Category: State Govt Jobs

Karnataka Govt Jobs News in Kannada, Job news in kannada, employment news, kpsc update, karnataka police recruitment, bmtc driver jobs, ksrtc driver conductor jobs, gramapanchayiti jobs, bengaluru jobs, mysuru jobs, mangaluru jobs, hassan jobs, jobs in karnataka, jobs near me, ಕರ್ನಾಟಕ ಉದ್ಯೋಗ ವಾರ್ತೆ, ಕೆಪಿಎಸ್‌ಸಿ, ಸರಕಾರಿ ಉದ್ಯೋಗ, ಕನ್ನಡ ಉದ್ಯೋಗಾವಕಾಶ, ಉದ್ಯೋಗ ಮಾಹಿತಿ, ಜಾಬ್‌ ಸುದ್ದಿಗಳು

  • ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ : 25,000 ರೂ. ತಿಂಗಳ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ

    ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ

    ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು

    ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18-11-2021

    ಅಭ್ಯರ್ಥಿಗಳು ಅರ್ಜಿಗಳನ್ನು https://chikkamagaluru.nic.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ನೋಡಿ.

  • ಬೆಂಗಳೂರು ಸಿಟಿ ಯುನಿವರ್ಸಿಟಿ ; ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್

    ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.bcu.ac.in ರಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿಗಳನ್ನು ಕುಲಸಚಿವರ ಕಚೇರಿ, ಬೆಂಗಳೂರು, ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ದಿನಾಂಕ : 09-09-2032 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

    ನೋಟಿಫಿಕೇಶನ್

  • ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

    ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರಕಾರಿ ನೌಕರರಿಗೆ ಶೇ.10.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಸರಕಾರ ಆದೇಶ ಹೊರಡಿಸಿದೆ.

    ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದಾಗಿ ಡಿಎ ಹೆಚ್ಚಳ ಮಾಡಿರಲಿಲ್ಲ.
    ಇಲ್ಲಿಯವರೆಗೆ ಮೂಲ ವೇತನದ ಶೇ.11.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.21.50 ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಆರ್ಥಿಕ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

  • NPCIL ನಲ್ಲಿ 173 ಅಪ್ರೆಂಟಿಸ್ ಗಳ ನೇಮಕ, ಐಟಿಐ ಪಾಸ್ ಆದವರಿಗೆ ಆದ್ಯತೆ

    ದೇಶದ ಪ್ರಮುಖ ಸಂಸ್ಥೆಯಾಗಿರುವ ಎನ್ ಪಿಸಿಐಎಲ್ ಖಾಲಿ ಇರುವ ಹುದ್ದೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಆಸಕ್ತರು ಆಗಸ್ಟ್ 16 ರೊಳಗೆ ಅರ್ಜಿ ಸಲ್ಲಿಸಬಹುದು.

    ಹುದ್ದೆ : 273 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಪಾಸ್ ಸರ್ಟಿಫಿಕೇಟ್ ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು‌18 ವರ್ಷಕ್ಕಿಂತ ಕಡಿಮೆ ಇರಬಾರದು.

    ಅಭ್ಯರ್ಥಿಗಳು npcl ನ‌ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ‌ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ವೆಬ್ ಪೋರ್ಟಲ್ ನಲ್ಲಿ ನೋಂದಾಯಿಸದಿದ್ದರೆ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

    ಈಗಾಗಲೇ ಒಂದು ವರ್ಷ ಅಥವಾ ಹೆಚ್ಚಿನ ಅವಧಿಗೆ ಭಾಗಶಃ ಅಥವಾ ಪೂರ್ಣ ಅಪ್ರೆಂಟಿಸ್ ತರಬೇತಿಗೆ ಒಳಗಾದ ಅಭ್ಯರ್ಥಿಗಳು, ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಒಂದು ಹುದ್ದೆಗೆ ಒಂದು ಅರ್ಜಿಯನ್ನು ಮಾತ್ರ ಅಭ್ಯರ್ಥಿಗಳು ಸಲ್ಲಿಸಬೇಕು.

    ಹುದ್ದೆಗಳ ವಿವರ ; ಫಿಟ್ಟರ್ – 50, ಮೆಕಾನಿಸ್ಟ್ – 25, ವೆಲ್ಡರ್ ( ಗ್ಯಾಸ್ ಆಂಡ್ ಎಲೆಕ್ಟ್ರಾನಿಕ್ಸ್) – 8, ಎಲೆಕ್ಟ್ರಿಶಿಯನ್ – 40, ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 20, ಪಂಪ್ ಅಪರೇಟರ್ ಕಮ್ ಮೆಕ್ಯಾನಿಕ್ – 20, ಮೆಕ್ಯಾನಿಕ್ ( ಚಿಲ್ಲರೆ ಪ್ಲಾಂಟ್ ) ಇಂಡಸ್ಟ್ರಿಯಲ್ ಏರಿಯಾ- 5 ಹುದ್ದೆ

    ಅಭ್ಯರ್ಥಿಗಳು ತಮಿಳುನಾಡಿನ ಕೂಡಂಕುಲಂನ ಎನ್ ಪಿಸಿಐಎಲ್ ಸ್ಥಾವರದಲ್ಲಿ ಒಂದು ವರ್ಷದ ಅವಧಿಗೆ ಕೆಲಸ ಮಾಡಬೇಕಾಗುತ್ತದೆ.

    ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫೆಂಡ್ ಪಡೆಯಲು ಅರ್ಹರಾಗಿರುತ್ತಾರೆ. ಐಟಿಐ ( ಕೈಗಾರಿಕಾ ತರಬೇತಿ ಸಂಸ್ಥೆ) ಯೊಂದಿಗೆ ಎರಡು ವರ್ಷಗಳ ತರಬೇತಿ ಕೋರ್ಸ್ ಗೆ ಒಳಪಟ್ಟ ಅಭ್ಯರ್ಥಿಗಳಿಗೆ ರೂ.8,855/- ಸ್ಟೈಫೆಂಡ್ ಹಾಗೂ ಐಟಿಐನೊಂದಿಗೆ ಒಂದು ವರ್ಷದ ತರಬೇತಿ ಕೋರ್ಸ್ ಗೆ ಒಳಪಟ್ಟ ವರಿಗೆ ಮಾಸಿಕ ರೂ.7,700/- ಸ್ಟೈಫೆಂಡ್ ನೀಡಲಾಗುವುದು.

    ಅಭ್ಯರ್ಥಿಗಳು10+2 ಶಿಕ್ಷಣದ ಅಡಿಯಲ್ಲಿ ಅಥವಾ ಅದಕ್ಕೆ ಸಮನಾದ ಶಿಕ್ಷಣದಡಿ‌10 ನೇ ತರಗತಿಯಲ್ಲಿ ವಿಜ್ಞಾನ ಅಥವಾ ಗಣಿತ ವಿಷಯದಲ್ಲಿ ಪಾಸ್ ಆಗಿರಬೇಕು. ಐಟಿಐ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್

  • ಬೆಂಗಳೂರು ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ(IWST)ಯಲ್ಲಿ ಉದ್ಯೋಗ, ನೇರ ಸಂದರ್ಶನ

    ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇರುವ ವುಡ್ ಸೈನ್ಸ್ ಟೆಕ್ನಾಲಜಿ ಸಂಸ್ಥೆ ( ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಸಂಸ್ಥೆಯು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

    ಹುದ್ದೆಯ ವಿವರ : ರಿಸರ್ಚ್ ಅಸೋಸಿಯೇಟ್, ಜ್ಯೂನಿಯರ್ ರಿಸರ್ಚ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ, ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲಿದೆ.

    ಮೇಲೆ ನೀಡಲಾಗಿರುವ ಹುದ್ದೆಗಳಿಗೆ ಜುಲೈ 29, 2021 ರಂದು ಪರೀಕ್ಷೆ ನಡೆಯುತ್ತದೆ. ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಮಾತ್ರ ಜುಲೈ 30, 2021 ರಂದು ಪರೀಕ್ಷೆ ನಡೆಯುತ್ತದೆ.

    ಹುದ್ದೆ ಅವಧಿ : 1 ರಿಂದ 3 ವರ್ಷಗಳವರೆಗೆ ಈ ಹುದ್ದೆಗಳ ಅವಧಿ ಇರುತ್ತದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎನ್ ಇಟಿ, ಕೆಎಸ್ ಇ ಟಿ ಅರ್ಹತೆ ಹೊಂದಿರಬೇಕು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,000 ರಿಂದ ರೂ.31,000/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

    ಸಂದರ್ಶನದ ಸ್ಥಳ ಮತ್ತು ಸಮಯ : ಇನ್ಸ್ಟಿಟ್ಯೂಟ್ ಆಫ್ ವುಡ್ ಅಂಡ್ ಟೆಕ್ನಾಲಜಿ, ಮಲ್ಲೇಶ್ವರಂ, ಬೆಂಗಳೂರು – 560003, ಬೆಳಿಗ್ಗೆ 9.30 ರಿಂದ 10.30 ರವರೆಗೆ.

    ಸಂದರ್ಶನದ ಸಂದರ್ಭದಲ್ಲಿ ತೆಗೆದುಕೊಂಡು ಹೋಗಬೇಕಾದ ದಾಖಲೆಗಳು : ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳು( ಸ್ನಾತಕೋತ್ತರ ಪದವಿ, ಎನ್ ಇಟಿ ಪಾಸ್ ಸರ್ಟಿಫಿಕೇಟ್, ಕೆಎಸ್ಇಟಿ ಪಾಸ್ ಸರ್ಟಿಫಿಕೇಟ್ ಇತರೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಯೋಡೇಟಾ

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾಗಿರುವ ನೋಟಿಫಿಕೇಶನ್ ನೋಡಿ

  • CAPF ಅಸಿಸ್ಟೆಂಟ್ ಕಮಾಂಡೆಂಟ್ಸ್ ಎಕ್ಸಾಂ ಆಗಸ್ಟ್‌ 8 ಕ್ಕೆ

    ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಸಹಾಯಕ‌‌ ಕಮಾಂಡೆಟ್ಸ್ ನೇಮಕಾತಿಗಾಗಿ ಸಂಬಂಧಿಸಿದಂತೆ ಕೇಂದ್ರ ಲೋಕ ಸೇವಾ ಆಯೋಗವು ಆಗಸ್ಟ್ 8 ರಂದು ಪರೀಕ್ಷೆ ನಡೆಸಲು‌ ಪ್ರಕಟಣೆ ಹೊರಡಿಸಿದೆ.

    ಅಡ್ಮಿಟ್ ಕಾರ್ಡನ್ನು ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯುಪಿಎಸ್ ಸಿ ವೆಬ್‌ಸೈಟ್‌ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

    ಇ-ಅಡ್ಮಿಟ್ ಕಾರ್ಡ್ ನಲ್ಲಿ ಯಾವುದೇ ಸಮಸ್ಯೆ ಗಳಿದ್ದಲ್ಲಿ ಆಯೋಗಕ್ಕೆ ಇಮೇಲ್ ಮೂಲಕ ತಿಳಿಸಬಹುದು. ಇ- ಮೇಲೆ ವಿಳಾಸ ಇಲ್ಲಿದೆ : [email protected]

    ಈ ನೇಮಕಾತಿಯಲ್ಲಿ ಸಿಐಎಸ್ ಎಫ್ ಗೆ 67, ಎಸ್ ಎಸ್ ಬಿ 1, ಸಿಆರ್ ಪಿಎಫ್ ಗೆ 36, ಸಿಐಎಸ್ ಎಫ್ ಗೆ 67 ಮತ್ತು ಐಟಿಬಿಪಿಗೆ 20 ಸೇರಿದಂತೆ ಒಟ್ಟು 159 ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ.

    ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ( ಸಹಾಯಕ ಕಮಾಂಡೆಂಟ್ಸ್) ಪರೀಕ್ಷೆಯ ಅಂತಿಮ ಫಲಿತಾಂಶ ಘೋಷಿಸುವವರೆಗೆ ಇ ಅಡ್ಮಿಟ್ ಕಾರ್ಡ್ ನ್ನು ಸುರಕ್ಷಿತವಾಗಿಡಬೇಕು. ಪರೀಕ್ಷೆಗೆ ಯಾವುದೇ ಪೇಪರ್ ಅಡ್ಮಿಟ್ ಕಾರ್ಡ್ ನೀಡಲಾಗುವುದಿಲ್ಲ.

    ಅಭ್ಯರ್ಥಿಗಳು ಪರೀಕ್ಷೆಯ ನಿಗದಿತ ಪ್ರಾರಂಭಕ್ಕೆ 10 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರ ಪ್ರವೇಶಿಸಬೇಕು. ಅಭ್ಯರ್ಥಿಗಳು ಬೆಳಗಿನ ಸೆಷನ್ ಪರೀಕ್ಷೆಗೆ 9.50 ರೊಳಗೆ ಹಾಜರಿರಬೇಕು. ಎರಡನೇ ಸೆಷನ್ ಪರೀಕ್ಷೆಗೆ ಹಾಜರಾಗಲು ಮಧ್ಯಾಹ್ನ 1.50 ರೊಳಗೆ ಪರೀಕ್ಷಾ ಕೇಂದ್ರವನ್ನು ತಲುಪ ಬೇಕೆಂದು ಸೂಚಿಸಲಾಗಿದೆ. ತಡವಾಗಿ ಪರೀಕ್ಷಾ ಸ್ಥಳಕ್ಕೆ ಪ್ರವೇಶಿಸಲು ಯಾವುದೇ ಅಭ್ಯರ್ಥಿಯನ್ನು ಅನುಮತಿಸಲಾಗುವುದಿಲ್ಲ.

    ಬ್ಲಾಕ್ ಬಾಲ್ ಪಾಯಿಂಟ್ ಪೆನ್ ನ್ನು ತರಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಉತ್ತರ ಪತ್ರಿಕೆ ಮತ್ತು ಹಾಜರಾತಿ ಪಟ್ಟಿಯನ್ನು ಬ್ಲ್ಯಾಕ್ ಬಾಲ್ ಪಾಯಿಂಟ್ ಪೆನ್ನೊಂದಿಗೆ ಮಾತ್ರ ಭರ್ತಿ ಮಾಡಲು ಸೂಚಿಸಲಾಗಿದೆ. ಅಭ್ಯರ್ಥಿಗಳು ಇ – ಅಡ್ಮಿಟ್ ಕಾರ್ಡ್ ಜೊತೆಗೆ ಫೊಟೋ ಐಡಿ ಕಾರ್ಡ್ ನಮೂದಿಸಬೇಕು.

    ಪರೀಕ್ಷೆಯು ಲಿಖಿತ ರೂಪದಲ್ಲಿದ್ದು, ಎರಡು ಪತ್ರಿಕೆಗಳು ಇರುತ್ತವೆ. ಪೇಪರ್ -1 ಬಹು ಆಯ್ಕೆ ಪ್ರಶ್ನೆಗಳ ( ಎಂಸಿಕ್ಯೂ) ಆಧಾರದ ಮೇಲೆ ಅಭ್ಯರ್ಥಿಗಳ ಸಾಮಾನ್ಯ ಸಾಮಾರ್ಥ್ಯ ಮತ್ತು ಬುದ್ಧಿವಂತಿಕೆಯನ್ನು ಪರೀಕ್ಷಿಸಲಾಗುತ್ತದೆ. ಇಲ್ಲಿ ಒಟ್ಟು 250 ಅಂಕಗಳನ್ನು ಹೊಂದಿರುವ 200 ಪ್ರಶ್ನೆಗಳನ್ನು ಪೂರ್ಣಗೊಳಿಸಲು ಅಭ್ಯರ್ಥಿಗೆ ಒಟ್ಟು 2 ಗಂಟೆ ಅವಧಿ ಕಾಲಾವಕಾಶ ನೀಡಲಾಗಿದೆ. ಪೇಪರ್ 2 ವಿವರಣಾತ್ಮಕ ಪ್ರಶ್ನೆ ಹೊಂದಿದ್ದು, ಅಭ್ಯರ್ಥಿಯ ಭಾಷಾ ಪ್ರಾವೀಣ್ಯತೆಯನ್ನು ಪರೀಕ್ಷಿಸುತ್ತದೆ.ಇಲ್ಲಿ ಕೂಡಾ 200 ಅಂಕಗಳನ್ನು ಹೊಂದಿರುವ ವಿವರಣಾತ್ಮಕ ಪ್ರಕಾರದ ಪ್ರಶ್ನೆಗಳನ್ನು ಪೂರ್ಣಗೊಳಿಸಲು 3 ಗಂಟೆ ಸಮಯ ಇದೆ.

    ಸಾಂವಿಧಾನಿಕ ಮಂಡಳಿಯಾದ ಲೋಕಸೇವಾ ಆಯೋಗಬಯ ( ಯುಪಿಎಸ್ ಸಿ), ಗಡಿ ಭದ್ರತಾ ಪಡೆ ( ಬಿಎಸ್ ಎಫ್), ಕೇಂದ್ರ ಭದ್ರತಾ ಪಡೆ (ಸಿಐಎಸ್ ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ( ಐಟಿಬಿಪಿ), ಕೇಂದ್ರ ಮೀಸಲು ಪೊಲೀಸ್ ಸಹಾಯಕ ಕಮಾಂಡೆಂಟ್ ಗಳ‌ ( ಗ್ರೂಪ್ ಎ), ಫೋರ್ಸ್ ( ಸಿಆರ್ಪಿಎಫ್) ಮತ್ತು ಸಶಸ್ತ್ರ ಸೀಮಾ ಪಡೆ ( ಎಸ್ ಎಸ್ ಬಿ) ಅಧಿಕಾರಿಗಳ ಅರ್ಹತೆ ಆಧಾರಿತ ಆಯ್ಕೆಗಾಗಿ ಸಿಎಪಿಎಫ್ ಪರೀಕ್ಷೆಯನ್ನು ನಡೆಸುತ್ತದೆ.