Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಜಿಲ್ಲಾ ಆರೋಗ್ಯ ಮತ್ತು ಕುಟುಂಟ ಕಲ್ಯಾಣ ಸಂಘ ಉಡುಪಿ (ಡಿಎಚ್‌ಎಫ್‌ಎಸ್‌) 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕೆಳಗೆ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಹ ಅಭ್ಯರ್ಥಿಗಳಿಂದ ದಿನಾಂಕ 07-04-2021 ರಂದು 10.30 am ನಿಂದ 01.30 pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಛೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ವಿವರ : ಅನೆಸ್ಥಿಟಿಸ್ಟ್‌ -01
    ಗೈನಕಾಲಜಿ ಮತ್ತು ಒಬಸ್ಟೆಟ್ರಿಕ್ಸ್‌-01
    ಪಂಚಕರ್ಮ ತಜ್ಞ ವೈದ್ಯರು-01
    ಡೆಂಟಲ್ ಹೈಜೆನಿಸ್ಟ್‌-01
    ಮೆಡಿಕಲ್ ಆಫೀಸರ್-04
    ಎಎನ್‌ಎಂ-05

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಜಾತಿ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
    ರೂ.15,000/- ಕ್ಕಿಂತ ಕಡಿಮೆ ವೇತನವಿರುವ ಹುದ್ದೆಗೆ ಪಿ.ಎಫ್.ಸೌಲಭ್ಯ ನೀಡಲಾಗುವುದು.
    ವೈದ್ಯಾಧಿಕಾರಿ – 50 ವರ್ಷದೊಳಗೆ ಪ್ರಥಮ ಆದ್ಯತೆ. 50 ರಿಂದ 65 ವರ್ಷದೊಳಗೆ ದ್ವಿತೀಯ ಆದ್ಯತೆ. 65 ರಿಂದ 70 ವರ್ಷದೊಳಗೆ ತೃತೀಯ ಆದ್ಯತೆ ನೀಡಲಾಗುವುದು.
    ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • AIISH ಮೈಸೂರು:  ವಿವಿಧ ಹುದ್ದೆ

    AIISH ಮೈಸೂರು: ವಿವಿಧ ಹುದ್ದೆ

    ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021

    ಹುದ್ದೆ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು- 02
    ಸೆಕ್ಯುರಿಟಿ ಆಫೀಸರ್- 01
    ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ 2 – 04
    ಆಡಿಯೋಲಾಜಿಸ್ಟ್ – 04

    ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಎಂಎ/ಎಂ.ಎಸ್ಸಿ/ಪದವಿ/ಬಿಎಸ್ಸಿ ಪದವಿ ಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ನ್ನು “Director,AIISH Mysore ” ಗೆ ಡಿ.ಡಿ.ತೆಗೆಯಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ವಯೋಮಿತಿ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
    ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಗರಿಷ್ಠ 65 ವರ್ಷ
    ಸ್ಪೀಚ್ ಲ್ಯಾಂಗ್ವೇಜ್ ‌ಪ್ಯಾಥೋಲಾಜಿಸ್ಟ್ ಗ್ರೇಡ್ ಹಾಗೂ
    ಆಡಿಯೋಲಾಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ‌ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16, ಎಪ್ರಿಲ್ ರೊಳಗಾಗಿ ಸಲ್ಲಿಸಬೇಕು.

    ವಿಳಾಸ : Chief Administrative Officer, All India Institute of Speech and Hearing, Manasagangotri, Mysore – 570006

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • KSCDRC ನಲ್ಲಿ‌ ವಿವಿಧ ಹುದ್ದೆ

    KSCDRC ನಲ್ಲಿ‌ ವಿವಿಧ ಹುದ್ದೆ

    ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿನ ಅಧ್ಯಕ್ಷರು,‌ಸದಸ್ಯರು ಹಾಗೂ ಮಹಿಳಾ ಸದಸ್ಯರ ಹುದ್ದೆಗಳ ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆ: ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರು.

    ಹುದ್ದೆ ಸಂಖ್ಯೆ : 56

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಭ್ಯರ್ಥಿಗಳು ದಿನಾಂಕ 30-04-2021 ರಾತ್ರಿ 11.59ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.250/- ಅರ್ಜಿ ಶುಲ್ಕವನ್ನು ಆನ್ಲೈನ್ ಅರ್ಜಿ ನಮೂನೆಯಲ್ಲಿ ಕಲ್ಪಿಸಿರುವಂತಹ ವಿಧಾನದಲ್ಲಿ ಪಾವತಿಸತಕ್ಕದ್ದು.

    ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್ಲೈನ್ ನಲ್ಲಿ ಈ ಕೆಳಕಂಡ ಜಾಲತಾಣಗಳ ಮೂಲಕ ಸಲ್ಲಿಸಬಹುದು.

    https://aaharasachivalaya.karnataka.gov.in/

    https://kscdrc.kar.nic.in

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ವತಿಯಿಂದ 2020-21 ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಾಗಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಎಪ್ರಿಲ್ 19 ರಿಂದ ಒಂದು ವಾರಕ್ಕೆ 3 ಗಂಟೆಗಳ‌ ಕಾಲ ಪಾಠ ಪ್ರವಚನಗಳನ್ನು ಪೂರೈಸಲು ಎಲ್.ಎಲ್.ಬಿ ಮತ್ತು ಎಲ್.ಎಲ್.ಎಂ ಪದವಿ ಯೊಂದಿಗೆ ಬೋಧನಾನುಭವ ಹೊಂದಿರುವ ಉಪನ್ಯಾಸಕರು ಅರ್ಜಿ ಸಲ್ಲಿಸಬಹುದು.

    ಆಸಕ್ತರು ಎಪ್ರಿಲ್ 9ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಚಾಮರಾಜೇಂದ್ರ ದೃಶ್ಯಕಲಾ‌ ಕಾಲೇಜಿನ ದೂರವಾಣಿ ಸಂಖ್ಯೆಯನ್ನು ( 0821-2438931) ಸಂಪರ್ಕಿಸಬಹುದು.

  • ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ಇವರು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ಬಾನಿಸುತ್ತಿದ್ದಾರೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ:

    ಹುದ್ದೆ: ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) -03, ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) -02 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ/ಪಿಜಿಡಿಎಂ(2 ವರ್ಷಗಳ) ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ‌ವಿಶ್ವವಿದ್ಯಾಲಯದ‌ ಸಿವಿಲ್ ಇಂಜಿನಿಯರಿಂಗ್ ಬಿ.ಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

    ವಯೋಮಿತಿ : ಈ ಜಾಹೀರಾತು ‌ಕೊನೆಯ ದಿನಾಂಕದನುಸಾರ 55 ವರ್ಷಗಳು.

    ವೇತನ ಶ್ರೇಣಿ : ತಿಂಗಳಿಗೆ ‌ರೂ. 75,000/- ರಿಂದ ರೂ. 1,00,000/- ರವರೆಗೆ ಮಾಸಿಕ ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-04-2021

    ಆನ್ಲೈನ್ ( ಇ-ಮೇಲ್) ಅರ್ಜಿಗಳನ್ನು ಪರಿಶೀಲಿಸಿದ ನಂತರ, ಸಂದರ್ಶನಕ್ಕಾಗಿ ಕರೆ ಪತ್ರವನ್ನು ಕಳುಹಿಸಲಾಗುವುದು.

    ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು [email protected] ಗೆ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ‌ ವಿವರವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
    https://saisouthbengaluru.org/

  • ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ಸೇವೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಾಂತ್ರಿಕ ಸಹಾಯಕ (ಅರಣ್ಯ)-03
    ತಾಂತ್ರಿಕ ಸಹಾಯಕ (ಕೃಷಿ) – 04
    ತಾಂತ್ರಿಕ ಸಹಾಯಕ (ತೋಟಗಾರಿಕೆ) -03
    ತಾಂತ್ರಿಕ ಸಹಾಯಕ (ಸಿವಿಲ್) -04
    ತಾಲೂಕು ಎಂಇಎಸ್ ಸಂಯೋಜಕರು -01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-04-2021

    ವಿದ್ಯಾರ್ಹತೆ: ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಅರಣ್ಯ)/ಎಂಎಸ್ಸಿ (ಅರಣ್ಯ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಕೃಷಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಕೃಷಿ)/ಎಂಎಸ್ಸಿ (ಕೃಷಿ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ತೋಟಗಾರಿಕೆ) ಬಿ.ಎಸ್ಸಿ ( ತೋಟಗಾರಿಕೆ )/ಎಂಎಸ್ಸಿ (ತೋಟಗಾರಿಕೆ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಸಿವಿಲ್) – ಈ‌ ಹುದ್ದೆಗೆ ಬಿಇ(ಸಿವಿಲ್)/ಬಿಟೆಕ್(ಸಿವಿಲ್) ಇಂಜಿನಿಯರಿಂಗ್ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ ಇರಬೇಕು. ತಾಲೂಕು ಎಂಇಎಸ್ ಸಂಯೋಜಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಸಿಎ/ಬಿಎಸ್ಸಿ ( ಕಂಪ್ಯೂಟರ್ ಸೈನ್ಸ್) ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ ಜೊತೆಗೆ ಸಂಬಂದಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ, ಎಂಎಸ್ ಆಫೀಸ್, ಎಕ್ಸೆಲ್ ಅನುಭವ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ರೊಳಗಿನವರಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ