Category: Govt Jobs

  • ಜ್ಯೂನಿಯರ್ ಅಸಿಸ್ಟೆಂಟ್ ಕಂ ಮಾರಾಟ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

    ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ., ಸರ್ಜಾಪುರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : 5 ( ಐದು) ಕಿರಿಯ ಸಹಾಯಕ ‌ಕಂ ಮಾರಾಟ ಗುಮಾಸ್ತ ( junior assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
    ಕನ್ನಡ ಭಾಷೆಯನ್ನು ಕಲಿತಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ / ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
    ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು : ಇತ್ತೀಚಿನ ಎರಡು ಭಾವಚಿತ್ರ, ಪಾಸ್ ಪೋರ್ಟ್/ ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ವೋಟರ್ ಐಡಿ ಯಾವುದಾದರೂ ಒಂದು. ವಯಸ್ಸು ದೃಢೀಕರಣ ಪತ್ರ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಅಂಕಪಟಯ, ಕಂಪ್ಯೂಟರ್ ಪದವಿ ಹೊಂದಿರುವ ಬಗ್ಗೆ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

    ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ರೂ. 1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರಿಗಿಸಲಾಗುವುದಿಲ್ಲ. ಸಂಘದಿಂದ ಪೂರೈಸಿದ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ – 562125 ಆನೇಕಲ್ ತಾಲ್ಲೂಕು, ಬೆಂಗಳೂರು ‌ನಗರ ಜಿಲ್ಲೆ ಇಲ್ಲಿ ಸಲ್ಲಿಸತಕ್ಕದ್ದು

    ಅರ್ಜಿ ಸಲ್ಲಿಸಲು ದಿನಾಂಕ 24-05-2021 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಕೋವಿಡ್ 19 ರಿಂದಾಗಿ ಸರಕಾರವು ಲಾಕ್ ಡೌನ್ ಆದೇಶಿಸಿದ್ದ ಕಾರಣ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿರುತ್ತದೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021 ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.

  • HSL : ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

    ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ( ಹೆಚ್ ಎಸ್ ಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ‌ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ

    ಹುದ್ದೆಗಳ ವಿವರ : ಜನರಲ್ ಮ್ಯಾನೇಜರ್ , ಅಡಿಶನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಚೀಫ್ ಪ್ರಾಜೆಕ್ಟ್ ಆಫೀಸರ್, ಪ್ರಾಜೆಕ್ಟ್ ಮ್ಯಾನೇಜರ್, ಡೆಪ್ಯುಟಿ ಪ್ರಾಜೆಕ್ಟ್ ಆಫೀಸರ್, ಸೀನಿಯರ್ ಕನ್ಸಲ್ಟೆಂಟ್, ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-06-2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-07-2021 ರಿಂದ 30-08-2021 ರವರೆಗೆ ( ವಿವಿಧ ಹುದ್ದೆಗಳ ಮೇಲೆ ಅವಲಂಬಿಸಿದೆ)

  • BECIL : 103 ಹುದ್ದೆಗಳಿಗೆ ಅರ್ಜಿ ಆಹ್ವಾನ, 8 ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ

    ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : 103 ಹ್ಯಾಂಡಿಮನ್ ಮತ್ತು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021
    ವಿದ್ಯಾರ್ಹತೆ : 8 ನೇ ತರಗತಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    ವಯೋಮಿತಿ : ಸುಮಾರು 30 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,014 /- ರಿಂದ ರೂ.20,384 /- ವೇತನ ನೀಡಲಾಗುತ್ತದೆ.

    ಅರ್ಜಿ ಶುಲ್ಕ : ಅರ್ಜಿದಾರರು ರೂ. 750/- ನ್ನು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಆರ್ಥಿಕವಾಗಿ ಹಿಂದುಳಿದ / ಅಂಗವಿಕಲ ಅಭ್ಯರ್ಥಿಗಳಿಗೆ ರೂ. 450/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ.

  • KIOCL ಲಿಮಿಟೆಡ್ : ವಿವಿಧ ಹುದ್ದೆ

    ಕೆಐಒಸಿಎಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆ: ಜೆಜಿಎಂ ( ಕಮರ್ಷಿಯಲ್‌) – 1 ಹುದ್ದೆ
    ಜೆಜಿಎಂ ( ಮೆಟಿರಿಯಲ್) – 1 ಹುದ್ದೆ
    ಡಿಜಿಎಂ ( ಎಲೆಕ್ಟ್ರಿಕಲ್ ) – 1 ಹುದ್ದೆ
    ಮ್ಯಾನೇಜರ್ ( ಕಾರ್ಪೋರೇಟ್ ಕಮಿಷನ್) /E3 – 1 ಹುದ್ದೆ

    ಎಕ್ಸಿಕ್ಯೂಟಿವ್ ಟ್ರೈನಿಸ್
    1.ಎಕ್ಸಿಕ್ಯೂಟಿವ್ ಟ್ರೈನಿ ( ಹೆಚ್ ಆರ್)/ ಇಒ- 3 ಹುದ್ದೆಗಳು

    1. ಎಕ್ಸಿಕ್ಯೂಟಿವ್ ಟ್ರೈನಿ ( ಫೈನಾನ್ಸ್)/ ಇಒ- 4 ಹುದ್ದೆಗಳು
    2. ಎಕ್ಸಿಕ್ಯೂಟಿವ್ ಟ್ರೈನಿ ( ಕಂಪನಿ ಸೆಕ್ರೆಟರಿ) /ಇಒ- 1 ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • KSMCL ನಲ್ಲಿ 16 ವಿವಿಧ ಹುದ್ದೆಗಳು: ನೇರ ಸಂದರ್ಶನಕ್ಕೆ ಆಹ್ವಾನ

    ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ( ಕೆ‌.ಎಸ್.ಎಂ.ಸಿ.ಎಲ್) ಕರ್ನಾಟಕ ರಾಜ್ಯಾದ್ಯಂತ ತನ್ನ ಗಣಿ/ಕ್ವಾರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ‌ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಹುದ್ದೆಯ ಹೆಸರು : ಗಣಿ ಮುಂದಾಳು – 08 ಹುದ್ದೆಗಳು
    ಗಣಿ ಸಂಗಾತಿ – 04 ಹುದ್ದೆಗಳು
    ಬ್ಲಾಸ್ಟರ್ – 04 ಹುದ್ದೆಗಳು

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 23 ವರ್ಷ, ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಸಂಚಿತ ಸಂಭಾವನೆ ಪ್ರತಿ ಮಾಹೆ ( ರೂ.ಗಳಲ್ಲಿ)- ಗಣಿ ಮುಂದಾಳು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ರೂ.32,000/-, ಗಣಿ ಸಂಗಾತಿ ಹುದ್ದೆಗೆ ರೂ.25,000/-,ಬ್ಲಾಸ್ಟರ್ ಹುದ್ದೆಗೆ ರೂ.20,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಸಂದರ್ಶನದ ದಿನಾಂಕ ಹಾಗೂ ಸ್ಥಳ : ಗಣಿ ಮುಂದಾಳು -( mine foreman) 02-07-2021 ಸಮಯ 11.30 ಬೆಳಿಗ್ಗೆ.

    ಗಣಿ ಸಂಗಾತಿ (mine mate) : ಸಂದರ್ಶನದ ದಿನಾಂಕ ಹಾಗೂ ಸ್ಥಳ : 03-07-2021 ಸಮಯ 11.30 ಬೆಳಿಗ್ಗೆ .

    ಬ್ಲಾಸ್ಟರ್ : ಸಂದರ್ಶನದ ದಿನಾಂಕ ಹಾಗೂ ಸ್ಥಳ : 03-07-2021 ಸಮಯ 3.00 ಮಧ್ಯಾಹ್ನ .

    ವಿಳಾಸ : Deputy General Manager, Iron Ore Division, Vaishnavi Farms, Daulathpur Road, Sandur-583119, Ballari District.

    ಅಂಚೆ ಮೂಲಕ ಅಥವಾ ಮುದ್ದಾಂ ಆಗಿ ಕಳಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಅರ್ಜಿ ನಮೂನೆ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಜಾಲತಾಣ www.ksmc.karnataka.gov.in ನ್ನು ಸಂಪರ್ಕಿಸಬಹುದಾಗಿದೆ.

  • ಶಿವಮೊಗ್ಗ ಸ್ಮಾರ್ಟ್ ಸಿಟಿ : ನೇಮಕಾತಿ ಅಧಿಸೂಚನೆ

    ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
    ಹುದ್ದೆ : ಗುತ್ತಿಗೆ ಆಧಾರದ ಮೇರೆಗೆ ಒಂದು ಕಾರ್ಯಪಾಲಕ ಇಂಜಿನಿಯರ್ (ವಿದ್ಯುತ್) ಮತ್ತು ಒಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಚ್ಛಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-07-2021

    ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ವೆಬ್‌ಸೈಟ್‌ shivamoggasmartcity.co.in ಅಥವಾ shimogacity.mrc.gov.in ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯ ಸೂಚನಾ ಫಲಕವನ್ನು ನೋಡುವುದು.