Category: State Govt Jobs

Karnataka Govt Jobs News in Kannada, Job news in kannada, employment news, kpsc update, karnataka police recruitment, bmtc driver jobs, ksrtc driver conductor jobs, gramapanchayiti jobs, bengaluru jobs, mysuru jobs, mangaluru jobs, hassan jobs, jobs in karnataka, jobs near me, ಕರ್ನಾಟಕ ಉದ್ಯೋಗ ವಾರ್ತೆ, ಕೆಪಿಎಸ್‌ಸಿ, ಸರಕಾರಿ ಉದ್ಯೋಗ, ಕನ್ನಡ ಉದ್ಯೋಗಾವಕಾಶ, ಉದ್ಯೋಗ ಮಾಹಿತಿ, ಜಾಬ್‌ ಸುದ್ದಿಗಳು

  • DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಜಿಲ್ಲಾ ಆರೋಗ್ಯ ಮತ್ತು ಕುಟುಂಟ ಕಲ್ಯಾಣ ಸಂಘ ಉಡುಪಿ (ಡಿಎಚ್‌ಎಫ್‌ಎಸ್‌) 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕೆಳಗೆ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಹ ಅಭ್ಯರ್ಥಿಗಳಿಂದ ದಿನಾಂಕ 07-04-2021 ರಂದು 10.30 am ನಿಂದ 01.30 pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಛೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ವಿವರ : ಅನೆಸ್ಥಿಟಿಸ್ಟ್‌ -01
    ಗೈನಕಾಲಜಿ ಮತ್ತು ಒಬಸ್ಟೆಟ್ರಿಕ್ಸ್‌-01
    ಪಂಚಕರ್ಮ ತಜ್ಞ ವೈದ್ಯರು-01
    ಡೆಂಟಲ್ ಹೈಜೆನಿಸ್ಟ್‌-01
    ಮೆಡಿಕಲ್ ಆಫೀಸರ್-04
    ಎಎನ್‌ಎಂ-05

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಜಾತಿ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
    ರೂ.15,000/- ಕ್ಕಿಂತ ಕಡಿಮೆ ವೇತನವಿರುವ ಹುದ್ದೆಗೆ ಪಿ.ಎಫ್.ಸೌಲಭ್ಯ ನೀಡಲಾಗುವುದು.
    ವೈದ್ಯಾಧಿಕಾರಿ – 50 ವರ್ಷದೊಳಗೆ ಪ್ರಥಮ ಆದ್ಯತೆ. 50 ರಿಂದ 65 ವರ್ಷದೊಳಗೆ ದ್ವಿತೀಯ ಆದ್ಯತೆ. 65 ರಿಂದ 70 ವರ್ಷದೊಳಗೆ ತೃತೀಯ ಆದ್ಯತೆ ನೀಡಲಾಗುವುದು.
    ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ಇವರು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ಬಾನಿಸುತ್ತಿದ್ದಾರೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ:

    ಹುದ್ದೆ: ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) -03, ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) -02 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ/ಪಿಜಿಡಿಎಂ(2 ವರ್ಷಗಳ) ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ‌ವಿಶ್ವವಿದ್ಯಾಲಯದ‌ ಸಿವಿಲ್ ಇಂಜಿನಿಯರಿಂಗ್ ಬಿ.ಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

    ವಯೋಮಿತಿ : ಈ ಜಾಹೀರಾತು ‌ಕೊನೆಯ ದಿನಾಂಕದನುಸಾರ 55 ವರ್ಷಗಳು.

    ವೇತನ ಶ್ರೇಣಿ : ತಿಂಗಳಿಗೆ ‌ರೂ. 75,000/- ರಿಂದ ರೂ. 1,00,000/- ರವರೆಗೆ ಮಾಸಿಕ ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-04-2021

    ಆನ್ಲೈನ್ ( ಇ-ಮೇಲ್) ಅರ್ಜಿಗಳನ್ನು ಪರಿಶೀಲಿಸಿದ ನಂತರ, ಸಂದರ್ಶನಕ್ಕಾಗಿ ಕರೆ ಪತ್ರವನ್ನು ಕಳುಹಿಸಲಾಗುವುದು.

    ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು [email protected] ಗೆ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ‌ ವಿವರವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
    https://saisouthbengaluru.org/

  • ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ಸೇವೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಾಂತ್ರಿಕ ಸಹಾಯಕ (ಅರಣ್ಯ)-03
    ತಾಂತ್ರಿಕ ಸಹಾಯಕ (ಕೃಷಿ) – 04
    ತಾಂತ್ರಿಕ ಸಹಾಯಕ (ತೋಟಗಾರಿಕೆ) -03
    ತಾಂತ್ರಿಕ ಸಹಾಯಕ (ಸಿವಿಲ್) -04
    ತಾಲೂಕು ಎಂಇಎಸ್ ಸಂಯೋಜಕರು -01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-04-2021

    ವಿದ್ಯಾರ್ಹತೆ: ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಅರಣ್ಯ)/ಎಂಎಸ್ಸಿ (ಅರಣ್ಯ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಕೃಷಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಕೃಷಿ)/ಎಂಎಸ್ಸಿ (ಕೃಷಿ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ತೋಟಗಾರಿಕೆ) ಬಿ.ಎಸ್ಸಿ ( ತೋಟಗಾರಿಕೆ )/ಎಂಎಸ್ಸಿ (ತೋಟಗಾರಿಕೆ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಸಿವಿಲ್) – ಈ‌ ಹುದ್ದೆಗೆ ಬಿಇ(ಸಿವಿಲ್)/ಬಿಟೆಕ್(ಸಿವಿಲ್) ಇಂಜಿನಿಯರಿಂಗ್ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ ಇರಬೇಕು. ತಾಲೂಕು ಎಂಇಎಸ್ ಸಂಯೋಜಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಸಿಎ/ಬಿಎಸ್ಸಿ ( ಕಂಪ್ಯೂಟರ್ ಸೈನ್ಸ್) ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ ಜೊತೆಗೆ ಸಂಬಂದಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ, ಎಂಎಸ್ ಆಫೀಸ್, ಎಕ್ಸೆಲ್ ಅನುಭವ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ರೊಳಗಿನವರಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ  Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

    ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

    ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

    ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
    ದೂರವಾಣಿ ಸಂಖ್ಯೆ : 080-22342163

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎರಡು ಬಿಇ-ಸಿವಿಲ್ ಒಂದು ಬಿಎಸ್ಸಿ/ಎಂಎಸ್ಸಿ ತೋಟಗಾರಿಕೆ ಮತ್ತು ಒಂದು ಬಿಎಸ್ಸಿ/ ಎಂಎಸ್ಸಿ ಅರಣ್ಯ ತಾಂತ್ರಿಕ ಸಹಾಯಕರು ಅವಶ್ಯಕತೆ ಇದ್ದು, ಸದ್ರಿ ಹುದ್ದೆಗೆ ಆಸಕ್ತಿ ಇರುವ ಕೆಳಗಿನ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಅಪೂರ್ಣ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಅರ್ಹತೆ: ಬಿಇ-ಸಿವಿಲ್ ವಿದ್ಯಾರ್ಹತೆ, ಬಿಎಸ್ಸಿ/ಎಂ.ಎಸ್ಸಿ ತೋಟಗಾರಿಕೆ.

    ವಿದ್ಯಾರ್ಹತೆ : ಬಿ.ಎಸ್ಸಿ/ಎಂ.ಎಸ್ಸಿ ಅರಣ್ಯ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್‌ ಭಾಷೆ ತಿಳಿದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ಸಂಭಾವನೆ ರೂ.24,000/-+ ಪ್ರಯಾಣ ಭತ್ಯೆ ಪಾವತಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226862 ಸಂಪರ್ಕಿಸಬಹುದು. (ಕಚೇರಿ ಅವಧಿಯಲ್ಲಿ).

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ನೋಟರಿ ಹುದ್ದೆಗೆ ಅರ್ಜಿ ಆಹ್ವಾನ

    ನೋಟರಿ ಹುದ್ದೆಗೆ ಅರ್ಜಿ ಆಹ್ವಾನ

    ಚಿಕ್ಕಮಗಳೂರು ಜಿಲ್ಲೆಯ ಕಡೂರು ಕಂದಾಯ ತಾಲ್ಲೂಕಿನಲ್ಲಿ ಹಾಗೂ ತರೀಕೆರೆ ಕಂದಾಯ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ: ನೋಟರಿ ಹುದ್ದೆ.

    ಹುದ್ದೆ ಸಂಖ್ಯೆ :03

    ಹುದ್ದೆ ವಿವರ : ತರೀಕೆರೆ ಕಂದಾಯ ತಾಲೂಕು -1 ನೋಟರಿ ಹುದ್ದೆ

    ಚಿಕ್ಕಮಗಳೂರು ಜಿಲ್ಲೆಯ ಕಡೂರು ಕಂದಾಯ ತಾಲ್ಲೂಕು- 2 ನೋಟರಿ ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಎಪ್ರಿಲ್ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು. ಹಾಗೂ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ನಿಗಧಿಪಡಿಸುವ ಕನಿಷ್ಠ ಅರ್ಹತೆಗಳು, ಕಾರ್ಯಾನುಭವವನ್ನು ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬಹುದು.