Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ : ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

    ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ : ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

    ಐ.ಡಿ.ಎಸ್‌.ಪಿ , ಎನ್‌.ಸಿ.ಡಿ ಕ್ಲಿನಿಕ್, ಎನ್‌.ಪಿ.ಹೆಚ್.ಸಿ ( ಹಿರಿಯ ನಾಗರಿಕರ ವಾರ್ಡ್ ) ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಅಭಿಯಾನದ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಡಾಟಾ ಮ್ಯಾನೇಜರ್- 01, ಡಾಕ್ಟರ್ (ಜನರಲ್ ಫಿಸಿಶಿಯನ್)- 01, ಡಾಕ್ಟರ್ ( ಕನ್ಸಲ್ಟೆಂಟ್ ಮೆಡಿಸಿನ್) – 01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನುಆಹ್ವಾನಿಸಲಾಗಿದೆ.

    ಡಾಟಾ ಮ್ಯಾನೇಜರ್ (ಐಡಿಎಸ್‌ಪಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೋಸ್ಟ್ ಗ್ರಾಜ್ಯುಯೇಶನ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿಇ ಇನ್ ಐಟಿ/ ಎಲೆಕ್ಟ್ರಾನಿಕ್ಸ್ ನ್ನು ಹೊಂದಿರಬೇಕು. ಹಾಗೂ ಸದರಿ ಹುದ್ದೆಯಲ್ಲಿ ಒಂದು ವರ್ಷಗಳ ಅನುಭವವಿರಬೇಕು. ಹೆಲ್ತ್ ಅಥವಾ ಸೋಷಿಯಲ್ ಸೆಕ್ಟರ್ ನಲ್ಲಿಅನುಭವವಿರುವರಿಗೆ ಆದ್ಯತೆ ನೀಡಲಾಗುವುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,050/- ಮಾಸಿಕ ವೇತನವಿರುತ್ತದೆ.

    ಡಾಕ್ಟರ್ (ಜನರಲ್ ಪಿಸಿಶಿಯನ್)(ಎನ್‌ಸಿಡಿ ಕ್ಲಿನಿಕ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ.ಎಸ್‌.ಎಸ್‌, ಎಂಡಿ (ಇಂಟರ್ನಲ್ ಮೆಡಿಸಿನ್) ಹೊಂದಿರಬೇಕು. ಸದರಿ ಹುದ್ದೆಯಲ್ಲಿ 3 ವರ್ಷಗಳ ಅನುಭವ ಇರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,10,000/- ಅಥವಾ ರೂ. 50,000/- ಮಾಸಿಕ ವೇತನವಿರುತ್ತದೆ.

    ಡಾಕ್ಟರ್ (ಕನ್ಸಲ್ಟೆಂಟ್ ಮೆಡಿಸಿನ್)(ಎನ್‌ಪಿಎಚ್‌ಸಿಇ ವಾರ್ಡ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಗ್ರಾಜ್ಯುಯೇಟ್ ಮಾಡಿರಬೇಕು. 3 ವರ್ಷಗಳ ಅನುಭವವಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.

    ಈ ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ 29-04-2021 ರಿಂದ 05-05-2021 ರವರೆಗೆ ಅರ್ಜಿಗಳನ್ನು ದೃಢೀಕರಣ ಸಹಿಯೊಂದಿಗೆ ನೇರವಾಗಿ ಮೇಲ್ಕಂಡ ಕಛೇರಿಯಲ್ಲಿ ಸಲ್ಲಿಸಲು ಸೂಚಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಕಾರ್ಯಾಯಾಲಯದ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ. ಕಛೇರಿಯ ಸಮಯ ಬೆಳಿಗ್ಗೆ : 11.00 ರಿಂದ ಸಂಜೆ 5.00 ರವರೆಗೆ.

  • RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ)

    ನೈರ್ಮಲ್ಯ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವುಳ್ಳವರಿಗೆ ಮಾತ್ರ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬಾಗಲಕೋಟೆಯವರಿಂದ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹಿರಿಯ ವಿಶ್ಲೇಷಣಾಗಾರರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/-, ಕಿರಿಯ ವಿಶ್ಲೇಷಣೆಗಾರರು ಹುದ್ದೆಗೆ ಮಾಸಿಕ ರೂ.15,000/-, ನೀರಿನ ಮಾದರಿ ಸಂಗ್ರಹಗಾರರು ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.13,000+2000/- ವೇತನ ವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
    ವಯೋಮಿತಿ ದೃಢೀಕರಿಸಲು ಎಸ್ಎಸ್‌ಎಲ್‌ಸಿ ಅಂಕಪಟ್ಟಿ ಹಾಜರುಪಡಿಸುವುದು.

    ಆಯ್ಕೆಯಾದ ಅಭ್ಯರ್ಥಿಗಳು ಈ ಜಿಲ್ಲೆಯಲ್ಲಿ ಪ್ರಯೋಗಾಲಯದ ಯಾವುದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಗಳೂ ಸೂಚಿಸಿದ್ದಲ್ಲಿ ನಿರ್ವಹಿಸಲು ಬದ್ಧನಾಗಿರಬೇಕು.

    ಹುದ್ದೆಗಳು ಗುತ್ತಿಗೆಯ ತಾತ್ಕಾಲಿಕ ಖಾಲಿ ಇರುವ ಅವಧಿಗಾಗಿ ಮಾತ್ರ ಇರುತ್ತದೆ.

    ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಇಂಜಿನಿಯರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಹಳೇ ತಹಶೀಲ್ದಾರ ಕಚೇರಿ ಕಟ್ಟಡ, ಬಾಗಲಕೋಟೆ

  • ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

    ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

    ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ) -2021 ನ್ನು ದಿನಾಂಕ 25-04-2021 (ಭಾನುವಾರ )ರಂದು ನಡೆಸಲು ನಿರ್ಧರಿಸಿತ್ತು. ಆದರೆ ಕೋವಿಡ್ -19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಕರ್ನಾಟಕ ಸರಕಾರ ವಾರಾಂತ್ಯದಲ್ಲಿ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

    ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್‌ಸೈಟ್‌ನಲ್ಲಿ https://kset.uni-mysore.ac.in/ ಆಗ್ಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ನೋಡಬಹುದಾಗಿ ತಿಳಿಸಲಾಗಿದೆ.

  • ಕೆ-ರೈಡ್ : ವಿವಿಧ ಹುದ್ದೆಗಳು: ಈ ಕೂಡಲೇ ಅರ್ಜಿ ಸಲ್ಲಿಸಿ

    ಕೆ-ರೈಡ್ : ವಿವಿಧ ಹುದ್ದೆಗಳು: ಈ ಕೂಡಲೇ ಅರ್ಜಿ ಸಲ್ಲಿಸಿ

    ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ಕರ್ನಾಟಕ ಸರಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮವಾದ ಕೆ-ರೈಡ್ ಸಂಸ್ಥೆಯು ಈ ಕೆಳಗಿನ ಹುದ್ದೆಗಳಿಗೆ ನಿಯೋಜನೆ/ ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ ವಿವರ : ಪ್ರಧಾನ ವ್ಯವಸ್ಥಾಪಕರು, ಸೀನಿಯರ್ ಡಿಜಿಯಂ/ಜಿಜಿಎಂ/ಎಜಿಎಂ ಡಿಸೈನ್ (ಸಿವಿಲ್), ವ್ಯವಸ್ಥಾಪಕರು, ಸಹಾಯಕ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಕಾರ್ಯನಿರ್ವಾಹಕ, ನಿರ್ದೇಶಕ ಬಿಡಿ& ಎಫ್ ರವರಿಗೆ ಕಾರ್ಯ ನಿರ್ವಾಹಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21-05-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kride.in ಗೆ ಭೇಟಿ ನೀಡಬಹುದು

  • ಸಹಾಯಕ ಹುದ್ದೆ, ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

    ಸಹಾಯಕ ಹುದ್ದೆ, ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರಿನ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

    ಹುದ್ದೆ : ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆ ಹೊರಡಿಸಿದ 7 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

    ವಿದ್ಯಾರ್ಹತೆ : ಬಿ.ಕಾಂ, ಬಿಬಿಎಂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಮತ್ತು ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ, ಟ್ಯಾಲಿ ತಂತ್ರಾಂಶ ಉಪಯೋಗಿಸುವ ಜ್ಞಾನ ಇತ್ಯಾದಿ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ರೂ.16,000/- ಗೌರವಧನ ನಿಗದಿಪಡಿಸಲಾಗಿದೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ ಮತ್ತು ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

    ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುವೆಂಪು ನಗರದ ಅಕ್ಷಯ ಭಂಡಾರ ವೃತ್ತದ ಬಳಿ ಇರುವ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿ ಮತ್ತು ಬಾಲಕಾರ್ಮಿಕ ಯೋಜನಾ ಸೊಸೈಟಿ ಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

    ಆಸಕ್ತರು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ : 0821-2541942

  • ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 34 ಹುದ್ದೆಗಳು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ)

    ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

    ಕನ್ನಡ ಓದಲು ಬರೆಯಲು ತಿಳಿದಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವಯೋಮಿತಿಯವರಾಗಿರಬೇಕು.

    ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-I ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಧೃಢೀಕರಣ ಪತ್ರ ಹೊಂದಿದ್ದಲ್ಲಿ‌ ಗರಿಷ್ಠ 40 ವರ್ಷ.

    ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.

    ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2ಎ, 2 ಬಿ, 3 ಎ, 3 ಬಿ ಸೇರಿದ ಅಭ್ಯರ್ಥಿಗಳಿಗೆ ರೂ. 200/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಹಾಗೂ ಎಲ್ಲಾ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

    ಆನ್ಲೈನ್ ಹೊರತು ಪಡಿಸಿ ಬೇರೆ ಯಾವುದೇ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ