Category: Govt Jobs

  • ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ

    ಕೆ.ಎ.ಆರ್.ಪಿ.ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು ಇಲ್ಲಿ ಖಾಲಿಯಿರುವ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 01-06-2021 ರಿಂದ 25-06-2021 ರವರೆಗೆ ಮಾರಾಟ ಮತ್ತು ಸ್ವೀಕೃತಿಗಾಗಿ ಅವಧಿ ನಿಗಧಿಪಡಿಸಲಾಗಿತ್ತು. ಆಡಳಿತಾತ್ಮಕ ಕಾರಣದಿಂದ ದಿನಾಂಕ: 15-07-2021 ರವರೆಗೆ ಅರ್ಜಿ ಸ್ವೀಕೃತಿಗಾಗಿ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಹಾಗೂ ಮಾಹಿತಿ/ ಸೂಚನೆಯನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ www.ksp.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

  • ಸರ್ಕಾರಿ ವೈಮಾನಿಕ ತರಬೇತಿ ಶಾಲೆ ( GFTS) : ವಿವಿಧ ಹುದ್ದೆ

    ಸರಕಾರಿ ವೈಮಾನಿಕ ತರಬೇತಿ ಶಾಲೆ ಇಲ್ಲಿ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಸಹಾಯಕ ವಿಮಾನ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳ ಆಹ್ವಾನಿಸಿದೆ.

    ಅರ್ಹತೆ : ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ ರವರ ಸಿವಿಲ್ ಏವಿಯೇಷನ್‌ ನಿಯಮ ( CAR) ವಿಭಾಗ 7 ರ ಸರಣಿ ಡಿ ವಿಭಾಗ 1 ರಲ್ಲಿನ ಅರ್ಹತೆಗಳನ್ನು ಪೂರ್ಣಗೊಳಿಸಿರಬೇಕು.

    ಒಟ್ಟು ಹುದ್ದೆ : 2

    ವಯೋಮಿತಿ : 50 ವರ್ಷಗಳು( ದಿನಾಂಕ : 25-06-2021 ರಂತೆ)

    ಅರ್ಜಿದಾರರು ಇ- ಮೇಲ್ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ದಿನಾಂಕ 11-07-2021 ರೊಳಗೆ ನಿರ್ದೇಶಕರು, ಸರಕಾರಿ ವೈಮಾನಿಕ ‌ತರಬೇತಿ ಶಾಲೆ, ಜಕ್ಕೂರು ವಿಮಾನ ನಿಲ್ದಾಣ, ಯಲಹಂಕ ಅಂಚೆ, ಬೆಂಗಳೂರು – 560064 ಇವರಿಗೆ ಕಳುಹಿಸಬೇಕು.

    ಗುತ್ತಿಗೆ ಅವಧಿ : 2 ವರ್ಷಗಳು

    ವೇತನ : ರೂ.82,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಇ-ಮೇಲ್ ವಿಳಾಸ : [email protected]

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ www.getgnaa.com ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯಬಹುದಾಗಿದೆ.

  • ಗದಗ ವೈಜ್ಞಾನಿಕ ವಿಜ್ಞಾನಗಳ ಸಂಸ್ಥೆ : ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

    ಗದಗ ವೈಜ್ಞಾನಿಕ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿನ ವಿವಿಧ ವೈದ್ಯಕೀಯ ಉಪಕರಣ ಹಾಗೂ ಯಂತ್ರೋಪಕರಣಗಳ‌ ನಿರ್ವಹಣೆ ಗಾಗಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ವಿವರ: ಬಯೋ ಮೆಡಿಕಲ್ ಇಂಜಿನಿಯರ್ ( ಜೀವ ವೈದ್ಯಕೀಯ ಅಭಿಯಂತರರು)

    ವಿದ್ಯಾರ್ಹತೆ: ಬಯೋ ಮೆಡಿಕಲ್ ಇಂಜಿನಿಯರಿಂಗ್/ ಮೆಡಿಕಲ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್

    ಹುದ್ದೆಗಳ ಸಂಖ್ಯೆ : 01

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,800/- ವೇತನವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳು 40 ವರ್ಷ ವಯೋಮಿತಿ ಮೀರಿರಬಾರದು.

    ಸಂದರ್ಶನದ ದಿನಾಂಕ : 08-07-2021 ರಂದು ಬೆಳಿಗ್ಗೆ 11.00 ಗಂಟೆಗೆ ನೇರ ನೇಮಕಾತಿ ಸಂದರ್ಶನ ಕರೆಯಲಾಗಿದ್ದು, ಅರ್ಹ ಇಚ್ಛೆಯುಳ್ಳ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಂಸ್ಥೆಯ ವೆಬ್‌ಸೈಟ್‌ www.karnataka.gov.in/gimsgadag ನಲ್ಲಿ ಲಭ್ಯವಿರುವ ಅರ್ಜಿಯೊಂದಿಗೆ ನೇರ ನೇಮಕಾತಿ ಸಂದರ್ಶನಕ್ಕೆ ಹಾಜರಾಗಬಹುದು.

  • 3533 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ( ನಾಗರಿಕ ) ( ಪುರುಷ ಮತ್ತು ಮಹಿಳಾ) ( ಮಿಕ್ಕುಳಿದ ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ( ಸ್ಥಳೀಯ ) ಹುದ್ದೆಗಳನ್ನು ಒಳಗೊಂಡಂತೆ 3533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಅವಧಿ ಜು.12 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://recruitment.ksp.gov.in ನ್ನು ಸಂಪರ್ಕಿಸಬಹುದು. ಆಸಕ್ತರು ಜೂ.25 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಜು.12 ರವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಆಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅಮೃತ್ ಪಾಲ್ ತಿಳಿಸಿದ್ದಾರೆ.

  • ಇಂಗ್ಲೀಷ್ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಶ್ರೀ ಜನಾರ್ದನ ಎಜ್ಯುಕೇಶನ್ ಟ್ರಸ್ಟ್ ( ರಿ) ಎಳ್ಳಾರೆ , ಈ ವಿದ್ಯಾಸಂಸ್ಥೆಗೆ ಇಂಗ್ಲೀಷ್ ಶಿಕ್ಷಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಶ್ರೀ ಜನಾರ್ಧನ ಪ್ರಾಥಮಿಕ ಶಾಲೆ ಎಳ್ಳಾರೆ – ಡಿ.ಎಡ್/ ಬಿ.ಎಡ್ ಇಂಗ್ಲೀಷ್ ಶಿಕ್ಷಕಿ -01 ಹುದ್ದೆ
    ಶ್ರೀ ಜನಾರ್ದನ ಪ್ರಾಥಮಿಕ ಶಾಲೆ ಎಳ್ಳಾರೆ – ಪದವೀಧರರು ‌ಇಂಗ್ಲೀಷ್ ಸ್ಪೋಕನ್ – 01 ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ದಿನಾಂಕ 30-06-2021ನೇ ಬುಧವಾರದ ಒಳಗೆ ಅರ್ಜಿಯನ್ನು ಸ್ವಯಂ ವಿವರಗಳೊಂದಿಗೆ ( ರೆಸ್ಯೂಮ್) ಸ್ಬಯ ಜಲ ಹಸ್ತಾಕ್ಷರದಲ್ಲಿ ಬರೆದು ದೂರವಾಣಿ ಸಂಖ್ಯೆಯೊಂದಿಗೆ ವಿದ್ಯಾಸಂಸ್ಥೆಗೆ ಸಲ್ಲಿಸುವುದು.

    ಅಭ್ಯರ್ಥಿಗಳು ಇ- ಮೇಲ್ ಮುಖಾಂತರವೂ ಅರ್ಜಿಯನ್ನು ಸಲ್ಲಿಸಬಹುದು.

    ಇ-ಮೇಲ್ ವಿಳಾಸ ಈ ಕೆಳಗೆ ನೀಡಲಾಗಿದೆ : [email protected]

  • ಶಿಕ್ಷಕರ ವರ್ಗಾವಣೆ ನಿಯಮಾವಳಿ : ವರ್ಗ ವೇಳಾಪಟ್ಟಿ ನಾಳೆ ?

    ಶಿಕ್ಷಕರ ವರ್ಗಾವಣೆಯ ಸಮಯ ಹತ್ತಿರವಾಗಿದೆ. ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆ ನಿಯಮವನ್ನು ಅಂತಿಮಗೊಳಿಸಿ ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಸರಕಾರ, ಕರಡು ಪ್ರತಿಯನ್ನು ರೂಪಿಸಿ ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಿತ್ತು. ಸಾವಿರಕ್ಕೂ ಹೆಚ್ಚಿನ ಆಕ್ಷೇಪಣೆಗಳು ಬಂದಿದ್ದು, ಪರಿಶೀಲಿಸಿ, ಅಂತಿಮ ನಿಯಮ ರೂಪಿಸಿ ಅಧಿಕೃತ ಆದೇಶ ಶುಕ್ರವಾರ ದೊರಕಿದೆ.

    ವರ್ಗಾವಣೆ ನಿಯಮ ಪ್ರಶ್ನಿಸಿ ಶಿಕ್ಷಕರು ಕೋರ್ಟ್ ಮೆಟ್ಟಿಲೇರಿದರೂ, ಕೋರ್ಟ್ ಶಿಕ್ಷಣ ಇಲಾಖೆಯ ನಿಲುವು ಪಡೆದುಕೊಂಡ ಮೇಲೆ ಮುಂದಿನ ಆದೇಶ ಹೊರಡಿಸಬೇಕಾಗುತ್ತದೆ.

    ನಿಯಮದಲ್ಲಿ ಏನಿದೆ?

    ವರ್ಗಾವಣೆ ವೇಳಾಪಟ್ಟಿಗೆ ಅನುಸಾರ ಮೊದಲು ವಿಶೇಷ ಕೌನ್ಸಿಲಿಂಗ್ ಲಭ್ಯವಿರುವ ಖಾಲಿ ಹುದ್ದೆಗಳ ಪಟ್ಟಿಯನ್ನು ಪ್ರಕಟಿಸುವುದು.
    ಕಳೆದ ಬಾರಿ ಕಡ್ಡಾಯ, ವಲಯ, ಸಮರ್ಪಕ ವರ್ಗಾವಣೆಗಳಲ್ಲಿ ಅವಕಾಶ ಸಿಗದ ಬಾಧಿತ ಶಿಕ್ಷಕರಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವುದು.
    ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಿ ವಿಶೇಷ ಕೌನ್ಸಿಲಿಂಗ್ ಅವಕಾಶ ಪಡೆಯಲು ಅನುವಾಗುವಂತೆ ಅನುಕೂಲ ಮಾಡಿಕೊಡುವುದು.
    ಜ್ಯೇಷ್ಠತಾ ಕ್ರಮಾಂಕ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಿ ಅಂತಿಮಗೊಳಿಸುವುದು.
    ಎಲ್ಲ ಬಾಧಿತ ಶಿಕ್ಷಕರಿಗೆ ಕೌನ್ಸಿಲಿಂಗ್ ಮಾಡುವುದು‌.
    ಹೆಚ್ಚುವರಿ ಗೊಂಡಿರುವ ಪ್ರಕರಣಗಳಲ್ಲಿ ವಲಯ ನಿರ್ಬಂಧ ಇರುವುದಿಲ್ಲ.