ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರಲ್ಲಿ ಖಾಲಿ ಇರುವ ಹಾಗೂ ಅಗತ್ಯವಿರುವ ವಿವಿಧ ವೃಂದಗಳಲ್ಲಿನ ಹುದ್ದೆಗಳಿಗಾಗಿ ಪ್ರಕಟಣೆ ಹೊರಡಿಸಿದೆ. ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : ಸಿವಿಲ್ ಇಂಜಿನಿಯರ್ ( ವ್ಯವಸ್ಥಾಪಕ ಶ್ರೇಣಿ) : 2 ಹುದ್ದೆ : ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಕನಿಷ್ಠ ಎರಡು ವರ್ಷ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಸಹಾಯಕರು : 16 ಹುದ್ದೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಸಹಕಾರಿ ವಿಷಯದಲ್ಲಿ ಪದವಿ ಹೊಂದಿರಬೇಕು.

ಉಪ ಸಿಬ್ಬಂದಿ ಕಮ್ ವಾಹನ ಚಾಲಕ : 6 ಹುದ್ದೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ಅಂಗೀಕೃತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಸಕ್ಷಮ ಪ್ರಾಧಿಕಾರದಿಂದ ಮೋಟಾರ್ ವಾಹನ ಪರವಾನಗಿ ಪಡೆದಿರತಕ್ಕದ್ದು. ಲಘುವಾಹನ ಚಾಲನೆಯಲ್ಲಿ ಎರಡು ವರ್ಷ ಅನುಭವ ಇರುವವರಿಗೆ ಆದ್ಯತೆ.

ಉಪಸಿಬ್ಬಂದಿ ( ಪ್ಯೂನ್ / ಅಟೆಂಡರ್ ) : 6 ಹುದ್ದೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ಅಂಗೀಕೃತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಸ್ವೀಪರ್: 2 ಹುದ್ದೆ : ಏಳನೇ ತರಗತಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರತಕ್ಕದ್ದು.

ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ : 20-07-2021 ( 10.30 ರಿಂದ)
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 21-08-2021 ( ಸಂಜೆ 5.30 ರವರೆಗೆ)

ವಯೋಮಿತಿ : ಸಹಾಯಕ ಹುದ್ದೆಗೆ ಕನಿಷ್ಠ 18 ಹಾಗೂ ಗರಿಷ್ಠ 36 ವರ್ಷ ವಯೋಮಿತಿ ಮೀರಿರಬಾರದು.

ಉಪಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿ ಮೀರಿರಬಾರದು.

ಉಪಸಿಬ್ಬಂದಿ ಹುದ್ದೆಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ : ಸಿವಿಲ್ ಇಂಜಿನಿಯರ್ ಹಾಗೂ ಸಹಾಯಕ ಹುದ್ದೆಗೆ ರೂ.1000/-
ಉಪ ಸಿಬ್ಬಂದಿ ( ಪ್ಯೂನ್ / ಅಟೆಂಡರ್) ಉಪಸಿಬ್ಬಂದಿ ಕಮ್ ವಾಹನ ಚಾಲಕ, ಸ್ವೀಪರ್ ಹುದ್ದೆಯ ಅರ್ಜಿ ಶುಲ್ಕ ರೂ.500/-

ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ/ ಕೊರಿಯರ್/ ಖುದ್ದಾಗಿ ಸಲ್ಲಿಸಬಹುದು. ‌

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್

Leave a Comment