Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ರೈಲು ಗಾಲಿ ಕಾರ್ಖಾನೆ : ಹುದ್ದೆಗೆ ಅರ್ಜಿ‌ ಆಹ್ವಾನ

    ರೈಲು ಗಾಲಿ ಕಾರ್ಖಾನೆ : ಹುದ್ದೆಗೆ ಅರ್ಜಿ‌ ಆಹ್ವಾನ

    ರೈಲು ಗಾಲಿ ಕಾರ್ಖಾನೆ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ: ವೈದ್ಯರ ನೇಮಕಾತಿ

    ಸಂದರ್ಶನದ ದಿನಾಂಕ ಮತ್ತು ಸಮಯ : 07-05-2021 ರಂದು 10.00 ಗಂಟೆಗೆ

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.rwf.Indianrailways.gov.in ಗೆ ಭೇಟಿ ನೀಡಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಹುದ್ದೆ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಹುದ್ದೆ

    ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ 19 ಪ್ರಕರಣಗಳನ್ನಜ ಸಮರ್ಪಕವಾಗಿ ನಿಭಾಯಿಸಲು ಡಿ.ಸಿ.ಹೆಚ್.ಸಿ ಮತ್ತು ಸಿ.ಸಿ.ಸಿ. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪ್ರಯೋಗ ಶಾಲಾ ತಂತ್ರಜ್ಞರು – 23 ಹುದ್ದೆಗಳು
    ಕ್ಷ – ಕಿರಣ ತಂತ್ರಜ್ಞರು – 11 ಹುದ್ದೆಗಳು
    ಗ್ರೂಪ್ – ಡಿ – 58 ಹುದ್ದೆಗಳು
    ಡಾಟಾ ಎಂಟ್ರಿ ಅಪರೇಟರ್ – 21 ಹುದ್ದೆಗಳು
    40 ವರ್ಷ ವಯೋಮಿತಿಯೊಳಗಿನ ಅಭ್ಯಯ ಅರ್ಜಿಯನ್ನು ಸಲ್ಲಿಸಬಹುದು.

    ದಿನಾಂಕ‌ 06-05-2021 ರ 11.00 ಗಂಟೆಯಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 08194-235464

  • 2672 KSRP PC ನೇಮಕ : ಆಯ್ಕೆ ಪಟ್ಟಿ ಪ್ರಕಟ

    2672 KSRP PC ನೇಮಕ : ಆಯ್ಕೆ ಪಟ್ಟಿ ಪ್ರಕಟ

    ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹಾಗೆ ವಿವಿಧ ವಲಯಗಳಿಗೆ ಅಂತಿಮ‌ ಪಟ್ಟಿಯನ್ನು ಭಾಗಶಃ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯನ್ನು ಕೆಎಸ್ ಪಿ ವೆಬ್‌ಸೈಟ್‌ ನಲ್ಲಿ ವೀಕ್ಷಿಸಬಹುದು.

    ಪ್ರಸ್ತುತ ಬೆಂಗಳೂರು ವಲಯದ 4 ನೇ ಪಡೆ ಮತ್ತು 3 ನೇ ಪಡೆ ಕೆಎಸ್ ಆರ್ ಪಿ ಯ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾಗಶಃ ಪ್ರಕಟಿಸಲಾಗಿದೆ.

    ಅಭ್ಯರ್ಥಿಗಳು ಸದರಿ ಆಯ್ಕೆ ಪಟ್ಟಿಯನ್ನು ಈ ಲಿಂಕ್ ಕ್ಲಿಕ್ ಮಾಡಬಹುದು

  • ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ: ವಿವರ ಇಲ್ಲಿದೆ

    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ: ವಿವರ ಇಲ್ಲಿದೆ

    ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ” ಮೆಟ್ರಿಕ್ -ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ” ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 30-04-2021 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಹಾಗೂ ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ದಿನಾಂಕ 12-05-2021 ರವರೆಗೂ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15-05-2021 ರವರೆಗೆ ವಿಸ್ತರಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ : www.ssp.postmatric.karnataka.gov.in

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

    ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

    ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.

  • ಜಿಲ್ಲಾ ಆಯುಷ್ ಸೊಸೈಟಿಯಲ್ಲಿ ಉದ್ಯೋಗ

    ಜಿಲ್ಲಾ ಆಯುಷ್ ಸೊಸೈಟಿಯಲ್ಲಿ ಉದ್ಯೋಗ

    ಆಯುಷ್ ನಿರ್ದೇಶನಾಲಯದ ಆಯುಷ್ ಇಲಾಖೆಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ: ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು

    ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನವಿರುತ್ತದೆ.

    ವಿದ್ಯಾರ್ಹತೆ :ಗ್ರಾಜ್ಯುಯೇಶನ್ ಡಿಗ್ರಿ ಯನ್ನು ಯಾವುದೇ ಆಯುಷ್ ಪಿಜಿ. ಎಂಬಿಎ/ ಪೋಸ್ಟ್ ಗ್ರಾಜ್ಯುಯೇಶನ್ ಡಿಪ್ಲೋಮಾ AICTE ನಿಂದ ಪಡೆದುಕೊಂಡಿರಬೇಕು.

    ಗರಿಷ್ಠ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಯು ನಡೆಯುತ್ತದೆ. ರೂ. 200 ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ದಿನಾಂಕ 15-05-2021 ರಂದು ಸಮಯ ಸಂಜೆ 4.30 ಘಂಟೆಯೊಳಗಾಗಿ ಅರ್ಜಿಯನ್ನು ಕಚೇರಿಯಿಂದ ಪಡೆದುಕೊಳ್ಳುವುದು.
    ದಿನಾಂಕ 17-05-2021 ರಂದು ಸಮಯ ಸಂಜೆ 4.30 ಘಂಟೆಯೊಳಗಾಗಿ ತಲುಪುವಂತೆ ಅರ್ಜಿಗಳನ್ನು ಸಲ್ಲಿಸುವುದು.