Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • DHFWS ನಲ್ಲಿ ಸೀನಿಯರ್ ಮೆಡಿಕಲ್ ಆಫೀಸರ್ ಗೆ ಉದ್ಯೋಗವಕಾಶ : ಆಸಕ್ತರು ಅರ್ಜಿ ಸಲ್ಲಿಸಿ

    DHFWS ನಲ್ಲಿ ಸೀನಿಯರ್ ಮೆಡಿಕಲ್ ಆಫೀಸರ್ ಗೆ ಉದ್ಯೋಗವಕಾಶ : ಆಸಕ್ತರು ಅರ್ಜಿ ಸಲ್ಲಿಸಿ

    DHFWS ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಸೀನಿಯರ್ ಮೆಡಿಕಲ್ ಆಫೀಸರ್

    ಹುದ್ದೆಯ ಸಂಖ್ಯೆ : 01

    ಹುದ್ದೆಯ ಸ್ಥಳ : ಬಳ್ಳಾರಿ ಕರ್ನಾಟಕ

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 10, ಫೆಬ್ರವರಿ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17, ಫೆಬ್ರವರಿ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯ ದಿಂದ ಡಿಪ್ಲೋಮಾ, ಮಾಸ್ಟರ್ಸ್ ಡಿಗ್ರಿ, ಎಂಬಿಬಿಎಸ್, ಎಂಡಿ ವಿದ್ಯಾರ್ಹತೆ ನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ‌ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಕ್ಲಿಕ್ ಮಾಡಬಹುದು.

  • ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ(KOF) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಮತ್ತು
    ಕೆಮಿಸ್ಟ್
    ಹುದ್ದೆಯ ಸಂಖ್ಯೆ : 06
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021(5.30p.m ರ ಒಳಗೆ)

    ವಯೋಮಿತಿ : ಹುದ್ದೆಗಳಿಗನುಸಾರವಾಗಿ 08 ಮಾರ್ಚ್, 2021 ಗೆ ಅನುಸಾರವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಸಿಎಟಿ-1 ಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಹಾಗೆಯೇ ಸಿಎಟಿ-2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ‌.

    ಅರ್ಜಿ ಶುಲ್ಕ
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಸಿಎಟಿ-1 ಮತ್ತು ಪಿಎಚ್ ಅಭ್ಯರ್ಥಿಗಳಿಗೆ ರೂ.500/- ಹಾಗೂ ಉಳಿದ ಅಭ್ಯರ್ಥಿಗಳಿಗೆ ರೂ.1000/- ಶುಲ್ಕವಿರುತ್ತದೆ.
    ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ :ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.

    ವಿದ್ಯಾರ್ಹತೆ :ಹುದ್ದೆಗಳಿಗನುಸಾರವಾಗಿ ಪದವಿ/ಬಿ.ಎಸ್ಸಿ/ಬಿಬಿಎಂ/ಬಿಬಿಎ/ಬಿಕಾಂ ವಿದ್ಯಾರ್ಹತೆ ಯನ್ಯ ಅಭ್ಯರ್ಥಿಗಳು ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ಸೈಟ್‌ ಗೆ ಭೇಟಿ ನೀಡಿ
    www.kofchitradurga.com

    ನೋಟಿಫಿಕೇಶನ್ ಕಾಗಿ ಇಲ್ಲಿ ಕ್ಲಿಕ್ ಮಾಡಿ

    ಅಪ್ಲಿಕೇಶನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ

  • SSCKKR ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    SSCKKR ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸ್ಟಾಫ್ ಸೆಲೆಕ್ಷನ್ ಕಮಿಶನ್,ಕರ್ನಾಟಕ ಕೇರಳ ರೀಜನ್ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಡಿಇಒ, ಜ್ಯೂನಿಯರ್ ಇಂಜಿನಿಯರ್ ಮತ್ತು ವಿವಿಧ ಹುದ್ದೆ

    ಹುದ್ದೆಯ ಸಂಖ್ಯೆ: 225 ಡಿಇಒ

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ , ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.
    ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು ರೂ‌.100 ನ್ನು ಆನ್ ಲೈನ್ ಮುಖಾಂತರ ಪಾವತಿಸಬೇಕಾಗುತ್ತದೆ.

    ವಿದ್ಯಾರ್ಹತೆ

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10 ನೇ ತರಗತಿ, 12 ನೇ ತರಗತಿ, ಡಿಪ್ಲೋಮಾ, ಪದವಿ, ಕಾನೂನು ಪದವಿ, ಬಿ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರಬೇಕು.

    ವಯೋಮಿತಿ

    ಹುದ್ದೆಗೆ ಅನುಸಾರವಾಗಿ ಅರ್ಜಿ ಹಾಕುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಪ.ಜಾತಿ/ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ಕ್ರಮವಾಗಿ 5 ಮತ್ತು 10 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ https://ssckkr.kar.nic.in/

  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) 545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ಸ್ (ಸಿವಿಲ್)

    ಹುದ್ದೆಯ ಸಂಖ್ಯೆ : 545

    ವಿದ್ಯಾಭ್ಯಾಸ : ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
    ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದೆ.

    ಪುರುಷರು 168 ಸೆಂ.ಮೀ. ಎತ್ತರ ಹಾಗೂ ಎದೆಯ ಸುತ್ತಳತೆ 81-86 ಸೆಂ.ಮೀ. ಇರಬೇಕು.

    ಮಹಿಳೆಯರ ಎತ್ತರ 157 ಸೆಂ.ಮೀ ಇರಬೇಕು. ಹಾಗೂ 45 ಕೆ.ಜಿ.ತೂಕ ಇರಬೇಕು.

    ಅರ್ಜಿ ಶುಲ್ಕ : ರೂ. 500 ಪರೀಕ್ಷಾ ಶುಲ್ಕ ಪಾವತಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 22, 2021.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ನಾತಕ ಪದವಿಗಳ ಪ್ರವೇಶ ಪ್ರಕ್ರಿಯೆ : ಕೂಡಲೇ ಅರ್ಜಿ ಸಲ್ಲಿಸಿ

    ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಅಡಿಯಲ್ಲಿ ಬರುವ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ, ಬೆಂಗಳೂರು, ಶಿವಮೊಗ್ಗ, ಹಾಸನ ಮತ್ತು ಗದಗ, ಹೈನುಗಾರಿಕೆ ಮಹಾವಿದ್ಯಾಲಯ ಬೆಂಗಳೂರು ಮತ್ತು ಗುಲ್ಬರ್ಗಾ ಹಾಗೂ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರು, ಇಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿನ ವಿವಿಧ ಸಾಲಿನ ಸ್ನಾತಕ ಪದವಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೆ.ಸಿ.ಇ.ಟಿ (KCET- 2020) ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭರ್ತಿಯಾಗದೆ ಉಳಿದಿರುವ ಪ್ರವರ್ಗವಾರು ಸೀಟುಗಳನ್ನು ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

    ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು KCET-2020 ಪರೀಕ್ಷೆ ಬರೆದ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

    ಅರ್ಜಿ ಸಲ್ಲಿಸುವುದು ಹೇಗೆ?

    ಈ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.kvafsu.edu.in ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಧೃಢೀಕರಿಸಿ, ನಿಗದಿ ಪಡಿಸಿದ ಅರ್ಜಿ ಶುಲ್ಕದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ಡೀನ್ ಮತ್ತು ಅಧ್ಯಕ್ಷರು ಸ್ನಾತಕ ಪ್ರವೇಶ ಸಮಿತಿ 2020-21,
    ಪಶುವೈದ್ಯಕೀಯ ಮಹಾವಿದ್ಯಾಲಯ,
    ಹೆಬ್ಬಾಳ,
    ಬೆಂಗಳೂರು-560024

    (Dean and Chairman,UG Admission Committee 2020-21, Veterinary College, Hebbal, Bengaluru- 560 024)

    ಅರ್ಜಿ ಸಲ್ಲಿಸುವ ದಿನಾಂಕ : 8 ಫೆಬ್ರವರಿ, 2021 ರಿಂದ 20, ಫೆಬ್ರವರಿ 2021 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಕೌನ್ಸಲಿಂಗ್ ಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ (ಅಂತರ್ಜಾಲ)
    www.kvafsu.edu.in ರಲ್ಲಿ ಪಡೆಯಬಹುದು.

  • ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

    ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ SC/ST ಪಂಗಡಕ್ಕೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ನ ವಿದ್ಯಾಭ್ಯಾಸಕ್ಕೆ ಆರ್ಥಿ ತೊಂದರೆ ಆಗಬಾರದೆಂದು ರಾಜ್ಯದ ಅನೇಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಸಹಾಯವನ್ನು ನೀಡುತ್ತಲಿದೆ‌.

    ಪ್ರತಿ ವರ್ಷದಂತೆ ಈ‌ ಬಾರಿಯು ಕೂಡಾ ಪಿಯುಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35,000ರೂ. ವರೆಗೂ ಪ್ರೋತ್ಸಾಹಧನ ಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಜಿ‌ಸಲ್ಲಿಸಲು ಕೊನೆಯ ದಿನಾಂಕ 15, ಫೆಬ್ರವರಿ 2021

    ವಿಶೇಷ ಸೂಚನೆ : 2020 ರಲ್ಲಿ ಪ್ರಥಮ ಶ್ರೇಣಿಯಲ್ಲಿ ಹಾಗೂ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.

    ಪ್ರೋತ್ಸಾಹಧನಗಳು ಅಧ್ಯಯನಕ್ಕಾಗಿ ಈ ಕೆಳಗಿನಂತಿವೆ:
    ಪಿಯುಸಿ ಮತ್ತು ಡಿಪ್ಲೋಮಾ 20,000ರೂ.
    ಯಾವುದೇ ಪದವಿ 25,000 ರೂ.
    ಸ್ನಾತಕೋತ್ತರ ಪದವಿ 30,000ರೂ.
    ಇಂಜಿನಿಯರಿಂಗ್, ಅಗ್ರಿಕಲ್ಚರ್,ನರ್ಸಿಂಗ್ – 35,000ರೂ.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ನ್ನು ಕ್ಲಿಕ್ ಮಾಡಿ

    ಅಪ್ಲೈ ಓನ್ ಲೈನ್ ಲಿಂಕ್