Category: Bangalore Jobs

  • ಕೆನರಾ ಬ್ಯಾಂಕ್ : ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

    ಕೆನರಾ ಬ್ಯಾಂಕ್, ಪ್ರವರ್ತಿಸಿರುವ ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕಿನ ಆರ್ಥಿಕ ಸಾಕ್ಷರತ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇರೆಗೆ ” ಆರ್ಥಿಕ ಸಲಹೆಗಾರ” ಹುದ್ದೆಗೆ ಬ್ಯಾಂಕಿನ ನಿವೃತ್ತ/ ಸ್ವ ಇಚ್ಛೆಯಿಂದ ನಿವೃತ್ತಿ ಹೊಂದಿದ 62 ವರ್ಷದ ಒಳಗಿನ ಪ್ರಬಂಧಕರು/ ಹಿರಿಯ ಪ್ರಬಂಧಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹೆಚ್ಚಿನ ಮಾಹಿತಿ ಮತ್ತು ನಿಬಂಧನೆಗಳಿಗೆ ‌ಹಾಗೂ‌ ಅರ್ಜಿ ನಮೂನೆಗಳಿಗಾಗಿ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ : ಕೃಷಿ ಸಾಲ ವಿಭಾಗ,‌ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿ- ಪೂರ್ವ, ಸ್ಪೆನ್ಸರ್ ಟವರ್, ಎಂ.ಜಿ.ರಸ್ತೆ, ಬೆಂಗಳೂರು – 560001

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021
    ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9845461668

  • ಬೆಂಗಳೂರಿನಲ್ಲಿ ಆಶಾ ಮೇಲ್ವಿಚಾರಕರ ಹುದ್ದೆಗೆ ನೇರ ಸಂದರ್ಶನ

    ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ( ರಿ) ದ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ಆಶಾ ಮೇಲ್ವಿಚಾರಕ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವೇತನ : ಮಾಸಿಕ ರೂ.15,600/- ವೇತನ ನಿಗದಿಪಡಿಸಲಾಗಿದೆ.

    ಹುದ್ದೆ ಸಂಖ್ಯೆ : 04

    ಸಂದರ್ಶನ ದಿನಾಂಕ ಹಾಗೂ ಸಮಯ: 25-06-2021 ರಂದು Naukara Bhavana, BBMP Head Office, N.R. Square, Bengaluru. ಸಮಯ 11-00 ಗಂಟೆ ಬೆಳಿಗ್ಗೆ ಯಿಂದ 04-00 ಗಂಟೆ ಸಾಯಂಕಾಲ ರವರೆಗೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷಗಳು ಆಗಿರಬೇಕು. ಸಾಮಾನ್ಯ ವರ್ಗ – 35 ವರ್ಷ( ಬಿ), 2ಎ, 2ಬಿ, 3 ಎ, 3ಬಿ – 38 ವರ್ಷ, ಪ.ಜಾತಿ/ ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 08022110445 ಗೆ ಸಂಪರ್ಕಿಸಬಹುದು.

  • ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 04 ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 04 ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿ ಹಾಗೂ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿ, ಯಂಟಗಾನಹಳ್ಳಿ ಮತ್ತು ನರಸೀಪುರ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17-06-2021 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2021 ರ ಸಂಜೆ 05.00 ಗಂಟೆಯವರೆಗೆ. ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯತಿ/ ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ.

    ಅರ್ಹತೆಗಳು : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
    ದಿನಾಂಕ 01-01-2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ‌ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
    ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ ಎರಡು ವರ್ಚಯ ಯೋಜನೆಯಡಿ ಅಕುಶಲ ಕೂಲಿಕಾರ್ಮಿಕರಾಗಿ ಕೆಲಸ ನಿರ್ವಹಿಸಬೇಕು.
    ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.
    ಓದು ಬರಹ ಚೆನ್ನಾಗಿ ತಿಳಿದಿರಬೇಕು.
    ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ರೋಜ್ ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್ ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

  • KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

    KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 18

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಬೆಂಗಳೂರು : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ ಹೆಚ್ ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗನ್ನು ಗುತ್ತಿಗೆ ಆಧಾರದ ಮೇಲೆ ಎನ್ ಹೆಚ್ ಎಂ ಮಾರ್ಗಸೂಚಿಯಂತೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಿದೆ

    ಹುದ್ದೆಗಳ ವಿವರ : ಎಸ್.ಎನ್.ಸಿ ಯು ವೈದ್ಯಾಧಿಕಾರಿಗಳು : 10 ಹುದ್ದೆ ಗಳು : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಟೆಲಿಮಡಿಸಿನ್ ವೈದ್ಯಾಧಿಕಾರಿಗಳು : 8 ಹುದ್ದೆಗಳು: ಮಾಸಿಕ ವೇತನ ರೂ.45,000/- ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಎನ್.ಪಿ.ಸಿ.ಡಿ.ಸಿ.ಎಸ್. ವೈದ್ಯಾಧಿಕಾರಿಗಳು : 2 ಹುದ್ದೆಗಳು : ಅಭ್ಯರ್ಥಿಗಳಿಗೆ ಮಾಸಿಕ ರೂ.46,200/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಶ್ರುಶ್ರೂಷಕಿಯರು‌: 126 ಹುದ್ದೆಗಳು : ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ ಸಿ/ ಜಿಎನ್ ಎಂ ತರಬೇತಿ ಹಾಗೂ ಕೆಎನ್ ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,500/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಫಾರ್ಮಸಿಸ್ಟ್ : 4 ಹುದ್ದೆಗಳು : ಡಿ.ಫಾರ್ಮ/ಬಿ.ಫಾರ್ಮ ಪದವಿಯೊಂದಿಗೆ ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,025/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಪ್ರಯೋಗಶಾಲಾ ತಂತ್ರಜ್ಞರು : 1 ಹುದ್ದೆ : DMLT ಪದವಿಯೊಂದಿಗೆ ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯನ್ನು ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ಮಾಸಿಕ ವೇತನ ರೂ.14,000/- + 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಈ ಮೇಲ್ಕಂಡ ಹುದ್ದೆಗಳಿಗೆ ಪ್ರತಿ ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುತ್ತದೆ.

    ಈ ಪ್ರಕಟಣೆಯು Rolling Advertisement ಆಗಿರುವುದರಿಂದ ಅವಧಿಯು 31-03-2022 ರವರೆಗೆ ಇರುತ್ತದೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್ ಸಿಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ,ಹಳೇ ಟಿ.ಬಿ.ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆಂಗಳೂರು-38 ಇಲ್ಲಿ ಹಾಜರಾಗುವುದು.

  • ಬೆಂಗಳೂರು ನಗರ ಜಿಲ್ಲಾ ಪಂಚಾಯತಿ : ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯತಿನಲ್ಲಿ ರೂರ್ಬನ್ ಯೋಜನೆಗೆ ಗುತ್ತಿಗೆ ಆಧಾರದಲ್ಲಿ ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ರೀಜನಲ್ ಪ್ಲ್ಯಾನಿಂಗ್ ಸ್ಪೆಷಲಿಸ್ಟ್, ರೂರಲ್ ಡೆವಲಪ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್, ಇಂಜಿನಿಯರಿಂಗ್ ಸ್ಪೆಷಲಿಸ್ಟ್, ಸ್ಪೆಷಲ್ ಪ್ಲ್ಯಾನಿಂಗ್ ಪ್ರೊಫೆಷನಲ್, ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಕನಿ 25 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಮತ್ತು ಇಂಗ್ಲೀಷ್ ಭಾಷೆ ಚೆನ್ನಾಗಿ ತಿಳಿದಿರಬೇಕು.

    ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಯಾವುದೇ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

    ಮೇಲ್ಕಂಡ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಆಯ್ಕೆಯಾದ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.

    ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 20-06-2021 ರೊಳಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಡಿ.ಆರ್.ಡಿ.ಎ ಕೋಶ, ಕರಿಯಪ್ಪ ರಸ್ತೆ, ಬನಶಂಕರಿ ದೇವಾಲಯ ಪಕ್ಕ, ಬನಶಂಕರಿ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ ಕೋಶವನ್ನು ಸಂಪರ್ಕಿಸುವುದು ( 9901031755)

    ಅರ್ಜಿ ನಮೂನೆ ಮತ್ತು ಪ್ರಕಟಣೆಯನ್ನು http://bengaluruurban.nic.in ನಲ್ಲಿ ಪಡೆಯಬಹುದು.