Blog

  • ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ : ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

    ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ : ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

    ಐ.ಡಿ.ಎಸ್‌.ಪಿ , ಎನ್‌.ಸಿ.ಡಿ ಕ್ಲಿನಿಕ್, ಎನ್‌.ಪಿ.ಹೆಚ್.ಸಿ ( ಹಿರಿಯ ನಾಗರಿಕರ ವಾರ್ಡ್ ) ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಅಭಿಯಾನದ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಡಾಟಾ ಮ್ಯಾನೇಜರ್- 01, ಡಾಕ್ಟರ್ (ಜನರಲ್ ಫಿಸಿಶಿಯನ್)- 01, ಡಾಕ್ಟರ್ ( ಕನ್ಸಲ್ಟೆಂಟ್ ಮೆಡಿಸಿನ್) – 01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನುಆಹ್ವಾನಿಸಲಾಗಿದೆ.

    ಡಾಟಾ ಮ್ಯಾನೇಜರ್ (ಐಡಿಎಸ್‌ಪಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೋಸ್ಟ್ ಗ್ರಾಜ್ಯುಯೇಶನ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿಇ ಇನ್ ಐಟಿ/ ಎಲೆಕ್ಟ್ರಾನಿಕ್ಸ್ ನ್ನು ಹೊಂದಿರಬೇಕು. ಹಾಗೂ ಸದರಿ ಹುದ್ದೆಯಲ್ಲಿ ಒಂದು ವರ್ಷಗಳ ಅನುಭವವಿರಬೇಕು. ಹೆಲ್ತ್ ಅಥವಾ ಸೋಷಿಯಲ್ ಸೆಕ್ಟರ್ ನಲ್ಲಿಅನುಭವವಿರುವರಿಗೆ ಆದ್ಯತೆ ನೀಡಲಾಗುವುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,050/- ಮಾಸಿಕ ವೇತನವಿರುತ್ತದೆ.

    ಡಾಕ್ಟರ್ (ಜನರಲ್ ಪಿಸಿಶಿಯನ್)(ಎನ್‌ಸಿಡಿ ಕ್ಲಿನಿಕ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ.ಎಸ್‌.ಎಸ್‌, ಎಂಡಿ (ಇಂಟರ್ನಲ್ ಮೆಡಿಸಿನ್) ಹೊಂದಿರಬೇಕು. ಸದರಿ ಹುದ್ದೆಯಲ್ಲಿ 3 ವರ್ಷಗಳ ಅನುಭವ ಇರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,10,000/- ಅಥವಾ ರೂ. 50,000/- ಮಾಸಿಕ ವೇತನವಿರುತ್ತದೆ.

    ಡಾಕ್ಟರ್ (ಕನ್ಸಲ್ಟೆಂಟ್ ಮೆಡಿಸಿನ್)(ಎನ್‌ಪಿಎಚ್‌ಸಿಇ ವಾರ್ಡ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಗ್ರಾಜ್ಯುಯೇಟ್ ಮಾಡಿರಬೇಕು. 3 ವರ್ಷಗಳ ಅನುಭವವಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.

    ಈ ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ 29-04-2021 ರಿಂದ 05-05-2021 ರವರೆಗೆ ಅರ್ಜಿಗಳನ್ನು ದೃಢೀಕರಣ ಸಹಿಯೊಂದಿಗೆ ನೇರವಾಗಿ ಮೇಲ್ಕಂಡ ಕಛೇರಿಯಲ್ಲಿ ಸಲ್ಲಿಸಲು ಸೂಚಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಕಾರ್ಯಾಯಾಲಯದ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ. ಕಛೇರಿಯ ಸಮಯ ಬೆಳಿಗ್ಗೆ : 11.00 ರಿಂದ ಸಂಜೆ 5.00 ರವರೆಗೆ.

  • ಜ್ಯೂನಿಯರ್ ಅಸಿಸ್ಟೆಂಟ್ ಕಮ್ ಸೇಲ್ಸ್ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ

    ಜ್ಯೂನಿಯರ್ ಅಸಿಸ್ಟೆಂಟ್ ಕಮ್ ಸೇಲ್ಸ್ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ

    ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಈ ಸಂಘದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ : 24-05-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

    ಹುದ್ದೆಯ ಹೆಸರು : ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ( ಜ್ಯೂನಿಯರ್ ಅಸಿಸ್ಟೆಂಟ್ ಕಮ್ ಸೇಲ್ಸ್ ಕ್ಲರ್ಕ್‌)

    ಸಾಮಾನ್ಯ ಅಭ್ಯರ್ಥಿ – 3
    ಪರಿಶಿಷ್ಟ ಜಾತಿ-1
    ಪ್ರವರ್ಗ-2A- 1
    ಒಟ್ಟು 5 ಹುದ್ದೆಗಳು.

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಕಲಿತಿರಬೇಕು ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಶನ್ಸ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿಗೊಳಪಟ್ಟಿರಬೇಕು.
    ಅ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು
    ಆ) 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು.
    ಇ) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.
    ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ವಿತರಿಸಲಾಗುವುದು. ರೂ.1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಹಿಂದಿರುಗಿಸಲಾಗುವುದಿಲ್ಲ. ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ,ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ.ಸರ್ಜಾಪುರ -562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ, ಇವರಿಗೆ ದಿನಾಂಕ : 24-05-2021ರಂದು ಸಂಜೆ 5.00 ಒಳಗಾಗಿ ಖುದ್ದಾಗಿ ಸಲ್ಲಿಸತಕ್ಕದ್ದು.

  • RITES : 146 ವಿವಿಧ ಹುದ್ದೆ

    RITES : 146 ವಿವಿಧ ಹುದ್ದೆ

    ರೈಲ್ ಇಂಡಿಯಾ ಟೆಕ್ನಿಕಲ್ ಆಂಡ್ ಎಕಾನಾಮಿಕ್ ಸರ್ವಿಸ್ ( ಆರ್ ಐಟಿಇಎಸ್) ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ,12,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ಹುದ್ದೆ: ಗ್ರಾಜ್ಯುಯೇಟ್ ಅಪ್ರೆಂಟಿಸ್ – 96, ಡಿಪ್ಲೋಮಾ ಅಪ್ರೆಂಟಿಸ್ – 15, ಟ್ರೇಡ್ ಅಪ್ರೆಂಟಿಸ್ – 35 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ

    ಹುದ್ದೆ ಸಂಖ್ಯೆ : 146

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ಹುದ್ದೆ ವಿವರ: ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗೆ ಬಿ.ಇ/ಬಿ.ಟೆಕ್, ಬಿ‌ಎ/ಬಿಬಿಎ / ಬಿ.ಕಾಂ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.14,000/-ಮಾಸಿಕ ವೇತನ ಇರುತ್ತದೆ.

    ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗೆ ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.12,000/-ಮಾಸಿಕ ವೇತನ ಇರುತ್ತದೆ.

    ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಐಟಿಐ ಪಾಸಾಗಿರಬೇಕು. ಹಾಗೂ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/-ವೇತನವಿರುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ ಅರ್ಜಿ ಭರ್ತಿ ಮಾಡಿ, ಇ-ಮೇಲ್ ಮಾಡಬೇಕು.
    ಇ- ಮೇಲ್ ವಿಳಾಸ : [email protected] ಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ: ನೇಮಕ ಪ್ರಕಟಣೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ: ನೇಮಕ ಪ್ರಕಟಣೆ

    ಮಹಾತ್ಮಾ ಗಾಂಧಿ‌ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಖಾತರಿ ಯೋಜನೆಯಡಿ ಬೆಂಗಳೂರು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿಈ ಕೆಳಕಂಡ ಹುದ್ದೆಗಳಿಗೆ 11 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಾಂತ್ರಿಕ ಸಹಾಯಕರು (ಅರಣ್ಯ)-01, ತಾಂತ್ರಿಕ ಸಹಾಯಕರು ( ತೋಟಗಾರಿಕೆ) -01

    ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ (ಫಾರೆಸ್ಟ್ರಿ) , ಎಂಎಸ್ಸಿ (ಫಾರೆಸ್ಟ್ರಿ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.24,000/- ಮಾಸಿಕ ವೇತನ ( ಪ್ರಯಾಣ ಭತ್ಯೆ ಪ್ರತಿ ಕಿ.ಮೀ.ಗೆ 5 ರೂ.ನಂತೆ ಗರಿಷ್ಠ ಮಾಸಿಕ ರೂ.1,500). ಈ ಹುದ್ದೆಗೆ 21ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛೆ ಪಡುವ ಅಭ್ಯರ್ಥಿಗಳು ಬಿಎಸ್ಸಿ ( ಹೋರಿಕಲ್ಚರ್), ಎಂ.ಎಸ್ಸಿ ( ಹೋರಿಕಲ್ಚರ್) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಇರಬೇಕು. ಈ ಹುದ್ದೆಗೆ ಅರ್ಜಿ‌ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 41 ರೊಳಗೆ ವಯೋಮಿತಿ ಇರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24,000/- ಮಾಸಿಕ ವೇತನ ( ಪ್ರಯಾಣ ಭತ್ಯೆ ಪ್ರತಿ ಕಿ.ಮೀ.ಗೆ 5 ರೂ.ನಂತೆ ಗರಿಷ್ಠ ಮಾಸಿಕ ರೂ.1,500).ಇರುತ್ತದೆ.

    ಭರ್ತಿ ಮಾಡಿ‌ದ ಅರ್ಜಿಯನ್ನು ದಿನಾಂಕ 15-05-2021 ರ ಸಂಜೆ 5.30 ರೊಳಗೆ ಖುದ್ದಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಟಪಾಲು ಶಾಖೆಗೆ ಸಲ್ಲಿಸುವುದು.

    ಅರ್ಜಿ ಸಲ್ಲಿಸುವ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್.ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು- 70

  • BEL : 268 ಉದ್ಯೋಗವಕಾಶ

    BEL : 268 ಉದ್ಯೋಗವಕಾಶ

    ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 5, 2021 ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್ 21 , 2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಮೇ 05, 2021

    ಒಟ್ಟು ಹುದ್ದೆ : 268

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000/- ರೂ.50,000/- ವರೆಗೆ ವೇತನವಿರುತ್ತದೆ.

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವ ಯುನಿವರ್ಸಿಟಿಯಿಂದ ಬಿಇ/ಬಿ.ಟೆಕ್ ತೇರ್ಗಡೆ ಹೊಂದಿರಬೆಕು.

    ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ. ಪಿಡ್ಬ್ಲುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಜನರಲ್/ಒಬಿಸಿ ಅಭ್ಯರ್ಥಿಗಳಿಗೆ ರೂ.500/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯುಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ)

    ನೈರ್ಮಲ್ಯ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವುಳ್ಳವರಿಗೆ ಮಾತ್ರ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬಾಗಲಕೋಟೆಯವರಿಂದ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹಿರಿಯ ವಿಶ್ಲೇಷಣಾಗಾರರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/-, ಕಿರಿಯ ವಿಶ್ಲೇಷಣೆಗಾರರು ಹುದ್ದೆಗೆ ಮಾಸಿಕ ರೂ.15,000/-, ನೀರಿನ ಮಾದರಿ ಸಂಗ್ರಹಗಾರರು ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.13,000+2000/- ವೇತನ ವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
    ವಯೋಮಿತಿ ದೃಢೀಕರಿಸಲು ಎಸ್ಎಸ್‌ಎಲ್‌ಸಿ ಅಂಕಪಟ್ಟಿ ಹಾಜರುಪಡಿಸುವುದು.

    ಆಯ್ಕೆಯಾದ ಅಭ್ಯರ್ಥಿಗಳು ಈ ಜಿಲ್ಲೆಯಲ್ಲಿ ಪ್ರಯೋಗಾಲಯದ ಯಾವುದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಗಳೂ ಸೂಚಿಸಿದ್ದಲ್ಲಿ ನಿರ್ವಹಿಸಲು ಬದ್ಧನಾಗಿರಬೇಕು.

    ಹುದ್ದೆಗಳು ಗುತ್ತಿಗೆಯ ತಾತ್ಕಾಲಿಕ ಖಾಲಿ ಇರುವ ಅವಧಿಗಾಗಿ ಮಾತ್ರ ಇರುತ್ತದೆ.

    ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಇಂಜಿನಿಯರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಹಳೇ ತಹಶೀಲ್ದಾರ ಕಚೇರಿ ಕಟ್ಟಡ, ಬಾಗಲಕೋಟೆ