Blog

  • ಯುಎಎಸ್ ರಾಯಚೂರು ಹುದ್ದೆಗಳ ನೇಮಕ

    ಯುಎಎಸ್ ರಾಯಚೂರು ಹುದ್ದೆಗಳ ನೇಮಕ

    ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ (ಯುಎಎಸ್) ರಾಯಚೂರು ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 18 ಮಾರ್ಚ್ ಸಂದರ್ಶನ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ನೋಟಿಫಿಕೇಶನ್ ಪ್ರಕಟಿಸಿದ ಆರಂಭಿಕ ದಿನಾಂಕ: 05-03-2021
    ಸಂದರ್ಶನ ದಿನಾಂಕ: 18-03-2021(11.00am)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ.

    ಯುಎಎಸ್ ರಾಯಚೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ -1 (ಹೋರಿಕಲ್ಚರ್) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಯೋಮಿತಿ : ಯುಎಸ್ ರಾಯಚೂರು ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್/ ಸಂಸ್ಥೆ ಯಿಂದ ಎಂಎಸ್ಸಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 18-03-2021 ಬೆಳಗ್ಗೆ 11.00 ರಂದು ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.

    Meeting Hall of the Dean (Agri), College of Agriculture, Near Ranesh Peer Darga, Aland Road, Kalaburagi, Karnataka.

    ‌ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    https://www.uasraichur.edu.in/index.php/en/

  • ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 16 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2021 (10.30am)

    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನಲ್ಲಿ ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆಗಳ ಸಂಖ್ಯೆ: 5

    ಹುದ್ದೆ ಸ್ಥಳ : ವಿಜಯಪುರ-ಕರ್ನಾಟಕ

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40,000/- ವೇತನವಿರುತ್ತದೆ.

    ಹುದ್ದೆ ವಿವರ:
    ಸೈಕಾಲಜಿ-1
    ಇಂಗ್ಲೀಷ್ -1
    ಕನ್ನಡ -1
    ಫಿಶರೀಸ್ -1
    ಫಿಸಿಕಲ್ ಎಜುಕೇಶನ್ ಮತ್ತು ಯೋಗ ಪ್ರಾಕ್ಟಿಸಸ್- 1

    ವಿದ್ಯಾರ್ಹತೆ : ಸೈಕಾಲಜಿ, ಇಂಗ್ಲೀಷ್, ಕನ್ನಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎ ತೇರ್ಗಡೆ ಹೊಂದಿರಬೇಕು.

    ಫಿಶರೀಸ್ ಹುದ್ದೆಗೆ ಎಂಎಫ್ ಎಸ್ಸಿ, ಪಿಎಚ್ಡಿ ಹೊಂದಿರಬೇಕು.

    ಫಿಸಿಕಲ್ ಎಜುಕೇಶನ್ ಮತ್ತು ಯೋಗ ಪ್ರಾಕ್ಟಿಸಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಗ್ರಿ, ಡಿಪ್ಲೋಮಾ,ಎಂಪಿಇಡಿ,ಎಂಎಸ್ಸಿ ಹೊಂದಿರಬೇಕು

    ವಯೋಮಿತಿ : ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16-03-2021ರಂದು ಬೆಳಗ್ಗೆ 10:30 ಕ್ಕೆ ಹಾಜರಿರಬೇಕು.

    ವಿಳಾಸ:
    Interview Room, Dean (Agriculture), Agricultural University, Vijayapura, Karnataka

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ವಿಶೇಷ ರಿಸರ್ವ್ ಪೊಲೀಸ್ ಪ್ರಾಕ್ಟಿಕಲ್ ಅಡ್ಮಿಟ್ ಕಾರ್ಡ್ ಪ್ರಕಟ

    ವಿಶೇಷ ರಿಸರ್ವ್ ಪೊಲೀಸ್ ಪ್ರಾಕ್ಟಿಕಲ್ ಅಡ್ಮಿಟ್ ಕಾರ್ಡ್ ಪ್ರಕಟ

    ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಕಾನ್ಸ್‌ಟೇಬಲ್ ಹುದ್ದೆಗಳ ನೇನಕಾತಿಗೆ ಸಂಬಂಧಿಸಿದಂತೆ ಪ್ರಾಕ್ಟಿಕಲ್ ಪರೀಕ್ಷೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

    ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಸೂಚನೆ.

    ಎಎಸ್ ಆರ್ ಪಿಸಿ ಪ್ರಾಕ್ಟಿಕಲ್ ಪರೀಕ್ಷೆ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

    http://srpc20.ksp-online.in/Login.aspx

  • 50 ಸಶಸ್ತ್ರ ಪಿಸಿ ಹುದ್ದೆಯ ಆಯ್ಕೆ ಪಟ್ಟಿ ಪ್ರಕಟ

    50 ಸಶಸ್ತ್ರ ಪಿಸಿ ಹುದ್ದೆಯ ಆಯ್ಕೆ ಪಟ್ಟಿ ಪ್ರಕಟ

    ಕರ್ನಾಟಕ ಪೊಲೀಸ್ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 50 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಕೆಎಸ್ ಪಿ ಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ 2020 ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. 18-10-2020 ರಂದು ಲಿಖಿತ ಪರೀಕ್ಷೆ ನಡೆಸಿತ್ತು. ಆನಂತರ 2020 ಡಿಸೆಂಬರ್ 19,24 ಹಾಗೂ ಜನವರಿ 2021 ರ 08 ರಂದು ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿತ್ತು.

    ವೃಂದ ಮತ್ತು ನೇಮಕಾತಿ ನಿಯಮದನ್ವಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯಿಂದ ಬಿಡಲಾಗಿದೆ.

    ಪೊಲೀಸ್ ಇಲಾಖೆಯು ಬಿಡುಗಡೆ ಮಾಡಿದ 2 ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.

    http://rec20.ksp-online.in/

  • ಬಿಡಿಎಲ್  70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಬಿಡಿಎಲ್ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
    ಸಂದರ್ಶನ ದಿನಾಂಕ : ಕೂಡಲೇ ತಿಳಿಸಲಾಗುತ್ತದೆ.

    ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಆಫೀಸರ್ ಹುದ್ದೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

    ಒಟ್ಟು 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

    ಒಟ್ಟ 70 ಹುದ್ದೆಗಳ ಪೈಕಿ 55 ಪ್ರಾಜೆಕ್ಟ್ ಇಂಜಿನಿಯರ್, 15 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ನ್ನು ಬಿಡಿಎಲ್ ಭರ್ತಿ ಮಾಡಿಕೊಳ್ಳಲಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಿದ್ಯಾರ್ಹತೆ: ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್/ಸಿ.ಎ/ಐಸಿಡ್ಬ್ಲುಎ/ಬಿ.ಎಸ್ಸಿ/ಎಂಬಿಎ/ಪಿಜಿಡಿಪ್ಲೋಮ ಅಥವಾ ಎಂಎಸ್ ಡಬ್ಲ್ಯು ತೇರ್ಗಡೆ ಹೊಂದಿರಬೇಕು.

    ಸಂಬಂಧಿಸಿದ ಹುದ್ದೆಯಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು.

    ವಯೋಮಿತಿ: ಗರಿಷ್ಠ 28 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    https://bdl-india.in/

  • ಪಂಚಾಯತ್ ರಾಜ್ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ

    ಪಂಚಾಯತ್ ರಾಜ್ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ

    ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮಗಾಂಧಿ ನರೇಗಾ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯಕ್ಕೆ (ಮಹಾತ್ಮಾಗಾಂಧಿ ನರೇಗಾ) ಗುತ್ತಿಗೆ ಆಧಾರದ ಮೇಲೆ 2 ವರ್ಷದ ಅವಧಿಗೆ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ, ವಯಸ್ಸು, ವಿದ್ಯಾರ್ಹತೆ, ಅನುಭವ, ಸಂಭಾವನೆ ನಿಬಂಧನೆಗಳು ಇತ್ಯಾದಿ ವಿವರಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಬ್‌ಸೈಟ್‌ www.rdpr.karnataka.gov.in ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3 ನೇ ಹಂತ, 2 ನೇ ಮಹಡಿ, ಡಾ||ಅಂಬೇಡ್ಕರ್ ವಿಧಿ, ಬೆಂಗಳೂರು- 560001 ಕಛೇರಿಗೆ ದಿನಾಂಕ 12.04.2021 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಗಡುವು ಮೀರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.