Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಮೈಸೂರು ಯುನಿವರ್ಸಿಟಿ : ಉದ್ಯೋಗವಕಾಶ‌

    ಮೈಸೂರು ಯುನಿವರ್ಸಿಟಿ : ಉದ್ಯೋಗವಕಾಶ‌

    ಮೈಸೂರು ಯುನಿವರ್ಸಿಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ದಿನಾಂಕ 05, ಮೇ 2021 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

    ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸ ಬಹುದು.

    ಹುದ್ದೆ : ಜ್ಯೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 02

    ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಹೊಂದಿರಬೇಕು. ಮಾಸಿಕ ರೂ.31,000/- ವೇತನವಿರುತ್ತದೆ. ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಎಂ.ಟೆಕ್, ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ. 47,000/- ವೇತನವಿರುತ್ತದೆ.

    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ವಿಳಾಸಕ್ಕೆ ದಿನಾಂಕ 05-05-2021 ರೊಳಗೆ ಸ್ಪೀಡ್ ಪೋಸ್ಟ್/ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
    ವಿಳಾಸ ಈ ರೀತಿ ಇದೆ :
    Prof. H. B. Manjunatha, Coordinator, B/RAC Project, Department of Sericulture, University of Mysore, Mysore

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದಲ್ಲಿ ಉದ್ಯೋಗ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದಲ್ಲಿ ಉದ್ಯೋಗ

    ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಎಂ.ಬಿ.ಬಿ.ಎಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೈದ್ಯಾಧಿಕಾರಿಗಳು ( ಎನ್‌ಸಿಡಿ) : ಒಟ್ಟು 07 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 45,000/- ರೂ.ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೈದ್ಯಾಧಿಕಾರಿಗಳು ( ಆರ್‌.ಎನ್‌.ಟಿ.ಸಿ.ಪಿ) : ಒಟ್ಟು ಎರಡು ಹುದ್ದೆಗಳಿದ್ದು, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿದ್ದು, ಮಾಸಿಕ 45,000/-ರೂ.ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೈದ್ಯಾಧಿಕಾರಿಗಳು (ರಾಜ್ಯ ರಕ್ತ ವಾಹಿನಿ ವಿಭಾಗ) : ಒಂದು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ರೂ. 36,750/- ಮಾಸಿಕ ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಹ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ : 29-04-2021 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್‌ಹೆಚ್‌ಎಂ ವಿಭಾಗದ ವಿಷಯ ನಿರ್ವಾಹಕರಾದ ಶ್ರೀ.ಎಮ್‌.ಎಸ್‌.ಮಕಾನದಾರ (ಪ್ರ.ದ.ಸ) ಮೊ. 9606345997 ಇವರಲ್ಲಿ ಅರ್ಜಿ ಪಡೆದು ಬೆಳಿಗ್ಗೆ ಹತ್ತುಗಂಟೆಯಿಂದ ಸಾಯಂಕಾಲ ಐದು ಗಂಟವರೆಗೆ ದಾಖಲಾತಿ ಸಲ್ಲಿಸಲು ಸೂಚಿಸಲಾಗಿದೆ.

  • ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ ವಿವಿಧ ಹುದ್ದೆ

    ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ ವಿವಿಧ ಹುದ್ದೆ

    ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್.,ಸಿದ್ದಾಪುರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಪ್ರಧಾನ ವ್ಯವಸ್ಥಾಪಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಎಂಬಿಎ(ಹಣಕಾಸು ) ಅಥವಾ ಎಂ.ಕಾಂ. ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 15 ವರ್ಷಗಳ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ,ವಿದ್ಯಾರ್ಹತೆಯ ದೃಢೀಕರಣ ಪತ್ರ , ಅನುಭವ ಪತ್ರದೊಂದಿಗೆ ಪ್ರಕಟಣೆ ದಿನಾಂಕದಿಂದ 15 ದಿನದೊಳಗೆ ನಾಡೋಜ ಜಗದೀಶ ಎಸ್ ಗುಡಗುಂಟಿ , ಅಧ್ಯಕ್ಷರು, ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್.,ಸಾಕ್ಷಾತ್ಕಾರ ನಿಲಯ, ರಾಮತೀರ್ಥ ಅರಮನೆ ರಸ್ತೆ, ಕಿತ್ತೂರು ಚೆನ್ನಮ್ಮ ಸರ್ಕಲ್, ಜಮಖಂಡಿ – 587301 ಜಿಲ್ಲೆ : ಬಾಗಲಕೋಟ ಹಾಗೂ ಇ -ಮೇಲ್ ,ಮೂಲಕ ಅರ್ಜಿ ಸಲ್ಲಿಸುವವರು [email protected] ಹಾಗೂ [email protected] ಎರಡು ಇ-ಮೇಲ್ ವಿಳಾಸಗಳಿಗೆ ರವಾನಿಸಿಲು ತಿಳಿಸಲಾಗಿದೆ.

  • ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆ : ಐದು ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ (Junior Assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಸಾಮಾನ್ಯ ಅಭ್ಯರ್ಥಿ : 3
    ಪರಿಶಿಷ್ಟ ಜಾತಿ : 2
    ಪ್ರವರ್ಗ – 1-1

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸಂಘವು ಪೂರೈಸುವ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ : 24-05-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಕಲಿತಿರಬೇಕು. ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಅಪರೇಟ್ ಮತ್ತು ಅಪ್ಲಿಕೇಶನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ಹದಿನೆಂಟು ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿಗೊಳಪಟ್ಟಿರಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ – 1 ಅಭ್ಯರ್ಥಿಗಳಿಗೆ 40 ವರ್ಷ, 2a, 2b,3a, 3b ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹೊಂದಿರಬೇಕು.

    ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಅರ್ಜಿಯನ್ನು ವಿತರಿಸಲಾಗುವುದು. ರೂ.2000 ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು.

    ಸಂಘದಿಂದ ಪೂರೈಸಿದ ಮೂಲ ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ -562125 ಇಲ್ಲಿಗೆ ಸಲ್ಲಿಸಬೇಕು.

  • 223 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    223 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    ಚಾಮರಾಜನಗರ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 70 ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌.ಎಸ್‌.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆಯಾಗಿರಬೇಕು.

    ಅರ್ಹ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 26-04-2021 ಬೆಳಗ್ಗೆ 10.00ಗಂಟೆ ಯಿಂದ 25-05-2021 ರ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :26-04-2021 ಬೆಳಗ್ಗೆ 10.00 ಗಂಟೆಯಿಂದ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021 ಸಂಜೆ 5.30 ರವರೆಗೆ
    ಆನ್‌ಲೈನ್‌ನಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆ : 26-05-2021 ರಿಂದ 31-05-2021 ರವರೆಗೆ
    ಅರ್ಹರಾದ ಅಭ್ಯರ್ಥಿಗಳ ಪಟ್ಟಿಗೆ ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆಯುವುದು : 01-06-2021 ರಿಂದ 03-06-2021 ರವರೆಗೆ
    ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಣೆ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆಗೆ ಕಾಲಾವಕಾಶ : 04-06-2021 ರಿಂದ 11-06-2021ರವರೆಗೆ
    ಆಕ್ಷೇಪಣೆ ಬಂದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ : 14-06-2021 ರಿಂದ 21-06-2021 ರವರೆಗೆ
    ಪರಿಶೀಲನೆ ನಂತರ ಆಯ್ಕೆ ಸಮಿತಿಯ ಸಭೆ ನಡೆಸಿ,ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆಯಲು ಕಾಲಾವಕಾಶ : 22-06-2021 ರಿಂದ 24-06-2021 ರವರೆಗೆ

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಪದವೀಧರರ ಸಹಕಾರ ಸಂಘದಲ್ಲಿ ಉದ್ಯೋಗವಕಾಶ

    ಪದವೀಧರರ ಸಹಕಾರ ಸಂಘದಲ್ಲಿ ಉದ್ಯೋಗವಕಾಶ

    ಶಿವಮೊಗ್ಗ ಕುವೆಂಪು ಮಾರ್ಗದಲ್ಲಿನ ಪದವೀಧರರ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ ಮೇ 27, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ವಯೋಮಿತಿ, ಅರ್ಜಿ ಶುಲ್ಕ ಇತ್ಯಾದಿಗಳ ಬಗ್ಗೆ ಈ ಕೆಳಗೆ ನೀಡಲಾಗಿದೆ.

    ಹುದ್ದೆ : ದ್ವಿತೀಯ ದರ್ಜೆ ಸಹಾಯಕ ಮತ್ತು 4 ನೇ ದರ್ಜೆ ನೌಕರರ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ.

    ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 55 ಶೇಕಡ ಅಂಕಗಳನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ( ಬಿ.ಕಾಂ/ಬಿಬಿಎಂ/ಎಂ.ಕಾಂ/ಎಂ.ಬಿ.ಎ/ಎಲ್‌ಎಲ್‌ಬಿ ಮತ್ತು ಸಹಕಾರ ವಿಷಯದಲ್ಲಿ ಪದವಿ ಅಧ್ಯಯನ ಮಾಡಿದವರಿಗೆ ಮತ್ತು ಹೆಚ್ಚಿನ ವಿದ್ಯಾರ್ಹತೆ ಹಾಗೂ ಅನುಭವವುಳ್ಳವರಿಗೆ ಆದ್ಯತೆ ನೀಡಲಾಗುವುದು) ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.2000/- ನ್ನು ಪಾವತಿಸಬೇಕಾಗುತ್ತದೆ.

    4 ನೇ ದರ್ಜೆ ನೌಕರರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ನ್ನು ಶೇ.40 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಈ ಹುದ್ದೆಗೆ ಅರ್ಜಿ ಶುಲ್ಕ ರೂ.1000/- ನ್ನು ಪಾವತಿಸಬೇಕು. ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಡಲು /ಓದಲು/ಬರೆಯಲು ತಿಳಿದಿರಬೇಕು.

    ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರೆ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಶಿವಮೊಗ್ಗದ ಕುವೆಂಪು ಮಾರ್ಗದಲ್ಲಿನ ಪದವೀಧರರ ಸಹಕಾರ ಸಂಘದ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯ ಮೇಲ್ಭಾಗದಲ್ಲಿ ಇತ್ತೀಚಿನ ಪಾಸ್‌ಪೋರ್ಟ್‌ ಸೈಜಿನ ಫೊಟೋ ಅಂಟಿಸಿ ಎಲ್ಲಾ ದಾಖಲೆಗಳೊಂದಿಗೆ ಲಕೋಟೆಯನ್ನು ದಿನಾಂಕ 27-05-2021 ರಂದು ಸಂಜೆ 05 ಗಂಟೆಯೊಳಗೆ ಪದವೀಧರರ ಸಹಕಾರ ಸಂಘ ನಿ., ಕುವೆಂಪು ಮಾರ್ಗ, ಶಿವಮೊಗ್ಗ ಇಲ್ಲಿಗೆ ತಲುಪುವಂತೆ ಸಲ್ಲಿಸತಕ್ಕದ್ದು.