Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

    KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 18

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಬೆಂಗಳೂರು : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ ಹೆಚ್ ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗನ್ನು ಗುತ್ತಿಗೆ ಆಧಾರದ ಮೇಲೆ ಎನ್ ಹೆಚ್ ಎಂ ಮಾರ್ಗಸೂಚಿಯಂತೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಿದೆ

    ಹುದ್ದೆಗಳ ವಿವರ : ಎಸ್.ಎನ್.ಸಿ ಯು ವೈದ್ಯಾಧಿಕಾರಿಗಳು : 10 ಹುದ್ದೆ ಗಳು : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಟೆಲಿಮಡಿಸಿನ್ ವೈದ್ಯಾಧಿಕಾರಿಗಳು : 8 ಹುದ್ದೆಗಳು: ಮಾಸಿಕ ವೇತನ ರೂ.45,000/- ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಎನ್.ಪಿ.ಸಿ.ಡಿ.ಸಿ.ಎಸ್. ವೈದ್ಯಾಧಿಕಾರಿಗಳು : 2 ಹುದ್ದೆಗಳು : ಅಭ್ಯರ್ಥಿಗಳಿಗೆ ಮಾಸಿಕ ರೂ.46,200/- ವೇತನವಿರುತ್ತದೆ. ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ‌ ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು.ಅಭ್ಯರ್ಥಿಗಳ ವಯೋಮಿತಿಯು 60 ವರ್ಷ ಒಳಗಿರತಕ್ಕದ್ದು.

    ಶ್ರುಶ್ರೂಷಕಿಯರು‌: 126 ಹುದ್ದೆಗಳು : ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ ಸಿ/ ಜಿಎನ್ ಎಂ ತರಬೇತಿ ಹಾಗೂ ಕೆಎನ್ ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,500/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಫಾರ್ಮಸಿಸ್ಟ್ : 4 ಹುದ್ದೆಗಳು : ಡಿ.ಫಾರ್ಮ/ಬಿ.ಫಾರ್ಮ ಪದವಿಯೊಂದಿಗೆ ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ವೇತನ ರೂ.11,025/+ 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಪ್ರಯೋಗಶಾಲಾ ತಂತ್ರಜ್ಞರು : 1 ಹುದ್ದೆ : DMLT ಪದವಿಯೊಂದಿಗೆ ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯನ್ನು ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ಮಾಸಿಕ ವೇತನ ರೂ.14,000/- + 13% EPF. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಒಳಗಿರತಕ್ಕದ್ದು.

    ಈ ಮೇಲ್ಕಂಡ ಹುದ್ದೆಗಳಿಗೆ ಪ್ರತಿ ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುತ್ತದೆ.

    ಈ ಪ್ರಕಟಣೆಯು Rolling Advertisement ಆಗಿರುವುದರಿಂದ ಅವಧಿಯು 31-03-2022 ರವರೆಗೆ ಇರುತ್ತದೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್ ಸಿಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ,ಹಳೇ ಟಿ.ಬಿ.ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆಂಗಳೂರು-38 ಇಲ್ಲಿ ಹಾಜರಾಗುವುದು.

  • ಬೆಂಗಳೂರು ನಗರ ಜಿಲ್ಲಾ ಪಂಚಾಯತಿ : ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯತಿನಲ್ಲಿ ರೂರ್ಬನ್ ಯೋಜನೆಗೆ ಗುತ್ತಿಗೆ ಆಧಾರದಲ್ಲಿ ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ರೀಜನಲ್ ಪ್ಲ್ಯಾನಿಂಗ್ ಸ್ಪೆಷಲಿಸ್ಟ್, ರೂರಲ್ ಡೆವಲಪ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್, ಇಂಜಿನಿಯರಿಂಗ್ ಸ್ಪೆಷಲಿಸ್ಟ್, ಸ್ಪೆಷಲ್ ಪ್ಲ್ಯಾನಿಂಗ್ ಪ್ರೊಫೆಷನಲ್, ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಕನಿ 25 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಮತ್ತು ಇಂಗ್ಲೀಷ್ ಭಾಷೆ ಚೆನ್ನಾಗಿ ತಿಳಿದಿರಬೇಕು.

    ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಯಾವುದೇ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

    ಮೇಲ್ಕಂಡ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಆಯ್ಕೆಯಾದ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.

    ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 20-06-2021 ರೊಳಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಡಿ.ಆರ್.ಡಿ.ಎ ಕೋಶ, ಕರಿಯಪ್ಪ ರಸ್ತೆ, ಬನಶಂಕರಿ ದೇವಾಲಯ ಪಕ್ಕ, ಬನಶಂಕರಿ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ ಕೋಶವನ್ನು ಸಂಪರ್ಕಿಸುವುದು ( 9901031755)

    ಅರ್ಜಿ ನಮೂನೆ ಮತ್ತು ಪ್ರಕಟಣೆಯನ್ನು http://bengaluruurban.nic.in ನಲ್ಲಿ ಪಡೆಯಬಹುದು.

  • ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು : ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

    ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಅರೆಕಾಲಿಕ ಹಾಗೂ ಗುತ್ತಿಗೆ ಆಧಾರದ ಮೇಲೆ ಬ್ಯಾಂಕ್ ನ ವೈದ್ಯಕೀಯ ಸಲಹೆಗಾರರ ಸ್ಥಾನವನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಒಟ್ಟು ಹುದ್ದೆ : 01 ಸ್ಥಾನಕ್ಕೆ ಅರೆಕಾಲಿಕ ಹಾಗೂ ಗುತ್ತಿಗೆ ಆಧಾರದ ಮೇಲೆ ( ಕೆಲಸ ಮಾಡಿದ ಗಂಟೆಗಳ ಆಧಾರದ ಮೇಲೆ ಸಂಭಾವನೆ) ಕೆಲಸ ನಿಗದಿಪಡಿಸಲಾಗಿದೆ.

    ಹುದ್ದೆ ಸ್ಥಳ : ಆರ್ ಬಿಐ ಅಧಿಕಾರಿಗಳ ಕ್ವಾರ್ಟರ್ಸ್, ಕಪಿಲ ಬ್ಲಾಕ್, ನ್ಯಾಷನಲ್ ಗೇಮ್ಸ್ ವಿಲೇಜ್, ಕೋರಮಂಗಲದಲ್ಲಿರುವ ಔಷಧಾಲಯದಲ್ಲಿ ಕಾರ್ಯ ನಿರ್ವಹಿಸಲು ಸಾಮಾನ್ಯ ಪ್ರವರ್ಗಕ್ಕೆ ಸೇರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 28, 2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.rbi.org.in ಗೆ ಭೇಟಿ ನೀಡಬಹುದು.

  • ತುಮಕೂರು ಯುನಿವರ್ಸಿಟಿ: ಹುದ್ದೆಗಳಿಗೆ ಅರ್ಜಿ‌ ಆಹ್ವಾನ

    ತುಮಕೂರು ಯುನಿವರ್ಸಿಟಿ: ಹುದ್ದೆಗಳಿಗೆ ಅರ್ಜಿ‌ ಆಹ್ವಾನ

    ತುಮಕೂರು ವಿಶ್ವವಿದ್ಯಾಲಯ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಕೆಯು ದಿನಾಂಕ ಜೂನ್, 10 ರಂದು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆ : ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಪೋಸ್ಟ್ ಗ್ರಾಜ್ಯುಯೇಟ್ ಮತ್ತು ಎಂಎ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವೇತನ : ಸಂಶೋಧನಾ ಸಹಾಯಕ ಹುದ್ದೆಗೆ ಮಾಸಿಕ ರೂ.17,000/-, ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಮಾಸಿಕ ರೂ.15,000/- ವೇತನ‌ ನಿಗದಿ ಪಡಿಸಲಾಗಿದೆ.

    ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 10, ಜೂನ್, 2021 ರೊಳಗೆ ಸಲ್ಲಿಸಬೇಕು.

    ವಿಳಾಸ : Dr. Ramesh Salian, Principal Investigator, ICSSR Research Project, University College Arts, Tumkur University, Tumkur- 572103

  • 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    5 ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಮಾನದಂಡಗಳಿಗೆ ಸಮನಾಗಿ ಎಸ್ ಸಿಗಳಲ್ಲಿ ಒಟ್ಟು ದಾಖಲಾತಿ ಅನುಪಾತವನ್ನು (ಉನ್ನತ ಶಿಕ್ಷಣ) ತರಲು ಭಾರತ ಸರಕಾರವು ರಾಜ್ಯ ಸರಕಾರದೊಂದಿಗೆ ಕೂಡಿ 2021-22 ರ ಅವಧಿಯಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ‌ನೀಡಲಿದೆ.

    ಅರ್ಹತೆ : ಎಸ್ ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ 11ನೇ ತರಗತಿ ಮತ್ತು ಅದಕ್ಕಿಂತ ಮೇಲಿನ ತರಗತಿಯಲ್ಲಿ ಅಧ್ಯಯನ ಮಾಡಲು ಅವರ ಪೋಷಕರ ವಾರ್ಷಿಕ ಆದಾಯ ರೂ.< 25 ಲಕ್ಷ ಇರಬೇಕು.

    ಉಪಯೋಗಗಳು : ಕೋರ್ಸ್ ನ ಸಂಪೂರ್ಣ ಅವಧಿಗೆ ವಿದ್ಯಾರ್ಥಿವೇತನವು ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.
    ಬೋಧನಾ ಶುಲ್ಕ ಸೇರಿದಂತೆ ಕಡ್ಡಾಯ ಮರುಪಾವತಿಸಬೇಕಾದ ಶುಲ್ಕಗಳು.
    ಶಿಕ್ಷಣದ ಮಟ್ಟವನ್ನು ಆಧರಿಸಿ ವಾರ್ಷಿಕ ‌2500 ರಿಂದ 13500 ರವರೆಗೆ ಶೈಕ್ಷಣಿಕ ಭತ್ಯೆ.
    ದಿವ್ಯಾಂಗ ವಿದ್ಯಾರ್ಥಿಗಳಿಗೆ ಹತ್ತು ಪರ್ಸೆಂಟ್ ಹೆಚ್ಚುವರಿ ಭತ್ಯೆ ನೀಡಲಾಗುವುದು.
    ಎಲ್ಲಾ ಅರ್ಹ ವಿದ್ಯಾರ್ಥಿಗಳು ಬೋಧನಾ ‌ಶುಲ್ಕ‌ಮತ್ತು ಹಾಸ್ಟೆಲ್ ಶುಲ್ಕವನ್ನು ‌ಮೊದಲೇ ಪಾವತಿಸದೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
    ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರಗಳು ಫ್ರೀ ಶಿಪ್ ಕಾರ್ಡ್ ನೀಡುವ ಮೂಲಕ ಶುಲ್ಕವನ್ನು ಮೊದಲೇ ಪಾವತಿಸದೆ ಸಂಸ್ಥೆಯಲ್ಲಿ ಅಧ್ಯಯನ ಮಾಡಲು ಅನುವು ಮಾಡಿಕೊಡುತ್ತವೆ‌

    ಅರ್ಜಿಗಳು : ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ಸರಕಾರದ ಆನ್ಲೈನ್ ‌ವಿದ್ಯಾರ್ಥಿವೇತನ ವೇದಿಕೆಯಲ್ಲಿ 2021 ರ ಎಪ್ರಿಲ್ 16 ಜೂನ್ 30 ರವರೆಗೆ ಪ್ರಾರಂಭವಾಗುವ ಮೊದಲ ಕರೆಯಲ್ಲಿ ಅರ್ಜಿ ಸಲ್ಲಿಸಬಹುದು.
    ಯಾವುದೇ ತೊಂದರೆಗಳಿದ್ದಲ್ಲಿ ರಾಜ್ಯ ಸರಕಾರದ ಕುಂದುಕೊರತೆ ಪರಿಹಾರ ಸಂಖ್ಯೆಗೆ ಕರೆ ಮಾಡಿ ಅಥವಾ ರಾಜ್ಯ ಸರಕಾರದ ‌ಸಮಾಜ ಕಲ್ಯಾಣ ಆಯುಕ್ತರನ್ನು ಸಂಪರ್ಕಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.socialjustice.nic.in ನಲ್ಲಿ ನೋಡಬಹುದು.