Category: Govt Jobs

  • ದಿ ಹನುಮಂತನಗರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ

    ದಿ ಹನುಮಂತನಗರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸಂದರ್ಶನ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆಯ ವಿವರ : ವ್ಯವಸ್ಥಾಪಕ ನಿರ್ದೇಶಕ

    ವಿದ್ಯಾರ್ಹತೆ : ಪದವಿ ಜೊತೆಗೆ (ಎ) ಸಿಎಐಐಬಿ/ ಡಿಬಿಎಫ್/ ಡಿಪ್ಲೋಮಾ ಇನ್ ಕೋ ಅಪರೇಟಿವ್ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ಅರ್ಹತೆ. ಅಥವಾ ( ಬಿ) ಚಾರ್ಟಡ್/ ಕಾಸ್ಟ್ ಅಕೌಂಟೆಂಟ್ 🙁 ಸಿ) ಯಾವುದೇ ಸ್ನಾತಕೋತ್ತರ ಪದವಿ.

    ವಯಸ್ಸು : 35 ವರ್ಷ ಮೇಲ್ಪಟ್ಟು 65 ವರ್ಷದೊಳಗೆ.

    ವೇತನ : 67,550-1650-72500-1900-83900-2200-97100-2500-104600( negotiable)

    ಅನುಭವ :ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಹಂತದಲ್ಲಿ ಕನಿಷ್ಠ ಎಂಟು ವರ್ಷಗಳ ಸೇವಾ ಅನುಭವ ಇರತಕ್ಕದ್ದು.

    ಅರ್ಜಿ ಶುಲ್ಕ :ರೂ.600/- ( including gst)

    ಅರ್ಜಿ ಸಲ್ಲಿಸುವ ಅವಧಿ : ದಿನಾಂಕ 17-07-2021 ರಿಂದ ದಿನಾಂಕ 31-07-2021 ಸಂಜೆ 5 ಗಂಟೆಯೊಳಗೆ.

    ಅರ್ಜಿ ಸಲ್ಲಿಸುವ ವಿಧಾನ : ಅರ್ಹ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್‌ ಅರ್ಜಿ ನಮೂನೆಯನ್ನು www.hcb.org.in ನಿಂದ ಡೌನ್‌ಲೋಡ್ ಮಾಡಿಕೊಂಡು ಅಥವಾ ಬ್ಯಾಂಕಿನಿಂದ ಖುದ್ದು ಪಡೆದು ಭರ್ತಿ ಮಾಡಿ, ಅರ್ಜಿಯ ಜೊತೆ ಶುಲ್ಕವನ್ನು ‘ದಿ ಹನುಮಂತನಗರ ಸಹಕಾರಿ ಬ್ಯಾಂಕ್ ನಿಯಮಿತ’ ಈ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯವಾಗುವಂತೆ NRFT/ pay order/ cash ಮೂಲಕ ಪಾವತಿಸಿ, ಅರ್ಜಿಯ ಜೊತೆ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಬ್ಯಾಂಕಿನ ವಿಳಾಸಕ್ಕೆ ಕಳುಹಿಸುವುದು.

    ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 91 9449974455 / 9742573122, 080-26507976, 22428985

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    Email : [email protected]

  • ಆಡಳಿತ ತರಬೇತಿ ಸಂಸ್ಥೆ, ಮೈಸೂರು : 15 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

    ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ‌ಹೊರಡಿಸಲಾಗಿದೆ.

    ಹುದ್ದೆ ವಿವರ : ಬೋಧಕರು ( ಸಾರ್ವಜನಿಕ ಆಡಳಿತ) -02
    ಬೋಧಕರು (ಅರ್ಥಶಾಸ್ತ್ರ ಮತ್ತು ಆಡಳಿತ ) -01
    ಬೋಧಕರು ( ಮಹಿಳಾ ಅಧ್ಯಯನ ) – 01
    ಬೋಧಕರು ( ಅಭಿವೃದ್ಧಿ ಅರ್ಥಶಾಸ್ತ್ರ ಮತ್ತು ಯೋಜನೆ)- 01
    ಬೋಧಕರು ( ನಡವಳಿ ವಿಜ್ಞಾನ ) -01

    ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ, ಮೈಸೂರು

    ಬೋಧಕರು ( ವಿ.ನಿ‌.ಕೇಂದ್ರ) – 2 ಹುದ್ದೆ
    ಕಮ್ಯುನಿಕೇಷನ್ – ಐಟಿ ಅಧಿಕಾರಿ (ವಿ.ನಿ.ಕೇಂದ್ರ) – 01
    ರಿಸರ್ಚ್ – ಟ್ರೈನಿಂಗ್ ಅಸೋಸಿಯೇಟ್ಸ್ : 02 ಹುದ್ದೆ
    ಸಿಸ್ಟಂ ಆಫೀಸರ್ – 02 ಹುದ್ದೆ
    ಅಸಿಸ್ಟೆಂಟ್ – 02 ಹುದ್ದೆ

    ಒಟ್ಟು ಹುದ್ದೆಗಳು : 15 ಹುದ್ದೆಗಳು

    ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ ವಿವರವು ಸಂಸ್ಥೆಯ ವೆಬ್‌ಸೈಟ್‌ www.atimysore.gov.in ನಲ್ಲಿ ಲಭ್ಯವಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿನಾಂಕ 28-07-2021 ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ-ಮೇಲ್ ಮೂಲಕ ಮತ್ತು [email protected] ಮತ್ತು [email protected] ವಿಳಾಸಕ್ಕೆ ಕಳುಹಿಸುವುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿಯೆ ಹಾಜರಾಗುವುದು.

    ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವುದು :

    0821-2520906( ಆಫೀಸ್) , 2520905(R),

  • ಮಂಗಳೂರಿನ ಬಾಲಭವನದಲ್ಲಿ ಉದ್ಯೋಗವಕಾಶ

    ಮಂಗಳೂರು ಜಿಲ್ಲಾ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಸಹಾಯಕ/ ಸಂಯೋಜಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19, ಅಕ್ಟೋಬರ್ 2021

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು.

    ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ಮಾಸಿಕ ವೇತನ ನೀಡಲಾಗುತ್ತದೆ.

    ಅಗತ್ಯ ದಾಖಲೆಗಳು : ಆಧಾರ್ ಕಾರ್ಡ್, ಪದವು ಪಾಸ್ ಸರ್ಟಿಫಿಕೇಟ್, ಈ ಹಿಂದೆ ಉದ್ಯೋಗ ಮಾಡಿದ್ದಲ್ಲಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳು.

    ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

    ದೂರವಾಣಿ ಸಂಖ್ಯೆ : 0824-2451254

  • ಸೇನಾ ಪ್ರವೇಶ ಪರೀಕ್ಷೆ ಜುಲೈ 25 ಕ್ಕೆ

    ಭಾರತೀಯ ಸೇನೆಯು ನಡೆಸುವ ಸಾಮಾನ್ಯ ಪರೀಕ್ಷೆಯು ( ಸಿಇಇ) ಜುಲೈ 25 ರಂದು ರಾಜ್ಯದ ಮೂರು ಕೇಂದ್ರಗಳಲ್ಲಿ ನಡೆಯಲಿದೆ.
    ವೈದ್ಯಕೀಯ ಸಾಮರ್ಥ್ಯ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಲಿಖಿತ ಪರೀಕ್ಷೆಗೆ ಹಾಜರಾಗಬಹುದು.

    ಈ ಮೊದಲು ಎಪ್ರಿಲ್ 25 ರಂದು ಸಿಇಇ ನಿಗದಿ ಪಡಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು.

    ಬೆಂಗಳೂರಿನ ಕಾಮರಾಜ ರಸ್ತೆಯಲ್ಲಿರುವ ಸೇನಾ ಶಾಲೆ, ಮಂಗಳೂರಿನ ಮೂಡುಬಿದಿರೆಯಲ್ಲಿರುವ ಆಳ್ವಾಸ್ ಸಂಸ್ಥೆ, ಬೆಳಗಾವಿಯ ಕೆಎಲ್ ಇ ಸೊಸೈಟಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸೇನಾ ಪ್ರಕಟಣೆ ತಿಳಿಸಿದೆ.

  • SSC ನಲ್ಲಿ ಭರ್ಜರಿ ಉದ್ಯೋಗವಕಾಶ, 25,271 ಹುದ್ದೆ: SSLC ಪಾಸಾದವರಿಗೆ ಆದ್ಯತೆ

    ಸಿಬ್ಬಂದಿ ನೇಮಕಾತಿ ಆಯೋಗವು ( ಎಸ್ ಎಸ್ ಸಿ) ಜೆನರಲ್ ಡ್ಯೂಟಿ ಕಾನ್ಸ್‌ಟೇಬಲ್ ಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, 31-08-2021 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ ಹಾಗೂ ಇನ್ನಿತರ ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.

    ಹುದ್ದೆಗಳ ವಿವರ : ಗಡಿ ಭದ್ರತಾ ಪಡೆ: 7545
    ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 8464
    ಸಶಸ್ತ್ರ ಸೀಮಾ ಬಲ : 3806
    ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ : 1431
    ಅಸ್ಸಾಂ ರೈಫಲ್ಸ್ : 3785
    ಸೆಕ್ರರಿಯೇಟ್ ಸೆಕ್ಯುರಿಟಿ ಫೋರ್ಸ್ : 240

    ಒಟ್ಟು ಹುದ್ದೆಗಳ ಸಂಖ್ಯೆ : 25,271

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021
    ಆನ್ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಕಟ್ಟಲು ಕೊನೆಯ ದಿನಾಂಕ : 02-09-2021
    ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 04-09-2021

    ಶುಲ್ಕ : ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ ರೂ.100/- , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
    ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಎಸ್ ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಸಲ್ಲಿಸಬಹುದು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌ 23 ವರ್ಷ ವಯೋಮಿತಿ ಮೀರಿರಬಾರದು.

    ವಿದ್ಯಾರ್ಹತೆ : ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹೆಚ್ಚಿನ ವಿವರಗಳಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • NABARD : 162 ಹುದ್ದೆಗಳು

    ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( NABARD) ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021

    ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ 148 ಹುದ್ದೆಗಳು
    ರಾಜಭಾಷಾ 05 ಹುದ್ದೆಗಳು
    ಸೆಕ್ಯುರಿಟಿ ಸರ್ವಿಸ್ 02 ಹುದ್ದೆಗಳು
    ಮ್ಯಾನೇಜರ್ ಇನ್ ಗ್ರೇಡ್ ಬಿ 07 ಹುದ್ದೆಗಳು

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ‌ರೂ. 100/- ಹಾಗೂ ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ವಯೋಮಿತಿ : ಜುಲೈ 1 ಕ್ಕೆ 2021 ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷದೊಳಗಿನವರಾಗಿರಬೇಕು. ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಹಾಗೂ ಗರಿಷ್ಠ 30 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಪದವಿ, ಸ್ನಾತಕೋತ್ತರ ಪದವಿ ಅಥವಾ ಹುದ್ದೆಗಳಿಗೆ ‌ಸಂಬಂಧಿಸಿದಂತೆ ಡಿಪ್ಲೋಮಾ ಕೋರ್ಸ್ ಪಡೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಸೂಚನೆಯನ್ನು ವೀಕ್ಷಿಸಬಹುದು.

    ಆಯ್ಕೆ ಪ್ರಕ್ರಿಯೆ : ಮೂರು ಹಂತಗಳಲ್ಲಿ ನೇಮಕಾತಿಯು ನಡೆಯಲಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.