Category: Govt Jobs

  • 402 ಪಿಎಸ್ಐ ಅರ್ಜಿಗೆ ದಿನಾಂಕ ವಿಸ್ತರಣೆ

    402 ಪಿಎಸ್ಐ ಅರ್ಜಿಗೆ ದಿನಾಂಕ ವಿಸ್ತರಣೆ

    ರಾಜ್ಯ ಪೊಲೀಸ್ ಇಲಾಖೆಯು ಎಪ್ರಿಲ್‌ನಲ್ಲಿ 402 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಕಳುಹಿಸಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಎರಡನೇ ಬಾರಿ ಆನ್ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ನಿಗದಿಪಡಿಸಲಾಗಿದೆ.

    ಮೇ 31,2021 ರವರೆಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಮೇ 03 ರಿಂದ 20, 2021 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು.

    ಮೇ 05,2021 ನ್ನು ವಯೋಮಿತಿಗೆ ಕೊನೆಯ ದಿನಾಂಕವೆಂದು ಪರಿಗಣಿಸಲಾಗಿದೆ. ಆದರೆ ಜಾತಿ ಮತ್ತು ಆದಾಯ ಮೀಸಲಾತಿ ಹಾಗೂ ಇತರೆ ದಾಖಲೆಗಳಿಗೆ ಮೇ, 20, 2021 ನ್ನು ಕೊನೆಯ ದಿನಾಂಕವೆಂದು ಪರಿಗಣಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • DCE ಯಿಂದ ಹೆಚ್ಚುವರಿ ಅತಿಥಿ ಉಪನ್ಯಾಸಕರ ನೇಮಕ

    DCE ಯಿಂದ ಹೆಚ್ಚುವರಿ ಅತಿಥಿ ಉಪನ್ಯಾಸಕರ ನೇಮಕ

    ಕರ್ನಾಟಕ ಕಾಲೇಜು ಶಿಕ್ಷಣ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರಥಮ ದರ್ಜೆ ಕಾಲೇಜು 2020-21 ನೇ ಶೈಕ್ಷಣಿಕ ಸಾಲಿನ 2,4,6 ನೇ ಸೆಮಿಸ್ಟರ್ ಅವಧಿಯ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಕ್ಕಾಗಿ ಹೆಚ್ಚು ಉಪನ್ಯಾಸಕರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

    ಆಯಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಂದ‌ ಕಾಲೇಜಿನ ಹಂತದಲ್ಲಿ ಅರ್ಜಿಯನ್ನು ಪಡೆದು, ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ವಿಷಯಗಳ ವಿಭಾಗದ ಮುಖ್ಯಸ್ಥರು/ಹಿರಿಯ ಅಧ್ಯಾಪಕರು ಮತ್ತು ಆಡಳಿತ ವಿಭಾಗದ ಅಧಿಕಾರಿ/ಸಿಬ್ಬಂದಿ ವರ್ಗದವರನ್ನೊಳಗೊಂಡ ಆಯ್ಕೆ ಸಮಿತಿಯು ಪರಿಶೀಲಿಸಿ ಮಾನದಂಡಗಳ ಅನ್ವಯ ಮೆರಿಟ್ ಲಿಸ್ಟ್ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.

    ಕಾಲೇಜು ಶಿಕ್ಷಣ ಇಲಾಖೆಯು 2020-21 ನೇ ಸಾಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯ್ಕೆ‌ಮಾಡಿಕೊಳ್ಳಲು ಅನುಮತಿ ನೀಡಲಾಗಿರುವ ಅತಿಥಿ‌ ಉಪನ್ಯಾಸಕರ ಕಾಲೇಜುವಾರು ಸಂಖ್ಯೆಯ ಲಿಸ್ಟನ್ನು ಪ್ರಕಟಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾಧಿಕಾರಿಗಳ ಕಾರ್ಯಾಲಯ : ಉದ್ಯೋಗವಕಾಶ

    ಜಿಲ್ಲಾಧಿಕಾರಿಗಳ ಕಾರ್ಯಾಲಯ : ಉದ್ಯೋಗವಕಾಶ

    ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ತುರ್ತು‌‌ ನೇಮಕಾತಿಗಾಗಿ ಖಾಲಿ ಇರುವ ವಿವಿಧ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ 06 ತಿಂಗಳ ಅವಧಿಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿಯನ್ನು ಮೊದಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ಶೈಕ್ಷಣಿಕ ಹಾಗೂ ಅನುಭವದ ಮೂಲ ದಾಖಲಾತಿಯ ಮತ್ತು ಎರಡು ನಕಲು ಪ್ರತಿ, ಭಾವಚಿತ್ರ (3) ಗಳೊಂದಿಗೆ ಹಾಜರಾಗಲು ಪ್ರಕಟಣೆ ಹೊರಡಿಸಲಾಗಿದೆ. ಸಂದರ್ಶನವು ದಿ. 10-05-2021 ರಿಂದ 15-05-2021 ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ( ರಜಾ ದಿನ ಹೊರತು ಪಡಿಸಿ) ನಡೆಯುತ್ತದೆ.

    ಹುದ್ದೆ : ಫಿಸಿಶಿಯನ್ -4 ಅನಸ್ತೇಸಿಯಾಲಾಜಿಸ್ಟ್ – 8
    ಪಿಡಿಯಾಟ್ರಿಷಿಯನ್ -7
    ಜಿಡಿ ಎಂಒ- 4
    ನರ್ಸಿಂಗ್ ಆಫೀಸರ್ – 52
    ಜ್ಯೂನಿಯರ್/ ಲ್ಯಾಬ್ ಟೆಕ್ನಿಶಿಯನ್ – 30
    ಫಾರ್ಮಸಿಸ್ಟ್ – 19
    ಎಕ್ಸ್ ರೇ ಟೆಕ್ನಿಶಿಯನ್ – 4
    ಜ್ಯೂನಿಯರ್ ಹೆಲ್ತ್ ಅಸಿಸ್ಟೆಂಟ್ ( ಫಿಮೇಲ್) – 78
    ಡಾಟಾ ಎಂಟ್ರಿ ಅಪರೇಟರ್ – 10

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 08272- 225443

  • DKMUL : ವಿವಿಧ ಹುದ್ದೆಗಳಿಗೆ ಮೇ 28 ಕೊನೆ ದಿನಾಂಕ

    DKMUL : ವಿವಿಧ ಹುದ್ದೆಗಳಿಗೆ ಮೇ 28 ಕೊನೆ ದಿನಾಂಕ

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ನೇಮಕಾತಿ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ 28/05/2021 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ ಇತರೆ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

    ಹುದ್ದೆ : ತಾಂತ್ರಿಕಾಧಿಕಾರಿ, ವಿಸ್ತರಣಾಧಿಕಾರಿ, ಡೈರಿ ಸುಪರ್ ವೈಸರ್, ಲೆಕ್ಕ ಸಹಾಯಕರು, ಆಡಳಿತ ಸಹಾಯಕರು, ಮಾರುಕಟ್ಟೆ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : 18-35(ಸಾಮಾನ್ಯ), 18-38 (ಪ್ರವರ್ಗ 2ಎ, 2ಬಿ, 3ಎ, 3ಬಿ), 18-40 ( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

    ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

    ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

    ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

    ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.