Blog

  • ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ

    ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ

    ಪಂಜಾಬ್ ಮತ್ತು ಸಿಂದ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03-04-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.


    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-03-2021
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021

    ಹುದ್ದೆಗಳ ವಿವರ : ಎಜಿಎಂ(ಕಾನೂನು ), ಚೀಫ್ ಇನ್‌ಫೋರ್ಮೇಶನ್ ಸೆಕ್ಯುರಿಟಿ ಆಫೀಸರ್(ಸಿಐಎಸ್‌ಒ), ರಿಸ್ಕ್‌ ಮ್ಯಾನೇಜರ್(ಎಸ್‌ಎಂಜಿಎಸ್‌ 4), ರಿಸ್ಕ್ ಮ್ಯಾನೇಜರ್ ( ಎಂಎಂಜಿಎಸ್‌ ೩), ಐಟಿ ಮ್ಯಾನೇಜರ್( ಎಂಎಂಜಿಎಸ್‌ 3),ಐಟಿ ಮ್ಯಾನೇಜರ್ ( ಎಂಎಂಜಿಎಸ್‌ 2) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಚೀಫ್ ಇನ್‌ಫೊರ್ಮೇಶನ್ ಸೆಕ್ಯುರಿಟಿ ಆಫೀಸರ್ (ಸಿಐಎಸ್‌ಓ) ಹುದ್ದೆಗೆ ಇಂಜಿನಿಯರಿಂಗ್ ಗ್ರಾಜ್ಯುಯೇಟ್ (ಕಂಪ್ಯೂಟರ್ ಸೈನ್ಸ್/ಐಟಿ) ಅಥವಾ ಇಂಜಿನಿಯರಿಂಗ್ ಗ್ರಾಜ್ಯುಯೇಷನ್ ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಮಾಡಿರಬೇಕು.
    ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಕಾನೂನು) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.
    ರಿಸ್ಕ್ ಮ್ಯಾನೇಜರ್ (ಎಸ್‌ಎಂಜಿಎಸ್‌-iv) ಮತ್ತು ರಿಸ್ಕ್ ಮ್ಯಾನೇಜರ್ ( ಎಂಎಂಜಿಎಸ್ III) ಹುದ್ದೆಗೆ ಸಿಜಿಪಿಎ ನಲ್ಲಿ 60% ಅಂಕಗಳನ್ನು ಪಡೆದಿರಬೇಕು. ಹಾಗೂ ಪೋಸ್ಟ್‌ ಗ್ರಾಜ್ಯುಯೇಟ್ ಮ್ಯಾಥಮ್ಯಾಟಿಕ್ಸ್/ಸ್ಟೆಟಿಸ್ಟಿಕ್ಸ್/ರಿಸ್ಕ್ ಮ್ಯಾನೇಜ್‌ಮೆಂಟ್ ಅಥವಾ ಎಂಬಿಎ ಯನ್ನು ಫೈನಾನ್ಸ್/ಬ್ಯಾಂಕಿಂಗ್/ರಿಸ್ಕ್ ಮ್ಯಾನೇಜ್ ಮೆಂಟ್ ಮಾಡಿರಬೇಕು.

    ಐಟಿ ಆಫೀಸರ್ ಹುದ್ದೆಗೆ ಬಿಇ/ಬಿ.ಟೆಕ್/ಎಂ.ಇ/ಎಂ.ಟೆಕ್ ಇನ್ ಕಂಪ್ಯೂಟರ್ ಸೈನ್ಸ/ ಕಂಪ್ಯೂಟರ್ ಟೆಕ್ನಾಲಜಿ/ ಕಂಪ್ಯೂಟರ್ ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್‌ ಮತ್ತು ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್/ಇನ್ಪೋರ್‌ಮೇಶನ್ ಟೆಕ್ನಾಲಜಿ ಮಾಡಿರಬೇಕು.

    ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ೨೫ ರಿಂದ ೫೫ ವರ್ಷ ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ

  • ಆರೋಗ್ಯ  ಮತ್ತು ಕುಟುಂಬ  ಕಲ್ಯಾಣ ಇಲಾಖೆಯಲ್ಲಿ ಹುದ್ದೆ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹುದ್ದೆ

    ‘ಜೀವಸಾರ್ಥಕತೆ’ ಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು ಭಾಗ. ಇಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಿವರಗಳು ಈ ಕೆಳಗಿನಂತಿವೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-04-2021

    ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ದಿನಾಂಕ : 06-04-2021

    ಹುದ್ದೆ : ಅಂಗಾಂಗ ಕಸಿ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಈ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿದೆ.

    ರಾಜ್ಯದಲ್ಲಿ ಮೃತದಾನಿ ಅಂಗಾಂಗ ಕಸಿ ಕಾರ್ಯಕ್ರಮದ ಸಂಯೋಜನೆಯಲ್ಲಿ ನೆರವಾಗಬೇಕಾಗುತ್ತದೆ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್/ಬಿಡಿಎಸ್/ಎಂಎಸ್ಸಿ ( ನರ್ಸಿಂಗ್ ಮತ್ತು ಸಂಬಂಧಿತ ವೈದ್ಯಕೀಯ ವಿಷಯಗಳು)/ ಎಂಎಸ್ ಡಬ್ಲ್ಯೂ ಹೊಂದಿರಬೇಕು.

    ಮೇಲೆ ತಿಳಿಸಿದ ಹುದ್ದೆಯಲ್ಲಿ ಅಭ್ಯರ್ಥಿಯು ಕನಿಷ್ಠ ಒಂದು ವರ್ಷದ ಸೇವಾ ಅನುಭವ ಹೊಂದಿರಬೇಕು.

    ಅಂಗಾಂಗ ಕಸಿ ಕಾರ್ಯಕ್ರಮ ಏರ್ಪಡಿಸುವಲ್ಲಿ ಸಾಂಸ್ಥಿಕ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.

    ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ವೇತನ ರೂ.50,000/- ಗೌರವ ಧನ ನೀಡಲಾಗುತ್ತದೆ.

    ವಯೋಮಿತಿ : ಗರಿಷ್ಠ 60 ವರ್ಷದ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ಅಭ್ಯರ್ಥಿಗಳು ಅರ್ಜಿಯನ್ನು ಜಂಟಿ‌ ನಿರ್ದೇಶಕರು (ವೈದ್ಯಕೀಯ) ರವರ ಕಚೇರಿ, ಆರೋಗ್ಯ ಸೌಧ, 6 ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು- 560023

  • ಶಿವಮೊಗ್ಗ ಸ್ಮಾರ್ಟ್ ಸಿಟಿ ಕೆಲಸ ಖಾಲಿ ಇದೆ

    ಶಿವಮೊಗ್ಗ ಸ್ಮಾರ್ಟ್ ಸಿಟಿ ಕೆಲಸ ಖಾಲಿ ಇದೆ

    ಶಿವಮೊಗ್ಗ ಸ್ಮಾರ್ಟ್ ಸಿಟಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆ : ಜನರಲ್ ಪ್ಲಾನರ್- 1
    ಸೀನಿಯರ್ ಅರ್ಬನ್ ಪ್ಲಾನರ್- 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗದಲ್ಲಿ ಕೆಲಸ ಮಾಡಬೇಕು.

    ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 64 ವರ್ಷವನ್ನು ಮೀರಿರಬಾರದು.

    ಅರ್ಜಿಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ವನ್ನು ಪಾವತಿ ಮಾಡಬೇಕಾಗಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಜನರಲ್ ಮ್ಯಾನೇಜರ್ ಹುದ್ದೆಗೆ ರೂ.74,400/-, ಮತ್ತು ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ 1,00,000/- ರೂ. ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಎಪ್ರಿಲ್ 9 ರೊಳಗಾಗಿ ಈ ಕೆಳಕಂಡ ಇ-ಮೇಲ್ ಮಾಡಬೇಕು.
    [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಶಾಖಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅನುಭವ : ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ.

    ಸಹಕಾರಿ ಸಿಬ್ಬಂದಿ ಸೇವಾ ನಿಯಮದಂತೆ ವೇತನ ಮತ್ತಿತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.

    ಆಸಕ್ತರು ಈ ಕೆಳಕಂಡ ವಿಳಾಸದಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ 10-04-2021 ರೊಳಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದು. ‌
    ವಯೋಮಿತಿ, ವಿದ್ಯಾರ್ಹತೆ ಮತ್ತಿತರೆ ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ 9480276535 ಮೂಲಕ ಪಡೆಯಬಹುದು.

    ವಿಳಾಸ: ‌

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್ ಹತ್ತಿರ, ಎಂ.ಜಿ.ರಸ್ತೆ ಕೋಡಿಯಾಲ್ ಬೈಲ್, ಮಂಗಳೂರು

  • ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆಗಳ ವಿವರ : ಬಿ.ಎಫ್.ಟಿ (bare foot technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 30

    ಅರ್ಜಿಗಳನ್ನು ಸಲ್ಲಿಸುವವರು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ
    ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿಂದಿನ 3 ವರ್ಷಗಳಲ್ಲಿ ಕನಿಷ್ಠ ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರನಾಗಿ ಕೆಲಸವನ್ನು ಮಾಡಿರಬೇಕು.

    ವಿದ್ಯಾರ್ಹತೆ: ಕನಿಷ್ಠ 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ‌ ರೂ. 12,000/- ನೀಡಲಾಗುತ್ತದೆ.

    ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುತ್ತದೆ.

    ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 45 ವಯಸ್ಸಾಗಿರಬೇಕು.

    ಬಿಎಫ್ ಟಿ ಗಳನ್ನು ಕುಶಲ ಕಾರ್ಮಿಕರೆಂದು(skilled laboures ) ಪರಿಗಣಿಸಿ ಕರ್ತವ್ಯ ಕ್ಕೆ ನಿಯೋಜಿಸಿಕೊಳ್ಳಲಾಗುತ್ತದೆ. ಖಾಯಂ ಹುದ್ದೆ ಆಗಿರುವುದಿಲ್ಲ.

    ಅರ್ಹ ಅಭ್ಯರ್ಥಿಗಳು ಕಲಬುರಗಿ‌ ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅವಶ್ಯ ದಾಖಲಾತಿಗಳೊಂದಿಗೆ ಮಾರ್ಚ್ 30 ರೊಳಗಾಗಿ( ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ) ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ 9482046044, 9480866010

  • ಎನ್‌ಎಂಡಿಸಿನಲ್ಲಿ 304 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎನ್‌ಎಂಡಿಸಿನಲ್ಲಿ 304 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾಪೋರೇಶನ್ ಲಿಮಿಟೆಡ್ ( ಎನ್‌ಎಂಡಿಸಿ) ನಲ್ಲಿ ವಿವಿಧ ಹುದ್ದೆಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಮಾರ್ಚ್ 31,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.

    ಹುದ್ದೆಗಳ ವಿವರ : ಎನ್‌ಎಂಡಿಸಿ ನಲ್ಲಿ ವರ್ಕ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 304 ಹುದ್ದೆ

    ವಿದ್ಯಾರ್ಹತೆ : ಐಟಿಐ, ಮೆಟ್ರಿಕ್, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. ೧೫೦/- ನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 18,100/- ರಿಂದ 35,040 ರೂ.ಗಳವರೆಗೆ ವೇತನವನ್ನು ನೀಡಲಾಗುವುದು.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಮಾರ್ಚ್ 31, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಎಪ್ರಿಲ್ 15,2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.