Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • KSCDRC ನಲ್ಲಿ ವಿವಿಧ ಹುದ್ದೆ

    KSCDRC ನಲ್ಲಿ ವಿವಿಧ ಹುದ್ದೆ

    ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿನ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ್ಕೆ ಅರ್ಹರಿರುವಂತಹ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ 31-04-2021 ರಾತ್ರಿ 11.59 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಗಿರುತ್ತದೆ.

    ಹುದ್ದೆಗಳ ವಿವರ : ಅಧ್ಯಕ್ಷರು, ಸದಸ್ಯರು, ಮಹಿಳಾ ಸದಸ್ಯರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ನೇಮಕಾತಿ ವಿಧಾನ : ಗ್ರಾಹಕ ಸಂರಕ್ಷಣಾ ( ರಾಜ್ಯ ಆಯೋಗಗಳ ಹಾಗೂ ಜಿಲ್ಲಾ ಆಯೋಗಗಳ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಾತಿಗೆ ವಿದ್ಯಾರ್ಹತೆ, ನೇಮಕಾತಿ ಕ್ರಮ, ನೇಮಕಾತಿ ವಿಧಾನ, ಕಛೇರಿ ಸೇವಾವಧಿ, ರಾಜೀನಾಮೆ ಹಾಗೂ ವಜಾಗೊಳಿಸುವಿಕೆ ) ನಿಯಮಗಳು , 2020 ಅನುಸಾರ ಅಧ್ಯಕ್ಷರ ಹಾಗೂ ಸದಸ್ಯರುಗಳ ಆಯ್ಕೆಯನ್ನು ಮಾಡಲಾಗುವುದು.

    ಸೇವಾವಧಿ : 4 ವರ್ಷಗಳು ಅಥವಾ 65 ವರ್ಷಗಳ ವಯೋಮಾನದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.250/-ಗಳ ಅರ್ಜಿ ಶುಲ್ಕವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕಲ್ಪಿಸಿರುವಂತಹ ವಿಧಾನದಲ್ಲಿ ಪಾವತಿಸತಕ್ಕದ್ದು.

    ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಈ ಕೆಳಕಂಡ ಜಾಲತಾಣಗಳ ಮೂಲಕ ಸಲ್ಲಿಸಬಹುದಾಗಿರುತ್ತದೆ. https://aaharasachivalaya.karnataka.gov.in/
    https://kscdrc.karnataka.gov.in
    https://sevasindhu.karnataka.gov.in

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಸಂಶೋಧನಾ ಸಹಾಯಕರ ನೇಮಕಾತಿಗಾಗಿ ಪ್ರಕಟಣೆ

    ಸಂಶೋಧನಾ ಸಹಾಯಕರ ನೇಮಕಾತಿಗಾಗಿ ಪ್ರಕಟಣೆ

    ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ ಇಲ್ಲಿನ ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಮಾಸಿಕ ಸಂಚಿತ ವೇತನದ ಆಧಾರದ ಮೇಲೆ ಸಂಶೋಧನಾ ‌ಸಹಾಯಕ ಹುದ್ದೆಯ ನೇಮಕಾತಿಗಾಗಿ ‌ಅರ್ಜಿಯನ್ನು ಆಹ್ವಾನಿದ್ದು, ವಿವರಗಳು ಈ ಕೆಳಗಿನಂತಿವೆ.

    ಹುದ್ದೆ : ಸಂಶೋಧನಾ ಸಹಾಯಕ – 01

    ಮಾಸಿಕ ವೇತನ : ರೂ. 20,000/-

    ವಿದ್ಯಾರ್ಹತೆ : ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ.
    ಸಂಶೋಧನಾ ಪ್ರಾಜೆಕ್ಟ್ ಗ/ ಸಂಶೋಧನಾ ಲೇಖನಗಳ ಪ್ರಕಟಣೆಯ ಮೂಲಕ ಗುರುತಿಸಬಹುದಾದ ಸಂಶೋಧನಾ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಆದ್ಯತೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣದಲ್ಲಿ (www.kslu.karnataka.gov.in) ಲಭ್ಯವಿರುವ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಲಾದ ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಕುಲಸಚಿವರು,‌ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ- 580025.

    ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣವನ್ನು ವೀಕ್ಷಿಸಬಹುದು.

  • ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ, ನೆಲಮಂಗಲ ಹಾಗೂ ದೇವನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23 ರೊಳಗೆ ಅರ್ಜಿ ಸಲ್ಲಿಸಬಹುದು.

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ – ಮಾಸಿಕ ರೂ.6000/- ವೇತನವಿರುತ್ತದೆ.

    ಶೇ.40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

    ಎಸ್ ಎಸ್ ಎಲ್ ಸಿ ಉತ್ತೀರ್ಣರಾದವರಿಗೆ ಹೆಚ್ಚು ಆದ್ಯತೆ. ಒಂದು ವೇಳೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಿಗದಿದ್ದರೆ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 45 ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಆರೋಗ್ಯವಂತರಾಗಿರಬೇಕು. ಗ್ರಾಮ ಪಂಚಾಯತಿ/ ವ್ಯಾಪ್ತಿಯಲ್ಲಿ ಮಾಹಿತಿ / ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ಹೊಂದಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ.

    ಪ್ರವಾಸ, ಲೇಖನ, ಸಾಮಾಗ್ರಿ ಮತ್ತು ಆಡಳಿತ ವೆಚ್ಚಕ್ಕಾಗಿ ರೂ.150/- ನೀಡಲಾಗುವುದು.

    ದೇವನಹಳ್ಳಿ ತಾಲೂಕಿನ ಕೊಯಿರಾ, ಮಂಡಿಬೆಲೆ, ಜಾಲಿಗೆ, ಕೋರಮಂಗಲ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ, ದೊಡ್ಡಬೆಲೆ, ಅಗಲುಕುಪ್ಪೆ, ಹೊಸಕೋಟೆ ತಾಲೂಕಿನ ದೇವನಗುಂದಿ, ಅನುಗೊಂಡನಹಳ್ಳಿ ಗ್ರಾಮ‌ ಪಂಚಾಯತಿಯಲ್ಲಿ ನೇಮಕಾತಿ ನಡೆಯಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 080-29787442

  • RDPR  : ವಿವಿಧ ಹುದ್ದೆ

    RDPR : ವಿವಿಧ ಹುದ್ದೆ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ‌ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ.

    ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ‌.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ. ಕ್ಯೂ.ಎಮ್.ಎಸ್ ಐ.ಎಮ್.ಐ.ಎಸ್ ಸಮಾಲೋಚಕರು‌- 01

    1. ವೃತ್ತ ಕಚೇರಿ – ಜಲಜೀವನ ಮಿಷನ್
      a. ಹಿರಿಯ ಸಮಾಲೋಚಕರು- 04

    3. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ – ಜಲಜೀವನ‌ಮಿಷನ್
    a. ಜಿಲ್ಲಾ ಯೋಜನಾ ವ್ಯವಸ್ಥಾಪಕ – 02
    b. ಜಿಲ್ಲಾ MIS ಸಮಾಲೋಚಕರು- 05
    c. ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ – 32
    d. ಸೂಕ್ಷ್ಮಾಣುಜಿವಿ ಶಾಸ್ತ್ರಜ್ಞ – 80
    e. ಹಿರಿಯ ವಿಶ್ಲೇಷಣೆಗಾರ – 04
    f. ವಿಶ್ಲೇಷಣೆಗಾರ – 06
    g. ಕಿರಿಯ ವಿಶ್ಲೇಷಣೆಗಾರ – 09

    1. ಜಿಲ್ಲಾ ಪಂಚಾಯಿತಿ ಕಛೇರಿ – ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
      a. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು -01
      b. ಜಿಲ್ಲಾ MIS ಸಮಾಲೋಚಕರು -01
      c. ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು – 01

    ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ‌ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ‌ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ‌ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದು ಪಡಿಸಲಾಗುವುದು.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ಮೀರಿರಬಾರದು.

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯ ಗಳು, ಹಾಗೂ ಅರ್ಜಿ ಜೊತೆಗೆ ” ನಿಗದಿತ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು – 5600-009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ : 28-04-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ವಿದ್ಯಾರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಆಯ್ಕೆ ಪ್ರಕ್ರಿಯೆ : ಕಿರು ಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು‌ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.

    RDPR website: https://rdpr.karnataka.gov.in ಮತ್ತು https://swachhamevajayate.org ( ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು : ಉದ್ಯೋಗವಕಾಶ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು : ಉದ್ಯೋಗವಕಾಶ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ‘ ಕಾನೂನು ಸಲಹೆಗಾರ’ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಕೇವಲ 2 ವರ್ಷಗಳ ಅವಧಿಗೆ ಒಪ್ಪಂದದ ಆಧಾರದ ಮೇಲೆ ಹಿಂದಿನ ವರ್ಷದ ಕಾರ್ಯಕ್ಷಮತೆಯ ಪರಿಶೀಲನೆಯ ನಂತರ ಒಂದು ವರ್ಷದವರೆಗೆ ವಿಸ್ತರಿಸಬಹುದಾಗಿದೆ. ಕೆಲಸಕ್ಕೆ ಸಂಭಾವನೆ ಸೂಕ್ತವಾಗಿದೆ.

    ಅರ್ಹತಾ ಮಾನದಂಡಗಳು :

    1.ಅಭ್ಯರ್ಥಿಯು ಬಾರ್ ಕೌನ್ಸಿಲ್ ಕರ್ನಾಟಕದಲ್ಲಿ ನೊಂದಾಯಿಸಿರಬೇಕು.
    2.ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು.
    3.ಕೆಎಟಿ ಮತ್ತು ಹೈಕೋರ್ಟ್ ನಲ್ಲಿ ಆಡಳಿತ ಮತ್ತು ಕಾನೂನು ವಿಷಯಗಳನ್ನು ನಿರ್ವಹಿಸುವಲ್ಲಿ ಅನುಭವ ಹೊಂದಿರಬೇಕು.
    4. ಅಭ್ಯರ್ಥಿಯು ಕಾನೂನು ಸೇವೆಗಳಲ್ಲಿ ಕನಿಷ್ಠ 15 ವರ್ಷಗಳ ಅನುಭವವನ್ನು ಹೊಂದಿರಬೇಕು.
    5. ಅಭ್ಯರ್ಥಿಯು 60 ವರ್ಷಕ್ಕಿಂತ ಕಡಿಮೆ ವಯೋಮಾನದವರಾಗಿರಬೇಕು.
    6. ಅಭ್ಯರ್ಥಿಯು ಅರ್ಜಿಯ ಹಾರ್ಡ್ ಕಾಪಿಯನ್ನು ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸುವುದು.

    ಮುಖ್ಯ ಆಡಳಿತಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು – 560023

    ಅರ್ಜಿದಾರರು ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಇ- ಮೇಲ್ [email protected] ಗೆ ಕಳುಹಿಸತಕ್ಕದ್ದು.
    ಕಾನೂನು ಸಲಹೆಗಾರರ ಕಛೇರಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು – ಈ ಆವರಣದಲ್ಲಿರುತ್ತದೆ.
    ಅರ್ಜಿ ಸಲ್ಲಿಸಲು‌ಕೊನೆಯ ದಿನಾಂಕ : 12-04-2021 ರ‌ ಸಂಜೆ 05.00 ಗಂಟೆಯವರೆಗೆ.

    ಹೆಚ್ಚಿನ ಮಾಹಿತಿ ಅಥವಾ ವಿವರಗಳಿಗಾಗಿ ಅರ್ಜಿದಾರರು ಇ – ಮೇಲ್ [email protected] ಗೆ ಕಳುಹಿಸಬಹುದು

  • ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಅತಿಥಿ ಶಿಕ್ಷಕರ ನೇಮಕಾತಿ

    ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ : ಎಪ್ರಿಲ್ 10, 2021

    ಸಮಾಜ ಕಲ್ಯಾಣ ಇಲಾಖೆ ( ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ( ಆಂಗ್ಲ ಮಾಧ್ಯಮ ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಅರ್ಜಿಗಳನ್ನು ಸಲ್ಲಿಸುವವರು ಬಿ.ಎ, ಬಿ.ಇಡಿ ಪಾಸಾಗಿರಬೇಕು. ಶಿಕ್ಷಕರನ್ನು ಗೌರವ ಧನದ ಆಧಾರದ ಮೇಲೆ ಶಾಲಾ ಹಂತದಲ್ಲಿ ನಿಯಮಾವಳಿಗೆ ಒಳಪಟ್ಟು ನೇಮಕ ಮಾಡಲಾಗುವುದು. ನಿವೃತ ಶಿಕ್ಷಕರು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳೊಂದಿಗೆ 2021, ಎಪ್ರಿಲ್ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 8747924789