ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗಕ್ಕಾಗಿ ಸಾಲಸೌಲಭ್ಯ ಹಾಗೂ ಸಹಾಯ ಧನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊರೊನಾ ಸೋಂಕಿನಿಂದ ಮರಣ ಹೊಂದಿರುವ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಹಾಗೂ ಸಾಲಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಸಹಾಯಧನ ಸಾಲಸೌಲಭ್ಯ ಪಡೆಯಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ರೂ.1.00 ಲಕ್ಷ, ಎನ್ ಎಸ್ ಎಫ್ ಡಿಸಿ ಅವಧಿ ಸಾಲ ರೂ. 4 ಲಕ್ಷ ಸೇರಿ ಒಟ್ಟು ರೂ.5.00 ಲಕ್ಷಗಳನ್ನು ನೀಡಲಾಗುತ್ತದೆ.

ಕೋವಿಡ್ ನಿಂದ ಮರಣ ಹೊಂದಿರುವ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ( ಆದಾಯ ಗರಿಷ್ಠ 3.00 ಲಕ್ಷ ಒಳಗಿರಬೇಕು) ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕೋವಿಡ್ ನಿಂದ ಮರಣ ಹೊಂದಿದ ದೃಢೀಕರಣ ಪತ್ರ, ಮೂರು ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021

ಅರ್ಜಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹಾವೇರಿ ಜಿಲ್ಲಾ ಕಚೇರಿ ಇಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-249012 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment