Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆಗಳ ವಿವರ : ಬಿ.ಎಫ್.ಟಿ (bare foot technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 30

    ಅರ್ಜಿಗಳನ್ನು ಸಲ್ಲಿಸುವವರು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ
    ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿಂದಿನ 3 ವರ್ಷಗಳಲ್ಲಿ ಕನಿಷ್ಠ ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರನಾಗಿ ಕೆಲಸವನ್ನು ಮಾಡಿರಬೇಕು.

    ವಿದ್ಯಾರ್ಹತೆ: ಕನಿಷ್ಠ 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ‌ ರೂ. 12,000/- ನೀಡಲಾಗುತ್ತದೆ.

    ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುತ್ತದೆ.

    ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 45 ವಯಸ್ಸಾಗಿರಬೇಕು.

    ಬಿಎಫ್ ಟಿ ಗಳನ್ನು ಕುಶಲ ಕಾರ್ಮಿಕರೆಂದು(skilled laboures ) ಪರಿಗಣಿಸಿ ಕರ್ತವ್ಯ ಕ್ಕೆ ನಿಯೋಜಿಸಿಕೊಳ್ಳಲಾಗುತ್ತದೆ. ಖಾಯಂ ಹುದ್ದೆ ಆಗಿರುವುದಿಲ್ಲ.

    ಅರ್ಹ ಅಭ್ಯರ್ಥಿಗಳು ಕಲಬುರಗಿ‌ ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅವಶ್ಯ ದಾಖಲಾತಿಗಳೊಂದಿಗೆ ಮಾರ್ಚ್ 30 ರೊಳಗಾಗಿ( ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ) ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ 9482046044, 9480866010

  • ಕೆಎಸ್ ಎಸ್ ಸಿ ಎಫ್ ಪ್ರಕಟಣೆ

    ಕೆಎಸ್ ಎಸ್ ಸಿ ಎಫ್ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಇದರಲ್ಲಿ 10 ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ : 05-03-2021 ರಂದು ಹೊರಡಿಸಿರುವ ಪ್ರಕಟಣೆಯನ್ವಯ, ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮತ್ತು ಸಹಕಾರ ವಿಷಯ ಹಾಗೂ ಸಾಮಾನ್ಯ ಜ್ಞಾನದ ಕುರಿತು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು.

    ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವ. ಹೆಚ್ಚಿನ ವಿವರಗಳು ಮಹಾಮಂಡಳದ ವೆಬ್‌ಸೈಟ್‌ www.recruitapp.in/ksccf2021 ನಲ್ಲಿ ಲಭ್ಯವಿರುತ್ತದೆ.

  • ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

    ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

    ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ: ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಂದು ವರ್ಷದ ಅವಧಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಹೊಂದಿರಬೇಕು. ಜಿಲ್ಲಾ/ಉಚ್ಛ ನ್ಯಾಯಾಲಯಗಳಲ್ಲಿ ಕನಿಷ್ಠ 5 ವರ್ಷ ಸ್ವತಂತ್ರವಾಗಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ಮೀರಿರಬಾರದು.

    ಪಾಲಿಕೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯ ಗಳಲ್ಲಿ ದಾಖಲಾದ ಸಿವಿಲ್/ಕ್ರಿಮಿನಲ್ ಮೊಕದ್ದಮೆಗಳನ್ನು ನಿರ್ವಹಿಸಿದ ಅನುಭವ ಹೊಂದಿರಬೇಕು.

    ನೇಮಕಾತಿಯ ಪೂರ್ವದಲ್ಲಿ ಶಾರೀರಿಕ ಸದೃಢ ಪ್ರಮಾಣ ಪತ್ರವನ್ನು ಸರಕಾರಿ ಜಿಲ್ಲಾ ಸರ್ಜನ್ ರವರಿಂದ ಪಡೆದು ಸಲ್ಲಿಸಬೇಕಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದು.
    08392-273479/278168

  • ಕಾನೂನು ಸೇವೆ ಪ್ರಾಧಿಕಾರದಲ್ಲಿ ವಿವಿಧ ಹುದ್ದೆ

    ಕಾನೂನು ಸೇವೆ ಪ್ರಾಧಿಕಾರದಲ್ಲಿ ವಿವಿಧ ಹುದ್ದೆ

    ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಪ್ರಾಜೆಕ್ಟ್ ಕನ್ಸಲ್‌ಟಂಟ್,ಪ್ರಾಜೆಕ್ಟ್‌ ಕೋರ್ಡಿನೇಟರ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.

    ಒಟ್ಟು ಹುದ್ದೆ : ಪ್ರಾಜೆಕ್ಟ್ ಕನ್ಸಲ್ಟೆಂಟ್ -1
    ಪ್ರಾಜೆಕ್ಟ್ ಕೋರ್ಡಿನೇಟರ್-2
    ಪ್ರಾಜೆಕ್ಟ್ ಅಸಿಸ್ಟಂಟ್ -2

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021

    ವಿದ್ಯಾರ್ಹತೆ : ಪ್ರಾಜೆಕ್ಟ್ ಕನ್ಸಲ್‌ಟೆಂಟ್ ಮತ್ತು ಪ್ರಾಜೆಕ್ಟ್ ಕೋರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಜಿ ಇನ್ ಮ್ಯಾನೇಜ್ಮೆಂಟ್/ಎಂಬಿಎ/ಸೋಷಿಯಲ್ ವರ್ಕ್/ಪಬ್ಲಿಕ್ ಅಡ್ಮಿನಿಸ್ಟ್ರೇಷನ್/ಅರ್ಥಶಾಸ್ತ್ರ/ಪೊಲಿಟಿಕಲ್ ಸೈನ್ಸ್‌/ಸಮಾಜ ಶಾಸ್ತ್ರ ಪಡೆದಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿದ್ದರೆ ಸಾಕು.

    ವೇತನ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ರೂ.60,000/-, 45,000/-, 30,000/- ತಿಂಗಳ ವೇತನ ನಿಗದಿಪಡಿಸಲಾಗಿದೆ.

    ಹುದ್ದೆಯ ಅವಧಿ : ಪ್ರಾಥಮಿಕವಾಗಿ 6 ತಿಂಗಳು ಹುದ್ದೆಯ ಅವಧಿ ಇರುತ್ತದೆ. ನಂತರ ಎರಡು ವರ್ಷಗಳವರೆಗೂ ಕರ್ತವ್ಯ ವಿಸ್ತರಣೆ ಮಾಡಲಾಗುತ್ತದೆ.

    ವಯೋಮಿತಿ : ಹುದ್ದೆಗಳಿಗನುಸಾರವಾಗಿ 35/30/27 ವರ್ಷ ಗರಿಷ್ಠ ವಯೋಮಿತಿ ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಯಾದಗಿರಿ ಜಿಲ್ಲೆಯಲ್ಲಿ ಹುದ್ದೆಗಳಿದ್ದು ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಯಾದಗಿರಿ ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-03-2021

    ಯುವ ಜನರ ಮಾನಸಿಕ ಆರೋಗ್ಯದ ಸರ್ವತೋಮುಖ ಬೆಳವಣಿಗೆಗೆ ಪೂರಕ ಸೇವೆಗಳನ್ನು ಒದಗಿಸುವುದಕ್ಕಾಗಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆ ಸ್ಥಳ : ಯಾದಗಿರಿ ಜಿಲ್ಲೆಯ ಗುರು‌ಮಠಕಲ್ ಮತ್ತು ಸುರಪುರ ತಾಲ್ಲೂಕಿನಲ್ಲಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಅಭ್ಯರ್ಥಿಗಳು ಪದವೀಧರರಾಗಿರಬೇಕು. ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡಲು ತಿಳಿದಿರಬೇಕು. ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯ ಹೊಂದಿರಬೇಕು. ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು, ಕಂಪ್ಯೂಟರ್ ಬಳಕೆ ಜ್ಞಾನ ಹೊಂದಿರುವವರಿಗೆ ಆದ್ಯತೆ.

    ವಯೋಮಿತಿ: ಅಭ್ಯರ್ಥಿಗಳು 21 ರಿಂದ 35 ವಯೋಮಿತಿ ಯವರಾಗಿರಬೇಕು.

    ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ದಿನಾಂಕ 23, ಮಾರ್ಚ್ 2021 ರೊಳಗಾಗಿ ಸಲ್ಲಿಸಬೇಕು.

    ವಿಳಾಸ: ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಡಾನ್ ಬಾಸ್ಕೋ ಶಾಲೆ ಎದುರುಗಡೆ, ಯಾದಗಿರಿ

    ಹೆಚ್ಚಿನ ಮಾಹಿತಿಗಾಗಿ 8618549355, 8867323635

  • ಆರ್ಮಿ‌ ನೇಮಕಾತಿ ರ್ಯಾಲಿ: ಈ ಕೂಡಲೇ ಅರ್ಜಿ ಸಲ್ಲಿಸಿ

    ಆರ್ಮಿ‌ ನೇಮಕಾತಿ ರ್ಯಾಲಿ: ಈ ಕೂಡಲೇ ಅರ್ಜಿ ಸಲ್ಲಿಸಿ

    ಭಾರತೀಯ ಮಿಲಿಟರಿಯು ಬೆಂಗಳೂರು ನಗರ,‌ ಬೆಂಗಳೂರು ಗ್ರಾಮಾಂತರ,ಮಂಡ್ಯ, ಬಳ್ಳಾರಿ, ಮೈಸೂರು, ತುಮಕೂರು,ಕೋಲಾರ, ರಾಮನಗರ,ಚಾಮರಾಜನಗರ, ಕೊಡಗು, ಚಿತ್ರದುರ್ಗ, ಹಾಸನ, ಚಿಕ್ಕಬಳ್ಳಾಪುರ ಜಿಲ್ಲೆಗಳ ಪುರುಷ ಅಭ್ಯರ್ಥಿಗಳಿಗಾಗಿ ಆರ್ಮಿ ನೇಮಕಾತಿ ರ್ಯಾಲಿಯನ್ನು ನಡೆಸಲಿದೆ.

    ಆನ್ಲೈನ್ ರಿಜಿಸ್ಟ್ರೇಶನ್ ಆರಂಭಿಕ ದಿನಾಂಕ : 13-03-2021

    ಆನ್ಲೈನ್ ರಿಜಿಸ್ಟ್ರೇಶನ್ ಕೊನೆಯ ದಿನಾಂಕ : 26-04-2021

    ಇಂಡಿಯನ್ ಆರ್ಮಿಯು ಸೋಲ್ಜರ್ ಜೆನೆರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್,ಸೋಲ್ಜರ್ ಟ್ರೇಡ್ಸ್ ಮೆನ್(10 ನೇ ತರಗತಿ ಪಾಸ್), ಸೋಲ್ಜರ್ ಟ್ರೇಡ್ಸ್ ಮೆನ್( 8 ನೇ ತರಗತಿ), ಸೋಲ್ಜರ್ ಕರ್ಕ್ ಮತ್ತು ಸ್ಟೋರ್ ಕೀಪರ್,ಟೆಕ್ನಿಕಲ್ ಅಸಿಸ್ಟೆಂಟ್,ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳಿಂದ ನೇಮಕಾತಿ ರ್ಯಾಲಿಯನ್ನು ನಡೆಸಲಿದೆ.

    ನೇಮಕಾತಿ ರ್ಯಾಲಿ ನಡೆಯುವ ಸ್ಥಳ: ವಿಶ್ವೇಶ್ವರಯ್ಯ ಸ್ಟೇಡಿಯಂ, ಕೋಲಾರ, ಕರ್ನಾಟಕ

    ಆರ್ಮಿ ನೇಮಕಾತಿ ರ್ಯಾಲಿ ದಿನಾಂಕ : ಮೇ 07, 2021 ರಿಂದ ಮೇ 12,2021 ರವರೆಗೆ.

    ವಯೋಮಿತಿ : ಆರ್ಮಿ ನೇಮಕಾತಿ ರ್ಯಾಲಿಗೆ ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳಿಗೆ 17 ವರ್ಷ 6 ತಿಂಗಳು ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.

    ಆರ್ಮಿಯು ವಿವಿಧ ವಿಭಾಗಕ್ಕೆ ಸೈನಿಕ ಹುದ್ದೆಗಳನ್ನು ನೇಮಕ‌‌ ಮಾಡಿಕೊಳ್ಳಲಿದ್ದು, ದೈಹಿಕ ಅರ್ಹತೆಗಳ ಬಗ್ ತಿಳಿದುಕೊಳ್ಳಲು ಗೆ ಈ ಲಿಂಕ್ ಗೆ ಕ್ಲಿಕ್ ಮಾಡಿ.

    ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ರಿಜಿಸ್ಟ್ರೇಶನ್ ಪಡೆದ ಅಭ್ಯರ್ಥಿಗಳ ಇ-ಮೇಲ್ ವಿಳಾಸಕ್ಕೆ ಅಡ್ಮಿಟ್ ಕಾರ್ಡ್ ಕಳುಹಿಸಲಾಗುತ್ತದೆ. ಅದರಲ್ಲಿ ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿ ಅಗತ್ಯ ದಾಖಲೆಗಳೊಂದಿಗೆ ರ್ಯಾಲಿಯಲ್ಲಿ ದಾಖಲಾಗಬಹುದು.

    ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಮೂಲಕ ರಿಜಿಸ್ಟ್ರೇಶನ್ ಪಡೆಯಬೇಕು.