ಪೊಲೀಸ್ ಇಲಾಖೆಯಲ್ಲಿ 250 ಅನುಯಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮೊದಲ ಆದ್ಯತೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಗಳಲ್ಲಿ ಖಾಲಿಯಿರುವ ಅನುಯಾಯಿ (ಪುರುಷ) ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಕುರಿತು ಅಧಿಸೂಚನೆಯನ್ನು ಪ್ರಕಟಿಸಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-07-2021 ಬೆಳಿಗ್ಗೆ 10.00 ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-08-2021 ಸಂಜೆ 06.00 ಗಂಟೆಯವರೆಗೆ
ಅಧಿಕೃತ ಬ್ಯಾಂಕ್ ಶಾಖೆಗಳ/ ಅಂಚೆ ಕಚೇರಿ ವೇಳೆಯಲ್ಲಿ ಶು ಪಾವತಿಸಲು ಕೊನೆಯ ದಿನಾಂಕ : 01-09-2021

ಹುದ್ದೆಗಳ ವಿವರ : ಕರ್ನಾಟಕ ರಾಜ್ಯ ಪೊಲೀಸ್ ಪಡೆಗಳಲ್ಲಿ ನೇರ ನೇಮಕಾತಿಯಡಿ ಖಾಲಿಯಿರುವ ಅನುಯಾಯಿ( ಪುರುಷ) ಹುದ್ದೆಗಳ ವಿವರ :

ಅಡುಗೆಯವರು – 81 ಹುದ್ದೆಗಳು
ಕ್ಷೌರಿಕ – 45 ಹುದ್ದೆಗಳು
ಧೋಭಿ – 53 ಹುದ್ದೆಗಳು
ಕಸ ಗುಡಿಸುವವರು- 58 ಹುದ್ದೆಗಳು
ನೀರು ತರುವವರು- 13 ಹುದ್ದೆಗಳು

ಒಟ್ಟು ಹುದ್ದೆ ಸಂಖ್ಯೆ- 250

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದಂದು ಅಂದರೆ 30-08-2021 ರಂದು ಅಭ್ಯರ್ಥಿಗೆ ಕನಿಷ್ಠ 18 ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಸಾಮಾನ್ಯ ಪುರುಷ ಅಭ್ಯರ್ಥಿಗಳಿಗೆ – ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷ, ಇತರೆ ಅಭ್ಯರ್ಥಿಗಳಿಗೆ 30 ವರ್ಷ.

ವಿದ್ಯಾರ್ಹತೆ : ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ( ವೃಂದ ಮತ್ತು ನೇಮಕಾತಿ) ನಿಯಮ 2020 ರ ಪ್ರಕಾರ ಅನುಯಾಯಿ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 30-08-2021ಕ್ಕೆ ಹೊಂದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ, ಪ್ರವರ್ಗ 2 ( ಎ), 2 (ಬಿ), 3 (ಎ), 3( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-

ನಿಗದಿತ ಶುಲ್ಕವನ್ನು ನಗದು/ ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಯಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕ್ ನ ಶಾಖೆಯಲ್ಲಿ ಪಾವತಿಸಿ ನಂತರ ಚಲನ್ ನ ಅಭ್ಯರ್ಥಿ ಪ್ರತಿಯನ್ನು ಇಟ್ಟುಕೊಂಡಿರತಕ್ಕದ್ದು.

ಅರ್ಜಿಗಳನ್ನು ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://recruitment.ksp.gov.in ನಲ್ಲಿ ಆನ್ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು.

ನೋಟಿಫಿಕೇಶನ್

Leave a Comment