Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • KSET: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ( ಕೆ- ಸೆಟ್)

    KSET: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ( ಕೆ- ಸೆಟ್)

    ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್ 2021 ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಓನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

    ಅಧಿಸೂಚನೆಯ ದಿನಾಂಕ 06 ನೇ ಫೆಬ್ರವರಿ 2021

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 08, ಫೆಬ್ರವರಿ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07, ಮಾರ್ಚ್ 2021

    ಅರ್ಜಿ ಶುಲ್ಕ
    ಸಾಮಾನ್ಯ ವರ್ಗ ರೂ.1150, ಪ್ರವರ್ಗ 2ಎ, 2 ಬಿ, 3ಎ , 3 ಬಿ ಅಭ್ಯರ್ಥಿಗಳಿಗೆ ರೂ. 950, ಪ್ರವರ್ಗ-1, ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ , ಪಿಡ್ಬ್ಯುಡಿ ರೂ.650 ಶುಲ್ಕ ವಿಧಿಸಲಾಗಿದೆ.

    ವಯೋಮಿತಿ
    ಗರಿಷ್ಠ ವಯೋಮಿತಿ ಇಲ್ಲ

    ಅರ್ಜಿ ಶುಲ್ಕ ದಂಡದೊಂದಿಗೆ ರೂ.250 ಸಲ್ಲಿಸಲು ಕೊನೆಯ ದಿನಾಂಕ 13, ಮಾರ್ಚ್ 2021

    15, ಮಾರ್ಚ್ 2021 ಭರ್ತಿ ಮಾಡಿದ ಅರ್ಜಿಗಳನ್ನು ನೊಡೆಲ್ ಕೇದ್ರಕ್ಕೆ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

    ಪರೀಕ್ಷಾ ದಿನಾಂಕ: 11 ಎಪ್ರಿಲ್ 2021

    ಹುದ್ದೆಯ ಸ್ಥಳ : ಕರ್ನಾಟಕ

    ವಿದ್ಯಾರ್ಹತೆ

    ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೂಲಕ ತಿಳಿದುಕೊಳ್ಳಬಹುದು.

    ಆನ್ ಲೈನ್ KSET ಅಪ್ಲೈ ಮಾಡಲು ಈ ಲಿಂಕನ್ನು ಕ್ಲಿಕ್ ಮಾಡಿ

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • ಪ.ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    2020-21 ಸಾಲಿಗೆ ಪ.ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಕೋವಿಡ್ -19 ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯದ ಸಾಮರ್ಥ್ಯದ 75% ರಷ್ಟು ಮಾತ್ರ ಪ್ರವೇಶ ನೀಡಲಾಗುತ್ತದೆ. ಪ.ಜಾತಿ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ
    https://sw.kar.nic.in

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕ್ಕಾಗಿ
    https://ssp.karnataka.gov.in/2021

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ
    https://sw.kar.nic.in/hostel admissions

    ಇನ್ನಷ್ಟು ಮಾಹಿತಿಗಾಗಿ ಜಂಟಿ ನಿರ್ದೇಶಕರು/ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಬಹುದು.

  • ಮಹಿಳಾ ನಿಲಯ ಪಾಲಕರು ಹುದ್ದೆಗೆ ಅರ್ಜಿ ಆಹ್ವಾನ

    ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಿಳಾ‌ ನಿಲಯ ಪಾಲಕರು ಬೇಕಾಗಿದ್ದಾರೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆಯ ಹೆಸರು : ಮಹಿಳಾ‌ ನಿಲಯ ಪಾಲಕರು

    ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರಾಗಿರಬೇಕು. ಅದರ ಜೊತೆಗೆ ಇಂಗ್ಲೀಷ್ ಚೆನ್ನಾಗಿ ಮಾತನಾಡಲು ಬರಬೇಕು.

    ಏಕಾಂಗಿ, ಅವಿವಾಹಿತೆ, ವಿಧವೆ ಹಾಗೂ ಪರಿತ್ಯಕ್ತ ರಿಗೆ ಮೊದಲ ಆದ್ಯತೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :20.02.2021

    ಅರ್ಜಿ ಸಲ್ಲಿಸುವುದು ಹೇಗೆ ?
    ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ ಹಾಗೂ ಎಲ್ಲಾ ಪ್ರಮಾಣ ಪತ್ರಗಳ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
    ಪ್ರಾಚಾರ್ಯರು,
    ಕಿತ್ತೂರು ರಾಣಿ ಚೆನ್ನಮ್ಮ ವಸತಿ ಸೈನಿಕ ಶಾಲೆ,‌ ಕಿತ್ತೂರ -591115
    ಜಿಲ್ಲೆ : ಬೆಳಗಾವಿ
    ಕರ್ನಾಟಕ

    ಅಧಿಕೃತ ವೆಬ್‌ಸೈಟ್‌ www.kitturusainikschool.org

  • ಯಾದಗಿರಿ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ 4 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಸೇವೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಈ ಕೂಡಲೇ ಸಲ್ಲಿಸಬಹುದು.

    ಹುದ್ದೆಯ ಹೆಸರು/ಸಂಖ್ಯೆ

    ಅಂಗನವಾಡಿ ಕಾರ್ಯಕರ್ತೆ-13
    ಅಂಗನವಾಡಿ ಸಹಾಯಕಿ-34

    ಹುದ್ದೆಗಳು ಯಾದಗಿರಿಯಲ್ಲಿದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7,ಮಾರ್ಚ್ 2021

    ಆಸಿಡ್ ದಾಳಿಗೊಳಗಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಮೊದಲು ಅವರಿಗೆ ಆದ್ಯತೆ ನೀಡಲಾಗುವುದು ಮತ್ತು ನೇರವಾಗಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ವಿದ್ಯಾಭ್ಯಾಸ
    ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.

    ವಯೋಮಿತಿ
    ವಿಕಲಚೇತನ ಅಭ್ಯರ್ಥಿಗಳಿಗೆ ಕನಿಷ್ಠ 10 ವರ್ಷ ಸಡಿಲಿಕೆ ಇರುತ್ತದೆ. ಉಳಿದವರಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯಸ್ಸಾಗಿರಬೇಕು.

    ಅರ್ಜಿ ಶುಲ್ಕ

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದ್ದು, ಅಂಚೆ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://anganawadirecruit.kar.nic.in ಹೋಗಿ ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ಕಿಸಿ

  • BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ಟ್ರೈ‌ನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 16,2021 ರ ಒಳಗೆ ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.

    ಹುದ್ದೆಯ ಹೆಸರು : ಟ್ರೈನಿ ಇಂಜಿನಿಯರ್

    ಹುದ್ದೆಯ ಸಂಖ್ಯೆ : 16

    ವಯೋಮಿತಿ : ಜನವರಿ 1,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವ‍ರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವಿದ್ಯಾರ್ಹತೆ
    ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆ ಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಶುಲ್ಕ
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
    ಉಳಿದ ಅಭ್ಯರ್ಥಿಗಳು ರೂ.200 ನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.02.2021

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ https://bel-india.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
    ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ

  • ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

    ಗೆಜೆಟೆಡ್ ಪ್ರೊಬೆಷನರಿಗೆ ನಡೆಸಲಾಗುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

    ಅರ್ಹತಾ ಪತ್ರಿಕೆಗಳಾದ ಕನ್ನಡ, ಇಂಗ್ಲೀಷ್ ಕ್ರಮವಾಗಿ ದಿನಾಂಕ 13-02-2021 ರಂದು ಬೆಳಗ್ಗೆ ಸಮಯ 10 ರಿಂದ 12 ಗಂಟೆಯವರೆಗೆ ಹಾಗೇ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ. ಫೆಬ್ರವರಿ 14 ರಂದು ಬೆಳಿಗ್ಗೆ 9 ರಿಂದ 12 ಗಂಟೆವರೆಗೆ ಪತ್ರಿಕೆ-1 (ಪ್ರಬಂಧ) ನಡೆಯಲಿದೆ.
    ಉಳಿದ ಮಾಹಿತಿಗಾಗಿ ಈ ಕೆಳಗಿನ ಪಟ್ಟಿಯಲ್ಲಿ ಮಾಹಿತಿಯನ್ನು ಪಡೆಯಬಹುದು.