಳು ಗುರುತಿಗಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಅಥವಾ ವಾಹನ ಪರವಾನಿಗೆ ಇವುಗಳಲ್ಲಿ ಯಾವುದಾದರೊಂದನ್ನು ಸ್ವಯಂ ದೃಢೀಕರಿಸಿ ಲಗತ್ತಿಸತಕ್ಕದ್ದು. 19. ಹೆಚ್ಚಿನ ವಿವರಗಳಿಗೆ ಕಛೇರಿ ವೇಳೆಯಲ್ಲಿ ಬ್ಯಾಂಕಿನ ಪ್ರಧಾನ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಎಲ್ಲೆಲ್ಲಿ ಎಷ್ಟು ಹುದ್ದೆ :
ಗುಜರಾತ್ – 354 ಹುದ್ದೆಗಳು ಕರ್ನಾಟಕ – 278 ಹುದ್ದೆಗಳು ಮಧ್ಯಪ್ರದೇಶ – 162 ಹುದ್ದೆಗಳು ಛತ್ತೀಸ್ ಗಢ – 52 ಹುದ್ದೆಗಳು ತಮಿಳುನಾಡು – 276 ಹುದ್ದೆಗಳು ರಾಜಸ್ತಾನ – 104 ಹುದ್ದೆಗಳು ಒಟ್ಟು – 1226 ಹುದ್ದೆಗಳು
ವಿದ್ಯಾರ್ಹತೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ)ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ : ಡಿ.1, 2021 ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/- ರೂ.ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್ ಆರ್ ಒ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು ರೂ. 750/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಎಸ್ ಬಿಐ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನಂತರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.