Blog

  • ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ, ನೆಲಮಂಗಲ ಹಾಗೂ ದೇವನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23 ರೊಳಗೆ ಅರ್ಜಿ ಸಲ್ಲಿಸಬಹುದು.

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ – ಮಾಸಿಕ ರೂ.6000/- ವೇತನವಿರುತ್ತದೆ.

    ಶೇ.40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

    ಎಸ್ ಎಸ್ ಎಲ್ ಸಿ ಉತ್ತೀರ್ಣರಾದವರಿಗೆ ಹೆಚ್ಚು ಆದ್ಯತೆ. ಒಂದು ವೇಳೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಿಗದಿದ್ದರೆ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 45 ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಆರೋಗ್ಯವಂತರಾಗಿರಬೇಕು. ಗ್ರಾಮ ಪಂಚಾಯತಿ/ ವ್ಯಾಪ್ತಿಯಲ್ಲಿ ಮಾಹಿತಿ / ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ಹೊಂದಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ.

    ಪ್ರವಾಸ, ಲೇಖನ, ಸಾಮಾಗ್ರಿ ಮತ್ತು ಆಡಳಿತ ವೆಚ್ಚಕ್ಕಾಗಿ ರೂ.150/- ನೀಡಲಾಗುವುದು.

    ದೇವನಹಳ್ಳಿ ತಾಲೂಕಿನ ಕೊಯಿರಾ, ಮಂಡಿಬೆಲೆ, ಜಾಲಿಗೆ, ಕೋರಮಂಗಲ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ, ದೊಡ್ಡಬೆಲೆ, ಅಗಲುಕುಪ್ಪೆ, ಹೊಸಕೋಟೆ ತಾಲೂಕಿನ ದೇವನಗುಂದಿ, ಅನುಗೊಂಡನಹಳ್ಳಿ ಗ್ರಾಮ‌ ಪಂಚಾಯತಿಯಲ್ಲಿ ನೇಮಕಾತಿ ನಡೆಯಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 080-29787442

  • ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ಒಟ್ಟು 57 ಗ್ರಾಮ ಪಂಚಾಯತಿಗಳಿಗೆ ” ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗೆ ಅರ್ಜಿಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 08 ತಾಲ್ಲೂಕು ವ್ಯಾಪ್ತಿಯಲ್ಲಿರುವ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸುವುದು.

    ಅರ್ಹತೆಗಳು : 1. “ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    1. ಕನಿಷ್ಠ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
    2. ಅಭ್ಯರ್ಥಿಯು ದಿ.01.01.2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾ.ಪಂ.ಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಶೀಲ ಜಾಬ್‌ ಕಾರ್ಡ್ ಹೊಂದಿರಬೇಕು.
    3. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ( 2018-19, 2019-20, 2020-21) ಕನಿಷ್ಠ ಎರಡು ವರ್ಷಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
    4. ವಯೋಮಿತಿ ದಿ. 01.01.2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.
    5. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.
    6. ಹುದ್ದೆಗೆ ಅರ್ಜಿ ಸಲ್ಲಿಸುವವರು ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    7. ಅಭ್ಯರ್ಥಿಯು ಪರಿಣಾಮಕಾತಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನುಹೊಂದಿರಬೇಕು.
    8. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು ಇದಕ್ಕೆ ಗ್ರಾಮ ರೋಜ್‌ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

    ಗೌರವಧನ : ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ ರೂ. 6೦೦೦/- ನಿಗದಿತ ಗೌರವಧನ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್ ಮಾಡಿ

  • BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 2021, ಎಪ್ರಿಲ್, 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ : ಸ್ಕಿಲ್ಡ್/ಸೆಮಿ ಸ್ಕಿಲ್ಡ್‌/ ಅನ್‌ಸ್ಕಿಲ್ಡ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.6000/- ರಿಂದ ರೂ.15,000/- ವೇತನವಿರುತ್ತದೆ.

    ಒಟ್ಟು ಹುದ್ದೆ : 1679

    ಹುದ್ದೆ ಸ್ಥಳ : ನೊಯಿಡಾ-ಉತ್ತರಪ್ರದೇಶ

    ವಿದ್ಯಾಭ್ಯಾಸ : ಅಭ್ಯರ್ಥಿಗಳು ಸಂಸ್ಥೆಯ ನೇಮಕಾತಿ ನಿಯಮಾನುಸಾರ 8th, 10th, 12th, ಐಟಿಐ ಯನ್ನು ಅಂಗೀಕೃತ ಬೋರ್ಡ್‌/ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.

    ವಯೋಮಿತಿ : ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಜನರಲ್/ ಒಬಿಡಿ ಅಭ್ಯರ್ಥಿಗಳು ರೂ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ.
    ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ASRB : ಉದ್ಯೋಗ ಅಧಿಸೂಚನೆ ಪ್ರಕಟ

    ASRB : ಉದ್ಯೋಗ ಅಧಿಸೂಚನೆ ಪ್ರಕಟ

    ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (ಎಎಸ್‌ಆರ್‌ಬಿ) ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್‌(ಎನ್‌ಇಟಿ), ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್‌( ಎಆರ್‌ಎಸ್‌) ಸೀನಿಯರ್ ಟೆಕ್ನಿಕಲ್ ಆಫೀಸರ್ ( ಎಸ್‌ಟಿಒ) ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವಿವರಗಳನ್ನು ತಿಳಿದುಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-04-2021
    ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2021
    ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25-04-2021 (ಸಂಜೆ 5 ಗಂಟೆ)
    ಕಂಬೈನ್ಡ್ ಪ್ರಿಲಿಮಿನರಿ ಎಕ್ಸಾಮ್‌ – 21-04-2021 ರಿಂದ 27-06-2021
    ಎಆರ್‌ಎಸ್‌- 2021 ಮುಖ್ಯ ಪರೀಕ್ಷೆ – 19-09-2021
    ಸೀನಿಯರ್ ಟೆಕ್ನಿಕಲ್ ಆಫೀಸರ್ ಸಂದರ್ಶನ್, ಎಆರ್‌ಎಸ್ ಸಂದರ್ಶನ – ಬಿಡುಗಡೆ ಮಾಡಬೇಕಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾಸ್ಟರ್ ಡಿಗ್ರಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಕನಿಷ್ಠ 21 ವರ್ಷ, 31 ಗರಿಷ್ಠ ವರ್ಷ ವಯೋಮಿತಿ ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
    ಹುದ್ದೆಗಳ ವಿವರ : ಅಗ್ರಿಕಲ್ಚರ್ ರಿಸರ್ಚ್ ಸರ್ವೀಸ್ (ಎಆರ್‌ಎಸ್‌)- 222
    ಸೀನಿಯರ್ ಟೆಕ್ನಿಕಲ್ ಆಫೀಸರ್ (ಎಸ್‌ಟಿಒ) – 65

    ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/-,
    ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ ರೂ.500/-
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಲ್ಯುಡಿ/ ಮಹಿಳಾ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • RDPR  : ವಿವಿಧ ಹುದ್ದೆ

    RDPR : ವಿವಿಧ ಹುದ್ದೆ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ‌ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ.

    ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ‌.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ. ಕ್ಯೂ.ಎಮ್.ಎಸ್ ಐ.ಎಮ್.ಐ.ಎಸ್ ಸಮಾಲೋಚಕರು‌- 01

    1. ವೃತ್ತ ಕಚೇರಿ – ಜಲಜೀವನ ಮಿಷನ್
      a. ಹಿರಿಯ ಸಮಾಲೋಚಕರು- 04

    3. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ – ಜಲಜೀವನ‌ಮಿಷನ್
    a. ಜಿಲ್ಲಾ ಯೋಜನಾ ವ್ಯವಸ್ಥಾಪಕ – 02
    b. ಜಿಲ್ಲಾ MIS ಸಮಾಲೋಚಕರು- 05
    c. ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ – 32
    d. ಸೂಕ್ಷ್ಮಾಣುಜಿವಿ ಶಾಸ್ತ್ರಜ್ಞ – 80
    e. ಹಿರಿಯ ವಿಶ್ಲೇಷಣೆಗಾರ – 04
    f. ವಿಶ್ಲೇಷಣೆಗಾರ – 06
    g. ಕಿರಿಯ ವಿಶ್ಲೇಷಣೆಗಾರ – 09

    1. ಜಿಲ್ಲಾ ಪಂಚಾಯಿತಿ ಕಛೇರಿ – ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
      a. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು -01
      b. ಜಿಲ್ಲಾ MIS ಸಮಾಲೋಚಕರು -01
      c. ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು – 01

    ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ‌ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ‌ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ‌ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದು ಪಡಿಸಲಾಗುವುದು.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ಮೀರಿರಬಾರದು.

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯ ಗಳು, ಹಾಗೂ ಅರ್ಜಿ ಜೊತೆಗೆ ” ನಿಗದಿತ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು – 5600-009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ : 28-04-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ವಿದ್ಯಾರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಆಯ್ಕೆ ಪ್ರಕ್ರಿಯೆ : ಕಿರು ಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು‌ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.

    RDPR website: https://rdpr.karnataka.gov.in ಮತ್ತು https://swachhamevajayate.org ( ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಪಿಎಸ್ ಸಿ ಪಿಟ್ಟರ್ ಹುದ್ದೆಗಳ ದಾಖಲೆ ಪರಿಶೀಲನೆಗೆ ಆಯ್ಕೆ ಪಟ್ಟಿ ಬಿಡುಗಡೆ

    ಕೆಪಿಎಸ್ ಸಿ ಪಿಟ್ಟರ್ ಹುದ್ದೆಗಳ ದಾಖಲೆ ಪರಿಶೀಲನೆಗೆ ಆಯ್ಕೆ ಪಟ್ಟಿ ಬಿಡುಗಡೆ

    ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಫಿಟ್ಟರ್ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ ಗೆ ಭೇಟಿ ನೀಡಿ ಪರಿಶೀಲಿಸಬಹುದು.

    ಜನ್ಮದಿನಾಂಕ, ರಿಜಿಸ್ಟರ್ ನಂಬರ್, ಹೆಸರು ವಿವರಗಳನ್ನು ಕೆಪಿಎಸ್ ಸಿ ಪಟ್ಟಿಯಲ್ಲಿ ನೀಡಿದೆ. ಆಯೋಗ ನಿಗದಿಪಡಿಸಿದ ದಿನಾಂಕದಂದು ಮೂಲದಾಖಲೆಗಳೊಂದಿಗೆ ಅಭ್ಯರ್ಥಿಗಳು ಹಾಜರಾಗಬೇಕು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಈ ಲಿಂಕ್ ಕ್ಲಿಕ್ ಮಾಡಿ