Blog

  • ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ

    ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ

    ರೂರಲ್ ಡೆವಲಪ್ಮೆಂಟ್ ಆಂಡ್ ಪಂಚಾಯತ್ ರಾಜ್ ಡಿಪಾರ್ಟ್ಮೆಂಟ್ ಕರ್ನಾಟಕ(RDPR) ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

    ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 189

    ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ( ಅಗ್ರಿಕಲ್ಚರ್)-82
    ಟೆಕ್ನಿಕಲ್ ಅಸಿಸ್ಟೆಂಟ್ (ಹೋರಿಕಲ್ಚರ್)-62
    ಟೆಕ್ನಿಕಲ್ ಅಸಿಸ್ಟೆಂಟ್(ಫಾರೆಸ್ಟ್ರಿ)-45

    ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 04-03-2021
    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-03-2021(5.30pm)

    ವಿದ್ಯಾರ್ಹತೆ : ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಅಭ್ಯರ್ಥಿಗಳು ಬಿ‌ಎಸ್ಸಿ/ ಎಂಎಸ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.

    ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ಎಕ್ಸಿಪೀರಿಯನ್ಸ್, ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಪ್ ಡೇ
    ಟೆಡ್ ರೆಸ್ಯೂಮ್ ಜೊತೆಗೆ, ನಿಗದಿತ ನಮೂನೆಯನ್ನು ವೆಬ್‌ಸೈಟ್‌ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ದಿನಾಂಕ 25-03-2021ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ವಿಳಾಸಕ್ಕೆ ತಲುಪಿಸಬೇಕು.

    Commissioner, Rural Development & Panchayat Raj Department, 2nd Floor, 3rd Stage, Room No. 219, Bangalore – 560001

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://karnregs.kar.nic.in/

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಆರ್ ಡಿಪಿಆರ್ ನಲ್ಲಿ ಉದ್ಯೋಗವಕಾಶ

    ಆರ್ ಡಿಪಿಆರ್ ನಲ್ಲಿ ಉದ್ಯೋಗವಕಾಶ

    ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 05-03-2021
    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2021 (5.30pm)

    ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಅನಾಲಿಸ್ಟ್, ಕಲೆಕ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 03

    ವೇತನ : ಅನಾಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000/-,ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.15,000/-, ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.13,000/- ವೇತನ ನಿಗದಿಯಾಗಿರುತ್ತದೆ.

    ವಿದ್ಯಾರ್ಹತೆ : ಅನಾಲಿಸ್ಟ್ -1- ಬಿ.ಎಸ್ಸಿ, ಎಂ.ಎಸ್ಸಿ ಪಾಸಾಗಿರಬೇಕು.

    ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಬಿ.ಎಸ್ಸಿ ಪಾಸಾಗಿರಬೇಕು.

    ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.

    ವಯೋಮಿತಿ : ಅನಾಲಿಸ್ಟ್ , ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45, ಹಾಗೆಯೇ ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ಆಗಿರಬೇಕು.

    ಅರ್ಜಿ ಸಲ್ಲಿಕೆ ಹೇಗೆ?

    ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಪ್ ಡೇ
    ಟೆಡ್ ರೆಸ್ಯೂಮ್ ಜೊತೆಗೆ, ನಿಗದಿತ ನಮೂನೆಯನ್ನು ವೆಬ್‌ಸೈಟ್‌ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ದಿನಾಂಕ 22-03-2021(5.30pm) ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

    Executive Engineer, Rural Drinking Water and Sanitation Department, Zilla Panchayat Building, N.R Circle, Hassan, Karnataka

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    https://rdpr.karnataka.gov.in/english

  • 402 ಕೆಎಸ್‌ಪಿ ಸಿವಿಲ್ ಪಿಎಸ್‌ಐ ಹುದ್ದೆಗೆ ಅರ್ಜಿ ಆಹ್ವಾನ

    402 ಕೆಎಸ್‌ಪಿ ಸಿವಿಲ್ ಪಿಎಸ್‌ಐ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸ್ಟೇಟ್ ಪೊಲೀಸ್(ಕೆಎಸ್ ಪಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03 ಮೇ , 2021ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-04-2021(10am)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-05-2021(6pm)
    ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 05-05-2021

    ಕೆಎಸ್ ಪಿ ನಲ್ಲಿ ಒಟ್ಟಿ 402 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಸಿವಿಲ್ ಪಿಎಸ್ ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ವೇತನ : ರೂ.37,900/-ರಿಂದ ರೂ.70,850 ನಿಗದಿಪಡಿಸಲಾಗಿದೆ.

    ಕೆಎಸ್ ಪಿ ಯು ಸಿವಿಲ್ ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಸಕ್ತ ಅಭ್ಯರ್ಥಿಗಳಿಂದ ಆಹ್ವಾನಿಸಿದೆ.

    ಕೆಎಸ್ ಪಿ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ಜನರಲ್ ಅಭ್ಯರ್ಥಿಗಳಿಗೆ ರೂ.500/-,2A,2B,3A ಹಾಗೂ 3B , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆ, ಇಟಿ ಟೆಸ್ಟ್, ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ: ಸಿವಿಲ್ ಪಿಎಸ್ ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ,OBC, 2A, 2B, 3A and 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಡಿಗ್ರಿಯನ್ನು ಪಡೆದಿರಬೇಕು.

    ಅಭ್ಯರ್ಥಿಗಳು ಕೆಎಸ್ ಪಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಎಸ್ ಸಿಸಿಎಫ್ ನೇಮಕಾತಿ ಪ್ರಕಟಣೆ

    ಕೆಎಸ್ ಸಿಸಿಎಫ್ ನೇಮಕಾತಿ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ, ಬೆಂಗಳೂರು ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು43 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಲೆಕ್ಕಿಗರು: 05
    ಪ್ರಥಮ ದರ್ಜೆ ಗುಮಾಸ್ತರು- 10
    ವಿಕ್ರಯ ಸಹಾಯಕರು- 10
    ಬೆರಳಚ್ಚು ಗಾರರು- 08
    ಜವಾನರು- 10

    ಒಟ್ಟು ಹುದ್ದೆ : 43

    ನೇನಕಾತಿಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು.

    ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05-03-2021 ರಿಂದ ದಿನಾಂಕ 05-04-2021 ರವರೆಗೆ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

    www.recruitapp.in/ksccf2021

  • ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ನಿಯಮಿತ, ಬೆಂಗಳೂರು ಇದರಲ್ಲಿನ ಖಾಲಿ ಇರುವ ಕಿರಿಯ ಫಾರ್ಮಾಸಿಸ್ಟ್ ಹುದ್ದೆಯ ವೇತನ ಶ್ರೇಣಿ ರೂ. 14,500/-ರೂ. 26,700/- ರಲ್ಲಿ ಪರಿಶಿಷ್ಟ ಜಾತಿಗೆ 01 ಮತ್ತು ಪರಿಶಿಷ್ಟ ಪಂಗಡಕ್ಕೆ 01ರಂತೆ ಮೀಸಲಿರಿಸಿದ ಒಟ್ಟು 2 ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ, ಅರ್ಜಿಯ ನಮೂನೆಗಳು, ಅರ್ಜಿ ಸಲ್ಲಿಸುವ ಹಾಗೂ ಆಯ್ಕೆಯ ವಿಧಾನ ಮತ್ತು ಇತರೆ ವಿವರಗಳು ಮಹಾಮಂಡಳದ ವೆಬ್‌ಸೈಟ್‌ www.recruitapp.in/kpscf2021 ನಲ್ಲಿ ಲಭ್ಯವಿದ್ದು ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05-03-2021 ರಿಂದ ದಿನಾಂಕ 05-04-2021 ರವರೆಗೆ ಸಲ್ಲಿಸುವುದು. ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.

  • ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಆಯೋಗವು ದಿನಾಂಕ 28-02-2021 ರಂದು ನಡೆದ ವಿವಿಧ ಇಲಾಖೆಗಳಲ್ಲಿನ ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ(ವಿಷಯ ಸಂಕೇತ -385), ಸಾಮಾನ್ಯ ಕನ್ನಡ (ವಿಷಯ ಸಂಕೇತ-386) ಸಾಮಾನ್ಯ ಇಂಗ್ಲೀಷ್ ( ವಿಷಯ ಸಂಕೇತ – 387) ರ ಕೀ ಉತ್ತರಗಳನ್ನು ಆಯೋಗದ ಅಂತರ್ಜಾಲ https://kpsc.kar.nic.in ನಲ್ಲಿ ಪ್ರಕಟಿಸಿದೆ. ಮತ್ತು ಸದರಿ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಆಯೋಗದ ಅಂತರ್ಜಾಲದ ದಿನಾಂಕ 04-03-2021ರ ಪ್ರಕಟಣೆಯಂತೆ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.