Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಬಾಗಲಕೋಟೆ ಸಖಿ ಕೇಂದ್ರದಲ್ಲಿ ವಿವಿಧ ಹುದ್ದೆ:

    ಬಾಗಲಕೋಟೆ ಸಖಿ ಕೇಂದ್ರದಲ್ಲಿ ವಿವಿಧ ಹುದ್ದೆ:

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಗಲಕೋಟೆ ಸಖಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಘಟಕ ಆಡಳಿತಾಧಿಕಾರಿ-1, ಪ್ಯಾರಾ ಲೀಗಲ್ ಪರ್ಸನಲ್-1, ವಕೀಲ-2 ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 15,2021(ಸಂಜೆ 5.30ರೊಳಗೆ)

    ವಯೋಮಿತಿ : 45 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿ‌ನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶದಿಂದ ಎಂಎಸ್ ಡಬ್ಲ್ಯೂ, ಎಲ್ಎಲ್ಎಂ, ಎಲ್ಎಲ್ ಬಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

    ವಿಳಾಸ: ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾಡಳಿತ ಭವನ,ನವನಗರ,ಬಾಗಲಕೋಟೆ.

    ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

  • ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ

    ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ

    ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021

    ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಟೆಕ್ನಿಕಲ್ ಅಸಿಸ್ಟೆಂಟ್ (ಅರಣ್ಯ) -3 ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ( ಅಗ್ರಿಕಲ್ಚರ್) -1

    ಹುದ್ದೆ ಸ್ಥಳ: ಮೈಸೂರು-ಕರ್ನಾಟಕ

    ಹುದ್ದೆ ಸಂಖ್ಯೆ : 04

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಅಂಗೀಕೃತ ಬೋರ್ಡ್/ಯುನಿವರ್ಸಿಟಿ ಯಿಂದ ಅಭ್ಯರ್ಥಿಗಳು ಬಿ.ಎಸ್ಸಿ, ಎಂಎಸ್ಸಿ ಪಾಸಾಗಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿಯನ್ನು ಮೀರಿರಬಾರದು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ:

    Chief Executive Officer, Zilla Panchayat, Mysore – 570005, Karnataka.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಒಎಫ್ ವಿವಿಧ ಹುದ್ದೆ: ಎಪ್ರಿಲ್ 8 ಕಡೇ ದಿನಾಂಕ

    ಕೆಒಎಫ್ ವಿವಿಧ ಹುದ್ದೆ: ಎಪ್ರಿಲ್ 8 ಕಡೇ ದಿನಾಂಕ

    ಕರ್ನಾಟಕ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಕೇಂದ್ರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 8,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2021 ಸಂಜೆ 5.30

    ಹುದ್ದೆಗಳ ವಿವರ : ಜನರಲ್ ಮ್ಯಾನೇಜರ್ 1, ಅಸಿಸ್ಟೆಂಟ್ ಮ್ಯಾನೇಜರ್ 2, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ 1, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ (ಗುಣನಿಯಂತ್ರಣ) 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

    ವಯೋಮಿತಿ : ಜನರಲ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 40 ಗರಿಷ್ಠ 52 ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ
    ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿ.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1 – 40 ವರ್ಷ ವರ್ಷ, ಹಿಂದುಳಿದ ಜಾತಿ/ ಸಮುದಾಯಕ್ಕೆ 38 ವರ್ಷ, ಸಾಮಾನ್ಯ ವರ್ಗದವರಿಗೆ‌ 35 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500/- ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1000/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಅಭ್ಯರ್ಥಿಗಳಿಗೆ ಕನ್ನಡ ಜ್ಞಾನ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪದವಿಯನ್ನು ಪರಿಗಣಿಸುವುದಿಲ್ಲ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಕೆಲಸದ ಅನುಭವ, ಲಿಖಿತ ಪರೀಕ್ಷೆ, ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಅರ್ಹತೆಯ ಆಧಾರದ ‌ಮೇಲೆ ಆಯ್ಕೆ ಮಾಡಲಾಗುತ್ತದೆ.

    ವೆಬ್‌ಸೈಟ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
    ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಕೆಸಿಒಜಿಎಫ್.ಲಿ.,ನಂ.11,4ನೇ ಮಹಡಿ, ಬ್ಲೂ ಕ್ರಾಸ್ ಛೇಂಬರ್ಸ್, ಇನ್ಫ್ರೆಂಟ್ರಿ ಅಡ್ಡ ರಸ್ತೆ ಬೆಂಗಳೂರು -01

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • 90 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    90 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆಯಡಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 21,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-04-2021 ಸಂಜೆ 5.30 ಗಂಟೆಗೆ
    ಅರ್ಜಿ ಶುಲ್ಕ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆಗಳ ವಿವರ:
    8 ಮಿನಿ ಅಂಗನವಾಡಿ ಕಾರ್ಯಕರ್ತೆ, 9 ಅಂಗನವಾಡಿ ಕಾರ್ಯಕರ್ತೆ, 73 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಆಗಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಆಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ತರಗತಿ ತೇರ್ಗಡೆ ಆಗಿರಬೇಕು.

    ವಯೋಮಿತಿ: 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಭಾರತೀಯ ವಾಯುಪಡೆ ಬೀದರ್ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ವಾಯುಪಡೆ ಬೀದರ್ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕರ್ನಾಟಕದ ಬೀದರ್ ನ ವಾಯುಪಡೆ ನಿಲ್ದಾಣದಲ್ಲಿ ಸ್ಟೇಷನ್ ಮೆಡಿಕೇರ್ ಸೆಂಟರ್ 01 ನೇ ಎಪ್ರಿಲ್ 2021 ರಿಂದ 31 ನೇ ಮಾರ್ಚ್ 2022 ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಳಕಂಡ ಸಿಬ್ಬಂದಿಯ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

    ಹುದ್ದೆಗಳ ವಿವರ : ಸ್ತ್ರೀ ರೋಗ ವೈದ್ಯ, ಮಕ್ಕಳ ವೈದ್ಯ, ದಂತ ವೈದ್ಯ, ಮಾನಸಿಕ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಸ್ತ್ರೀ ರೋಗ ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಡಿ/ಡಿಎನ್ಎ (ಸ್ತ್ರಿರೋಗ ಮತ್ತು ಪ್ರಸೂತಿ) ವಿದ್ಯಾರ್ಹತೆ ಯನ್ನು ಪಡೆದಿರಬೇಕು.

    ಮಕ್ಕಳ ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಯ ಎಂಡಿ/ ಡಿಎನ್‌ಎ ( ಪೀಡಿಯಾಟ್ರಿಕ್ಸ್) ಮಾಡಿರಬೇಕು.

    ದಂತ ವೈದ್ಯ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಡಿಎಸ್/ಎಂಡಿಎಸ್ ಪಡೆದಿರಬೇಕು.

    ಮಾನಸಿಕ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನಃಶಾಸ್ತ್ರದಲ್ಲಿ ಎಂಎ/ಎಂಫಿಲ್ ಪಡೆದಿರಬೇಕು.

    ವೇತನ: ಸ್ತ್ರೀ ರೋಗ ವೈದ್ಯ ಹುದ್ದೆಗೆ ರೂ. 21,500/- ಮಾಸಿಕ ವೇತನ ಇರುತ್ತದೆ.

    ಮಕ್ಕಳ ವೈದ್ಯ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.16,200/- ವೇತನ ಇರುತ್ತದೆ.

    ದಂತ ವೈದ್ಯ ಹುದ್ದರ ಮಾಸಿಕ ವೇತನ ರೂ. 24,384/- ನಿಗದಿಪಡಿಸಲಾಗಿದೆ.

    ಮಾನಸಿಕ ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗರ ತಿಂಗಳ ರೂ. 16,800/- ವೇತನವಿರುತ್ತದೆ.

    ನಮೂದಿತ ವೇತನವು ಸಾಮಾನ್ಯವಾಗಿ ಕ್ರೋಢಿಕೃತವಾಗಿದೆ. ಮತ್ತು ಸರಕಾರಿ ಉದ್ಯೋಗಿಗಳಿಗೆ ಅನ್ವಯಿಸುವಂತರ ಇನ್ನಿತರೆ ಭತ್ಯೆಗಳು/ ಹಣಕಾಸು ಸೌಲಭ್ಯಗಳಿಗೆ ಅರ್ಹರಾಗಿರುವುದಿಲ್ಲ.

    ಈ ಹುದ್ದೆ ಕೇವಲ ತಾತ್ಕಾಲಿಕ ವಾಗಿದ್ದು, ಖಾಯಂ ಉದ್ಯೋಗಕ್ಕೆ ಸೇರ್ಪಡೆಯಾಗಲು ಯಾವುದೇ ಅಧಿಕಾರವಿರುವುದಿಲ್ಲ. ಯಾವುದೇ ಕಾರಣ ನೀಡದೆ 30 ದಿನಗಳ ನೋಟೀಸು ನೀಡಿ ಗುತ್ತಿಗೆ ಅವಧಿಗೆ ಮುಂಚೆ ಉದ್ಯೋಗವನ್ನು ಸಮಾಪ್ತಿಗೊಳಿಸಬಹುದು.

    ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಟಿಎ/ಡಿಎ ನೀಡುವುದಿಲ್ಲ.

    ಯಾವುದೇ ರೀತಿಯ ವಶೀಲಿ ಮತ್ತು ಶಿಫಾರಸು ಅನರ್ಹತೆಗೆ ಕಾರಣವಾಗುತ್ತದೆ.

    ಆಸಕ್ತ ಅರ್ಹ ಅಭ್ಯರ್ಥಿ ಒಂದು ಪಾಸ್ ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ ಸೇರಿ ದೃಢೀಕೃತ ಅರ್ಹತಾ ಪ್ರಮಾಣ ಪತ್ರ,ಅನುಭವ ಪ್ರಮಾಣ ಪತ್ರ ಮತ್ತು ಸಂಪರ್ಕ ಸಂಖ್ಯೆ ಯೊಂದಿಗೆ ಬಿಳಿ ಹಾಳೆಯ ಮೇಲೆ ಬರೆದ ಅರ್ಜಿಯು ಈ ಜಾಹೀರಾತು ಪ್ರಕಟವಾದ 15 ದಿನದೊಳಗೆ ಸ್ಟೇಷನ್ ಮೆಡಿಕೇರ್ ಸೆಂಟರ್ ಕೇರಾಫ್ ವಾಯು ಪಡೆ ನಿಲ್ದಾಣ, ಬೀದರ್-585401 ಗೆ ತಲುಪಿಸಬೇಕು.

    ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ‌ ಆಯ್ಕೆ ಮಾಡಲಾಗುತ್ತದೆ.

    ಎಸ್ ಎಂಒ ನೊಂದಿಗೆ ಸಮಾಲೋಚಿಸಿದ ನಂತರ ಸಮಯವನ್ನು ನಿರ್ಧರಿಸಲಾಗುವುದು.

  • ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಶಾಖಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅನುಭವ : ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ.

    ಸಹಕಾರಿ ಸಿಬ್ಬಂದಿ ಸೇವಾ ನಿಯಮದಂತೆ ವೇತನ ಮತ್ತಿತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.

    ಆಸಕ್ತರು ಈ ಕೆಳಕಂಡ ವಿಳಾಸದಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ 10-04-2021 ರೊಳಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದು. ‌
    ವಯೋಮಿತಿ, ವಿದ್ಯಾರ್ಹತೆ ಮತ್ತಿತರೆ ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ 9480276535 ಮೂಲಕ ಪಡೆಯಬಹುದು.

    ವಿಳಾಸ: ‌

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್ ಹತ್ತಿರ, ಎಂ.ಜಿ.ರಸ್ತೆ ಕೋಡಿಯಾಲ್ ಬೈಲ್, ಮಂಗಳೂರು