Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • Bank Jobs: ಮಂಗಳೂರು ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    Bank Jobs: ಮಂಗಳೂರು ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    The Mangalore Catholic Co-operative Bank Ltd; ಮಂಗಳೂರು ಕಥೋಲಿಕ್‌ ಕೋಪಾರೇಟಿವ್‌ ಬ್ಯಾಂಕ್‌, ನಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ಹುದ್ದೆಯ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು ವಿವಿಧ 50 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸಬೇಕು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 12.03.2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.03.2024 (ಸಂಜೆ 5 ಗಂಟೆಯೊಳಗೆ)

    ಹುದ್ದೆಗಳ ವಿವರ ಇಲ್ಲಿದೆ;
    ಹಿರಿಯ ಪ್ರಬಂಧಕರು-2 ಹುದ್ದೆ
    ಶಾಖಾ ಪರಿವೀಕ್ಷಕರು-1 ಹುದ್ದೆ
    ವಸೂಲಾತಿ ಅಧಿಕಾರಿ – 1 ಹುದ್ದೆ
    ಶಾಖಾ ವ್ಯವಸ್ಥಾಪಕರು – 2 ಹುದ್ದೆ
    ಸುಪರ್‌ವೈಸರ್‌ – 1 ಹುದ್ದೆ
    ಮುಖ್ಯ ಅಕೌಂಟೆಂಟ್‌ – 1 ಹುದ್ದೆ
    ಅಕೌಂಟೆಂಟ್‌ – 5 ಹುದ್ದೆ
    ಡೇಟಾಬೇಸ್‌ ಅಡ್ಮಿನಿಸ್ಟ್ರೇಟರ್‌ ಡಿಬಿಎ – 2 ಹುದ್ದೆ
    ಕಿರಿಯ ಅಧಿಕಾರಿ – 10 ಹುದ್ದೆ
    ಹಿರಿಯ ಸಹಾಯಕ – 8 ಹುದ್ದೆ
    ಕಿರಿಯ ಸಹಾಯಕ – 13 ಹುದ್ದೆ
    ಅಟೆಂಡರ್/ಡ್ರೈವರ್‌ – 5 ಹುದ್ದೆ
    ಒಟ್ಟು ಹುದ್ದೆಗಳು 50

    ವೇತನ:
    ಹಿರಿಯ ಪ್ರಬಂಧಕರು ಹುದ್ದೆಗೆ ರೂ.30400-ರೂ.51300
    ಶಾಖಾ ಪರಿವೀಕ್ಷಕರು- ರೂ.30400-ರೂ.51300
    ವಸೂಲಾತಿ ಅಧಿಕಾರಿ – ರೂ.30400-ರೂ.51300
    ಶಾಖಾ ವ್ಯವಸ್ಥಾಪಕರು – ರೂ.28100-ರೂ.50100
    ಸುಪರ್‌ವೈಸರ್‌ – ರೂ..28100-ರೂ.50100
    ಮುಖ್ಯ ಅಕೌಂಟೆಂಟ್‌ – ರೂ.28100-ರೂ.50100
    ಅಕೌಂಟೆಂಟ್‌ – ರೂ.26000-ರೂ.47700
    ಡೇಟಾಬೇಸ್‌ ಅಡ್ಮಿನಿಸ್ಟ್ರೇಟರ್‌ ಡಿಬಿಎ -ರೂ.26000-ರೂ.47700
    ಕಿರಿಯ ಅಧಿಕಾರಿ – ರೂ.24000- ರೂ.45300
    ಹಿರಿಯ ಸಹಾಯಕ – ರೂ.21600-ರೂ.40050
    ಕಿರಿಯ ಸಹಾಯಕ – ರೂ.20000-ರೂ.36300
    ಅಟೆಂಡರ್/ಡ್ರೈವರ್‌ – ರೂ.16000-ರೂ.29600 ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಹಿರಿಯ ಪ್ರಬಂಧಕರು ಹುದ್ದೆಗೆ ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ಶಾಖಾ ಪರಿವೀಕ್ಷಕರು ಹುದ್ದೆಗೆ ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ವಸೂಲಾತಿ ಅಧಿಕಾರಿ – ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ಶಾಖಾ ವ್ಯವಸ್ಥಾಪಕರು – ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ಸುಪರ್‌ವೈಸರ್‌ – ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ಮುಖ್ಯ ಅಕೌಂಟೆಂಟ್‌ – ಪದವಿ ಹೊಂದಿರಬೇಕು, ಕಂಪ್ಯೂಟರ್‌ ಅಪರೇಶನ್‌ ಮತ್ತು ಅಪ್ಲಿಕೇಶನ್‌ ಜ್ಞಾನ ಹೊಂದಿರಬೇಕು.
    ಅಕೌಂಟೆಂಟ್‌ – ವಾಣಿಜ್ಯ/ಸಹಕಾರ/ಮ್ಯಾನೇಜ್‌ಮೆಂಟ್‌ ವಿಷಯಗಳಲ್ಲಿ ಪದವಿ ಹೊಂದಿರಬೇಕು. Tally ಕೋರ್ಸ್‌ನಲ್ಲಿ ತೇರ್ಗಡೆಯಾಗಿರಬೇಕು. ಜೊತೆಗೆ ಕಂಪ್ಯೂಟರ್‌ ಅಪ್ಲೀಕೇಶನ್‌ ಮತ್ತು ಅಪರೇಷನ್‌ ಜ್ಞಾನ ಹೊಂದಿರಬೇಕು.
    ಡೇಟಾಬೇಸ್‌ ಅಡ್ಮಿನಿಸ್ಟ್ರೇಟರ್‌ ಡಿಬಿಎ – ಗಣಕ ವಿಜ್ಞಾನದಲ್ಲಿ ಬಿ.ಇ. ಪದವಿ ಅಥವಾ ಕಂಪ್ಯೂಟರ್‌ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
    ಕಿರಿಯ ಅಧಿಕಾರಿ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
    ಹಿರಿಯ ಸಹಾಯಕ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
    ಕಿರಿಯ ಸಹಾಯಕ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
    ಅಟೆಂಡರ್/ಡ್ರೈವರ್‌ – ಎಸ್‌.ಎಸ್‌.ಎಲ್‌.ಸಿ ತೇರ್ಗಡೆ ಹೊಂದಿರಬೇಕು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

    ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 18ವರ್ಷ ಹಾಗೂ ಗರಿಷ್ಠ ಮಿತಿಯನ್ನು ಈ ಕೆಳಕಂಡತೆ ನೀಡಲಾಗಿದೆ.
    ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ, ಹಿಂದುಳಿದ ಜಾತಿ ಅಥವಾ ಪಂಗಡಕ್ಕೆ (2ಎ,2ಬಿ,3ಎ,3ಬಿ) ಸೇರಿದ ಅಭ್ಯರ್ಥಿಗಳಿಗೆ 38 ವರ್ಷ, ಉಳಿದ ಅಭ್ಯರ್ಥಿಗಳಿಗೆ (ಸಾಮಾನ್ಯ ವರ್ಗ)-35ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಲ್ಲಿ ಎಲ್ಲಾ ಹುದ್ದೆಗಳಿಗೆ ರೂ.1000 ಅರ್ಜಿ ಶುಲ್ಕ ವಿಧಿಸಲಾಗಿದೆ. ಆದರೆ ಅಟೆಂಡರ್/ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ವರ್ಗ -1 ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ʼThe Mangalore Catholic Co-operative Bank Ltd” ಇವರ ಹೆಸರಿಗೆ ಡಿಡಿ ಮುಖಾಂತರ ಪಾವತಿ ಮಾಡಬೇಕು

    ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ವಿಧಾನ
    ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್‌ನಿಂದ www.mccbank.in ಮೂಲಕ ಡೌನ್‌ಲೋಡ್‌ ಮಾಡಿ ಭರ್ತಿ ಮಾಡಬೇಕು.

    ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ ಫೋನ್‌ ನಂಬರ್‌ 0824-2445746

    ಹುದ್ದೆಯ ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Karnataka Apex Bank Recruitment 2024: ಕರ್ನಾಟಕ ಅಪೆಕ್ಸ್‌ ಬ್ಯಾಂಕ್‌ನಲ್ಲಿ 93 ಸಹಾಯಕರ ಹುದ್ದೆ; ಪದವೀಧರರಿಗೆ ಸುವರ್ಣಾವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ

    Karnataka Apex Bank Recruitment 2024: ಕರ್ನಾಟಕ ಅಪೆಕ್ಸ್‌ ಬ್ಯಾಂಕ್‌ನಲ್ಲಿ 93 ಸಹಾಯಕರ ಹುದ್ದೆ; ಪದವೀಧರರಿಗೆ ಸುವರ್ಣಾವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ

    Karnataka Apex Bank Recruitment 2024: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 93 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕ್‌ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2024

    ಹುದ್ದೆಗಳ ವಿವರ:
    ಒಟ್ಟು ಹುದ್ದೆಗಳ ಸಂಖ್ಯೆ 93. ನೇಮಕಾತಿ ಸಂದರ್ಭದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ /ಕಡಿಮೆ ಮಾಡುವ ಅಧಿಕಾರ ಬ್ಯಾಂಕ್‌ಗೆ ಇದೆ.

    ವೇತನ: ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.28,425 ರಿಂದ ರೂ.87,125 ಶ್ರೇಣಿಯಲ್ಲಿ ಮಾಸಿಕ ವೇತನ ನೀಡಲಾಗುವುದು.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪರೀಕ್ಷೆಯಲ್ಲಿ ತೇರ್ಗಡೆಯಾಗಿರತಕ್ಕದ್ದು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 55 ರಷ್ಟು ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾರಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರತಕ್ಕದ್ದು. ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡ ಮಾತನಾಡಲು , ಅರ್ಥ ಮಾಡಿಕೊಳ್ಳಲು ತಿಳಿದಿರಬೇಕು. ಕಂಪ್ಯೂಟರ್‌ ಅಪರೇಷನ್‌, ಅಪ್ಲಿಕೇಷನ್‌ನಲ್ಲಿ ಜ್ಞಾನ ಇರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

    ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ಮೀರಿರಬಾರದು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು -40 ವರ್ಷಗಳು,
    ಇತರೆ ಹಿಂದುಳಿದ ಜಾತಿ/ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು-38ವರ್ಷಗಳು,
    ಸಾಮಾನ್ಯ ವರ್ಗದ ಅಭ್ಯರ್ಥಿಗಳು-35 ವರ್ಷಗಳು
    ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗ/ಪ್ರವರ್ಗಗಳನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ನಿಗದಿಪಡಿಸಲಾಗಿದೆ.
    ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಅವರು “ಸೇವೆ ಸಲ್ಲಿಸಿದ ಅವಧಿಯ” ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಯನ್ನು ನೀಡಲಾಗುವುದು.

    ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ರೂ.500, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಜಾತಿ/ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿತ ಸಂದರ್ಶನದ ಪ್ರಕ್ರಿಯೆಯ ಮೂಲಕ ನೇಮಕಾತಿ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ವಿಧಾನ
    ಅರ್ಜಿ ಸಲ್ಲಿಕೆ ಮಾಡಿದ ಆರಂಭದ ದಿನದಂದು ವೆಬ್‌ಸೈಟ್‌ ತೆರೆದಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 06-04-2024 ರ ಸಾಯಂಕಾಲ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಓರ್ವ ಅಭ್ಯರ್ಥಿ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೆಲಿಟ್ಟು ಅದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್‌/ಮಾರ್ಕರ್‌ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್‌ ಮಾಡಿ ಅರ್ಜಿಗೆ ಅಪ್ಲೋಡ್‌ ಮಾಡಬೇಕು.

    ಅರ್ಜಿಯನ್ನು ಕಡ್ಡಾಯವಾಗಿ ಆನ್‌ಲೈನ್‌ ಮುಖಾಂತರವೇ ಬ್ಯಾಂಕಿನ ವೆಬ್‌ಸೈಟ್‌ www.karnatakaapex.com ಮೂಲಕವೇ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್‌ ಮಾಡಿ ಪ್ರತಿಯನ್ನು ಪರಿಶೀಲನಾ ಸಮಯದಲ್ಲಿ ಹಾಜರುಪಡಿಸುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Karnataka Jobs: ಗ್ರಾಮ ಪಂಚಾಯತ್‌ನಲ್ಲಿ ಕೆಲಸ, ಪಿಯು ಪಾಸಾದವರಿಗೆ ಉದ್ಯೋಗ

    Karnataka Jobs: ಗ್ರಾಮ ಪಂಚಾಯತ್‌ನಲ್ಲಿ ಕೆಲಸ, ಪಿಯು ಪಾಸಾದವರಿಗೆ ಉದ್ಯೋಗ

    Uttara Kannada Grama Panchayat Recruitment 2024: ಉತ್ತರ ಕನ್ನಡ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವಿಧ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 20-Mar-2024 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇದೆ ಎಂದು ಇನ್ನೂ ಕೂಡಾ ನಿರ್ದಿಷ್ಟಪಡಿಸಿಲ್ಲ.

    ವೇತನ: ಉತ್ತರ ಕನ್ನಡ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಉತ್ತರ ಕನ್ನಡ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು.

    ಆಯ್ಕೆ ಪ್ರಕ್ರಿಯೆ; ಮೆರಿಟ್‌ ಲಿಸ್ಟ್‌ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of Gram Panchayat Development Officer, Uttar Kannada, Karnataka ಇಲ್ಲಿಗೆ 20-Mar-2024 ರಂದು ಅಥವಾ ಮೊದಲು ಕಳುಹಿಸಬೇಕು.

  • Vijayanagar Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಡಿಇಒ, ತಾಂತ್ರಿಕ ಸಹಾಯಕ ಹುದ್ದೆಗಳು ಖಾಲಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

    Vijayanagar Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಡಿಇಒ, ತಾಂತ್ರಿಕ ಸಹಾಯಕ ಹುದ್ದೆಗಳು ಖಾಲಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

    Vijayanagar Zilla Panchayat Recruitment 2024: ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. DEO ಖಾಲಿ ಹುದ್ದೆಗಳದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿಜಯನಗರ – ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುವವರಿಗೆ ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 01-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2024

    ಹುದ್ದೆಯ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
    ಹುದ್ದೆಯ ಹೆಸರು: ತಾಂತ್ರಿಕ ಸಹಾಯಕ, DEO ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-28000/- ವೇತನವಿರತ್ತದೆ.

    ಹುದ್ದೆ ಹೆಸರು ಮತ್ತು ಖಾಲಿ ಇರೋ ಹುದ್ದೆಗಳ ಸಂಖ್ಯೆ;
    ತಾಂತ್ರಿಕ ಸಹಾಯಕ (ಕೃಷಿ) 3, ತಾಂತ್ರಿಕ ಸಹಾಯಕ (ತೋಟಗಾರಿಕೆ) 4, ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) 2, ತಾಂತ್ರಿಕ ಸಹಾಯಕ (ಅರಣ್ಯ) 3, ಡೇಟಾ ಎಂಟ್ರಿ ಆಪರೇಟರ್ (DEO) 1. ಒಟ್ಟು 13 ಹುದ್ದೆಗಳು ಖಾಲಿ ಇದೆ.

    ವಿದ್ಯಾರ್ಹತೆ:
    ಟೆಕ್ನಿಕಲ್ ಅಸಿಸ್ಟೆಂಟ್ (ಕೃಷಿ) ಹುದ್ದೆಗೆ ಕೃಷಿಯಲ್ಲಿ ಪದವಿ ಪಡೆದಿರಬೇಕು. ತೋಟಗಾರಿಕೆಯಲ್ಲಿ ತಾಂತ್ರಿಕ ಸಹಾಯಕ (ತೋಟಗಾರಿಕೆ) ಹುದ್ದೆಗೆ ಪದವಿ ಪಾಸಾಗಿರಬೇಕು. ರೇಷ್ಮೆ ಕೃಷಿಯಲ್ಲಿ ತಾಂತ್ರಿಕ ಸಹಾಯಕ (ಸೆರಿಕಲ್ಚರ್) ಹುದ್ದೆಗೆ ಪದವಿ ಪಡೆದಿರಬೇಕು. ಅರಣ್ಯದಲ್ಲಿ ತಾಂತ್ರಿಕ ಸಹಾಯಕ (ಅರಣ್ಯಶಾಸ್ತ್ರ) ಹುದ್ದೆಗೆ ಪದವಿ ಹೊಂದಿರಬೇಕು. ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಗೆ ಯಾವುದೇ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 02 ರಿಂದ 03 ವರ್ಷಗಳ ಅನುಭವವನ್ನು ಹೊಂದಿರಬೇಕು

    ವಯೋಮಿತಿ: ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಟ ವಯಸ್ಸು 21 ವರ್ಷ, ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

    ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವೇತನ: ತಾಂತ್ರಿಕ ಸಹಾಯಕ (ಕೃಷಿ), ತಾಂತ್ರಿಕ ಸಹಾಯಕ (ತೋಟಗಾರಿಕೆ), ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ), ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗಳಿಗೆ ರೂ.28,000 ವೇತನವಿದೆ. ಡೇಟಾ ಎಂಟ್ರಿ ಆಪರೇಟರ್ (DEO) ರೂ.18000/- ವೇತನವಿರಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Grama Panchayath Jobs: ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

    Grama Panchayath Jobs: ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

    Koppal Grama Panchayath Recruitment 2024: ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 04-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024

    ವಿದ್ಯಾರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫೀಕೋಟ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್‌ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 03-04-2024 ಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ಇರಬೇಕು.
    ಸಾಮಾನ್ಯ ವರ್ಗ- 18 ರಿಂದ 35 ವರ್ಷ
    2ಎ,2ಬಿ,3ಎ,3ಬಿ ಅಭ್ಯರ್ಥಿಗಳು 18 ರಿಂದ 38 ವರ್ಷ
    ಪ.ಜಾತಿ/ಪ.ಪಂ/ಪ್ರವರ್ಗ-1 -18 ರಿಂದ 40 ವರ್ಷ

    ಅರ್ಜಿ ಶುಲ್ಕ: ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾರಿ ಮಾಡಿಕೊಳ್ಳುತ್ತಿರುವುದರಿಂದ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್‌ ಮತ್ತು ರೋಸ್ಟರ್‌ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ವಿಧಾನ;
    ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳದಲ್ಲಿ ದ್ವಿ ಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆದಿರಬೇಕು.

    ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಪುನಃ ಆಹ್ವಾನಿಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲೆಯ ವೆಬ್‌ಸೈಟ್‌ನಲ್ಲಿ www.koppal.nic.in ರಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳ ಇಲ್ಲಿಗೆ ರಜೆ ದಿನಗಳನ್ನು ಹೊರತು ಪಡಿಸಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕ 3-04-2024 ಸಾಯಂಕಾರ 5.30 ರೊಳಗೆ ಸಲ್ಲಿಸತಕ್ಕದ್ದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • RDPR Jobs 2024: ಆರ್‌ಡಿಪಿಆರ್‌ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ಪರ್ಸನ್‌ಗಳ ನೇಮಕಾತಿ, ಇಂದೇ ಅರ್ಜಿ ಹಾಕಿ

    RDPR Jobs 2024: ಆರ್‌ಡಿಪಿಆರ್‌ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ಪರ್ಸನ್‌ಗಳ ನೇಮಕಾತಿ, ಇಂದೇ ಅರ್ಜಿ ಹಾಕಿ

    RDPR Ombuds Persons Recruitment 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಓಂಬುಡ್ಸ್‌ ಪರ್ಸನ್ಸ್‌ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; ಮಾರ್ಚ್‌ 06,2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್‌ 06,2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ.

    ಹುದ್ದೆ; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಓಬುಡ್ಸ್‌ಪರ್ಸನ್ಸ್‌ರವರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

    ಓಬುಡ್ಸ್‌ಪರ್ಸನ್‌ ಹುದ್ದೆ ಖಾಲಿಯಿರುವ/ಖಾಲಿಯಾಗಲಿರುವ ಜಿಲ್ಲೆಗಳು: ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯಪುರ

    ಅರ್ಹತೆ: ಸಾರ್ವಜನಿಕ ಆಡಳಿತ/ಕಾನೂನು/ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ,ಮ್ಯಾನೇಜ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ, ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಕಡ್ಡಾಯವಾಗಿ ಹೊಂದಿರಬೇಕು.

    ವಯೋಮಿತಿ: ಓಂಬುಡ್ಸ್‌ಪರ್ಸನ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿಯು 66 ವರ್ಷ ಮೀರಿರಬಾರದು.

    ವೇತನ: ಮಾಸಿಕ ರೂ.10000 ಗೌರವಧನ ಹಾಗೂ ಪ್ರತಿ ಸಿಟ್ಟಿಗ್‌ಗೆ ರೂ.2250 ರಂತೆ ಗರಿಷ್ಠ ರೂ.45000 ಮಿರಿಗೊಳಪಟ್ಟ ಸಿಟ್ಟಿಂಗ್‌ ಫೀಜು ನಿಗದಿಪಡಿಸಲಾಗಿದೆ.

    ಜಿಲ್ಲಾ ಮಟ್ಟದಲ್ಲಿ ಓಂಬುಡ್ಸ್‌ಪರ್ಸನ್‌ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ www.rdpr.karnataka.gov.in ನಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಡೌನ್‌ಲೋಡ್‌ ಮಾಡಿ, ತಮ್ಮ ಕಾರ್ಯನಿರ್ವಹಣೆ ಸೇವಾನುಭವದ ವಿವರಗಳನ್ನೊಳಗೊಂಡ ದಾಖಲೆ ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 06.04.2024 ರೊಳಗೆ ತಲುಪುವಂತೆ ಖುದ್ದಾಗಿ/ಅಂಚೆ ಮೂಲಕ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
    ವಿಳಾಸ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, 5ನೇ ಮಹಡಿ, ಪ್ಲಾಟ್‌ ನಂ.1243, ಕೆ.ಎಸ್‌.ಐ.ಐ.ಡಿ.ಸಿ ಕಟ್ಟಡ, ಐ.ಟಿ.ಪಾರ್ಕ್‌, ಸೌತ್‌ ಬ್ಲಾಕ್‌, ರಾಜಾಜಿ ನಗರ ಇಂಡಸ್ಟ್ರಿಯಲ್‌ ಎಸ್ಟೇಟ್‌, ಬೆಂಗಳೂರು-560010 ಇವರಿಗೆ ಸಲ್ಲಿಸುವುದು.
    ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22342163 ಅನ್ನು ಸಂಪರ್ಕಿಸುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ