ರಾಜ್ಯ ಸರಕಾರಿ ನೌಕರರಿಗೆ ಶೇ.11 ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ಸಿಎಂ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ರಾಜ್ಯದ ಸರಕಾರಿ ನೌಕರರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು ಮಂಗಳವಾರ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ( ಡಿಎ) ಹೆಚ್ಚಳ ಮಾಡಿ ಸೂಚನೆಯನ್ನು ಹೊರಡಿಸಿದೆ.

ಸಿಎಂ‌ ಬಿ.ಎಸ್.ಯಡಿಯೂರಪ್ಪ ಹಣಕಾಸು ಇಲಾಖೆಗೆ ಜುಲೈ 1, 2021 ರಿಂದ ಅನ್ವಯಿಸುವಂತೆ ರಾಜ್ಯ ಸರಕಾರಿ ನೌಕರರಿಗೆ ಶೇ.11 ರಷ್ಟು ಡಿಎ ( ತುಟ್ಟಿಭತ್ಯೆ) ನೀಡುವಂತೆ ಸೂಚಿಸಿದ್ದಾರೆ. ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ದರ ಶೇ.11.25% ಇದೆ. ಈಗ ಶೇ.11 ಹೆಚ್ಚಳದಿಂದಾಗಿ ಒಟ್ಟು 22.25 ರಷ್ಟು ತುಟ್ಟಿಭತ್ಯೆ ದೊರಕಲಿದೆ. ಇದರಿಂದಾಗಿ 1.50 ಲಕ್ಷ ಪಿಂಚಣಿದಾರರು ಸೇರಿದಂತೆ 6 ಲಕ್ಷ ನೌಕರರಿಗೆ ಅನುಕೂಲವಾಗಲಿದೆ.

Leave a Comment