Category: Dakshina Kannada

  • MRPL Recruitment 2024: ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನಲ್ಲಿ ಹುದ್ದೆ; 50 ಸಾವಿರದಿಂದ 1 ಲಕ್ಷದ 60 ಸಾವಿರದವರಗೆ ವೇತನ!

    MRPL Recruitment 2024: ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನಲ್ಲಿ ಹುದ್ದೆ; 50 ಸಾವಿರದಿಂದ 1 ಲಕ್ಷದ 60 ಸಾವಿರದವರಗೆ ವೇತನ!

    MRPL Recruitment 2024: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಜನವರಿ 2024 ರ MRPL ರ ಅಧಿಸೂಚನೆಯ ಮೂಲಕ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆ.24 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 25-01-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2024

    ಹುದ್ದೆ: ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಒಟ್ಟು 11 ಹುದ್ದೆಗಳಿದೆ.

    ವಿದ್ಯಾರ್ಹತೆ: ಎಂಆರ್‌ಪಿಎಲ್‌ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮಾರ್ಕೆಟಿಂಗ್/ಆಪರೇಷನ್ ಮ್ಯಾನೇಜ್‌ಮೆಂಟ್/ಸಪ್ಲೈ ಚೈನ್/ಬಿಸಿನೆಸ್ ಮ್ಯಾನೇಜ್‌ಮೆಂಟ್/ಅನಾಲಿಟಿಕ್ಸ್/ಇಂಟರ್‌ನ್ಯಾಶನಲ್ ಟ್ರೇಡ್‌ನಲ್ಲಿ ಎರಡು ವರ್ಷಗಳ ಎಂಬಿಎ ಅಥವಾ ಮಾರ್ಕೆಟಿಂಗ್/ಇಂಟರ್‌ನ್ಯಾಶನಲ್ ಟ್ರೇಡ್/ಸಪ್ಲೈ ಚೈನ್‌ನಲ್ಲಿ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾದೊಂದಿಗೆ ಪದವಿ ಪಡೆದಿರಬೇಕು.

    ವೇತನ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ ಅಧಿಸೂಚನೆಯ ಪ್ರಕಾರ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ 50,000 ರಿಂದ 1,60,000 ರೂ. ವೇತನ ನೀಡಲಾಗುತ್ತದೆ.

    ಅರ್ಜಿ ಶುಲ್ಕ: ಸಾಮಾನ್ಯ, OBC, EWS ವರ್ಗದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ರೂ.118 (ರೂ. 100 ಅರ್ಜಿ ಶುಲ್ಕ ಮತ್ತು ರೂ. 18 ಜಿಎಸ್‌ಟಿ) ಪಾವತಿಸಬೇಕಾಗುತ್ತದೆ. ಯಾವುದೇ ಹೆಚ್ಚುವರಿ ಶುಲ್ಕಗಳನ್ನು (ಬ್ಯಾಂಕ್ ಸೇವಾ ಶುಲ್ಕಗಳು ಇತ್ಯಾದಿ) ಅರ್ಜಿದಾರರು ಭರಿಸಬೇಕಾಗುತ್ತದೆ
    SC/ST/PwBD/ ಮಾಜಿ ಸೈನಿಕ ವರ್ಗಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

    ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು.
    OBC (NCL) ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
    ಯುಆರ್/ಇಡಬ್ಲ್ಯೂಎಸ್/ಒಬಿಸಿ(ಎನ್‌ಸಿಎಲ್) ಅಭ್ಯರ್ಥಿಗಳಿಗೆ ಮೇಲೆ ನಿರ್ದಿಷ್ಟಪಡಿಸಿದ ಗರಿಷ್ಠ ವಯಸ್ಸಿನ ಮಿತಿಯ ಜೊತೆಗೆ, 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
    ಮಾಜಿ ಸೈನಿಕರಿಗೆ ವಯೋಮಿತಿಯಲ್ಲಿ ಸಡಿಲಿಕೆಯು ಭಾರತ ಸರ್ಕಾರದ ನಿಯಮಗಳ ಪ್ರಕಾರ ಇರುತ್ತದೆ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಅನುಷ್ಠಾನಗೊಳ್ಳುತ್ತಿರುವ ಸಂಜೀವಿನಿ‌ – ಎನ್ ಆರ್ ಎಲ್ ಎಂ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಿಗೆ ಹೊರಗುತ್ತಿಗೆ ಸಂಸ್ಥೆ ಮೆ||ಪನ್ನಗ ಎಂಟರ್ಪ್ರೈಸ್ ಮೈಸೂರು ಮೂಲಕ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ : 14-07-2021 ರಿಂದ 29-07-2021 ರವರೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅಭ್ಯರ್ಥಿಗಳು ಅರ್ಜಿಯನ್ನು https://jobsksrlps.karnataka.gov.in ಮೂಲಕ ಮಾತ್ರ ಸ್ವೀಕರಿಸಲಾಗುವುದು.

    ವಯೋಮಿತಿ : 45 ವರ್ಷಗಳ ಒಳಗಿರಬೇಕು.

    ಆಯ್ಕೆ ವಿಧಾನ‌: ನಿಯಮಾನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಪ್ರಸ್ತುತ ದಾಖಲೆಗಳ ಆಧಾರದಲ್ಲಿ ಹೆಚ್ಚು ಅಂಕ ಗಳಿಸಿದ 3 ಜನರನ್ನು ( ಖಾಲಿ ಹುದ್ದೆಗೆ 1: 3 ಅನುಪಾತದಲ್ಲಿ) ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

    ಹುದ್ದೆ : ಜಿಲ್ಲಾ ವ್ಯವಸ್ಥಾಪಕರು‌– ಜಿಲ್ಲಾ ಪಂಚಾಯತ್ ಮಂಗಳೂರು ( 2 ಹುದ್ದೆ). ಈ ಹುದ್ದೆಗೆ ಪೂರ್ಣಕಾಲಿಕ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ.30,000/- ವೇತನವಿರುತ್ತದೆ.

    ಜಿಲ್ಲಾ ಎಂಐಎಸ್ ಅಸಿಸ್ಟೆಂಟ್ / ಡಾಟಾ ಎಂಟ್ರಿ ಅಪರೇಟರ್ ‌- ಜಿಲ್ಲಾ ಪಂಚಾಯತ್ ಮಂಗಳೂರು ( 1 ಹುದ್ದೆ). ಈ ಹುದ್ದೆಗೆ ಪೂರ್ಣಕಾಲಿಕ ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ.20,500/- ವೇತನವಿರುತ್ತದೆ.

    ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು‌– ತಾಲೂಕು ಪಂಚಾಯತ್ ಮಂಗಳೂರು ( 1 ಹುದ್ದೆ). ಬಂಟ್ವಾಳ – 1 ಹುದ್ದೆ, ಪುತ್ತೂರು – 1 ಹುದ್ದೆ, ಬೆಳ್ತಂಗಡಿ -1 ಹುದ್ದೆ, ಸುಳ್ಯ – 1 ಹುದ್ದೆ. ಈ ಹುದ್ದೆಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ.28,000/- ವೇತನವಿರುತ್ತದೆ.

    ವಲಯ ಮೇಲ್ವಿಚಾರಕರು ‌-ತಾಲೂಕು ಪಂಚಾಯತ್ ಮಂಗಳೂರು ( 1 ಹುದ್ದೆ). ಬಂಟ್ವಾಳ – 1 ಹುದ್ದೆ, ಪುತ್ತೂರು – 1 ಹುದ್ದೆ, ಬೆಳ್ತಂಗಡಿ -1 ಹುದ್ದೆ, ಸುಳ್ಯ – 1 ಹುದ್ದೆ. ಈ ಹುದ್ದೆಗೆ ಪೂರ್ಣಕಾಲಿಕ ಪದವಿ ಪಡೆದಿರಬೇಕು. ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ.18,000/- ವೇತನವಿರುತ್ತದೆ.

  • ಮಂಗಳೂರು ವಿಶ್ವವಿದ್ಯಾನಿಲಯ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಮಂಗಳೂರು ವಿಶ್ವವಿದ್ಯಾನಿಲಯ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ: ಇಂಗ್ಲೀಷ್ ವಿಷಯದಲ್ಲಿ 2020-21 ನೇ ಶೈಕ್ಷಣಿಕ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ( ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50%) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಕೆ ಹೇಗೆ? ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ ನಿಂದ ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳ ( SSLC ಮಾರ್ಕ್ಸ್ ಕಾರ್ಡ್, ಪಿಜಿ ಮಾರ್ಕ್ಸ್‌ ಕಾರ್ಡ್, ಕಾಸ್ಟ್ ಸರ್ಟಿಫಿಕೇಟ್, ಸರ್ವಿಸ್ ಸರ್ಟಿಫಿಕೇಟ್, ಯುಜಿಸಿ ಎನ್.ಇ.ಟಿ/ ಎಸ್.ಎಲ್.ಇ.ಟಿ ಉತ್ತೀರ್ಣತೆ/ ಎಂಫಿಲ್ / ಪಿ.ಹೆಚ್.ಡಿ ಪದವಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಿರತಕ್ಕದ್ದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2021 ರಂದು ಸಂಜೆ 5.30 ರ ಒಳಗಾಗಿ ಕುಲಸಚಿವರ ಕಚೇರಿಯ [email protected] ಗೆ ಇ- ಮೇಲ್ ಮೂಲಕ ಸಲ್ಲಿಸಬಹುದು

    ಆದ್ಯತೆ : ಯುಜಿಸಿ ಎನ್.ಇ.ಟಿ/ಎಸ್.ಎಲ್.ಇ.ಟಿ ಉತ್ತೀರ್ಣತೆ/ ಎಂಫಿಲ್/ ಪಿಹೆಚ್‌ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

    ಅಭ್ಯರ್ಥಿಗಳು ತಮ್ಮ ಇ- ಮೇಲ್ ವಿಳಾಸ ಮತ್ತು ದೂರವಾಣಿ / ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.

    ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ www.mangaloreuniversity.ac.in ನಲ್ಲಿ ಪ್ರಕಟಿಸಲಾಗುವುದು.

  • ದ.ಕ, ಮಂಗಳೂರು ನ್ಯಾಯಾಲಯ : ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ

    ದ.ಕ, ಮಂಗಳೂರು ನ್ಯಾಯಾಲಯ : ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ

    ಮಂಗಳೂರು ಮತ್ತು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.

    ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳನ್ನು ಮುಗಿಸಿ ಪ್ರಸ್ತುತ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಸೆಲೆಕ್ಷನ್ ಲಿಸ್ಟ್ ಅನ್ನು ಚೆಕ್ ಮಾಡಬಹುದು.

    ಅಭ್ಯರ್ಥಿಗಳು ಆಯ್ಕೆ ಪಟ್ಟಿಯಲ್ಲಿ ತಮ್ಮ ಅಪ್ಲಿಕೇಶನ್ ನಂಬರ್, ಹೆಸರು, ಲಿಖಿತ ಪರೀಕ್ಷೆಗಳ ಗಳಿಸಿದ ಅಂಕ ಮತ್ತು ಇತರೆ ಮಾಹಿತಿಗಳನ್ನು ನೀಡಲಾಗಿದೆ.

    ಅಫೀಶಿಯಲ್ ವೆಬ್‌ಸೈಟ್‌ https://districts.ecourts.gov.in/dakshinakannada

  • DKMUL : 80 ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    DKMUL : 80 ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 80 ಹುದ್ದೆಗಳನ್ನು ನೇರನೇಮಕಾತಿ ಮಾಡುವ ಸಂಬಂಧ ದಿನಾಂಕ 26-04-2021 ರ ದಿನಪತ್ರಿಕೆಗಳಲ್ಲಿ ಸಂಕ್ಷಿಪ್ತ ನೇಮಕಾತಿ ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಿತ್ತು. ಕೋವಿಡ್-19, ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರವು ವಿಧಿಸಿರುವ ಕಠಿಣ ನಿರ್ಬಂಧಗಳು ಮತ್ತು ಲಾಕ್ ಡೌನ್ ಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅನಾನುಕೂಲವಾಗಿರುವುದರಿಂದ 80 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 29-06-2021 ರವರೆಗೆ ವಿಸ್ತರಿಸಲಾಗಿದೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021
    ಆನ್ಲೈನ್ ಅರ್ಜಿಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 30-06-2021 ಸಂಜೆ 5-30 ರವರೆಗೆ.

    ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ದಕ್ಷಿಣ ಕನ್ನಡ ನ್ಯಾಯಾಲಯ : 34 ಜವಾನ ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    ದಕ್ಷಿಣ ಕನ್ನಡ ನ್ಯಾಯಾಲಯ : 34 ಜವಾನ ಹುದ್ದೆಗಳ ಅರ್ಜಿ ಅವಧಿ ವಿಸ್ತರಣೆ

    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಯ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇದ್ದ ಪಿಯೋನ್ (ಜವಾನ) ಹುದ್ದೆಗಳ ನೇಮಕಾತಿಗೆ ಕಳೆದ ತಿಂಗಳು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಿದೆ. ಈ ಹಿಂದೆ ಮೇ.25 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸುವ ನ್ಯಾಯಾಲಯವು ಜುಲೈ 03, 2021 ರವರೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಹಾಗೂ ಜುಲೈ 07 ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ