ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆ : 34 ಹುದ್ದೆಗಳು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ)

ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕನ್ನಡ ಓದಲು ಬರೆಯಲು ತಿಳಿದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವಯೋಮಿತಿಯವರಾಗಿರಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-I ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಧೃಢೀಕರಣ ಪತ್ರ ಹೊಂದಿದ್ದಲ್ಲಿ‌ ಗರಿಷ್ಠ 40 ವರ್ಷ.

ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2ಎ, 2 ಬಿ, 3 ಎ, 3 ಬಿ ಸೇರಿದ ಅಭ್ಯರ್ಥಿಗಳಿಗೆ ರೂ. 200/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಹಾಗೂ ಎಲ್ಲಾ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಆನ್ಲೈನ್ ಹೊರತು ಪಡಿಸಿ ಬೇರೆ ಯಾವುದೇ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment