Blog

  • ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ಸುರತ್ಕಲ್ (ಎನ್ಐಟಿಕೆ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗಳನ್ನು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸೆಂಟರ್ ನಲ್ಲಿ ಭರ್ತಿ ಮಾಡಿಕೊಳ್ಳಲಿದ್ದು ಒಂದು ವರ್ಷ ಹುದ್ದೆಯ ಅವಧಿ ಇರುತ್ತದೆ.

    ಹುದ್ದೆಗಳ ವಿವರ : ಸೈಂಟಿಫಿಕ್ ಸ್ಟಾಫ್, ಟೆಕ್ನಿಕಲ್ ಸ್ಟಾಫ್, ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಸೈಂಟಿಫಿಕ್ ಸ್ಟಾಫ್ ಹುದ್ದೆಗೆ ಬಿಸಿಎ, ಎಂಸಿಎ, ಎಂಎಸ್ಸಿ ತೇರ್ಗಡೆ ಹೊಂದಿರಬೇಕು. ಟೆಕ್ನಿಕಲ್ ಸ್ಟಾಫ್ ಐಟಿಐ ಪಾಸಾಗಿರಬೇಕು. ಟೆಕ್ನಿಕಲ್ ಸ್ಟಾಫ್ ಹುದ್ದೆಗೆ 3 ವರ್ಷ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಬಿಟೆಕ್, ಎಂಟೆಕ್ ಪಾಸಾಗಿರಬೇಕು. ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಪಿಎಚ್ಡಿ ಮಾಡಿರಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ : ಎನ್ ಐಟಿಕೆ, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಕರ್ನಾಟಕ , ಸುರತ್ಕಲ್

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನ ಕ್ಕೆ ದಿನಾಂಕ 17-03-2021( 11.30 am) ಗೆ ಹಾಜರಾಗಬಹುದು.

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 03

    ಹುದ್ದೆ ಸ್ಥಳ‌: ಬೆಂಗಳೂರು-ಕರ್ನಾಟಕ

    ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂಎ, ಪಿಎಚ್ಡಿ,ಪೋಸ್ಟ್ ಗ್ರಾಜ್ಯುಯೇಶನ್, ಎನ್ ಇಟಿ ಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅಭ್ಯರ್ಥಿಗಳು ತಮ್ಮ‌ ಅಗತ್ಯ ದಾಖಲೆಗಳೊಂದಿಗೆ ದಿನಾಂಕ‌17-03-2021 (11.00am ) ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

    Karnataka Samskrit University, Pampa Mahakavi Road, Chamarajpet, Bengaluru – 560018

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    http://ksu.ac.in/en/
    http://ksu.ac.in/en/
  • ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021( 11am ರಿಂದ 3pm)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ.

    ಒಟ್ಟು ಹುದ್ದು : 16

    ಹುದ್ದೆಗಳ ವಿವರ : ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( horticulture) – 2
    ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( ಅಗ್ರಿಕಲ್ಚರ್ ಮತ್ತು ಸಿಲ್ಕ್ )-11
    ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( ಫಾರೆಸ್ಟ್)-3

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ ಯುನಿವರ್ಸಿಟಿ ಯಿಂದ ಬಿ.ಎಸ್ಸಿ ತೇರ್ಗಡೆಯಾಗಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 30-03-2021 ( 11.am ರಿಂದ 3 pm ) ರೊಳಗೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು.
    ವಿಳಾಸ :
    Development Branch (2nd Floor), Zilla Panchayat, Tumakuru,

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಬಾಲ ಭವನದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ: ಬಾಲ ಭವನದಲ್ಲಿ ಜಿಲ್ಲಾಭವನದಲ್ಲಿ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    2021-22 ನೇ ಸಾಲಿನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರುವ ಜೊತೆಗೆ ಕಂಪ್ಯೂಟರ್ ಜ್ಞಾನ, ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಿರಬೇಕು. ಬಾಲಭವನದಲ್ಲಿ ಕನಿಷ್ಠ 5 ವರ್ಷ ಹಾಗೂ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಲಾಗಿದೆ.

    ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹಾಗೂ ಅದಕ್ಕಿಂತ ಮೇಲ್ಪಟ್ಟು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

    ವೇತನ : ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ವೇತನ ನೀಡಲಾಗುತ್ತದೆ.

    ಕಚೇರಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 10,000/- ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್ -1 ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು

  • ನೀಟ್ ವೇಳಾಪಟ್ಟಿ ಬಿಡುಗಡೆ

    ನೀಟ್ ವೇಳಾಪಟ್ಟಿ ಬಿಡುಗಡೆ

    ರಾಷ್ಟ್ರೀಯ ಪರೀಕ್ಷೆ ಏಜೆನ್ಸಿಯು ( ಎನ್‌ಟಿಎ) ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ ( ನೀಟ್) 2021 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ನೀಟ್ 2021(ಯುಜಿ) ಪರೀಕ್ಷೆಗೆ ಆನ್‌ಲೈನ್ ಮೂಲಕ ರಿಜಿಸ್ಟ್ರೇಶನ್ ಪಡೆಯಬಹುದಾಗಿದೆ. ನೀಟ್ ಯುಜಿ ಪರೀಕ್ಷೆ ವೇಳಾಪಟ್ಟಿತಯ ಆಗಸ್ಟ್ 01, 2021 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ ನೀಟ್ 2021 ಪರೀಕ್ಷೆಯು ಒಂದೇ ಬಾರಿ ನಡೆಸಲಿದೆ. ಈ ಬಗ್ಗೆ ಎನ್‌ಟಿಎ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಇದಕ್ಕೂ ಮೊದಲು ನೀಟ್ ಪರೀಕ್ಷೆ ಎರಡು ಬಾರಿ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎನ್‌ಟಿಎ ಅಭ್ಯರ್ಥಿಗಳ ಸಂಶಯಕ್ಕೆ ಉತ್ತರ ನೀಡಿದೆ.

    ನೀಟ್(ಯುಜಿ) ೨೦೨೧ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು https://nta.ac.in, https://ntaneet.nic.in ವೆಬ್‌ಸೈಟ್ ಭೇಟಿ ನೀಡಬಹುದು

  • ಗೃಹರಕ್ಷಕ ದಳ ಸಂದರ್ಶನ:  ಇಲ್ಲಿದೆ ಸಂಪೂರ್ಣ ವಿವರ

    ಗೃಹರಕ್ಷಕ ದಳ ಸಂದರ್ಶನ: ಇಲ್ಲಿದೆ ಸಂಪೂರ್ಣ ವಿವರ

    ಬಳ್ಳಾರಿ ಜಿಲ್ಲೆಯ ರೂಪನಗುಡಿ, ಸಿರಗುಪ್ಪ, ಕುಡುತನಿ, ತೋರಣಗಲ್ಲು ಮತ್ತು ಬಳ್ಳಾರಿ ಘಟಕದಲ್ಲಿ ಗೃಹರಕ್ಷಕರ ವಾದ್ಯವೃಂದ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

    ಗೃಹರಕ್ಷಕ ವಾದ್ಯವೃಂದ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಮಾ.16 ರಂದು ಬೆಳಿಗ್ಗೆ 8 ಕ್ಕೆ ಬಳ್ಳಾರಿ ನಗರದ ಡಿ.ಎ.ಆರ್ ಮೈದಾನದಲ್ಲಿ ಸಂದರ್ಶನ ನಡೆಯುತ್ತದೆ ಎಂದು ಜಿಲ್ಲಾ ಗೃಹರಕ್ಷಕ ದಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಆಧಾರ್ ಕಾರ್ಡ್, ಕುಟುಂಬದ ಪಡಿತರ ಚೀಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್‌ ಜೊತೆಗೆ ಸಂದರ್ಶನ ಪತ್ರ ತರುವುದು ಕಡ್ಡಾಯವೆಂದು ತಿಳಿಸಿದೆ.

    ಜೆರಾಕ್ಸ್‌ ದಾಖಲಾತಿಗಳನ್ನು ಪರಿಗಣಿಸುವುದಿಲ್ಲ. ಗೃಹರಕ್ಷಕ ಘಟದಲ್ಲಿನ ಸದಸ್ಯತ್ವ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವಾದ್ಯವೃಂದ ಸಲಕರಣೆಗಳನ್ನು ತಾವೇ ತರುವುದರ ಜೊತೆಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಬರಬೇಕಾಗಿದೆ. ಸರಕಾರದಿಂದ ಯಾವುದೇ ರೀತಿಯ ಭತ್ಯೆ ಪಾವತಿಸುವುದಿಲ್ಲ ಎಂದು ಜಿಲ್ಲಾ ಗೃಹರಕ್ಷಕ ದಳ ತಿಳಿಸಿದೆ.