ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಒಂದು ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ ( ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರನ್ವಯ ತುಂಬಲು ಸರಕಾರವು ಉದ್ದೇಶಿಸಿದ್ದು, ಏಳು ವರ್ಷ ವಕೀಲ ವೃತ್ತಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೆಳಗಿನಂತೆ ಸೂಚನೆ ನೀಡಲಾಗಿದೆ.

ಅಭ್ಯರ್ಥಿಯು ಈ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಕನಿಷ್ಠ 7 ವರ್ಷ ಅಥವಾ ಮೇಲ್ಪಟ್ಟು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರಬೇಕು. ಹಾಗೂ ಈ ಬಗ್ಗೆ ದೃಢೀಕರಿಸಿದ ದಾಖಲೆಗಳನ್ನು ಸಲ್ಲಿಸುವುದು. ಜನ್ಮ ದಿನಾಂಕದ ಬಗ್ಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ದೃಢೀಕೃತ ದಾಖಲಾತಿ ಸಲ್ಲಿಸುವುದು. ಪಾಸ್ ಪೋರ್ಟ್ ಸೈಜ್ ನ ಎರಡು ಭಾವಚಿತ್ರಗಳನ್ನು ಲಗತ್ತಿಸಬೇಕು. ಅರ್ಜಿಯನ್ನು ನಿಗದಿತ ನಮೂನೆಯಲ್ಲಿಯೇ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕಚೇರಿ ಸಹಾಯಕರು, ಜಿಲ್ಲಾಧಿಕಾರಿಯವರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ : 104, 1 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು ಇಲ್ಲಿಂದ ಪಡೆಯಬಹುದು ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಇದೇ ವಿಳಾಸಕ್ಕೆ ಕಳುಹಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-08-2021

Leave a Comment