Category: Govt Jobs

  • UAS ಧಾರವಾಡ : ಪಾರ್ಟ್ ಟೈಂ ಟೀಚರ್ ಹುದ್ದೆ ಗೆ ನೇರ ಸಂದರ್ಶನ

    ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ 2020-21 ನೇ ಸಾಲಿನ 2 ನೇ‌ ಸೆಮಿಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಗ್ರಿಕಲ್ಚರ್ ಪ್ರೊಡಕ್ಷನ್ ಎಕಾನಮಿಕ್ಸ್ ವಿಷಯವನ್ನು ಬೋಧಿಸಲು ಈ ಕೆಳ ಕಾಣಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ” ಅರೆಕಾಲಿಕ ಉಪನ್ಯಾಸಕರು ” ಹುದ್ದೆಗೆ 179 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಪಾರ್ಟ್ ಟೈಂ ಟೀಚರ್
    ಹುದ್ದೆ ಸಂಖ್ಯೆ : 01
    ವಿದ್ಯಾರ್ಹತೆ : Ph.D ಇನ್ ಅಗ್ರಿಕಲ್ಚರ್ ಎಕಾನಮಿಕ್ಸ್ ಮತ್ತು ಪಿಜಿ ಟೀಚರ್ ಎಕ್ಸ್ ಪೀರಿಯನ್ಸ್ ಹೊಂದಿರಬೇಕು.

    ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಯೊಂದಿಗೆ ದಿನಾಂಕ : 20-07-2021 ರಂದು 11.00 ಗಂಟೆಗೆ.

    ಸಂದರ್ಶನಕ್ಕೆ ಡೀನ್ ( ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.

  • ಹಾಸನ ಅಂಗನವಾಡಿಯಲ್ಲಿ 109 ಹುದ್ದೆ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಜಿಲ್ಲೆಯ 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ‌ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ‌ಕೇಂದ್ರಗಳಲ್ಲಿ ಖಾಲಿಯಿರುವ 22 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 87 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆದೇಶ ಹೊರಡಿಸಿದೆ.

    ಆದೇಶ ಮತ್ತು ಮಾರ್ಗಸೂಚಿ ಪ್ರಕಾರ ಗೌರವಧನ ಸೇವೆಯ ಆಧಾರದಲ್ಲಿ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ‌ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-08-2021 ಗಂಟೆ 5.30

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.

    ವಯೋಮಿತಿ ‌18 ರಿಂದ 35 ವರ್ಷ ( ಈ ಅಧಿಸೂಚನೆಯ ಕೊನೆಯ ದಿನಾಂಕಕ್ಕೆ 35 ವರ್ಷ ಮೀರಿರಬಾರದು, ಮತ್ತು ವಿಕಲಚೇತನ ‌ಅಭ್ಯರ್ಥಿಗಳಿಗೆ 10/ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹಾಗೂ ಎಸ್ ಎಸ್ ಎಲ್ ಸಿ‌ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ ಮಾತ್ರ ಪರಿಗಣಿಸಲಾಗುವುದು.

    ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.

    ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಉತ್ತೀರ್ಣರಾಗಿರಬೇಕು. ಗರಿಷ್ಠ 9 ನೇ ತರಗತಿಯವರೆಗೆ ತೇರ್ಗಡೆ ಯಾಗಿರಬೇಕು. 9 ನೇ ತರಗತಿಯಿಂದ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದಲ್ಲಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಯು ವಿಧವೆ ಆದಲ್ಲಿ ‌ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ‌ಸಹಾಯಕಿ‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ‌ ಸಂಬಂಧಿಸಿದ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

    ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.

  • ಲೈಂಗಿಕ ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್, ಸರಕಾರಿ ಉದ್ಯೋಗದಲ್ಲಿ ಮೀಸಲಾತಿ

    ಲೈಂಗಿಕ ಅಲ್ಪಸಂಖ್ಯಾತರಿಗೆ ಸಂತೋಷದ ವಿಚಾರವನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸರಕಾರ ಮಹತ್ತರವಾದ ಘೋಷಣೆಯನ್ನು ಮಾಡಿದೆ.

    ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಶೇ.1 ರಷ್ಟು ಮೀಸಲಾತಿಯನ್ನು ಲೈಂಗಿಕ ಅಲ್ಪಸಂಖ್ಯಾತರಿಗೆ ನೀಡಬೇಕೆಂದು ಸರಕಾರ ಆದೇಶ ಹೊರಡಿಸಿದೆ.

    1977 ರ ಕರ್ನಾಟಕ ನಾಗರಿಕ ಸೇವೆಗಳ ( ಸಾಮಾನ್ಯ ನೇಮಕಾತಿ ) ನಿಯಮಗಳ ನಿಯಮ 9 ನ್ನು ತಿದ್ದುಪಡಿ ಮಾಡಲಾಗಿದೆ.

    ರಾಜ್ಯದಲ್ಲಿ ನಡೆಯುವ ಎಲ್ಲಾ ನೇಮಕಾತಿಗಳಲ್ಲಿ ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ. 1 ರಷ್ಟು ಮೀಸಲಾತಿ ನೀಡಲಾಗಿದೆ.

    ಸರಕಾರಿ ನೇರ ನೇಮಕಾತಿಯ ಸಂದರ್ಭದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಶೇ.1 ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಹೈಕೋರ್ಟ್ ಆದೇಶದ ಮೇರೆಗೆ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.

  • ಬೆಂಗಳೂರು ಯುನಿವರ್ಸಿಟಿ : ಬ್ಯಾಕ್ ಲಾಗ್ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ಮತ್ತು ಯು.ವಿ.ಸಿ.ಇ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವರಗಳು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳ ( ಬ್ಯಾಕ್ ಲಾಗ್) ಭರ್ತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ ( ಎಂಟು ಪ್ರತಿ) ಆಹ್ವಾನಿಸಲಾಗಿದೆ.

    ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಈ ತಿಂಗಳ 30 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

    ಹುದ್ದೆ: ಪ್ರೊಫೆಸರ್ , ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್

    ಅರ್ಜಿ ಶುಲ್ಕ : ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ರೂ. 250/-, ಅಸೋಸಿಯೇಟ್ ಪ್ರೊಫೆಸರ್ ಹಾಗೂ ಪ್ರೊಫೆಸರ್ ಹುದ್ದೆಗೆ ರೂ.500/-,ಜೊತೆಗೆ ಅಪ್ಲಿಕೇಶನ್ ಫೀಸ್ ರೂ.100/- ನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-07-2021( 30th July 2021) 5.00 ಗಂಟೆಯೊಳಗೆ.

  • ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ ಉಡುಪಿ : ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ

    2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಕೆಳಗೆ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

    ಹುದ್ದೆ : ಪಂಚಕರ್ಮ ತಜ್ಞ ವೈದ್ಯರು ( ಜಿಲ್ಲಾ ಆಸ್ಪತ್ರೆ ಉಡುಪಿ) : ಈ ಹುದ್ದೆಗೆ ಎಂಡಿ ಪಂಚಕರ್ಮ ಹೊಂದಿರಬೇಕು. 1 ಹುದ್ದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,790/- ವೇತನ ನಿಗದಿಪಡಿಸಲಾಗಿದೆ.

    ಆಡಿಯೋಲಾಜಿಸ್ಟ್ ( ಜಿಲ್ಲಾ ಆಸ್ಪತ್ರೆ ಉಡುಪಿ) : 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನ ನಿಗದಿಪಡಿಸಲಾಗಿದೆ.

    ಇನ್ಸ್ಟ್ರಕ್ಟರ್ : 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ವೇತನ ನಿಗದಿಪಡಿಸಲಾಗಿದೆ.

    ಡೆಂಟಲ್ ಹೈಜಿನಿಸ್ಟ್ : ( ಜಿಲ್ಲಾ ಆಸ್ಪತ್ರೆ ಉಡುಪಿ ): 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ವೇತನ ನಿಗದಿಪಡಿಸಲಾಗಿದೆ.

    LHV ( ನಗರ ಆರೋಗ್ಯ ಕೇಂದ್ರ ಉಡುಪಿ) : 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.12,600/- ವೇತನ ನಿಗದಿಪಡಿಸಲಾಗಿದೆ.

    ಸ್ಟಾಫ್ ನರ್ಸ್ : ( ಸಾರ್ವಜನಿಕ ಆಸ್ಪತ್ರೆ ಕುಂದಾಪುರ ( ಎಸ್.ಎನ್.ಸಿ.ಯು) : 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.13,225/- ವೇತನ ನಿಗದಿಪಡಿಸಲಾಗಿದೆ.

    ಸ್ಟಾಫ್ ನರ್ಸ್ : ( ಸಾರ್ವಜನಿಕ ಆಸ್ಪತ್ರೆ, ಕಾರ್ಕಳ ) 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.13,225/- ವೇತನ ನಿಗದಿಪಡಿಸಲಾಗಿದೆ.

    ANM ( ನಗರ ಆರೋಗ್ಯ ಕೇಂದ್ರ ಉಡುಪಿ ) 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.11,500/- ವೇತನ ನಿಗದಿಪಡಿಸಲಾಗಿದೆ.

    ANM : ( ಗ್ರಾಮೀಣ ಪ್ರದೇಶದ ಆರೋಗ್ಯ ಸಂಸ್ಥೆ ) 3 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.11,500/- ವೇತನ ನಿಗದಿಪಡಿಸಲಾಗಿದೆ.

    ಕಿರಿಯ ಪುರುಷ ಆರೋಗ್ಯ ಸಹಾಯಕ : 1 ಹುದ್ದೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.11,500/- ವೇತನ ನಿಗದಿಪಡಿಸಲಾಗಿದೆ.

    ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸುವುದು.
    ಅರ್ಹ ಅಭ್ಯರ್ಥಿಗಳಿಂದ ದಿನಾಂಕ 08-07-2021 ರಂದು 10.30 am ನಿಂದ 01:30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

  • ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ನೇಮಕ, ಜುಲೈ 30ರಂದು ಸಂದರ್ಶನ

    ಕಾರ್ಮಿಕರ ರಾಜ್ಯ ವಿಮಾ ನಿಗಮ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಕ್ಕೆ ಆಹ್ವಾನಿಸಿದೆ.

    ಹುದ್ದೆ : ಪಾರ್ಟ್ ಟೈಂ ಮೆಡಿಕಲ್ ರೆಫರೀ ( part time medical referee) ಹುದ್ದೆಯನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸ್ಥಳ : ಮಲ್ಲೇಶ್ವರಂ( ಬೆಂಗಳೂರು), ಬೊಮ್ಮಸಂದ್ರ, ಶಿವಮೊಗ್ಗ/ಭದ್ರಾವತಿ, ಗುಲ್ಬರ್ಗ, ಮಂಗಳೂರು, ಬೆಳಗಾವಿ, ತುಮಕೂರು, ಬಿಜಾಪುರ, ಮೈಸೂರು ಮತ್ತು ನಂಜನಗೂಡು, ಶಹಬಾದ್, ಕಾರವಾರ, ಹುಬ್ಬಳ್ಳಿ, ತೋರಂಗಲ್ಲು, ಹಾಸನ.( ತಲಾ ಒಂದು ಹುದ್ದೆ ಎಲ್ಲಾ ಕಡೆ)

    ನೇರ ಸಂದರ್ಶನ ನಡೆಯುವ ದಿನಾಂಕ : 30-07-2021( ಇಂಟರ್ವ್ಯೂ ಗೆ ರಿಜಿಸ್ಟರ್ ಮಾಡಲು ಸಮಯ 10:00 am to 11:00 am)

    ಸಂದರ್ಶನ ನಡೆಯುವ ಸ್ಥಳ : 1&2. Region Office, ESI. Corporation, Binnypet,Bangalore

    1. Branch Office, ESI Corporation, Shivamogga
    2. Sub Regional Office, ESI Corporation, Gulbarga
    3. Sub Regional Office, ESI Corporation, Mangalore
    4. Branch Office, ESI Corporation, Belagavi
    5. Branch Office, ESI Corporation, Tumkur
    6. Branch Office, ESI Corporation,Bijapur
    7. Sub Regional Office ESI Corporation, Mysore
    8. Branch Office, ESI Corporation, Shahabad
    9. Dispensary Cum Branch Office, ESI corporation, Karwar
    10. Sub regional office, ESI Corporation, Hubli
    11. Branch Office, ESI Corporation, Torangallu
    12. Branch Office, ESI Corporation, Hassan

    ವಿದ್ಯಾರ್ಹತೆ : ಎಂಬಿಬಿಎಸ್ ಡಿಗ್ರಿಯನ್ನು ಮೆಡಿಕಲ್ ಕೌನ್ಸಿಲ್ ನಿಂದ ಅಭ್ಯರ್ಥಿಗಳು ಪಡೆದುಕೊಂಡಿರಬೇಕು.

    ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 64 ವರ್ಷ ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.esic.nic.in ಭೇಟಿ ನೀಡಬಹುದು.