Category: Govt Jobs

  • ಕೃಷಿ ವಿಶ್ವವಿದ್ಯಾಲಯ ಧಾರವಾಡ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

    ಕೃಷಿ ವಿಶ್ವವಿದ್ಯಾಲಯ, ಧಾರವಾಡ ಅಧಿಕಾರಿ ವೃಂದದ ವಿವಿಧ ಹುದ್ದೆಗಳಿಗೆ ( ನಿಶ್ಚಿತಾವಧಿಯ ಹುದ್ದೆಗಳು) ನೇರ ನೇಮಕಾತಿಯ ಬಗ್ಗೆ ಅರ್ಜಿ ಸಲ್ಲಿಸಲು 24-06-2021 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಈಗ ಅರ್ಜಿ ಸಲ್ಲಿಕೆಯ ಅವಧಿಯನ್ನು 02-07-2021 ರವರೆಗೆ ವಿಸ್ತರಿಸಲಾಗಿದೆ. ಹಾಗೂ ಹೈದರಾಬಾದ್ ಕರ್ನಾಟಕ( ಕಲ್ಯಾಣ ಕರ್ನಾಟಕ) ಪ್ರದೇಶದ ವ್ಯಕ್ತಿಗಳಿಗೆ ಹುದ್ದೆಗಳನ್ನು ಮೀಸಲಿಡಲು ಕೆಲವೊಂದು ತಿದ್ದುಪಡಿಯನ್ನು ಮಾಡಲಾಗಿದೆ.

    ಹುದ್ದೆಗಳ ವಿವರ: ಡೈರೆಕ್ಟರ್ ಆಫ್ ರಿಸರ್ಚ್, ಡೈರೆಕ್ಟರ್ ಆಫ್ ಎಕ್ಸ್ ಟೆನ್ ಶನ್, ಡೀನ್ ಆಫ್ ಸ್ಟೂಡೆಂಟ್ ವೆಲ್ ಫಾರ್, ಯುನಿವರ್ಸಿಟಿ ಲೈಬ್ರೇರಿಯನ್, ಡೀನ್ ( ಪೋಸ್ಟ್ ಗ್ರಾಜ್ಯುಯೇಟ್ ಸ್ಟಡೀಸ್, ಡೀನ್ ( ಅಗ್ರಿಕಲ್ಚರ್ ಕಾಲೇಜು ಧಾರವಾಡ), ಡೀನ್ ( ಅಗ್ರಿ ಕಲ್ಚರ್ ಕಾಲೇಜು, ಹನುಮನಕಟ್ಟಿ), ಡೀನ್ ( ಅಗ್ರಿಕಲ್ಚರ್ ಕಾಲೇಜು, ವಿಜಯಪುರ) , ಡೀನ್ ( ಕಂಮ್ಯುನಿಟಿ ಸೈನ್ಸ್ ಕಾಲೇಜು ಧಾರವಾಡ), ಡೀನ್ ( ಫಾರೆಸ್ಟ್ರಿ ಆಫ್ ಕಾಲೇಜು, ಶಿರಸಿ), ಡೀನ್ ( ಕಂಮ್ಯುನಿಟಿ ಸೈನ್ಸ್ ಕಾಲೇಜು ಧಾರವಾಡ) (ಹೆಚ್ ಕೆ)

    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು:

    ವಿಳಾಸ: To The Registrar, University Of Agricultural Sciences, Dharwad-580005 ( Karnataka)

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • PMFME ಯೋಜನೆಯಡಿಯಲ್ಲಿ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

    ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪಿಎಂಎಫ್ಎಂಇ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತಿದೆ.

    ಧಾರವಾಡದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮಹತ್ತರವಾದ ಪಾತ್ರ ನಿಭಾಯಿಸಲು ಅವಕಾಶ ಇದೆ.

    ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆಯ ಯೋಜನೆಯು ಅನುಷ್ಠಾನಗೊಳ್ಳುತ್ತಿದೆ.

    ಸಂಪನ್ಮೂಲ ವ್ಯಕ್ತಿ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನವನ್ನು ನೀಡಲಾಗುವುದಿಲ್ಲ. ಪ್ರತಿ ಫಲಾನುಭವಿಯನ್ನು ಆಧರಿಸಿ, ಮಂಜೂರಾದ ಪ್ರತಿ ಸಾಲದ ಮೇಲೆ ಗರಿಷ್ಠ ರೂ.20,000/- ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುತ್ತದೆ.

    ಇದರಲ್ಲಿ 50% ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ‌ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿ.ಎಸ್.ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಹೊಂದಿ ಎಫ್.ಎಸ್.ಎಸ್.ಎ.ಐ ನಿಂದ ಪ್ರಮಾಣಿತ ಅನುಸರಣೆಯು ಸಿಕ್ಕ ನಂತರ ನೀಡಲಾಗುತ್ತದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಪದವಿಯನ್ನು ಹೊಂದಿರಬೇಕು.

    ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿ, ಆಹಾರ ಸಂಸ್ಕರಣ ಕೈಗಾರಿಕೆ ಯಲ್ಲಿ ಅನುಭವವುಳ್ಳ ವ್ಯಕ್ತಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜೂನ್,06,2021 ರೊಳಗಾಗಿ ಅರ್ಜಿಯನ್ನು ಧಾರವಾಡ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

  • NCBS : ಕ್ಲರ್ಕ್ ಹುದ್ದೆ

    ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (ಎನ್ ಸಿಬಿಎಸ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2021

    ಹುದ್ದೆ : ಕ್ಲರ್ಕ್

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ ‌/ ಇನ್ಸ್ಟಿಟ್ಯೂಟ್ ನಿಂದ ಯಾವುದೇ ಪದವಿಯನ್ನು 50% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಮತ್ತು ಟೈಪಿಂಗ್ ಜ್ಞಾನ ಇರಬೇಕು. ಕ್ಲೆರಿಕಲ್ ಡ್ಯೂಟಿ ವಿಷಯದಲ್ಲಿ ಒಂದು ವರ್ಷ ಅನುಭವ ಇರಬೇಕು.

    ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ಮೀರಿರಬಾರದು. ಇಡ್ಬ್ಲುಎಸ್ ಮತ್ತು ಅನ್ ರಿಸರ್ವ್ಡ್ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಮೀರಿರಬಾರದು.

    ಹುದ್ದೆ ಸಂಖ್ಯೆ : ಪರಿಶಿಷ್ಟ ಜಾತಿ – 02 ಹುದ್ದೆ
    ಇಡ್ಬ್ಯುಎಸ್ – 01 ಹುದ್ದೆ
    ಅನ್ ರಿಸರ್ವ್ಡ್ – 02 ಹುದ್ದೆ

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 15-06-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • PMKVY : ತರಬೇತಿಗೆ ಅರ್ಜಿ ಆಹ್ವಾನ

    ಆರೋಗ್ಯ ವಲಯದಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಪರಿಣಿತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇದೆ. ಇದಕ್ಕಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಅರ್ಜಿಯನ್ನು ಹಾಕಬಹುದು.

    ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ), ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸಡ್ ( ಕ್ರಿಟಿಕಲ್ ಕೇರ್) ಹಾಗೂ ಹೋಮ್ ಹೆಲ್ತ್ ಏಡ್ ತರಬೇತಿ ನೀಡಲಾಗುತ್ತದೆ. ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.

    ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಶಿಯನ್ ಬೇಸಿಕ್, ಫ್ಲೆಬೊಟೊಮಿಸ್ಟ್ ಹಾಗೂ ಮೆಡಿಕಲ್ ರೆಕಾರ್ಡ್‌ ಅಸಿಸ್ಟೆಂಟ್ ತರಬೇತಿಗೆ ಪಿಯುಸಿ ತೇರ್ಗಡೆಯಾಗಿರಬೇಕು ಮತ್ತು ಮೆಡಿಕಲ್ ಇಕ್ವಿಪ್ ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ ತರಬೇತಿಗೆ ಎಸ್ ಎಸ್ ಎಲ್ ಸಿ/ಐಟಿಐ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಈ ವಿವಧ ಕೋರ್ಸ್‌ಗಳ ತರಬೇತಿಗೆ ಸಂಬಂಧಿಸಿದ ವಿವರಗಳಿಗಾಗಿ ಫಾರ್ಮ್ ಲಿಂಕ್ www.koppal.nic.in ನಲ್ಲಿ ಪಡೆಯಬಹುದು.

  • ನರೇಗಾ ಯೋಜನೆಯಡಿ ಉದ್ಯೋಗವಕಾಶ

    ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಛೇರಿಯಲ್ಲಿ, ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಹಾಗೂ ಅಣ್ಣಿಗೇರಿ ತಾಲ್ಲೂಕು ಪಂಚಾಯತಿಗಳಿಗೆ ಹಾಗೂ ಅನುಷ್ಠಾನ ಇಲಾಖೆಗಳಿಗೆ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಸರಕಾರದ ನಡುವಳಿಯನುಸಾರ ಆಯ್ಕೆ ಮಾಡಬೇಕಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ವಿವರ : ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ( ADPC ) , ಜಿಲ್ಲಾ ಐ.ಇ.ಸಿ.ಸಂಯೋಜಕರು, ತಾಲೂಕು ಎಂ.ಐ.ಎಸ್ ಸಂಯೋಜಕರು, ತಾಲೂಕು ಐಇಎಸ್ ಸಂಯೋಜಕರು, ತಾಲೂಕು ಸಂಯೋಜಕರು, ಡಾಟಾ ಎಂಟ್ರಿ ಅಪರೇಟರ್, ತಾಂತ್ರಿಕ ಸಹಾಯಕರು ( ಕೃಷಿ), ತಾಂತ್ರಿ ಸಹಾಯಕರು ( ಅರಣ್ಯ), ತಾಲೂಕು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 14

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 03-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-06-2021

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಪಿಯು/ಪದವಿ/ಇಂಜಿನಿಯರಿಂಗ್ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.

    ಸರಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಬೆಳಿಗ್ಗೆ 10.30 ರಿಂದ ಸಂಜೆ 4:30 ರವರೆಗೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • KSP 3533 ಸಿವಿಲ್ ಪೊಲೀಸ್ ಹುದ್ದೆ : ಇಲ್ಲಿದೆ ಸಂಪೂರ್ಣ ವಿವರ

    KSP 3533 ಸಿವಿಲ್ ಪೊಲೀಸ್ ಹುದ್ದೆ : ಇಲ್ಲಿದೆ ಸಂಪೂರ್ಣ ವಿವರ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ನಾಗರಿಕ ( ಪುರುಷ ಮತ್ತು ಮಹಿಳಾ೦ (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿಲ್ಲ.

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 25-೦5-2೦21 ಬೆಳಗ್ಗೆ 1೦.೦೦ ಗಂಟೆಯಿಂದ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-೦6-2021 ಸಂಜೆ 6.೦೦ ಗಂಟೆಯವರೆಗೆ
    ಅಧಿಕೃತ ಬ್ಯಾಂಕ್ ಶಾಖೆಗಳ /ಅಂಚೆ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 25-06-2021

    (ಮಿಕ್ಕುಳಿದ ವೃಂದದ ಹುದ್ದೆಗಳು ) ಕಲ್ಯಾಣ ಕರ್ನಾಟಕ ಪ್ರದೇಶದ 2೦% ಮಿಕ್ಕುಳಿದ ವೃಂದದ ಹುದ್ದೆಗಳು ಸೇರಿದಂತೆ:
    ಹುದ್ದೆಗಳ ವಿವರ : ಪೊಲೀಸ್ ಕಾನ್ಸ್‌ಟೇಬಲ್ ( ನಾಗರಿಕ) (ಪುರುಷ) (ಮಿಕ್ಕುಳಿದ ವೃಂದ) -2393
    ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಮಹಿಳಾ) (ಮಿಕ್ಕುಳಿದ ವೃಂದ) – 799
    ಒಟ್ಟು ಹುದ್ದೆ 3192

    ಕಲ್ಯಾಣ ಕರ್ನಾಟಕ ಪ್ರದೇಶದ 8೦% ಸ್ಥಳೀಯ ವೃಂದದ ಹುದ್ದೆಗಳು:
    ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ)(ಪುರುಷ)(ಸ್ಥಳೀಯ) – 266
    ಪೊಲೀಸ್ನಕಾನ್ಸ್‌ಟೇಬಲ್ (ನಾಗರಿಕ) (ಮಹಿಳಾ) (ಸ್ಥಳೀಯ)-75
    ಒಟ್ಟು ಹುದ್ದೆಗಳು 341

    ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25-06-2021 ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

    ಸಾಮಾನ್ಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
    ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
    ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

    ಪರೀಕ್ಷೆಗಳ ದಿನಾಂಕವನ್ನು ಮುಂದೆ ಜಾಹೀರಾತು ಪಡಿಸಲಾಗುವುದು. ಹಾಗೂ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ದಿನನಿತ್ಯ ನೋಡಲು ತಿಳಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ