Blog

  • ಗೂಗಲ್: ವಿವಿಧ ಹುದ್ದೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

    ಗೂಗಲ್: ವಿವಿಧ ಹುದ್ದೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

    ಗೂಗಲ್ ಇಂಡಿಯಾವು ವಿವಿಧ ಅನುಭವಿ ಪ್ರೊಫೆಷನಲ್ ಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಗೂಗಲ್ ಮೆಟ್ರೋ ನೆಟ್ವರ್ಕ್ ಡೆಪ್ಲಾಯ್ಮೆಂಟ್ ಇಂಜಿನಿಯರ್, ಕಸ್ಟಮರ್ ಇಂಜಿನಿಯರ್- ಡಾಟಾ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್ ( ಗೂಗಲ್ ಕ್ಲೌಡ್), ಕಸ್ಟಮರ್ ಇಂಜಿನಿಯರ್ – ಸೆಕ್ಯುರಿಟಿ (ಗೂಗಲ್ ಕ್ಲೌಡ್) ಹುದ್ದೆಗಳನ್ನು ಭರ್ತಿ ಮಾಡಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ವೊಡಾಫೋನ್: ಉದ್ಯೋಗವಕಾಶ

    ವೊಡಾಫೋನ್: ಉದ್ಯೋಗವಕಾಶ

    ವೊಡಫೊನ್ ಫ್ರೆಶರ್ ಇಂಜಿನಿಯರ್ ತರಬೇತುದಾರರನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಬಿಇ, ಬಿಟೆಕ್,ಎಂಇ, ಎಂಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ ಸ್ಥಳ : ಪುಣೆ

    ಡಿಸೈನಿಂಗ್, ಹೊಸಮಾದರಿ, ಡ್ಯಾಶ್ ಬೋರ್ಡ್, ಬ್ಯುಸಿನೆಸ್ ತಂತ್ರಗಳು, ತಾಂತ್ರಿಕ ಸಲಹೆಗಳಿಗೆ ಸಂಬಂಧಿಸಿದಂತೆ ಡೆಲಿವರಿ ಟಾಸ್ಕ್ ನ್ನು ಮಾಡಬೇಕು. ತಮ್ಮ ಐಡಿಯಾಗಳು, ಮಾಹಿತಿಗಳನ್ನು ಕಂಪನಿಯ ಒಳಿತಿಗಾಗಿ ಹಂಚಿಕೊಳ್ಳಬೇಕು. ಡಾಟಾ ಮಾಡಲಿಂಗ್, ಡಾಟಾ ವಿಸ್ಯುವಲೈಸೇಶನ್, ಡಾಟಾ ಅನಾಲಿಟಿಕ್ಸ್ ಮತ್ತು ಇನ್ ಸೈಟ್ಸ್, ಡಾಟಾ ಮ್ಯಾನೇಜ್ಮೆಂಟ್ ಮತ್ತು ಟ್ರಾನ್ಸ್ ಫೋರ್ಮೇಶನ್, ಎಐ- ಡೀಪ್ ಅಂಡ್ ಮೆಷಿನ್ ಲರ್ನಿಂಗ್ ಈ ಅಗತ್ಯ ಕೌಶಲ್ಯಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಆನ್ಲೈನ್ ಅಪ್ಲೈಗಾಗಿ ಇಲ್ಲಿ ಕ್ಲಿಕ್ ಮಾಡಿ

  • ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ: ವಿವರ ಇಲ್ಲಿದೆ

    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ: ವಿವರ ಇಲ್ಲಿದೆ

    ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ” ಮೆಟ್ರಿಕ್ -ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ” ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 30-04-2021 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಹಾಗೂ ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ದಿನಾಂಕ 12-05-2021 ರವರೆಗೂ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15-05-2021 ರವರೆಗೆ ವಿಸ್ತರಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ : www.ssp.postmatric.karnataka.gov.in

  • ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ /ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾ‌ನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

    ಅರ್ಜಿ ಸಲ್ಲಿಕೆಯ ಅವಧಿಯು ಮೇ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

    ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

    ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

    ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

    ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.